LATEST NEWS
ಪಠ್ಯದಲ್ಲಿ ಸಾವರ್ಕರ್ ಅತೀ ವರ್ಣನೆ: ಸಾಮಾಜಿಕ ಜಾಲತಾಣದಲ್ಲಿ ಚರ್ಚೆ
ಬೆಂಗಳೂರು: ಶಾಲಾ ಪಠ್ಯಪುಸ್ತಕ ಪರಿಷ್ಕರಣೆ, ಮರು ಪರಿಷ್ಕರಣೆಯಾದರೂ ವಿವಾದಗಳು ತಣ್ಣಗಾಗುತ್ತಿಲ್ಲ. ಈಗ ಸಾವರ್ಕರ್ನ್ನು ಅಗತ್ಯಕ್ಕಿಂತ ಹೆಚ್ಚಾಗಿ ವರ್ಣಿಸಿ ಶಾಲಾ ಪಠ್ಯದಲ್ಲಿ ಸೇರಿಸಿರುವುದು ಬೆಳಕಿಗೆ ಬಂದಿದೆ.
‘ಕಾಲವನ್ನು ಗೆದ್ದವರರು’ ಎಂಬ ಪಠ್ಯದಲ್ಲಿ ಸಾವರ್ಕರ್ ದೇಶಭಕ್ತಿಯನ್ನು ವರ್ಣಿಸುವಾಗ ‘ಬ್ರಿಟಿಷರು ಅವರನ್ನು ಬಂಧಿಸಿಟ್ಟಿದ್ದ ಅಂಡಮಾನ್ ಜೈಲಿನ ಕೋಣೆಗೆ ಬುಲ್ಬುಲ್ ಹಕ್ಕಿಗಳು ಬರುತ್ತಿದ್ದವು. ಅವುಗಳ ರೆಕ್ಕೆಗಳ ಮೇಲೆ ಕುಳಿತು ಸಾವರ್ಕರ್ ಪ್ರತಿದಿನ ತಾಯ್ನಾಡಿನ ನೆಲವನ್ನು ಸಂಪರ್ಕಿಸಿ ಬರುತ್ತಿದ್ದರು’ ಎಂಬ ಉತ್ಪ್ರೇಕ್ಷೆಯ ಸಾಲುಗಳನ್ನು ಸೇರಿಸಿರುವುದು ಚರ್ಚೆಗೆ ಎಡೆಮಾಡಿಕೊಟ್ಟಿದೆ.
8ನೇ ತರಗತಿ ಕನ್ನಡ ಪಠ್ಯದಲ್ಲಿ ಈ ಮೊದಲಿದ್ದ ವಿಜಯಮಾಲಾ ರಂಗನಾಥ ಅವರ ‘ಬ್ಲಡ್ ಗ್ರೂಪ್’ ಎಂಬ ಪಾಠವನ್ನು ಕೈಬಿಟ್ಟು ಕೆ.ಟಿ ಗಟ್ಟಿ ಅವರ ‘ಕಾಲವನ್ನು ಗೆದ್ದವರು’ ಎಂಬ ಗದ್ಯ ಸೇರಿಸಲಾಗಿದೆ.
ಸಾವರ್ಕರ್ ಅವರನ್ನು ಬಂಧಿಸಿಟ್ಟ ಅಂಡಮಾನ್ ಜೈಲಿಗೆ ಭೇಟಿ ನೀಡಿದ್ದರ ಬಗ್ಗೆ ಬರೆದಿರುವ ಪ್ರವಾಸ ಲೇಖನದಲ್ಲಿ ಈ ರೀತಿಯ ವರ್ಣರಂಜಿತ ಸಾಲುಗಳು ಸೇರಿಸಿರುವುದರ ಬಗ್ಗೆ ಚರ್ಚೆ ನಡೆಯುತ್ತಿದೆ.
ಲೇಖಕರು ಅಂಡಮಾನ್ ಜೈಲಿಗೆ ಭೇಟಿ ನೀಡಿದಾಗ ಅಲ್ಲಿ ಸಾವರ್ಕರ್ ಅವರನ್ನು ಕೂಡಿಟ್ಟಿದ್ದ ಕೋಣೆಯ ಚಿತ್ರಣ, ಅಲ್ಲಿರುವ ಬರಹ ಮತ್ತಿತ್ತರ ಅಂಶಗಳನ್ನು ದಾಖಲಿಸಿದ್ದಾರೆ.
ಇದರಲ್ಲಿ ‘ಸಾವರ್ಕರ್ ಕೋಣೆಯಲ್ಲಿ ಕಿಂಡಿ ಕೂಡಾ ಇಲ್ಲ, ಆದರೂ ಎಲ್ಲಿಂದಲೋ ಬುಲ್ಬುಲ್ ಹಕ್ಕಿಗಳು ಹಾರಿ ಸೆಲ್ನೊಳಗೆ ಬರುತ್ತಿದ್ದವು. ಅವುಗಳ ರೆಕ್ಕೆಯ ಮೇಲೆ ಕುಳಿತು ಸಾವರ್ಕರ್ ಪ್ರತಿದಿನ ತಾಯ್ನಾಡಿನ ನೆಲವನ್ನು ಸಂಪರ್ಕಿಸಿ ಬರುತ್ತಿದ್ದರು’ ಎಂಬ ಸಾಲುಗಳು ಪಠ್ಯದಲ್ಲಿವೆ.
ಇದು ಅತಿಯಾದ ವರ್ಣನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಯುತ್ತಿದೆ.
LATEST NEWS
ಮುಂದಿನ 5 ದಿನ ರಾಜ್ಯದ 25 ಜಿಲ್ಲೆಗಳಲ್ಲಿ ಬಿಸಿ ಗಾಳಿ ಸಾಧ್ಯತೆ; ಎಲ್ಲೆಲ್ಲಿ?
ಮಂಗಳೂರು : ರಾಜ್ಯದಲ್ಲಿ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಲಿದ್ದು, ಬಿಸಿಲಾಘಾತದಿಂದ ಜನ, ಜಾನುವಾರು ಮತ್ತು ಪಕ್ಷಿ ಸಂಕುಲ ತತ್ತರಿಸಿದೆ. ನೀರಿಗೆ ತತ್ವಾರ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿಯೇ ಇದೀಗ ಹವಾಮಾನ ಇಲಾಖೆಯು ರಾಜ್ಯದ 25 ಜಿಲ್ಲೆಗಳಿಗೆ ಶಾಖಾಘಾತದ ಮುನ್ಸೂಚನೆ ನೀಡಿದೆ. ಇಂದಿನಿಂದ 5 ದಿನಗಳ ಕಾಲ ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.
ಯಾವ ಜಿಲ್ಲೆಗಳಿಗೆ ಬಿಸಿಲಾಘಾತ?
ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಮೇ 5 ರವರೆಗೂ ಇದೇ ಪರಿಸ್ಥಿತಿ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಮೇ 4 ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣವಿರುವ ಸಂಭವವಿದೆ.
ಮಳೆಯಾಗುವ ಸಾಧ್ಯತೆ :
ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಯ ಕೆಲವೆಡೆ ಬುಧವಾರ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ನಾಲ್ಕುದಿನ ಒಣಹವೆ ಇರಲಿದೆ.
ಮೇ 6 ರಿಂದ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ : ಮಂಗಳೂರು ವಿಮಾನ ನಿಲ್ದಾಣವಿನ್ನು ನಿಶ್ಶಬ್ದ ವಲಯ!
ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ :
ಇಂದಿನಿಂದ(ಮೇ 1 ರಿಂದ) ಮುಂದಿನ ಐದು ದಿನಗಳು ಬಾಗಲಕೋಟೆ, ಕಲಬುರಗಿ ಹಾಗೂ ಕೊಪ್ಪಳದಲ್ಲಿ ರಾತ್ರಿಯ ಅವಧಿಯೂ ಬಿಸಿ ವಾತಾವರಣದಿಂದ ಕೂಡಿರುವ ಸಾಧ್ಯತೆಯಿದೆ. ಮಂಗಳವಾರ ಬೆಳಿಗ್ಗೆ 8.30 ರಿಂದ ಬುಧವಾರ ಬೆಳಗ್ಗಿನ ತನಕದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 42.8 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 38.2 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಮೂರು ದಿನ 38 ಡಿಗ್ರಿ ಸೆಲ್ಸಿಯಸ್ ದಾಟಿದೆ.
DAKSHINA KANNADA
ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ
ಮಂಗಳೂರು: ಸಂಗೀತ, ಭರತನಾಟ್ಯದ ಮಾದರಿಯಲ್ಲಿ ಯಕ್ಷಗಾನಕ್ಕೂ ನಿರ್ದಿಷ್ಟ ಚೌಕಟ್ಟಿನಲ್ಲಿ ಪಠ್ಯ ರಚಿಸಿ ಪರೀಕ್ಷೆಗಳನ್ನು ನಡೆಸುವ ಪ್ರಯತ್ನಗಳು ನಡೆಯುತ್ತಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು.
ಮಂಗಳೂರಿನ ಪ್ರೆಸ್ ಕ್ಲಬ್ ವತಿಯಿಂದ ನಡೆದ ಪ್ರೆಸ್ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಯಕ್ಷಗಾನದಲ್ಲಿ ಪ್ರತಿಯೊಬ್ಬ ಗುರು ತಮ್ಮದೇ ಆದ ಶೈಲಿಯಲ್ಲಿ ನಾಟ್ಯವನ್ನು ಕಲಿಸುತ್ತಾರೆ. ಯಕ್ಷಗಾನ ಕಲಿಕೆಗೆ ಒಂದು ಚೌಕಟ್ಟು ರೂಪಿಸುವ ಮೂಲಕ ಏಕರೂಪತೆ ತರಬೇಕಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್ನ ಯಕ್ಷ ಶಿಕ್ಷಣ ಯೋಜನೆಯು ಪಠ್ಯ ರೂಪಿಸಿದ್ದು, ಫೌಂಡೇಶನ್ನ ಶಿಕ್ಷಕರು ಇದರ ಪ್ರಕಾರವೇ ನಾಟ್ಯ ಕಲಿಸುತ್ತಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಯಕ್ಷಗಾನಕ್ಕೆಂದೇ ಒಂದು ಸೀಲೆಬಸ್ ಮಾಡಿ ಅದರ ಮುಖೇನ ಯಕ್ಷಗಾನ ನಾಟ್ಯ ಕಲಿಯುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.
LATEST NEWS
ಬೆಳಗ್ಗೆ ಏಳುವಾಗ ಬಲಗಡೆಯಿಂದ ಯಾಕೆ ಏಳಬೇಕು ಗೊತ್ತೇ..?
ಮಂಗಳೂರು: ರಾತ್ರಿ ಮಲಗೋದು ಎಷ್ಟು ಮುಖ್ಯವೋ ಬೆಳಗ್ಗಿನ ಜಾವ ಏಳೋದು ಕೂಡ ಅಷ್ಟೇ ಮುಖ್ಯವಾಗುತ್ತದೆ. ಸನಾತನ ಹಿಂದೂ ಧರ್ಮದಲ್ಲಿ ಒಂದು ವಿಶೇಷ ಸಂಪ್ರದಾಯ ಇದೆ. ಬೆಳಿಗ್ಗೆ ಬಲಗಡೆಯಿಂದ ಎದ್ದು ಅಂಗೈ ಉಜ್ಜಿ ಕಣ್ಣು ಮುಚ್ಚಿ ಕರಾಗ್ರೆ ವಸತೆ ಲಕ್ಷ್ಮಿ ಎನ್ನುವ ಶ್ಲೋಕ ಹೇಳುವುದು. ಬಾಲ್ಯದಲ್ಲಿ ನಮ್ಮ ಹಿರಿಯರು ಹಾಗೂ ನಮ್ಮ ಅಮ್ಮಂದಿರು ಬಲಗಡೆಗೆ ಏಳು ಅಂತ ಹೇಳಿರುವುದನ್ನು ಕೇಳಿರುತ್ತೇವೆ. ಅಥವಾ ನಾವು ಎಡ ಬದಿಯಿಂದ ಎಳುವುದ್ದನ್ನು ನೋಡಿದಾಗ ನಮ್ಮನ್ನು ಬಲಗಡೆಯಿಂದ ಎಬ್ಬಿಸಲು ಟ್ರೈ ಮಾಡಿರಬಹುದು.
ಬಲ ಭಾಗದಿಂದ ಎದ್ದರೆ ಅದೃಷ್ಟ
ಬಲ ಭಾಗದಿಂದ ಎದ್ದರೆ ಒಳ್ಳೆಯದು ಅನ್ನೋದು ಹೇಳಿದ್ದನ್ನ ನಾವು ಕೇಳಿರಬಹುದು. ಬಲ ಭಾಗದಿಂದ ಎಚ್ಚರಗೊಂಡರೆ ದಿನವಿಡೀ ಅದೃಷ್ಟ ಇತ್ಯಾದಿ ಕಲ್ಪನೆಗಳು ನಮ್ಮಲ್ಲಿ ಇರುತ್ತದೆ. ಇನ್ನೊಂದು ವಿಚಾರ ಏನು ಅಂದ್ರೆ ನಮ್ಮ ದೇಹ ನಿದ್ದೆಗೆ ಜಾರಿದಾಗ ನಮ್ಮ ದೇಹದಲ್ಲಿ ಸ್ನಾಯುಗಳು ರೆಸ್ಟ್ ಅಲ್ಲಿ ಇರುತ್ತವೆ.
ವೈಜ್ಞಾನಿಕ ಕಾರಣ
ವೈಜ್ಞಾನಿಕವಾಗಿ ಹೇಳುವುದಾದರೆ ನಮ್ಮ ಹೃದಯ ದೇಹದ ಎಡ ಭಾಗದಲ್ಲಿ ಇದೆ. ಅದರ ಸುತ್ತಲೂ ಹಲವಾರು ಸ್ನಾಯುಗಳು ಇವೆ. ನಾವು ಎಡ ಭಾಗದಿಂದ ಧಿಡೀರ್ ಅಂತ ಇದ್ರೆ ನಮ್ಮ ಇಡೀ ದೇಹದ ಒತ್ತಡ ಆ ಸ್ನಾಯುಗಳ ಮೇಲೆ ಬೀಳುತ್ತೆ. ಆ ಸ್ನಾಯುಗಳಿಗೆ ಸ್ವಲ್ಪ ಪೆಟ್ಟು ಬಿದ್ರೆ ಕೂಡ ಅದು ನಮ್ಮ ಹೃದಯಕ್ಕೆ ತುಂಬಾ ಅಪಾಯಕಾರಿ. ಆದ್ದರಿಂದ ನಮ್ಮ ಹಿರಿಯರು ಬಲ ಭಾಗದಿಂದ ಏಳಬೇಕು ಅಂತ ಹೇಳುತ್ತಿದ್ದರು.
ಇನ್ನು ಎಡಭಾಗದಿಂದ ಎದ್ದರೆ ದಿನ ಒಳ್ಳೆಯದಿರುವುದಿಲ್ಲ, ಏನಾದರೂ ಕೆಟ್ಟದ್ದು ಆಗುವ ಸಾಧ್ಯತೆಗಳು ಇರುತ್ತದೆ ಎಂಬುದು ಜನರ ನಂಬಿಕೆಯಾಗಿರುತ್ತದೆ. ಹಾಗಾಗಿ ಈಗಲೂ ಹೆಚ್ಚಿನ ಜನರು ಬೆಳ್ಳಗ್ಗಿನ ಜಾವ ಎಡಭಾಗದಿಂದ ಏಳದೇ ಬಲಭಾಗದಿಂದ ಏಳುತ್ತಾರೆ. ಬೆಳಗ್ಗೆ ಬಲ ಬದಿಯಿಂದ ಏಳುವುದರಿಂದ ನಿಮ್ಮ ಅಂದಿನ ದಿನ ಶಾಂತಿಯುತವಾಗಿಯೂ ಹಾಗೂ ಒತ್ತಡವಿಲ್ಲದೇ ಕಳೆಯಬಹುದು.
- FILM6 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA6 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- LATEST NEWS6 days ago
ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್ ಲೈಸೆನ್ಸ್ ಪಡೆದ ಏಷ್ಯಾದ ಮೊದಲ ಮಹಿಳೆ!
- DAKSHINA KANNADA6 days ago
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ