Connect with us

DAKSHINA KANNADA

ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಸಿದ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಲು ಎಸ್.ಡಿ.ಪಿ.ಐ ಆಗ್ರಹ..

Published

on

ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಸಿದ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಲು ಎಸ್.ಡಿ.ಪಿ.ಐ ಆಗ್ರಹ..

ಮಂಗಳೂರು :ಸಮಾಜದಲ್ಲಿ ಅರಾಜಕತೆ ಸೃಷ್ಟಿಸಲು ಕೋಮು ಪ್ರಚೋದನಕಾರಿಯಾಗಿ ಮತ್ತು ದೇಶದ್ರೋಹದ ಮಾತುಗಳನ್ನು ಆಡಿದ ಕಲ್ಲಡ್ಕ ಪ್ರಭಾಕರ್ ಭಟ್ ನ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಎಸ್.ಡಿ.ಪಿ.ಐ ದ.ಕ. ಜಿಲ್ಲಾ ಸಮಿತಿ ಆಗ್ರಹಿಸಿದೆ.

ಮಂಗಳೂರು ಹೊರವಲಯದ ಉಳ್ಳಾಲ ಕೀನ್ಯಾದಲ್ಲಿ  ಆಯೋಜಿಸಿದ ಸಭೆಯಲ್ಲಿ ಸಂಘಪರಿವಾರ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಉಳ್ಳಾಲವನ್ನು ಭಾರತದ ಶತ್ರುದೇಶ ಪಾಕಿಸ್ತಾನಕ್ಕೆ ಹೋಲಿಸಿ ದೇಶದ್ರೋಹದ ಮಾತುಗಳನ್ನು ಆಡಿದ ಘಟನೆಯನ್ನು ಎಸ್.ಡಿ.ಪಿ.ಐ ದ.ಕ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ.

ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ರಾಣಿ ಅಬ್ಬಕ್ಕಳ ಊರು ಮತ್ತು ಎಲ್ಲಾ ಧರ್ಮದವರು ಜಾತಿ ಮತ ಭೇದವಿಲ್ಲದೆ ಗೌರವಿಸಿ ಭೇಟಿ ನೀಡುವ ಧಾರ್ಮಿಕ ಕ್ಷೇತ್ರ ಇರುವ ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಕೆ ಮಾಡಿ ದೇಶದ್ರೋಹದ ಮಾತುಗಳನ್ನಾಡಿ ಪರಸ್ಪರ ಅನ್ಯೋನ್ಯತೆ ಯಿಂದ ಇರುವ ಜನತೆಯ ನಡುವೆ ಹಿಂದು ಮುಸ್ಲಿಂ ಎಂಬ ಧ್ರುವೀಕರಣ ಮಾಡಿ ಜಿಲ್ಲೆಯಲ್ಲಿ ಆಶಾಂತಿಯನ್ನು ಸೃಷ್ಟಿಸಿ ಕೋಮು ಗಲಭೆಗೆ ಪ್ರಯತ್ನಿಸುವ ಹುನ್ನಾರವೇ ಈ ರೀತಿಯ ಪ್ರಚೋದಕಾರಿ ಭಾಷಣವಾಗಿದೆ.
ಅದೇ ರೀತಿ ತನಗೆ ಕೇವಲ ಒಬ್ಬ ಮಗಳಿದ್ದರೂ ಉಳಿದ ಹಿಂದು ಬಾಂದವರಿಗೆ ಹೆಚ್ಚೆಚ್ಚು ಮಕ್ಕಳನ್ನು ಹೆತ್ತು ಹಿಂದೂ ಜನಸಂಖ್ಯೆಯನ್ನು ಅಧಿಕಗೊಳಿಸಬೇಕೆಂಬ ಹಾಸ್ಯಾಸ್ಪದ ಮಾತುಗಳನ್ನು ಸಾರ್ವಜನಿಕ ವೇದಿಕೆಯಲ್ಲಿ ಬಾಷಣ ಮಾಡಿರುವುದು ಅವರ ಸಂಸೃತಿಯನ್ನು ತೋರಿಸುತ್ತದೆ.
ಹಾಗಾಗಿ ಸಮಾಜದಲ್ಲಿ ಅರಾಜಕತೆ ಸೃಷ್ಟಿಸಲು ಕೋಮು ಪ್ರಚೋದನಕಾರಿಯಾಗಿ ಮತ್ತು ದೇಶದ್ರೋಹದ ಮಾತುಗಳನ್ನು ಆಡಿದ ಕಲ್ಲಡ್ಕ ಪ್ರಭಾಕರ್ ಭಟ್ ನ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಎಸ್.ಡಿ.ಪಿ.ಐ ದ.ಕ ಜಿಲ್ಲಾದ್ಯಕ್ಷ ಅಥಾವುಲ್ಲಾ ಜೋಕಟ್ಟೆ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ‌.

Click to comment

Leave a Reply

Your email address will not be published. Required fields are marked *

bangalore

“ಎಂಚ ಉಲ್ಲಾರ್ ಮರ್ರೆ”…. ಎಂದು ತುಳುವಿನಲ್ಲಿ ಮಾತನಾಡಿದ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್

Published

on

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಸಮೂಹ ಶಿಕ್ಷಣ ಸಂಸ್ಥೆಗಳ ಅಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ಭ್ರಮರ ಇಂಚರ ನುಡಿಹಬ್ಬ ಕಾರ್ಯಕ್ರಮಕ್ಕೆ ಅತಿಥಿಯಾಗಿ ಭಾಗವಹಿಸಿದ ಸ್ಯಾಂಡಲ್ ವುಡ್  ನ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಭಾಗವಹಿಸಿ ಮಕ್ಕಳ ಜೊತೆಗೆ ಮಕ್ಕಳಂತೆ ಬೆರೆತು ಮಕ್ಕಳನ್ನು ಕೊಂಡಾಡಿದರು.

ಈ ವೇದಿಕೆಯಲ್ಲಿ ವಿದ್ಯಾಥಿಗಳು ನಟಿ ರಚಿತಾ ರಾಮ್ ಅವರ ಡ್ರಾಯಿಂಗ್ ಮಾಡಿ ಕೊಡುಗೆಯಾಗಿ ನೀಡಿದಾಗ ಖುಷಿ ಪಟ್ಟ ನಟಿ ಆ ವಿದ್ಯಾರ್ಥಿಗಳನ್ನು ವೇದಿಕೆಗೆ ತಾವೇ ಕರೆಸಿ ಅಭಿನಂದಿಸದರು.

ಹಾಗೂ ಕೆಲವು ವಿದ್ಯಾರ್ಥಿಗಳ ಜೊತೆ ವೇದಿಕೆಗೆ ಕರೆಸಿ ಹಾಡಿಸಿದರು. ಅದರಲ್ಲಿ ತಾನೇ ಬಂದು ವೇದಿಕೆಯಲ್ಲಿ ಒಂದು ಪುಟಾಣಿ ‘ಬಾಳ ಒಳ್ಳೇರು ನಮ್ಮ ಮಿಸ್ ಎನ ಹೇಳಿದ್ರು ಎಸ್ ಎಸ್ಸು’ ಎಂದು ಹಾಡಿದಾಗ ನಟಿ ಬಹಳ ಖುಷಿ ಪಟ್ಟರು.

ಈ ಸಂದರ್ಭ ರಚಿತರಾಮ್ ಜೊತೆ ಹಾಡಲು ಹೇಳಿದಾಗ ಅವರು ಕೂಡ “ಬಾಳ ಒಳ್ಳೇರು ನಮ್ಮ ಮಿಸ್ ಎನ ಹೇಳಿದ್ರು ಎಸ್ ಎಸ್ಸು” ಎಂದು ನಗ್ತಾ ನಗ್ತಾ ಹಾಡಿದರು.


ಬಳಿಕ ಮಾತನಾಡಿದ ನಟಿ ವಿದ್ಯಾರ್ಥಿಗಳು ಇಂತಹ ವೇದಿಕೆ ಸಿಕ್ಕಾಗ ಬಳಸಿಕೊಳ್ಳಬೇಕು. ಮತ್ತೇ ಇಂತಹ ವೇದಿಕೆ ಸಿಗುವುದಿಲ್ಲ. ನಮ್ಮ ಪ್ರತಿಭೆಯನ್ನು ನಾವೇ ಪ್ರದರ್ಶನ ಮಾಡಬೇಕು. ಬೇರೆ ಯಾರೂ ಕೂಡ ನಮಗೆ ಹೇಳಲು ಬರುವುದಿಲ್ಲ.

ಯಾರೂ ಕೂಡ ಸಪೋರ್ಟ್ ಮಾಡುವುದಿಲ್ಲ. ಸ್ವಾಯತ್ತತೆಯಿಂದ ನಾವು ಗೆಲ್ಲಬೇಕು. ಒಳ್ಳೆ ಒಳ್ಳೆ ವೇದಿಕೆ ಸಿಕ್ಕಾಗ ಬಿಡಬಾರದು. ಅದರ ಜೊತೆಗೆ ನಮ್ಮ ಗುರುಗುಳಿಗೆ ಹಾಗೂ ತಮ್ಮ ಪೋಷಕರಿಗೆ ಗೌರವ ಕೊಡಿ, ಮರ್ಯಾದೆ ಕೊಡಿ ಜೊತೆಗೆ ಅವರನ್ನು ಪ್ರೀತಿಸಿ ಎಂದರು.

ಈ ವೇಳೆ ರಚಿತರಾಮ್ ಕನ್ನಡದಲ್ಲಿ ಮಾತನಾಡಿದಾಗ ವಿದ್ಯಾರ್ಥಿಗಳು ತುಳುವಿನಲ್ಲಿ ಮಾತನಾಡಿ ಎಂದು ಕೂಗಾಡಿದರು. ಆಗ ಅವರು ಎಂಚ ವುಲ್ಲರ್ ಮರ್ರೆ…ಹುಷಾರ್ ವುಲ್ಲರಾ…ಎಂದು ತುಳುವಿನಲ್ಲಿ ಮಾತನಾಡಿದರು.

Continue Reading

BELTHANGADY

Belthangady: ರಸ್ತೆ ಪಕ್ಕದ ಗೂಡಂಗಡಿಯನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳು..!

Published

on

ಬೆಳ್ತಂಗಡಿ: ಬೆಳ್ತಂಗಡಿ ನಿಡ್ಲೆ ಗ್ರಾಮದ ಬೂಡುಜಾಲು ಎಂಬಲ್ಲಿ ರಸ್ತೆ ಬದಿಯಲ್ಲಿದ್ದ ಗೂಡಂಗಡಿಯನ್ನು ಕಿಡಿಗೇಡಿಗಳು ರಾತ್ರಿಯ ವೇಳೆ ಧ್ವಂಸಗೊಳಿಸಿದ ಘಟನೆ ಸಂಭವಿಸಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ನಿವಾಸಿ ಅಬ್ದುಲ್ ಅಝೀಝ್ ಎಂಬವರು ತಮ್ಮ ಜೀವನೋಪಾಯಕ್ಕಾಗಿ ರಾಜ್ಯ ಹೆದ್ದಾರಿಯ ಬದಿಯಲ್ಲಿ ಗೂಡಂಗಡಿಯನ್ನು ಹಾಕಿ ವ್ಯಾಪಾರ ನಡೆಸುತ್ತಿದ್ದರು.

ಕಳೆದ ಮೂರು ವರ್ಷಗಳಿಂದ ಈ ಗೂಡಂಗಡಿ ಕಾರ್ಯ‌ ನಿರ್ವಹಿಸುತ್ತಿತ್ತು. ರಸ್ತೆ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಗೂಡಂಗಡಿಯನ್ನು ನಿರ್ಮಿಸಲಾಗಿತ್ತು. ಎಂದಿನಂತೆ ಶುಕ್ರವಾರ ರಾತ್ರಿಯ ವೇಳೆ ಅಂಗಡಿಯನ್ನು ಮುಚ್ಚಿ ಹೋಗಿದ್ದ ಅಬ್ದುಲ್ ಅಝೀಝ್ ಶನಿವಾರ ಬೆಳಗ್ಗೆ ಬಂದು ನೋಡಿದಾಗ ಅಂಗಡಿಯನ್ನು ಧ್ವಂಸಗೊಳಿಸಿರುವುದು ಕಂಡು ಬಂದಿದೆ. ಅಂಗಡಿಯಲ್ಲಿದ್ದ ವಸ್ತುಗಳೆಲ್ಲವನ್ನು ಹೊರಗೆಳೆದು ನಾಶಗೊಳಿಸಲಾಗಿದೆ. ತಂಪು ಪಾನೀಯಗಳ ಬಾಟ್ಲಿಗಳನ್ನು ಒಡೆದು ಹಾಕಲಾಗಿದೆ. ಅಂಗಡಿಯನ್ನು ಬಹುತೇಕ ಧ್ವಂಸಗೊಳಿಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.

Continue Reading

DAKSHINA KANNADA

Mangaluru: 4 ತಿಂಗಳ ಮಗುವನ್ನು ಉಸಿರುಕಟ್ಟಿಸಿ ಕೊಂದ ತಾಯಿ ಕೂಡ ಜೀವಾಂತ್ಯ..!

Published

on

ಮಂಗಳೂರು:  ತನ್ನ ಪುಟ್ಟ ಕಂದಮ್ಮನನ್ನು ನೀರಿನ ಟಬ್‌ ಒಳಗೆ ಮುಳುಗಿಸಿ ತಾನೂ ನೇಣು ಬಿಗಿದುಕೊಂಡು ಹೆತ್ತಬ್ಬೆಯೊಬ್ಬಾಕೆಯ ಕೃತ್ಯ ಮನಕಲಕಿದ ಘಟನೆ ಮಂಗಳೂರಿನ ಗುಜ್ಜರಕರೆ ಬಳಿ ನಡೆದಿದೆ.

ಅಪಾರ್ಟ್‌ಮೆಂಟ್‌ ಒಂದರಲ್ಲಿ ವಾಸ ಮಾಡುವ ಫಾತಿಮಾ ರುಕಿಯಾ(23) ಎಂಬಾಕೆ ತನ್ನ ನಾಲ್ಕೂವರೆ ತಿಂಗಳ ಮಗು ಅಬ್ದುಲ್ಲಾ ಹೂದ್‌ ಎಂಬಾತನನ್ನು ನೀರಿನ ಟಬ್‌ನೊಳಗೆ ಮುಳುಗಿಸಿ ಉಸಿರುಕಟ್ಟಿ ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಫಾತಿಮಾಗೆ ಸುಮಾರು ಒಂದೂವರೆ ವರ್ಷದ ಹಿಂದೆ ಮುಹಮ್ಮದ್ ಉನೈಸ್ ಎಂಬವರ ಜೊತೆ ಮದುವೆಯಾಗಿತ್ತು. 2023 ಜು. 7 ರಂದು ಹೆರಿಗೆಯಾಗಿತ್ತು. ಅಬ್ದುಲ್ಲಾ ಹೂದ್ ಎಂಬ ಸುಮಾರು 4ವರೆ ತಿಂಗಳ ಗಂಡು ಮಗು ಇತ್ತು. ಹೆರಿಗೆಯಾದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಫಾತಿಮಾಗೆ ಚಿಕಿತ್ಸೆಯನ್ನು ಕೂಡಾ ನೀಡಲಾಗುತ್ತಿತ್ತು. ಈ ನಡುವೆ ಫಾತಿಮಾ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತನ್ನ ತಾಯಿ ಬಳಿ ಹೇಳುತ್ತಿದ್ದರು ಎನ್ನಲಾಗಿದೆ. ನಿನ್ನೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1-30 ಗಂಟೆಯ ಮಧ್ಯೆ ಮನೆಯಲ್ಲಿ ಯಾರೂ ಇಲ್ಲದ ಸಮಯ ಫಾತಿಮಾ ರುಕಿಯಾ ತಾನು ವಾಸವಾಗಿದ್ದ ಮಂಗಳೂರು ನಗರದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟ್​ನ ಬೆಡ್ ರೂಮ್​ನ ಗ್ಯಾಲರಿಯಲ್ಲಿ ಪ್ಲಾಸ್ಟಿಕ್ ಟಬ್​ನಲ್ಲಿ ನೀರು ತುಂಬಿಸಿ ಮಗುವನ್ನು ನೀರಿನಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಳೆ. ಬಳಿಕ ತಾನೂ ಕೂಡ ರೂಮಿನ ಕಿಟಕಿಯ ಕಬ್ಬಿಣದ ಸರಳಿಗೆ ಸೀರೆಯಿಂದ ಕಟ್ಟಿ ಮತ್ತೊಂದು ತುದಿಯಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Continue Reading

LATEST NEWS

Trending