Connect with us

    DAKSHINA KANNADA

    ಬಿಜೆಪಿ ರಾಜ್ಯಾಧ್ಯಕ್ಷರ ಮನೆಯಲ್ಲಿ ರಹಸ್ಯ ಹೋಮಹವನ- ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದ ನಳಿನ್‌ ಕುಮಾರ್‌

    Published

    on

    ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರ ಪುತ್ತೂರು ನಿವಾಸದಲ್ಲಿ ರಹಸ್ಯ ಹೋಮ, ಹವನ ನಡೆಸಲಾಗುತ್ತಿದೆ ಎನ್ನುವ ಸುದ್ಧಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದಕ್ಕೆ ಸ್ವತಃ ನಳಿನ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

    ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರ ಪುತ್ತೂರು ನಿವಾಸದಲ್ಲಿ ರಹಸ್ಯ ಹೋಮ, ಹವನ ನಡೆಸಲಾಗುತ್ತಿದೆ ಎನ್ನುವ ಸುದ್ಧಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದಕ್ಕೆ ಸ್ವತಃ ನಳಿನ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

    ಹೋಮ-ಹವನ ಪುತ್ತೂರಿನ ಕುಂಜಾಡಿ ತರವಾಡು ಮನೆಯಲ್ಲಿ ನಡೆಯುತ್ತಿದ್ದು, ಪ್ರತೀ ವರ್ಷವೂ ಈ ಹೋಮ ಹಾಗು ಪೂಜೆಗಳು ನಡೆಯುತ್ತಿದೆ.

    ಯಾರು ಬೇಕಾದರೂ ಈ ಪೂಜಾ ಕಾರ್ಯದಲ್ಲಿ ಭಾಗವಹಿಸಲು ಅವಕಾಶವಿದ್ದು, ರಹಸ್ಯವಾಗಿ ಮಾಡಲಾಗುತ್ತಿದೆ ಎನ್ನುವುದು ಸುಳ್ಳು ಸುದ್ಧಿ ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ಸ್ಪಷ್ಟಪಡಿಸಿದ್ದಾರೆ.

    ರಾಜಕೀಯದಲ್ಲಿ ಮೂಲೆಗುಂಪಾಗುತ್ತಿರುವ ಮತ್ತು ವಿಶೇಷ ಸ್ಥಾನಮಾನಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷರು ತಮ್ಮ ಮನೆಯಲ್ಲಿ ರಹಸ್ಯ ಹೋಮ-ಹವನಗಳನ್ನು ಮಾಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಒಂದು ಕಳೆದ ಎರಡು ದಿನಗಳಿಂದ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೂ ಗ್ರಾಸವಾಗಿತ್ತು.

    DAKSHINA KANNADA

    ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವು

    Published

    on

    ತೆಲಂಗಾಣ: ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವನ್ನಪ್ಪಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ಚಿಂತಕಣಿಲ್ಲಿ ಶುಕ್ರವಾರ ನಡೆದಿದೆ.

    ಅಂಜಲಿ ಕಾರ್ತಿಕಾ (9) ಮೃ*ತ ಬಾಲಕಿ. ಮೊಬೈಲ್​​​ನಲ್ಲಿ ಆಟವಾಡುತ್ತಿರುವ ವೇಳೆ ಚಾರ್ಜ್ ಖಾಲಿಯಾಗಿದ್ದು, ಅಂಜಲಿ ಮೊಬೈಲ್ ಚಾರ್ಜ್ ಮಾಡಲು ಹೋಗಿದ್ದಾಳೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿದ್ದು, ಬಾಲಕಿ ಕುಸಿದು ಬಿದ್ದಿದ್ದಾಳೆ.

    ಕುಸಿದು ಬಿದ್ದು ಒದ್ದಾಡುತ್ತಿರುವ ಬಾಲಕಿಯನ್ನು ಗಮನಿಸಿದ ಆಕೆಯ ಪೋಷಕರು ತಕ್ಷಣ ಗ್ರಾಮದ ಖಾಸಗಿ ವೈದ್ಯರ ಬಳಿ ಕರೆದೊಯ್ದಿದ್ದಾರೆ. ಆದರೆ ಬಾಲಕಿ ಅದಾಗಲೇ ಮೃ*ತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

    ಬಾಲಕಿ ಆಟವಾಡುತ್ತಿದ್ದಂತೆ ಒದ್ದೆ ಕೈಯಲ್ಲಿ ಹೋಗಿ ವಿದ್ಯುತ್ ಸ್ಪರ್ಶಿಸಿರುವುದೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ. ಕೆಲ ಹೊತ್ತಿನ ಹಿಂದೆ ಮನೆಯಲ್ಲಿ ಕುಣಿದು ಕುಪ್ಪಳಿಸುತ್ತಾ ಆಟವಾಡುತ್ತಿದ್ದ ಬಾಲಕಿ ಏಕಾಏಕಿ ಪ್ರಾ*ಣ ಕಳೆದುಕೊಂಡಿರುವುದನ್ನು ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

    ಮೃ*ತ ಬಾಲಕಿ ಅಂಜಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿ. ತಂದೆ ರಾಮಕೃಷ್ಣ ದೂರಿನ ಮೇರೆಗೆ ಎಸ್‌ಎಸ್‌ಐ ನಾಗುಲ್ಮೀರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

    DAKSHINA KANNADA

    ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ

    Published

    on

    ಚಾರ್ಮಾಡಿ: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಆದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ.

    ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಚಾರ್ಮಾಡಿಘಾಟ್‌ನ 10ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು ಚಾರ್ಮಾಡಿ ಘಾಟ್​ನಿಂದ ಕೊಟ್ಟಿಗೆಹಾರದವರೆಗೂ ವಾಹನಗಳು ನಿಂತಲ್ಲೇ ನಿಂತಿದ್ದವು. ಬಳಿಕ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಯ್ತು.

    ಅತ್ತ ಮಂಗಳೂರಿಗೆ ತೆರಳುವವರನ್ನು ಪೊಲೀಸರು ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲೇ ವಾಹನಗಳನ್ನು ತಡೆದು ವಾಪಸ್ ಕಳಿಸಿದ್ದಾರೆ. ಅತ್ತ ಉಜಿರೆ ಬಳಿಯೂ ಚಾರ್ಮಾಡಿ ಘಾಟ್ ಪ್ರವೇಶ ನಿರ್ಬಂಧಿಸಲಾಗಿತ್ತು.

    Continue Reading

    DAKSHINA KANNADA

    ಅರ್ಜುನ್​ ಪತ್ತೆಗೆ ಸೇನೆಗೆ ಸಹಾಯ..! ಶಿರೂರಿಗೆ ಈಶ್ವರ ಮಲ್ಪೆಗೆ ಬುಲಾವ್..!

    Published

    on

    ಅಂಕೋಲ: ಶಿರೂರು ಗುಡ್ಡ ಕುಸಿತ ಪ್ರಕರಣ ಸಂಭವಿಸಿ ಇಂದಿಗೆ 12 ದಿನವಾಗಿದೆ. ನಾಪತ್ತೆಯಾದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ನದಿಯ ದಡದಲ್ಲಿ ಈಗಾಗಲೇ ಹುಡುಕಾಟ ಮುಗಿದಿದ್ದು, ಲಾರಿ ಮತ್ತು ಚಾಲಕ ಅರ್ಜುನ್​ ನದಿಯೊಳಗೆ ಇದ್ದಾರೆ ಎಂದು ಹೇಳಲಾಗುತ್ತಿದೆ. ಅತ್ತ ಗೋಕಾಕ್ ನಿಂದ ಬಂದ ಪೋಕ್ಲೈನ್ ತನ್ನ ಕೆಲಸ ಮುಗಿಸಿದ್ದು, ವಾಪಾಸ್ ಆಗುತ್ತಿದೆ.

    ಇಂದು ಅರ್ಜುನ್​ಗಾಗಿ ಮುಳುಗು ತಜ್ಞರಿಂದ ಹುಡುಕಾಟ ನಡೆಯಲಿದೆ. ಈಶ್ವರ್ ಮಲ್ಪೆ ತಂಡ ಇಂದು ಶಿರೂರಿಗೆ ಬರಲಿದ್ದು, ಅರ್ಜುನ್​​ಗಾಗಿ ಹುಡುಕಾಡಲಿದ್ದಾರೆ. ಜಿಲ್ಲಾಡಳಿತದ ಮನವಿ ಮೇರೆಗೆ ಮುಳುಗು ತಜ್ಞರ ತಂಡ ಶಿರೂರಿಗೆ ಆಗಮಿಸಲಿದ್ದಾರೆ.

     

    ಗಂಗಾವಳಿ ನದಿಯಲ್ಲಿ ನೀರಿನ ವೇಗ ಹೆಚ್ಚಿರುವ ಹಿನ್ನಲೆಯಲ್ಲಿ, ನೀರಿನೊಳಗೆ ಹೋಗಲು ನೌಕಾದಳದ ಮುಳುಗು ತಜ್ಞರು ಹಿಂದೇಟು ಹಾಕಿದ್ದಾರೆ. ಈ ವೇಳೆ ಶಾಸಕ ಸತೀಶ್ ಸೈಲ್ ಸ್ಥಳೀಯ ಮೀನುಗಾರ ಹಾಗೂ ಈಶ್ವರ್ ಮಲ್ಪೆ ಸಹಾಯ ಕೇಳಿದ್ದಾರೆ.

    ಇಂದು ಅರ್ಜುನ್​ ಮತ್ತು ಲಾರಿ ಪತ್ತೆಯಾದರೆ ನದಿಯ ಕೆಳಗೆ ಸುಮಾರು 20 ಅಡಿ ಆಳದಲ್ಲಿರುವ ಲಾರಿ ಮೇಲಕ್ಕೆ ಎತ್ತಲು ಪ್ರಯತ್ನ ನಡೆಯಲಿದೆ.

    Continue Reading

    LATEST NEWS

    Trending