LATEST NEWS
“ಎಸ್ಸಿಡಿಸಿಸಿ ಬ್ಯಾಂಕ್ ರಾಜ್ಯದಲ್ಲೇ ನಂಬರ್ ಒನ್”-ಸಹಕಾರ ಸಚಿವ ಎಸ್.ಟಿ.ಸೋಮಶೇಖರ್
ಉಪ್ಪುಂದ: “ಎಸ್ ಸಿಡಿಸಿಸಿ ಬ್ಯಾಂಕ್ ರಾಜ್ಯದಲ್ಲೇ ನಂಬರ್ ಒನ್ ಆಗಿದ್ದು ಅದರ ಕಾರ್ಯವೈಖರಿ ಇತರ ಬ್ಯಾಂಕ್ ಗಳಿಗೆ ಮಾದರಿಯಾಗಿದೆ.” ಎಂದು ರಾಜ್ಯ ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಅಭಿಪ್ರಾಯಪಟ್ಟರು.
ಅವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಇದರ 110ನೇ ಉಪ್ಪುಂದ ಶಾಖೆಯ ಉದ್ಘಾಟನಾ ಸಮಾರಂಭ ಮತ್ತು ನವೋದಯ ಸ್ವಸಹಾಯ ಸಂಘಗಳ ಸಾಧನಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
“ಕೋವಿಡ್ ಸಂದರ್ಭದಲ್ಲಿ ಸಹಕಾರಿ ಬ್ಯಾಂಕ್ ಗಳಿಂದ ಸಾಲ ಪಡೆದಿದ್ದ ಸದಸ್ಯರು ಮರಣ ಹೊಂದಿದ್ದಾರೆ. ಈ ಬಗ್ಗೆ ಅಪೆಕ್ಸ್ ಬ್ಯಾಂಕ್ ನಲ್ಲಿ ಸಭೆ ನಡೆಸಿ ಮೃತರ ಕುಟುಂಬಗಳಿಗೆ ನೆರವಾಗುವ ನಿರ್ಧಾರಕ್ಕೆ ಬರಲಾಯಿತು.
ಈ ವೇಳೆ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ. ಎನ್. ರಾಜೇಂದ್ರ ಕುಮಾರ್ ಅವರು ತಲಾ 1 ಲಕ್ಷ ರೂ. ನೆರವು ಘೋಷಣೆ ಮಾಡಿದ್ದು ಅದರಂತೆ ಇಂದು ಮೃತರ ಕುಟುಂಬಕ್ಕೆ ಚೆಕ್ ಹಸ್ತಾಂತರಿಸಲಾಗಿದೆ.
ಎಲ್ಲ ಸಹಕಾರ ಸಂಘಗಳನ್ನು ಒಂದೇ ತಂತ್ರಾಂಶದಡಿಯಲ್ಲಿ ತರಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಈಗಾಗಲೇ ಮನವಿ ಸಲ್ಲಿಸಲಾಗಿದ್ದು ಅವರು ಒಂದು ವರ್ಷದೊಳಗೆ ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವ ಭರವಸೆ ನೀಡಿದ್ದಾರೆ. ಕರ್ನಾಟಕದಲ್ಲಿ 15 ಹಾಲಿನ ಯೂನಿಯನ್ ಇದ್ದು 26 ಲಕ್ಷ ರೈತರು ಹಾಲು ಪೂರೈಕೆ ಮಾಡುತ್ತಿದ್ದಾರೆ.
ಅದರಲ್ಲಿ 9 ಲಕ್ಷ ಮಹಿಳೆಯರು ಸದಸ್ಯರಾಗಿರುವುದು ಖುಷಿಯ ವಿಚಾರ. ಹೈನುಗಾರಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರಕಾರ ಎಲ್ಲರಿಗೂ ಕಾರ್ಡ್ ವಿತರಿಸಲು ಸರಕಾರ ಮುಂದಾಗಿದೆ.” ಎಂದರು.
“ಮಣ್ಣಿನ ಮಕ್ಕಳು ಸಾಮಾನ್ಯವಾಗಿ ಕೃಷಿ ಖಾತೆ ಕೇಳಲ್ಲ, ಪಿಡಬ್ಲ್ಯು ಖಾತೆಯೋ ಇನ್ನಿತರ ಖಾತೆಯನ್ನೋ ಕೇಳ್ತಾರೆ. ಆದರೆ ಓರ್ವ ಕೃಷಿಕನಾಗಿದ್ದು ಬಿ.ಸಿ. ಪಾಟೀಲ್ ಅವರು ಕೃಷಿ ಖಾತೆಯನ್ನು ಕೇಳಿ ಪಡೆದು ರಾಜ್ಯದಲ್ಲಿ ಕೃಷಿ ಉಳಿವಿಗಾಗಿ ದುಡಿಯುತ್ತಿದ್ದಾರೆ. ಅವರ ಶ್ರಮದಿಂದ ರಾಜ್ಯದ ಕೃಷಿ ಇಲಾಖೆ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ” ಎಂದರು.
ಬಳಿಕ ಮಾತಾಡಿದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು, “ಉತ್ತರ ಕರ್ನಾಟಕ ಭಾಗದ ಹಲವಾರು ಕಾರ್ಖಾನೆಗಳಿಗೆ ಎಸ್ಸಿಡಿಸಿಸಿ ಬ್ಯಾಂಕ್ ಸಾಲ ಸೌಲಭ್ಯ ನೀಡುತ್ತಾ ಬಂದಿದೆ.
ನನ್ನ ನಿರಾಣಿ ಗ್ರೂಪ್ ಗೆ 25 ವರ್ಷಗಳ ಹಿಂದೆ 12 ಕೋಟಿ ರೂ. ಸಾಲವನ್ನು ರಾಜೇಂದ್ರ ಕುಮಾರ್ ಅವರು ನೀಡಿದ್ದು ಅದರಿಂದ ನನ್ನ ಉದ್ದಿಮೆ ಇಂದು ಯಶಸ್ವಿಯಾಗಿ ಬೆಳೆದು ನಿಂತ ಪರಿಣಾಮ 75,000 ಮಂದಿ ದುಡಿಯಲು ಅವಕಾಶ ಸಿಕ್ಕಿದೆ.
ನನ್ನ ಸಂಸ್ಥೆ ಸಕ್ಕರೆ ಉತ್ಪಾದನೆಯಲ್ಲಿ ದೇಶದಲ್ಲೇ ಎರಡನೇ ಸ್ಥಾನ ಪಡೆಯಲು ರಾಜೇಂದ್ರ ಕುಮಾರ್ ಅವರ ಪ್ರೋತ್ಸಾಹವೇ ಕಾರಣ” ಎಂದರು.
ಇದೇ ವೇಳೆ ಬಿಜೂರಿನ ನೂತನ ಸ್ವಸಹಾಯ ಗುಂಪಿನ ಉದ್ಘಾಟನೆಯನ್ನು ಕೃಷಿ ಸಚಿವ ಬಿ. ಸಿ. ಪಾಟೀಲ್ ನೆರವೇರಿಸಿದರು.
ಬಳಿಕ ಮಾತಾಡಿದ ಅವರು, “ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ. ಹೆಣ್ಣುಮಕ್ಕಳು ಸ್ವಾವಲಂಬಿಯಾದರೆ ಆಕೆಯ ಇಡೀ ಕುಟುಂಬದ ಅಭಿವೃದ್ಧಿಯಾಗುತ್ತದೆ.
ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ನವೋದಯ ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಸಾಲ ನೀಡಿ ಅವರನ್ನು ಸ್ವಾವಲಂಬಿ ಬದುಕಿಗೆ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಕಾರ್ಯ.
ಸರಕಾರಗಳು ಮಾಡಬೇಕಿರುವ ಕೆಲಸವನ್ನು ಇಂದು ರಾಜೇಂದ್ರ ಕುಮಾರ್ ಮಾಡುತ್ತಾ ಬಂದಿದ್ದಾರೆ. ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ.
ಅವರ ಸಾಮಾಜಿಕ ಕಳಕಳಿ ಇದೇ ರೀತಿ ಮುಂದುವರಿದು ನಾಡಿನೆಲ್ಲೆಡೆಯ ಜನರು ಪ್ರಯೋಜನ ಪಡೆಯುವಂತಾಗಲಿ” ಎಂದರು.
ಸಮಾವೇಶವನ್ನು ಉದ್ದೇಶಿಸಿ ಮಾತಾಡಿದ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು, “ಉಪ್ಪುಂದ ಶಾಖೆಯು ಉದ್ಘಾಟನೆಗೊಂಡ ದಿನವೇ 4000 ಖಾತೆಗಳು ತೆರೆಯಲ್ಪಟ್ಟಿವೆ. ಇದಕ್ಕಾಗಿ ನಾನು ಇಲ್ಲಿನ ಗ್ರಾಹಕರಿಗೆ ಅಭಾರಿಯಾಗಿದ್ದೇನೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರ್ಥಿಕ ಸಂಕಷ್ಟದಿಂದ ಸಕಾಲದಲ್ಲಿ ಸಾಲ ಸಿಗದ ಕಾರಣಕ್ಕೆ ಯಾರೂ ಆತ್ಮಹತ್ಯೆ ಮಾಡಿಕೊಂಡಿಲ್ಲ. ಅದೇ ರೀತಿ ಶೇ.100ರಷ್ಟು ಸಾಲ ಮರುಪಾವತಿಯಾಗುತ್ತಿದೆ. ಇದು ನಾವೆಲ್ಲರೂ ಹೆಮ್ಮೆ ಪಡಬೇಕಾದ ಸಂಗತಿಯಾಗಿದೆ.
ಬ್ಯಾಂಕ್ ಇಷ್ಟು ದೊಡ್ಡಮಟ್ಟದಲ್ಲಿ ಬೆಳೆಯಲು ಕಾರಣ ನಾನೊಬ್ಬನೇ ಅಲ್ಲ, ನೀವು. ಯಾಕೆಂದರೆ ನೀವು ಪಡೆದುಕೊಂಡ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಿದ ಕಾರಣ ಇದು ಸಾಧ್ಯವಾಯಿತು.
ಬರೀ ಭಾಷಣದಲ್ಲಿ ಮಾತೆಯರೇ ತಾಯಂದಿರೇ ಎಂದರೆ ಸಾಲದು.
ನಾನು ನಿಮ್ಮನ್ನು ಸ್ವಾವಲಂಬಿಯನ್ನಾಗಿ ಮಾಡಲು ನಿಮ್ಮನ್ನು ನಂಬಿ ಸಾಲ ನೀಡುತ್ತಿದ್ದೇನೆ. ಇದಕ್ಕಾಗಿ ಮನೆ ಅಡಮಾನ ಇಡಬೇಕಿಲ್ಲ. ನಿಮ್ಮದೇ ಗುಂಪು ರಚಿಸಿದ್ದೀರಿ, ನಿಮ್ಮೆಲ್ಲರ ಮೇಲೆ ವಿಶ್ವಾಸವಿರಿಸಿ ಸಾಲ ನೀಡಿದ್ದೇನೆ. ನೀವು ಮರುಪಾವತಿ ಮಾಡಿದ್ದೀರಿ.
ನೀವು ನನಗೇನೂ ಕೊಡುವುದು ಬೇಡ, ಸಾಲ ಪಡೆದು ಅನ್ಯ ಖರ್ಚು ಮಾಡದೇ ನಿಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಿ ಅವರನ್ನು ಮುಂದೆ ಅವರ ಕಾಲ ಮೇಲೆ ನಿಲ್ಲಿಸಿ.
ಅವರು ನಿಮ್ಮ ಇಡೀ ಕುಟುಂಬಕ್ಕೆ ಬೆಳಕಾಗುತ್ತಾರೆ. ಇದು ನನ್ನೊಬ್ಬನ ಸಾಧನೆಯಲ್ಲ ನಮ್ಮೆಲ್ಲರ ಟೀಮ್ ವರ್ಕ್ ನಿಂದ ಇದು ಸಾಧ್ಯವಾಗಿದೆ.” ಎಂದರು.
ಇದೇ ವೇಳೆ ಕೋವಿಡ್ ನಿಂದ ಮೃತಪಟ್ಟ ನವೋದಯ ಸ್ವಸಹಾಯ ಸಂಘದ ಸದಸ್ಯರ ಕುಟುಂಬಕ್ಕೆ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಾಲ ಸೌಲಭ್ಯ ವಿತರಿಸಲಾಯಿತು.
ಮೃತ ಸದಸ್ಯರ ಚೈತನ್ಯ ವಿಮಾ ಚೆಕ್ ಅನ್ನು ಕುಟುಂಬ ಸದಸ್ಯರಿಗೆ ವಿತರಿಸಲಾಯಿತು. ಉಪ್ಪುಂದ ನೂತನ ಶಾಖೆಯಿಂದ ವಾಹನದ ಸಾಲ ಪತ್ರ ವಿತರಣೆ ಮಾಡಲಾಯಿತು.
ವೇದಿಕೆಯಲ್ಲಿ ರಾಜ್ಯ ಸಹಕಾರ ಸಚಿವ ಎಸ್. ಟಿ. ಸೋಮಶೇಖರ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಕೃಷಿ ಸಚಿವ ಬಿ.ಸಿ. ಪಾಟೀಲ್, ಮೀನುಗಾರಿಕೆ ಮತ್ತು ಬಂದರು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಶಾಸಕ ಜಿ. ಟಿ. ದೇವೇಗೌಡ, ಸಂಸದ ಬಿ. ವೈ. ರಾಘವೇಂದ್ರ,
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಕೆ. ಜಯಪ್ರಕಾಶ್ ಹೆಗ್ಡೆ, ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಮಾಜಿ ಶಾಸಕ ಗೋಪಾಲ ಪೂಜಾರಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ್ ಶೆಟ್ಟಿ ಇಂದ್ರಾಳಿ,
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ,
ಉಪ್ಪುಂದ ಲಕ್ಷ್ಮಿ ಖಾರ್ವಿ, ಹಿರಿಯಣ್ಣ ಶೆಟ್ಟಿ, ಎಸ್ ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಬಿ., ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಮಹೇಶ್ ಮೊಳಹಳ್ಳಿ ಧನ್ಯವಾದ ಅರ್ಪಿಸಿದರು.
FILM
ಕ್ಲಿಕ್ ಆಯ್ತು ‘ಪುಷ್ಪ ಪುಷ್ಪ’…ಅಲ್ಲು ಅರ್ಜುನ್ ಮಾಸ್ ಲುಕ್; ಸಕತ್ ಸ್ಟೆಪ್ಸ್ ಗೆ ಫ್ಯಾನ್ಸ್ ಫಿದಾ
ಟಾಲಿವುಡ್ : ಸದ್ಯ ಟಾಲಿವುಡ್ ಅಂಗಳದಲ್ಲಿ ‘ಪುಷ್ಪ 2 : ದಿ ರೂಲ್’ ಸೌಂಡ್ ಜೋರಾಗಿದೆ. ಅಲ್ಲು ಅರ್ಜುನ್ ಸಿನಿಮಾ ಅಂದ್ರೆ ಹೇಳ್ಬೇಕಾ..ಮೊದಲೇ ಕ್ರೇಜ್ ಹೆಚ್ಚಿಸಿರುತ್ತೆ. ಪುಷ್ಪ ಈಗಾಗಲೇ ಫಸ್ಟ್ ಲುಕ್, ಟೀಸರ್ ಎಲ್ಲದರ ಮೂಲಕಾನೂ ನಿರೀಕ್ಷೆ ಹೆಚ್ಚಿಸುತ್ತಿದೆ. ಇದೀಗ ಹಾಡಿನ ಸರದಿ.
ಅಲ್ಲು ಅರ್ಜುನ್ ಮಾಸ್ ಲುಕ್; ಸಕತ್ ಸ್ಟೆಪ್ಸ್ :
‘ಪುಷ್ಪ 2 : ದಿ ರೂಲ್’ ಸಿನಿಮಾದ ಕುರಿತು ಯಾವ ಅಪ್ಡೇಟ್ ಕೊಡುತ್ತದೆ ಎಂದು ಅಲ್ಲು ಅರ್ಜುನ್ ಅಭಿಮಾನಿಗಳು ಕಾಯುತ್ತಿರುತ್ತಾರೆ. ಇದೀಗ ಮೇ 1 ರಂದು ಸಿನೆಮಾದ ಹಾಡೊಂದನ್ನು ರಿಲೀಸ್ ಮಾಡಲಾಗಿದೆ. ಪುಷ್ಪ ಪುಷ್ಪ ಅನ್ನೋ ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಡಿನಲ್ಲಿ ಅಲ್ಲು ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ಮಾಸ್ ಲುಕ್ ನಲ್ಲಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದಾರೆ. ಈ ಲುಕ್ ಗೆ ಫ್ಯಾನ್ಸ್ ಫಿದಾ ಆಗಿರೋದಂತೂ ಸುಳ್ಳಲ್ಲ. ಎಂದಿನಂತೆ ಅಲ್ಲು ಡ್ಯಾನ್ಸ್ ಸಕತ್ತಾಗಿಯೇ ಇದೆ. ಟೀ ಗ್ಲಾಸ್ ಹಿಡಿದು ಅಲ್ಲು ಅರ್ಜುನ್ ವ್ಹಾವ್ ಎಂದೆನಿಸುವಂತೆ ಸ್ಟೆಪ್ ಹಾಕಿದ್ದಾರೆ.
ಬಿಡುಗಡೆಯಾದ ಕೆಲವೇ ಘಂಟೆಯಲ್ಲಿ ಲಕ್ಷಾಂತರ ಜನರು ವೀಕ್ಷಣೆ ಮಾಡಿದ್ದಾರೆ. ಸದ್ಯ 9.7 ಮಿಲಿಯನ್ ವೀಕ್ಷಣೆ ಪಡೆದಿದೆ. ಈ ಮೂಲಕ ಭಾರತದಲ್ಲಿನ ಸಂಗೀತ ಪಟ್ಟಿಯಲ್ಲಿ ಈ ಹಾಡು ಅಗ್ರಸ್ಥಾನ ಪಡೆದುಕೊಂಡಿದೆ.
ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಅಲ್ಲು ಅರ್ಜುನ್ ಪಾತ್ರದ ಮೇಲೆ ಚಿತ್ರಿಸಲಾಗಿದೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು ,ನಕಾಶ್ ಅಜೀಜ್, ದೀಪಕ್ ಬ್ಲೂ ದನಿಯಾಗಿದ್ದಾರೆ. ‘ಪುಷ್ಪ ಪುಷ್ಪ’ ಹಾಡು ತೆಲುಗು, ಹಿಂದಿ, ತಮಿಳು, ಕನ್ನಡ, ಮಲಯಾಳಂ ಮತ್ತು ಬೆಂಗಾಲಿ ಎಂಬ ಆರು ಭಾಷೆಗಳಲ್ಲಿ ಬಿಡುಗಡೆಯಾಗಿದೆ.
ಇದನ್ನೂ ಓದಿ : 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!
ತೆರೆಗೆ ಯಾವಾಗ?
ಅಲ್ಲು ಅರ್ಜುನ್ ಜೊತೆ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹಾದ್ ಫಾಸಿಲ್ , ಡಾಲಿ ಧನಂಜಯ್, ಜಗದೀಶ್ ಪ್ರತಾಪ್ ಭಂಡಾರಿ, ರಾವ್ ರಮೇಶ್, ಜಗಪತಿ ಬಾಬು, ಅಜಯ್, ಸುನಿಲ್, ಮೈಮ್ ಗೋಪಿ, ಅನಸೂಯಾ ಭಾರದ್ವಾಜ್, ಶ್ರೀತೇಜ್, ಬ್ರಹ್ಮಾಜಿ ಮೊದಲಾದವರು ಪಾತ್ರವಾಗಿದ್ದಾರೆ.
‘ಪುಷ್ಪ 2: ದಿ ರೂಲ್’ ಆಗಸ್ಟ್ 15, 2024 ರಂದು ವಿಶ್ವದಾದ್ಯಂತ ಥಿಯೇಟರ್ಗಳಲ್ಲಿ ಬಿಡುಗಡೆಯಾಗಲಿದೆ. ಪುಷ್ಪಾದಲ್ಲಿದ್ದ ಆಕ್ಷನ್ ಗಿಂತ ಹೆಚ್ಚಿನ ಆಕ್ಷನ್ ಪುಷ್ಪಾ 2 ನಲ್ಲಿ ಇರಲಿದೆಯಂತೆ. ಪುಷ್ಪಾದಲ್ಲಿ ಮರಗಳ್ಳತನದ ಕಥೆ ಇದ್ರೆ, ಪುಷ್ಪಾ2 ನಲ್ಲಿ ಕೆಂಪು ಮರಳು ಕಳ್ಳಸಾಗಾಟದ ಬಗ್ಗೆ ಹೇಳಲಾಗಿದೆ.
LATEST NEWS
ಹೊಸ ಅಪ್ಡೇಟ್ ನೊಂದಿಗೆ ಬರುತ್ತಿದೆ ವಾಟ್ಸ್ಆ್ಯಪ್; ಏನದು ಗೊತ್ತಾ!?
ಮಂಗಳೂರು : ಆ್ಯಪ್ ಗಳು ಅಂದ್ರೆ ಹೊಸ ಹೊಸ ಫೀಚರ್ ಗಳ ಅನಾವರಣ ಮಾಡುತ್ತಿರುತ್ತವೆ. ಬಳಕೆದಾರರಿಗೆ ಅನುಕೂಲತೆಯನ್ನು ಸೃಷ್ಟಿಸಲು ನವೀನ ಫೀಚರ್ ಗಳನ್ನು ಅಳವಡಿಸಲಾಗುತ್ತದೆ. ವಾಟ್ಸ್ ಆ್ಯಪ್ ಕೂಡ ಹೊಸ ಹೊಸ ಫೀಚರ್ ಗಳನ್ನು ಪರಿಚಯಿಸುತ್ತಿರುತ್ತದೆ. ಇದೀಗ ಮತ್ತೊಂದು ಹೊಸ ಫೀಚರ್ ಪರಿಚಯಿಸುತ್ತಿದೆ.
ಏನಿದು ಫೀಚರ್ ?
ವಾಟ್ಸ್ ಆ್ಯಪ್ ಗೆ ಅತ್ಯಂತ ಹೆಚ್ಚಿನ ಬಳಕೆದಾರರಿದ್ದಾರೆ. ಈಗಾಗಲೇ ನೂತನ ಫೀಚರ್ ಗಳನ್ನು ವಾಟ್ಸ್ ಆ್ಯಪ್ ಪರಿಚಯಿಸುತ್ತಿರುತ್ತದೆ. ಇದೀಗ ಹೊಸ ಫೀಚರ್ವೊಂದನ್ನು ಪರಿಶೀಲಿಸುತ್ತಿದೆ. ಇಂಟರ್ನೆಟ್ ಇಲ್ಲದಿದ್ದರೂ ವಾಟ್ಸಾಪ್ನಲ್ಲಿ ಫೋಟೋ, ವೀಡಿಯೋ ಇತ್ಯಾದಿ ಫೈಲ್ ಶೇರಿಂಗ್ ಮಾಡಲು ಅವಕಾಶ ಕೊಡುವ ಫೀಚರ್ ಇದಾಗಿದೆ. ಬೀಟಾ ಆವೃತ್ತಿಯಲ್ಲಿ ಇದನ್ನು ಪರೀಕ್ಷಿಸಲಾಗುತ್ತಿದೆ. ಶೀಘ್ರದಲ್ಲಿ ಬಿಡುಗಡೆ ಆಗಬಹುದು ಎನ್ನಲಾಗುತ್ತಿದೆ.
ಇದನ್ನೂ ಓದಿ : 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!
ನಿಯರ್ ಬೈ ಡಿವೈಸ್, ಕ್ವಿಕ್ ಶೇರಿಂಗ್ ಇತ್ಯಾದಿ ಫೀಚರ್ ರೀತಿಯಲ್ಲಿ ಇದು ಇರಬಹುದು ಎನ್ನಲಾಗಿದೆ.
ಭಾರತ ಸೇರಿದಂತೆ ಜಗತ್ತಿನಾದ್ಯಂತ ವಾಟ್ಸ್ ಆ್ಯಪ್ ಜನಪ್ರಿಯ. ಜನರಿಗೆ ಹೆಚ್ಚಿನ ಖಾಸಗಿತನ ಮತ್ತು ಭದ್ರತೆಯನ್ನು ಒದಗಿಸಲು ಕೂಡ ವಾಟ್ಸ್ಆ್ಯಪ್ ಸಹಾಯ ಮಾಡುತ್ತದೆ.
LATEST NEWS
123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!
ದೆಹಲಿ: ಭಾರತೀಯ ಹವಾಮಾನ ಇಲಾಖೆ ಮೇ ತಿಂಗಳ ಹವಾಮಾನ ಮುನ್ಸೂಚನೆ ಬಿಡುಗಡೆ ಮಾಡಿದ್ದು ಇದೀಗ ಅಚ್ಚರಿ ಮೂಡಿಸಿದೆ. 1901ರ ನಂತರ ಏಪ್ರಿಲ್ನಲ್ಲಿ ಇಷ್ಟೊಂದು ತಾಪಮಾನವನ್ನು ದಾಖಲಿಸಿರುವುದು ಇದೇ ಮೊದಲು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ತಿಳಿಸಿದ್ದಾರೆ.
ಎಲ್ಲಾ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಎಪ್ರಿಲ್ ತಿಂಗಳಿನಲ್ಲಿ ಹೆಚ್ಚು ತಾಪಮಾನ ದಾಖಲಾಗಿದೆ. ದೇಶದಲ್ಲಿ 1901ರ ನಂತರ ಇದೇ ಮೊದಲ ಬಾರಿಗೆ ಹೆಚ್ಚು ತಾಪಮಾನ ಏರಿಕೆಯಾಗಿರುವುದು. ಎಪ್ರಿಲ್ ತಿಂಗಳಿನಲ್ಲಿ ಕೆಲವು ಕಡೆ ಆಲಿಕಲ್ಲು ಸಹಿತೆ ಮಳೆ ಬಂದಿದ್ದು, ಮೇ ತಿಂಗಳಿನಲ್ಲಿ ಹೆಚ್ಚಿನ ಉರಿಬಿಸಿಲು, ಶಾಖ ಮತ್ತು ಆಲಿಕಲ್ಲು ಮುಂದವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿದೆ. ಇನ್ನು ಮೇ ತಿಂಗಳಿನಲ್ಲಿ ಬಿಲಿನ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದ್ದು, ಇನ್ನು 11 ದಿನಗಳ ಕಾಲ ಬಿಸಿಗಾಳಿ ಮುಂದುವರಿಯಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಮುಂದೆ ಓದಿ..; ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
ಏಪ್ರಿಲ್ 5 ರಿಂದ 7 ರವರೆಗೆ, ನಂತರ 15 ರಿಂದ 30 ರವರೆಗೆ ಹೆಚ್ಚಿನ ತಾಪಮಾನ ಮತ್ತು ಆಲಿಕಲ್ಲು ಮಳೆಯಾಗಿದೆ. ಸರಾಸರಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಏಪ್ರಿಲ್ ತಿಂಗಳಲ್ಲಿ ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಸರಾಸರಿ ಕನಿಷ್ಠ ತಾಪಮಾನ 28.12 ಡಿಗ್ರಿ ಸೆಲ್ಸಿಯಸ್ ಎಂದು ಮೊಹಾಪಾತ್ರ ಹೇಳಿದ್ದಾರೆ. ದಕ್ಷಿಣ ಪರ್ಯಾಯ ದ್ವೀಪದ ಭಾರತದಲ್ಲಿ 1980 ರ ದಶಕದಿಂದಲೂ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನವು ಸಾಮಾನ್ಯವಾಗಿದೆ ಎಂದು ಅವರು ವರದಿ ಮಾಡಿದ್ದಾರೆ.
ಮುಂದಿನ 11 ದಿನದ ಶಾಖದ ಅಲೆ, ಆಲಿಕಲ್ಲು ಮಳೆ:
ದಕ್ಷಿಣ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಮರಾಠವಾಡ ಮತ್ತು ಗುಜರಾತ್ನಲ್ಲಿ ಮೇ ತಿಂಗಳಲ್ಲಿ 8-11 ದಿನಗಳವರೆಗೆ ಶಾಖದ ಅಲೆಗಳು ಇರಬಹುದೆಂದು ಮಹಾಪಾತ್ರ ಹೇಳಿದ್ದಾರೆ. ರಾಜಸ್ಥಾನ, ಪೂರ್ವ ಮಧ್ಯಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಛತ್ತೀಸ್ಗಢ, ಆಂತರಿಕ ಒಡಿಶಾ, ಗಂಗಾನದಿ ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ, ಉತ್ತರ ಒಳಭಾಗ ಕರ್ನಾಟಕ, ತೆಲಂಗಾಣದಲ್ಲಿ 5-5 ವರೆಗೆ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ. ಸಾಮಾನ್ಯವಾಗಿ ಉತ್ತರ ಭಾರತ, ಮಧ್ಯ ಭಾರತ ಮತ್ತು ಪೆನಿನ್ಸುಲಾರ್ ಭಾರತದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು ಮೂರು ದಿನಗಳ ಕಾಲ ಆಲಿಕಲ್ಲು ಮಳೆಯಾಗುತ್ತದೆ ಎಂದು ಹೇಳಿದ್ದಾರೆ.
- DAKSHINA KANNADA6 days ago
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ
- FILM6 days ago
ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ
- DAKSHINA KANNADA6 days ago
ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ
- FILM6 days ago
ಮತ್ತೆ ಬಾಯ್ ಫ್ರೆಂಡ್ ಬದಲಾಯಿಸಿದ ಶೃತಿ ಹಾಸನ್..!