ಫಿನಾಯಿಲ್ ಸಿಂಪಡಣೆ ವಿಚಾರ ಶಾಸಕ ರಾಜೇಶ್ ನಾಯಕ್ ನಡೆಗೆ ಎಸ್.ಡಿ.ಪಿ.ಐ ಆಕ್ರೋಶ..
ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಅನುಮತಿಯೊಂದಿಗೆ ಫಿನಾಯಿಲ್ ಸಿಂಪಡಣೆ: ಎಸ್.ಡಿ.ಪಿ.ಐ ಸ್ಪಷ್ಟನೆ
ಬಂಟ್ವಾಳ: ಕೊರೋನಾ ವೈರಸ್ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ತಾಲೂಕಿನ ಸಜಿಪ ಮೂಡ ಮತ್ತು ಸಜಿಪ ಮುನ್ನೂರು ಗ್ರಾಮದ ಪ್ರಮುಖ ಸ್ಥಳಗಳಲ್ಲಿ ಎಸ್.ಡಿ.ಪಿ.ಐ ಸಂಘದ ವತಿಯಿಂದ ಫಿನಾಯಿಲ್ ಸಿಂಪಡಿಸುವ ಕಾರ್ಯ ನಡೆದಿದೆ.
ಸಜಿಪ ಮೂಡ ಮತ್ತು ಸಜಿಪ ಮುನ್ನೂರು ಗ್ರಾಮದ ಇಂದಿರಾನಗರ ಮಂಜಲ್ಪಾದೆ,ಶಾರದಾ ನಗರ, ಮುನ್ನೂರು, ಕೊಪ್ಪಳ ಸಹಿತ ಪ್ರಮುಖ ಸ್ಥಳಗಳಲ್ಲಿ ಸಿಂಪಡಣೆ ಕಾರ್ಯ ಯಶಸ್ವಿಯಾಗಿ ನಡೆದಿದೆ.
ಗ್ರಾಮದ ಪಂಚಾಯತ್ ನೊಂದಿಗೆ ಎಸ್.ಡಿ.ಪಿ.ಐ ಸಂಘದ ನಾಯಕರುಗಳು ನಿಕಟ ಸಂಪರ್ಕವನ್ನಿಟ್ಟುಕೊಂಡು ಕಳೆದ ಹಲವಾರು ವರ್ಷಗಳಿಂದ ಈ ವ್ಯಾಪ್ತಿಗಳಲ್ಲಿ ಸಾಮಾಜಿಕ ಕಳಕಳಿಯೊಂದಿಗೆ ಸಮಾಜ ಸೇವೆಯನ್ನು ನಡೆಸುತ್ತಾ ಬಂದಿದೆ.
ಹಾಗಾಗಿ ಪ್ರಸ್ತುತ ಕೊರೊನಾ ವೈರಸ್ ಹಾವಳಿಯಿಂದ ಶುಚಿತ್ವ ಕಾಪಾಡುವ ಸಲುವಾಗಿ ಬೀದಿಗಳಲ್ಲಿ ಹಾಗೂ ಮನೆಗಳ ಮುಂಭಾಗದ ಚರಂಡಿಗಳಲ್ಲಿ ಫಿನಾಯಿಲ್ ಸಿಂಪಡಣೆ ಮಾಡಲು
ಪಿಡಿಓ ರಲ್ಲಿ ಅನುಮತಿಯನ್ನು ಕೇಳಿದಾಗ ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿ ಅನುಮತಿ ನೀಡಿದ ಕಾರಣದಿಂದಾಗಿ ಎಸ್.ಡಿ.ಪಿ.ಐ ಸಂಘ ಸಿಂಪಡಣೆ ಕಾರ್ಯ ಕೈಗೊಂಡಿತ್ತು.
ಆದ್ರೆ ಇದೀಗ ಎಸ್.ಡಿ.ಪಿ.ಐ ಸಂಘದ ಈ ಕಾರ್ಯಕ್ಕೆ ರಾಜಕೀಯ ದ್ವೇಷದಿಂದ ಅಪಪ್ರಚಾರ ಮಾಡಿ ಪ್ರಕರಣ ದಾಖಲು ಮಾಡಬೇಕೆಂದು ಒತ್ತಾಯ ಪಡಿಸುವ ಮೂಲಕ ಶಾಸಕ ರಾಜೇಶ್ ನಾಯಕ್ ಅಡ್ಡಿ ಪಡಿಸಿದ್ದಾರೆ.
ಅಲ್ಲದೆ ಪೋಲಿಸ್ ಅಧಿಕಾರಿಗಳನ್ನು ಮತ್ತು ತಹಶಿಲ್ದಾರರನ್ನು ದ್ವೇಷದ ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವ ಶಾಸಕ ರಾಜೇಶ್ ನಾಯಕ್ ನಡೆ ಖಂಡನೀಯ ಎಂದು ಎಸ್.ಡಿ.ಪಿ.ಐ ಸಂಘದ ದ.ಕ ಜಿಲ್ಲಾ ಉಪಾಧ್ಯಕ್ಷ ಇಕ್ಬಾಲ್ ಐಎಂಆರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ಶಾಸಕರು ಇದರ ನೈಜತೆ ತಿಳಿಯದೆ ಏಕಾಏಕಿ ಪೋಲಿಸರಿಗೆ ಮತ್ತು ತಹಶಿಲ್ದಾರರಿಗೆ ಕರೆ ಮಾಡಿ ಪ್ರಕರಣ ದಾಖಲಿಸುವಂತೆ ಒತ್ತಡ ಹೇರುತ್ತಿರುವುದು ಶಾಸಕ ಸ್ಥಾನಕ್ಕೆ ಶೋಭೆ ತರುವಂತದಲ್ಲ.
ಈ ಹಿಂದೆ ಕೂಡ ಬೇರೆ ಬೇರೆ ಸಂಘಸಂಸ್ಥೆಗಳು ರಾಸಾಯನಿಕ ಸಿಂಪಡಣೆ ಮಾಡಿದಾಗ ಈ ರೀತಿಯ ಸಮಸ್ಯೆ ಉದ್ಭವವಾಗಲಿಲ್ಲ.
ಮಾತ್ರವಲ್ಲ ಶಾಸಕರು ಕೂಡ ಆ ಸಂದರ್ಭದಲ್ಲಿ ಮೌನವಹಿಸಿದ್ದರು. ಆದ್ರೆ ಇವಾಗ ಯಾಕೆ ಶಾಸಕರು ಪ್ರಶ್ನಿಸುತ್ತಿದ್ದಾರೆ.?.
ಎಸ್ ಡಿಪಿಐ ಕಾರ್ಯಕರ್ತರು ಪಿಡಿಓ ಅವರ ಅನುಮತಿಯೊಂದಿಗೆ ಸಾರ್ವಜನಿಕರ ಒಳಿತಿಗಾಗಿ ಫಿನಾಯಿಲ್ ಸಿಂಪಡಣೆ ಮಾಡಿದಕ್ಕೆ ಯಾಕಾಗಿ ವಿರೋಧ ವ್ಯಕ್ತಪಡಿಸಿ ಪೋಲಿಸ್ ಅಧಿಕಾರಿಗಳನ್ನು ಮತ್ತು ತಹಶಿಲ್ದಾರರನ್ನು ದ್ವೇಷ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ.
ಶಾಸಕರ ಇಂತಹ ದಮನಕಾರಿ ನೀತಿ ಮುಂದುವರೆದರೆ ಪಕ್ಷದ ವತಿಯಿಂದ ಇದರ ವಿರುದ್ಧ ಹೋರಾಟದ ನಡೆಸಲಿದೆ
ಮತ್ತು ಈ ಬಗ್ಗೆ ಪೊಲೀಸ್ ಇಲಾಖೆ ನಡೆಸುವ ಎಲ್ಲಾ ತನಿಖೆಗಳನ್ನು ಎದುರಿಸಲು ಪಕ್ಷವು ಸಿದ್ದವಿದೆ, ಎಂದು ಪಕ್ಷದ ದ.ಕ ಜಿಲ್ಲಾ ಉಪಾಧ್ಯಕ್ಷ ಇಕ್ಬಾಲ್ ಐಎಂಆರ್ ಕಿಡಿಕಾರಿದ್ದಾರೆ.
DAKSHINA KANNADA
ಹಳ್ಳ ಹಿಡಿದ ಸ್ಮಾರ್ಟ್ ಸಿಟಿಯ ಕಾಮಗಾರಿ; ಕುಂಟುತ್ತಾ ಸಾಗಿದ ಮಹಾಕಾಳಿ ಪಡ್ಪು ಅಂಡರ್ ಪಾಸ್
ಮಂಗಳೂರು: ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೈಗೆತ್ತಿಕೊಂಡಿರುವ ಮಹಾಕಾಳಿ ಪಡ್ಪುವಿನ ರೈಲ್ವೇ ಅಂಡರ್ ಪಾಸ್ ಕಾಮಗಾರಿ ಸದ್ಯಕ್ಕಂತು ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಈ ಕಾಮಗಾರಿ ಕೈಗೆತ್ತಿಕೊಂಡು ವರ್ಷಗಳೇ ಕಳೆದರೂ ಕಾಮಗಾರಿ ಮುಗಿಸಬೇಕು ಅನ್ನೋ ಇಚ್ಚೆ ಸ್ಮಾರ್ಟ್ ಸಿಟಿ ಯೋಜನೆಯವರಿಗೂ ಇದ್ದಂತಿಲ್ಲ.
ಕೆಲ ತಿಂಗಳ ಹಿಂದೆ ಕಳಪೆ ಕಾಮಗಾರಿಯಿಂದಾಗಿ ಇಲ್ಲಿ ಕಾಮಗಾರಿ ಕುಸಿತ ಕೂಡಾ ಉಂಟಾಗಿತ್ತು. ಇದೀಗ ಕೆಲ ದಿನಗಳಿಂದ ಯಾವುದೇ ಕಾಮಗಾರಿ ನಡೆಸದೆ ಕಾರ್ಮಿಕರು ಕೂಡಾ ಕೆಲಸ ಇಲ್ಲದೆ ಸುಮ್ಮನೆ ಕುಳಿತಿರುವ ದೃಶ್ಯ ಇಲ್ಲಿ ಮಾಮೂಲಾಗಿದೆ. ಮಾರ್ಗನ್ ಗೇಟ್ ಮೂಲಕವಾಗಿ ಜೆಪ್ಪಿನ ಮೊಗೆರು ಹೈವೆ ಸಂಪರ್ಕಿಸುವ ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದೆ. ಸದ್ಯ ಈ ಕಾಮಗಾರಿ ಆರಂಭವಾದ ಬಳಿಕ ಇಲ್ಲಿ ದ್ವಿಚಕ್ರ ವಾಹನಕ್ಕಷ್ಟೇ ಓಡಾಡಲು ವ್ಯವಸ್ಥೆ ಮಾಡಲಾಗಿದೆ.
ಉಪ್ಪಳದಲ್ಲಿ 3.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶ; ಓರ್ವ ಬಂಧನ
ಹೀಗಾಗಿ ಈ ರಸ್ತೆಯ ಮೂಲಕ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಕಾಮಗಾರಿ ಯಾವಾಗ ಮುಗಿಸ್ತೀರಿ ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಇಲ್ಲಿ ನಡಿಯುತ್ತಿರುವ ಕಾಮಗಾರಿಯ ವೇಗ ನೋಡಿದರೆ ಇದು 2024 ರಲ್ಲಿ ಪೂರ್ಣಗೊಳ್ಳುವ ಯಾವುದೇ ಲಕ್ಷಣ ಇಲ್ಲ ಅನ್ನೋದು ಸ್ಪಷ್ಟವಾಗುತ್ತಿದೆ. ಹೀಗಾಗಿ ತಕ್ಷಣ ಅಂಡರ್ ಪಾಸ್ ಕೆಲಸ ಮಗಿಸಿ ಅಂತ ಜನ ಒತ್ತಾಯಿಸಿದ್ದಾರೆ.
LATEST NEWS
11 ವರ್ಷದ ಬಾಲಕ ಹೃದಯಘಾ*ತಕ್ಕೆ ಬ*ಲಿ
ಹಾಸನ : ಹೃದಯಾಘಾ*ತ ಎಂಬುದು ಇತ್ತೀಚೆಗೆ ಸಾಮಾನ್ಯವಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರೂ ಹೃದಯಾ*ಘಾತಕ್ಕೆ ಒಳಗಾಗುತ್ತಿದ್ದಾರೆ. ರಾಜ್ಯದಲ್ಲಿ ಮತ್ತೊಂದು ಕಳವಳಕಾರಿ ಘಟನೆ ನಡೆದಿದ್ದು, 11 ವರ್ಷದ ಬಾಲಕ ಹೃದಯಾ*ಘಾತಕ್ಕೆ ಬ*ಲಿಯಾಗಿದ್ದಾನೆ. ಈ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಸಚಿನ್ ಮೃ*ತ ಬಾಲಕ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್, ಮನೆಯಲ್ಲಿ ಟಿವಿ ನೋಡುತ್ತಿದ್ದ ವೇಳೆ ಹೃದಯಾ*ಘಾತವಾಗಿದೆ.
ಇದನ್ನೂ ಓದಿ : ಮನೆಯಲ್ಲಿ ಹಲ್ಲಿ ಕಾಟವೇ? ಈ ಸಿಂಪಲ್ ಮನೆಮದ್ದು ಟ್ರೈ ಮಾಡಿ
ಟಿವಿ ನೋಡುತ್ತಲೇ ಕುಸಿ*ದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ ಸಾ*ವನ್ನಪ್ಪಿದ್ದ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.
FILM
ಕನ್ನಡದ ಸೀರಿಯಲ್ನಲ್ಲಿ ಮಿಂಚುತ್ತಿರುವ ಉಡುಪಿಯ ಬೆಡಗಿ
ಬೆಂಗಳೂರು/ಮಂಗಳೂರು: ಸಿನೆಮಾದಲ್ಲಿ ನಟಿಸಬೇಕು ಅನ್ನೋದು ಎಲ್ಲರ ಕನಸು. ಆದರೆ ಇಲ್ಲೊಬ್ಬಾಕೆ ನಟಿಗೆ ಸೀರಿಯಲ್ನಲ್ಲಿ ನಟಿಸಬೇಕು ಎಂಬ ಆಸೆ. ಆದರೆ ಆಕೆಗೆ ಮಾತ್ರ ಮೊದಲು ಒಲಿದು ಬಂದಿದ್ದು ಸಿನೆಮಾದಲ್ಲಿ ನಟಿಸುವ ಅವಕಾಶ. ಇದೀಗ ಆ ನಟಿ ಸುರ್ವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅವನು ಮತ್ತು ಶ್ರಾವಣಿ’ ಧಾರವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೌದು, ಈ ಧಾರಾವಾಹಿಯಲ್ಲಿ ಶ್ರಾವಣಿಯಾಗಿ ಕಾಣಿಸಿಕೊಂಡಿರುವ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದಾರೆ.
ಶ್ರಾವಣಿ ಪಾತ್ರದ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಈಕೆ 9 ನೇ ತರಗತಿಯಲ್ಲಿದ್ದಅಗಲೇ ಸಿನೆಮಾ ನಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಊರ್ವಿ, ಗರುಡ, ಮನದ ಮರೆಯಲಿ ಸೇರಿದಂತೆ ನಾಳ್ಕೈದು ಸಿನೆಮಾಗಳಲ್ಲಿ ನಟಿಸಿದ್ದಾರೆ. ಬಳಿಕ ಕಾನೂನು ಪದವಿ ಮುಗಿಸಿರುವ ಇವರು ಸೀರಿಯಲ್ ನಲ್ಲಿ ಆಭಿನಯಿಸುವತ್ತ ಒಲವು ಮಾಡಿದ್ದಾರೆ. ಹೀಗಾಗಿ ಲುಕ್ ಟೆಸ್ಟ್ ಕೂಡಾ ಕೊಟ್ಟಿದ್ದಾರೆ.
ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!
ಇದೇ ವೇಳೆ ‘ಅವನು ಮತ್ತು ಶ್ರಾವಣಿ’ ಧಾರಾವಾಹಿಗೆ ರಿಪ್ಲೇಸ್ಮೆಂಟ್ ಪಾತ್ರಕ್ಕೆ ಕರೆ ಬರುತ್ತದೆ. ರಿಪ್ಲೇಸ್ಮೆಂಟ್ ಪಾತ್ರ ಆಗಿದ್ದರಿಂದ ಜನರಿಗೆ ಇಷ್ಟ ಆಗ್ಬೋದಾ ಅನ್ನುವ ಮೈಂಡ್ ಸೆಟ್ ನಲ್ಲಿ ಇವರು ಕೊನೆಗೂ ಪಾತ್ರಕ್ಕೆ ಸೈ ಎಂದು ಹೇಳಿದ್ದಾರೆ. ಇದೀಗ ಧಾರಾವಾಹಿ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಈ ಧಾರಾವಾಹಿಯಲ್ಲಿ ನಟನೆ ಆರಂಭಿಸಿದ ಮೇಲೆ ಆಫರ್ಗಳು ಬರುತ್ತಿದೆ ಎಂದು ಇಶಿಕಾ ಶೆಟ್ಟಿಗಾರ್ ಹೇಳಿದ್ದಾರೆ.