DAKSHINA KANNADA
ಮಂಗಳೂರು ನಗರದಲ್ಲಿ ಎಸ್ ಬಿ ಐ ಬೃಹತ್ ಗೃಹ ಸಾಲ ಹಬ್ಬಕ್ಕೆ ವಿದ್ಯುಕ್ತ ಚಾಲನೆ
ಮಂಗಳೂರು: ಬೃಹತ್ ಗೃಹ ಸಾಲವನ್ನು ಒದಗಿಸುತ್ತಿರುವ ಬ್ಯಾಂಕ್ ಎಂಬ ಹೆಗ್ಗಳಿಕೆ ಇರುವ ಎಸ್ ಬಿ ಐ ಈ ಬಾರಿ ಮಂಗಳೂರು ನಗರದಲ್ಲಿ ಬೃಹತ್ ಗೃಹ ಸಲ ಹಬ್ಬವನ್ನು ನಗರದ ಟಿ. ಎಂ. ಎ.ಪೈ ಕನ್ವೆಂನ್ಷನ ಸೆಂಟರ್ ನಲ್ಲಿ ಆಯೋಜಿಸಿದೆ. ಈ ಕಾರ್ಯಕ್ರಮವನ್ನು
ಶಾಸಕ ವೇದವ್ಯಾಸ ಕಾಮತ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಈ ಸಂಧರ್ಭ ಮಾತನಾಡುತ್ತಾ ಭಾರತದಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮುಂಚೂಣಿ ಯಲ್ಲಿರುವ ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾದ ಕಾರ್ಯಗಳು ಶ್ಲಾಘನೀಯ,ಜೊತೆಗೆ ಪ್ರಧಾನ ಮಂತ್ರಿಗಳ ಮತ್ತು ಮುಖ್ಯಮಂತ್ರಿಗಳ ಯೋಜನೆಗಳನ್ನು ಜನತೆಗೆ ಮುಟ್ಟಿಸುವ ಏಕೈಕ ಬ್ಯಾಂಕಿಂಗ್ ಎಸ್ ಬಿ ಐ ಆಗಿದೆ ಎಂದರು.
ಪ್ರಾಮಾಣಿಕ ರೀತಿಯಲ್ಲಿ ಕೆಲ್ಸ ಮಾಡುವವರು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಈಗಲೂ ಇದ್ದಾರೆ.ಆಸಕ್ತ ಜನತೆಗೆ ಸ್ವಂತ ಮನೆ ನಿರ್ಮಾಣ ಮಾಡುವ ಕನಸನ್ನು ನನಸು ಮಾಡಲು ಎಸ್ ಬಿ ಐ ಆಯೋಜಿಸಿರುವ ಬೃಹತ್ ಗೃಹ ಸಾಲ ಹಬ್ಬವನ್ನು ಸ್ವಾಗತಿಸುತ್ತೇನೆ, ಸಾರ್ವಜನಿಕರು ಇದರ ಸದುಪಯೋಗ ಪಡೆದು ಕೊಳ್ಳಬೇಕು ಎಂದು ತಿಳಿಸಿದರು.
ಮೇಯರ್ ಪ್ರೇಮಾನಂದ ಶೆಟ್ಟಿ ಮಾತನಾಡುತ್ತಾ , ನಗರಗಳ ಅಭಿವೃದ್ಧಿಯಲ್ಲಿ ಬ್ಯಾಂಕ್ ಗಳ ಪಾತ್ರ ದೊಡ್ಡದಿದೆ.ಮುಂದೆಯೂ ಸಹ ಬ್ಯಾಂಕ್ ಗಳ ಸಹಕಾರ ಬೇಕಾಗಿದೆ.ಈಗಾಗಲೇ ಶಕ್ತಿನಗರದಲ್ಲಿ ನಿರ್ಮಾಣವಾಗಲಿರುವ 1000ಮನೆಗಳಿಗೂ ಬ್ಯಾಂಕ್ ಸಾಲ ರೂಪದಲ್ಲಿ ಸಹಾಯ ಮಾಡಿದೆ ಎಂದು ಹೇಳಿದರು.
ಕ್ರೆಡೈ ಅಧ್ಯಕ್ಷ ಪುಷ್ಪರಾಜ ಜೈನ್ ರವರು ಮಾತನಾಡುತ್ತಾ ಎಸ್ ಬಿ ಐ ಬ್ಯಾಂಕಿಂಗ್ ಸಂಸ್ಥೆ ಜನತೆಗೆ ಉತ್ತಮ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದೆ.ಇಂದಿನ ದಿನಗಳಲ್ಲಿ ಇಷ್ಟು ಕಡಿಮೆ ಬಡ್ಡಿದರದಲ್ಲಿ ಗೃಹ ನಿರ್ಮಾಣ ಸಾಲ ನೀಡಿ ಜನರಿಗೆ ಈ ಮೂಲಕ ಸಹಕಾರ ಕೊಡುವುದಕ್ಕೆ ಅಭಿನಂದಿಸುತ್ತೇನೆ.
ಇತ್ತೀಚಿನ ದಿನಗಳಲ್ಲಿ ಕಟ್ಟಡ ನಿರ್ಮಾಣ ಸಾಮಗ್ರಿಗಳ ಬೆಲೆ ಹಿಂದಿಗಿಂತ ಕನಿಷ್ಟ 30 ಪರ್ಸೆಂಟ್ ಜಾಸ್ತಿ ಆಗುತ್ತಾ ಇದೆ. ಹಾಗಾಗಿ ಮುಂದಿನ ದಿನಗಳಲ್ಲಿ ಫ್ಲಾಟ್ ಗಳಿಗೆ ಬೇಡಿಕೆ ಜಾಸ್ತಿ ಆಗಿ, ಸಾರ್ವಜನಿಕರು ಮುಂದಿನ ದಿನಗಳಲ್ಲಿ ಫ್ಲಾಟ್ ಗಳನ್ನೂ ಮೆಚ್ಚಿಕೊಳ್ಳುವುದರಲ್ಲಿ ಸಂಶಯವಿಲ್ಲ.
ಇಂತಹ ಮೇಳದಲ್ಲಿ ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಭಾಗಿಯಾಗಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.ಸ್ಟೇಟ್ ಬ್ಯಾಂಕಿನ ರಿಜಿನಲ್ ಮ್ಯಾನೇಜರ್ ಹರಿಶಂಕರ್ ಮತ್ತು ಇತರ ಅಧಿಕಾರಿಗಳು ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಮಮತರವರು ಕಾರ್ಯಕ್ರಮ ನಿರ್ವಹಿಸಿದರು.
ಬೃಹತ್ ಗೃಹ ಸಾಲ ಹಬ್ಬ
ನಗರದ ಟಿಎಂಎ ಪೈ ಹಾಲ್ನಲ್ಲಿ ಬೃಹತ್ ಗೃಹ ಸಾಲ ಹಬ್ಬ ನಡೆಯಲಿದೆ.ಎರಡು ದಿನಗಳ ಕಾಲ ನಡೆಯುವ ಈ ಹಬ್ಬದಲ್ಲಿ ಒಂದೇ ಸೂರಿನಡಿಯಲ್ಲಿ ನಗರದ 25ಕ್ಕೂ ಹೆಚ್ಚಿನ ಪ್ರಮುಖ ನಿರ್ಮಾಣ ಸಂಸ್ಥೆಗಳು,ಭಾಗವಹಿಸಿ ತಮ್ಮ 40ಕ್ಕೂ ಹೆಚ್ಚಿನ ಯೋಜನೆಗಳ ಮಾಹಿತಿಗಳನ್ನು ಗ್ರಾಹಕರಿಗೆ ನೀಡಲಿದ್ದಾರೆ .
ಜನರು ಎಲ್ಲಾ ನಿರ್ಮಾಣ ಸಂಸ್ಥೆಗಳು ಒದಗಿಸುವ ಸೌಲಭ್ಯಗಳನ್ನು ಹಾಗೂ ಸೌಕರ್ಯಗಳನ್ನು ಸ್ಥಳದಲ್ಲೇ ಹೋಲಿಕೆ ಮಾಡಿ ಸೂಕ್ತ ಎನಿಸಿದ ಕನಸಿನ ಮನೆಯನ್ನು ಆಯ್ಕೆ ಮಾಡಿಕೊಳ್ಳುವ ಜೊತೆಗೆ ಎಸ್ಬಿಐನ ಶೇಕಡ 6.70 ಕನಿಷ್ಠ ಬಡ್ಡಿ ದರದ ಸಾ ಸೌಲಭ್ಯವನ್ನು ಸಹ ಸ್ಥಳದಲ್ಲಿ ಪಡೆಯುವ ಅವಕಾಶವನ್ನು ಒದಗಿಸಲಾಗಿದೆ.ಶನಿವಾರ ಮತ್ತು ಭಾನುವಾರ ನಡೆಯಲಿರುವ ಎಸ್ ಬಿ ಐ ಗೃಹ ಸಾಲ ಹಬ್ಬ
ಪ್ರವೇಶ ಸಂಪೂರ್ಣ ಉಚಿತವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಂಘಟಕರು ವಿನಂತಿಸಿದ್ದಾರೆ.
DAKSHINA KANNADA
ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ
ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ಮತದಾನ ಮಾಡುವಾಗ ಫೋನ್ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
BELTHANGADY
ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.
ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?
ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
- DAKSHINA KANNADA6 days ago
“ಸೆಕ್ಸ್” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್..!
- DAKSHINA KANNADA6 days ago
ಕೊರಗಜ್ಜನ ಫೋಟೋವನ್ನು ಮನೆಯಲ್ಲಿ ಇಟ್ಟು ಆರಾಧಿಸಬಹುದಾ?
- LATEST NEWS5 days ago
ಆಲದ ಮರದ ಪೊಟರೆಯಲ್ಲಿ ಪತ್ತೆಯಾಯ್ತು 64 ಲಕ್ಷ ರೂ.!
- DAKSHINA KANNADA6 days ago
ಕಾರ್ಪೋರೇಟರ್ ಮಗಳ ಹ*ತ್ಯೆ..! ಒಂಬತ್ತು ಬಾರಿ ಇರಿದ ಪಾಪಿ…!