Connect with us

KADABA

ಕಡಬ: ಸಿಡಿಲು ಬರುತ್ತಿದ್ದ ವೇಳೆ ಮೊಬೈಲ್ ಚಾರ್ಜರ್ ತಪ್ಪಿಸಲು ಹೋಗಿ ಬಾಲಕ ಕೊನೆಯುಸಿರು

Published

on

ಕಡಬ: ಸಿಡಿಲು ಬಡಿಯುತ್ತಿದ್ದ ವೇಳೆ ಮೊಬೈಲ್ ಚಾರ್ಜರ್ ತಪ್ಪಿಸಲು ಹೋಗಿ ವಿದ್ಯುತ್ ಅಘಾತಕ್ಕೊಳಗಾಗಿ ಬಾಲಕನೋರ್ವ ಮೃತಪಟ್ಟ ಘಟನೆ ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದ ಅಡ್ಡಹೊಳೆ ಸಮೀಪದ ಪಲ್ಲೊಟ್ಟು ಎಂಬಲ್ಲಿ ನಿನ್ನೆ ಮಧ್ಯಾಹ್ನ ನಡೆದಿದೆ.

ಪಲ್ಲೊಟ್ಟು ನಿವಾಸಿ ಮೊನಚ್ಚನ್ ಹಾಗೂ ಬೀನಾ ದಂಪತಿಯ ಪುತ್ರ ರಾಫಿನ್ (15) ಮೃತಪಟ್ಟ ದುರ್ದೈವಿ ಬಾಲಕ.

ಈತ ಪಲ್ಲೋಟ್ಟು ಎಂಬಲ್ಲಿಯೇ ಇರುವ ಅಜ್ಜಿ ಸುಂದರಿಯವರ ಮನೆಯಲ್ಲಿ ವಾಸವಾಗಿದ್ದ. ಉದನೆಯ ಹೈಸ್ಕೂಲ್‌ವೊಂದರಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಇತ್ತೀಚಿನ ಕೆಲ ದಿನಗಳಿಂದ ತರಗತಿಗೆ ಹೋಗದೇ ಮನೆಯಲ್ಲೇ ಇರುತ್ತಿದ್ದ ಎಂದು ಹೇಳಲಾಗಿದೆ.

ಜು.26ರಂದು ಮನೆ ಸಮೀಪದ ಪೇರಮಜಲು ಎಂಬಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಮಳೆ ಬಂದ ಕಾರಣ ತಾನು ವಾಸವಾಗಿದ್ದ ಮನೆಗೆ ವಾಪಾಸ್ಸಾಗಿದ್ದಾನೆ.

ಮಧ್ಯಾಹ್ನದ ವೇಳೆಗೆ ಮನೆಗೆ ಬಂದಿದ್ದ ವೇಳೆ ಮೊಬೈಲ್ ಚಾರ್ಜ್‌ಗೆ ಇಟ್ಟಿತ್ತು. ಆ ವೇಳೆ ಮಳೆಯೊಂದಿಗೆ ಗುಡುಗು ಸಿಡಿಲು ಕೂಡಾ ಇತ್ತು.

ಸಿಡಿಲು ಜೋರಾದ ಸಂದರ್ಭದಲ್ಲಿ ಈತ ಮೊಬೈಲ್ ಚಾರ್ಜ್ ಇಟ್ಟಿರುವುದನ್ನು ತಪ್ಪಿಸಿದ್ದಾನೆ. ಸಿಡಿಲು ಮಿಂಚಿನ ಅಬ್ಬರಕ್ಕೆ ವಿದ್ಯುತ್ ಶಾಕ್ ಹೊಡೆದು ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

ಈ ಮನೆಗೆ ಬೆಳಕು ಯೋಜನೆಯಲ್ಲಿ ಕೊಂಬಾರು ಗ್ರಾಮ ಪಂಚಾಯಿತಿಯವರು ವಿದ್ಯುತ್ ಸಂಪರ್ಕ ಕಲ್ಪಿಸಿದ್ದರು. ಬಾಲಕ ಕೆಲವು ದಿನಗಳ ಹಿಂದೆಯಷ್ಟೆ ಮೊಬೈಲ್ ಖರೀದಿಸಿದ್ದ ಎಂದು ತಿಳಿದುಬಂದಿದೆ.

ಮೃತ ಬಾಲಕ ತಂದೆ,ತಾಯಿ ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಕಡಬ ಮೆಸ್ಕಾಂ ಎಇಇ ಸಜಿಕುಮಾರ್, ನೆಲ್ಯಾಡಿ ಜೆಇ ರಮೇಶ್, ಕೊಂಬಾರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸರಿತಾ, ಸದಸ್ಯ ಗಣೇಶ್ ಮತ್ತಿತರರು ಭೇಟಿ ನೀಡಿದ್ದಾರೆ.

ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

DAKSHINA KANNADA

ಬೀದಿ ನಾಯಿಯನ್ನು ರಕ್ಷಿಸಲು ಹೋಗಿ ಉರುಳಿ ಬಿದ್ದ ಆಟೋ..!! ಚಾಲಕ ಗಂಭೀರ

Published

on

ಕಡಬ: ನಾಯಿ ಒಂದು ಸಡನ್ ಆಗಿ ರಸ್ತೆಗೆ ಅಡ್ಡ ಬಂದ ಕಾರಣ ಅದೇ ರಸ್ತೆಯಲ್ಲಿ ಬರುತ್ತಿದ್ದ ಅಟೋ, ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಡೆದಿದೆ. ಅಟೋ ಉರುಳಿ ಬಿದ್ದ ಕಾರಣ ಅಟೋ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಅಲಂಕಾರು ಗ್ರಾಮದ ಸುರುಳಿ ಎಂಬಲ್ಲಿ ಈ ಅಪಘಾತ ನಡೆದಿದ್ದು, ಅಟೋ ಚಾಲಕ ಸುಬ್ರಹ್ಮಣ್ಯ ನಾಯ್ಕ ಎಂಬವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸುಬ್ರಹ್ಮಣ್ಯ ನಾಯ್ಕ ಅವರು ಅಟೋ ಚಲಾಯಿಸಿಕೊಂಡು ಆಲಂಗಾರು ಕಡೆ ಬರುತ್ತಿದ್ದಾಗ ಇಕ್ಕಟ್ಟಾದ ರಸ್ತೆಯಲ್ಲಿ ನಾಯಿ ಒಂದು ಧಿಡೀರ್ ಆಗಿ ರಸ್ತೆಗೆ ಎಂಟ್ರಿ ಕೊಟ್ಟಿದೆ. ಈ ವೇಳೆ ನಾಯಿಯನ್ನು ರಕ್ಷಿಸಲು ತಕ್ಷಣ ಅಟೋದ ಬ್ರೇಕ್‌ ಹಿಡಿದಾಗ ಅಟೋ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಅಟೋದಲ್ಲಿ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ದೊಡ್ಡ ಅನಾಹುತ ನಡೆದಿಲ್ಲ. ಚಾಲಕ ಸುಬ್ರಹ್ಮಣ್ಯ ನಾಯ್ಕ ಅವರು ಕಾಲು ಮುರಿತಕ್ಕೆ ಒಳಗಾಗಿದ್ದಲ್ಲದೆ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಪುತ್ತೂರು ಆಸ್ಪತ್ರೆಗೆ ರವಾನಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Continue Reading

DAKSHINA KANNADA

ಕಡಬ ತಾಲೂಕು ಪಂಚಾಯತ್ ಕಚೇರಿಗೆ ಲೋಕಾಯುಕ್ತ ದಾಳಿ!

Published

on

ಕಡಬ : ಕೊಡಗು ಜಿಲ್ಲೆಯ ಲೋಕಾಯುಕ್ತ ಪೊಲೀಸರು ಕಡಬದಲ್ಲಿ ದಾಳಿ ನಡೆಸಿ ಆಶ್ಚರ್ಯ ಮೂಡಿಸಿದ್ದಾರೆ. ಕಡಬ ತಾಲೂಕು ಪಂಚಾಯತ್ ಇಒ ಬಿ.ವಿ ಜಯಣ್ಣ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಕಡಬ ತಾಲೂಕು ಪಂಚಾಯತ್ ಇಒ ಆಗಿ ಜಯಣ್ಣ ಇತ್ತೀಚೆಗಷ್ಟೇ ಅಧಿಕಾರ ವಹಿಸಿಕೊಂಡಿದ್ದರು.

ಇದಕ್ಕೂ ಮೊದಲು ಸೋಮವಾರ ಪೇಟೆ ತಾಲೂಕ ಪಂಚಾಯತ್ ನಲ್ಲಿ ಅವರು ಇಒ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅಲ್ಲಿರುವಾಗಲೇ ಇವರ ವಿರುದ್ಧ ಅಕ್ರಮ ಆಸ್ತಿಗಳಿಕೆಯ ದೂರು ದಾಖಲಾಗಿದ್ದು, ಆ ವಿಚಾರದ ತನಿಖೆಗೆ ಇಂದು ಕಡಬದಲ್ಲಿ ವಿಚಾರಣೆ ನಡೆಸಿದ್ದಾರೆ.
ಸೋಮವಾರಪೇಟೆಯ ಮನೆ, ಕಡಬದ ಕಚೇರಿ ಹಾಗೂ ಕಡಬದಲ್ಲೇ ಇರುವ ಜಯಣ್ಣ ಅವರ ಬಾಡಿಗೆ ಮನೆ ಮೇಲೆ ಏಕ ಕಾಲಕ್ಕೆ ದಾಳಿ ಮಾಡಲಾಗಿದೆ.

ಕೊಡಗು ಲೋಕಾಯುಕ್ತ ಡಿವೈಎಸ್ಪಿ ಪವನ್ ಕುಮಾರ್, ಇನ್ಸ್ ಪೆಕ್ಟರ್ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಇನ್ಸ್ ಪೆಕ್ಟರ್ ಶಶಿಕುಮಾರ್ ಹಾಗೂ ಸಿಬ್ಬಂದಿ ಜಯಣ್ಣ ಅವರ ವಿಚಾರಣೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

KADABA : ಆ್ಯಸಿಡ್ ದಾಳಿ ಪ್ರಕರಣ; ಸಹಕರಿಸಿದ ಇಬ್ಬರು ವಶಕ್ಕೆ

Published

on

ಕಡಬ : ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣದಲ್ಲಿ ಮತ್ತಿಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೇರಳದಲ್ಲಿ ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು ಆರೋಪಿಗಳನ್ನು ಕಡಬಕ್ಕೆ ಕರೆತಂದಿದ್ದಾರೆ.

ಮಾರ್ಚ್ 5 ರಂದು ಕಡಬದ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ಕೇರಳ ಮೂಲದ ಅಬೀನ್  ಎಂಬ ಎಂಬಿಎ ವಿದ್ಯಾರ್ಥಿ ಆಸಿಡ್ ಎರಚಿ ಬಂಧಿತನಾಗಿದ್ದ. ಆರೋಪಿಗೆ ಅಸಿಡ್ ಎಲ್ಲಿಂದ ಸಿಕ್ಕಿತು ಅನ್ನೋ ವಿಚಾರವಾಗಿ ತನಿಖೆ ನಡೆಸಿದ ಪೊಲೀಸರು ಕೇರಳದ ಎರ್ನಾಕುಲಂ ಹಾಗೂ ತಮಿಳುನಾಡಿನ ಕೊಯಮತ್ತೂರಿನಲ್ಲಿ ಕಾರ್ಯಾಚರಣೆ ನಡೆಸಿದ್ದರು.

ಪೊಲೀಸರು ವಶಕ್ಕೆ ಪಡೆದಿರುವವರಲ್ಲಿ ಒಬ್ಬಾತ ಆ್ಯಸಿಡ್ ಪೂರೈಕೆ ಮಾಡಿದ್ದರೆ, ಮತ್ತೋರ್ವ ವ್ಯಕ್ತಿ ಆರೋಪಿಗೆ ಸಮವಸ್ತ್ರ ಹೊಲಿದು ಕೊಟ್ಟಿದ್ದಾನೆ ಎನ್ನಲಾಗಿದೆ. ಇಬ್ಬರನ್ನೂ ಕಡಬಕ್ಕೆ ಕರೆ ತರಲಾಗಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Continue Reading

LATEST NEWS

Trending