HomeBANTWALಕೇರಳ ಗಡಿಯಲ್ಲಿ ಹೆಚ್ಚಿನ ಭದ್ರತೆ: ನಾಗರಾಜ್‌ ಎಚ್‌.ಇ

ಕೇರಳ ಗಡಿಯಲ್ಲಿ ಹೆಚ್ಚಿನ ಭದ್ರತೆ: ನಾಗರಾಜ್‌ ಎಚ್‌.ಇ

ಬಂಟ್ವಾಳ: ಕೇರಳ ಗಡಿಯಲ್ಲಿ ಹೆಚ್ಚಿನ ಭದ್ರತೆ ಜೊತೆಗೆ ಅಕ್ರಮ ಚಟುವಟಿಕೆಗಳಿಗೆ ಬ್ರೇಕ್‌ ಹಾಕಲಾಗುವುದು ಎಂದು ಮೇಲ್ದರ್ಜೆಗೇರಿದ ವಿಟ್ಲ ಪೊಲೀಸ್‌ ಠಾಣೆಯ ಪ್ರಥಮ ಪೊಲೀಸ್‌ ಇನ್ಸ್ಪೆಕ್ಟ್ಟರ್‌ ನಾಗರಾಜ್‌ ಎಚ್‌.ಇ ಹೇಳಿದ್ದಾರೆ.


ಶುಕ್ರವಾರ ಅಧಿಕಾರ ಸ್ವೀಕರಿಸಿದ ಅವರು, ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ವಿಟ್ಲ ಠಾಣೆಯಲ್ಲಿ ಈ ಹಿಂದೆ ಕೆಲಸ ಮಾಡಿದ ಅನುಭವ ಇದೆ. ಜೊತೆಗೆ ಠಾಣೆಯ ವ್ಯಾಪ್ತಿಯಲ್ಲಿ ಬರುವ ಕೇರಳ ಗಡಿಯುದ್ದಕ್ಕೂ ಭದ್ರತೆ ಹೆಚ್ಚಿಸಲಾಗುವುದು. ಸಿಬ್ಬಂದಿ ಕೊರತೆ ಇದ್ದು, ಅದನ್ನು ನೀಗಿಸುವ ಕೆಲಸಕ್ಕೆ ಪ್ರಯತ್ನ ಮಾಡಲಾಗುವುದು. ಇದೇ ವೇಳೆ ಸಾರ್ವಜನಿಕರಿಗೆ ಅಕ್ರಮ ಚಟುವಟಿಕೆ ಬಗ್ಗೆ ಮಾಹಿತಿ ಇದ್ದರೆ ಹಂಚಿಕೊಳ್ಳಿ ಎಂದು ಮನವಿ ಮಾಡಿದರು. ಹೊಸದಾಗಿ ನೇಮಕವಾದ ಪೊಲೀಸ್‌ ಇನ್ಸ್ಪೆಕ್ಟ್ಟರ್‌ ನಾಗರಾಜ್‌ ಎಚ್‌.ಇ ಅವರಿಗೆ ವಿಟ್ಲ ನಾಗರಿಕರು ಹೂ ನೀಡಿ ಸ್ವಾಗತಿಸಿದರು.

Latest articles

ಕೆಲಸ ಇಲ್ಲದವನು ಎಂದು ಬೈಯುತ್ತಿದ್ದ ಅಜ್ಜಿಯನ್ನು ಕೊಂದು ಸುಟ್ಟು ಹಾಕಿದ ಕಿರಾತಕ ಮೊಮ್ಮಗ

ಮೈಸೂರು: ದುಡಿಯುವ ವಯಸ್ಸಿನಲ್ಲಿ ಪುಂಡ ಪೋಕರಿಯಂತೆ ಅಲೆಯುತ್ತಿದ್ದುದಕ್ಕೆ ಬೈಯುತ್ತಿದ್ದ ಅಜ್ಜಿಯನ್ನು ಸ್ವಂತ ಮೊಮ್ಮಗನೇ ಕೊಂದು ಸುಟ್ಟು ಹಾಕಿ ಶವವನ್ನು...

ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ...

ಕೇರಳಕ್ಕೆಮುಂಗಾರು ಪ್ರವೇಶ- ಮಂಗಳೂರಿನಲ್ಲಿ ಸಂಜೆ ಬಿರುಸಿನ ಮಳೆ..!

ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ.ಮಂಗಳೂರು...

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್ ಅವರು ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು...