Connect with us

LATEST NEWS

ಭ್ರಷ್ಟಾಚಾರದ ಆಸ್ತಿ ಸಂಪಾದಿಸಿದ ಬಿಜೆಪಿಗರ ಆಸ್ತಿ ಮುಟ್ಟುಗೋಲು ಹಾಕಿ: ಶಾಸಕ ಭರತ್‌ ಶೆಟ್ಟಿಗೆ ಎಸ್‌ಡಿಪಿಐ ಸವಾಲು

Published

on

ಮಂಗಳೂರು: ಗೋ ಹತ್ಯೆ ಮಾಡಿದರೆ ಆಸ್ತಿ ಮುಟ್ಟುಗೋಲು ಹಾಕಲಾಗುವುದು ಎಂಬ ಶಾಸಕ ಭರತ್ ಶೆಟ್ಟಿ ಹೇಳಿಕೆಗೆ ಎಸ್‌ಡಿಪಿಐ ಪ್ರತಿಕ್ರಿಯಿಸಿದ್ದು,

ಮೊದಲು ಬ್ರಹ್ಮಾಂಡ ಭ್ರಷ್ಟಾಚಾರದ ಮೂಲಕ ಅಕ್ರಮ ಆಸ್ತಿ ಸಂಪಾದಿಸಿದ ಬಿಜೆಪಿ ನಾಯಕರ ಹಾಗೂ ಕದ್ದು ಮುಚ್ಚಿ ಗೋ ಮಾಂಸ ತಿನ್ನುವ ಮತ್ತು ವ್ಯಾಪಾರ ಮಾಡುವ ಸಂಘಪರಿವಾರದವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿ ನಿಮ್ಮ ತಾಕತ್ತನ್ನು ಪ್ರದರ್ಶಿಸಿ ಎಂದು ಎಸ್‌ಡಿಪಿಐ ದ.ಕ ಜಿಲ್ಲಾಧ್ಯಕ್ಷರಾದ ಅಬೂಬಕ್ಕರ್ ಕುಳಾಯಿ ಸವಾಲೆಸೆದಿದ್ದಾರೆ.


ಶಾಸಕ ಭರತ್ ಶೆಟ್ಟಿ ಕ್ಷೇತ್ರದಲ್ಲಿ ಅಭಿವೃದ್ಧಿ ತೀವ್ರ ಕುಂಠಿತಗೊಂಡಿದ್ದು,ಈಗ ನಿರಂತರವಾಗಿ ಸುರಿಯುತ್ತಿರುವ ಬಾರಿ ಮಳೆಗೆ ಅಲ್ಲಲ್ಲಿ ಗುಡ್ಡೆ ಕುಸಿತ, ಚರಂಡಿ ವ್ಯವಸ್ಥೆ ಸರಿ ಇಲ್ಲದೆ ಮಾರ್ಗದಲ್ಲಿ ಕೊಳಚೆ ನೀರು ಹೋಗುತ್ತಿದ್ದು, ಹಾಗೂ ಹಲವು ಕಡೆ ಪ್ರಾಕೃತಿಕ ವಿಕೋಪ ಸಂಭವಿಸಿದ್ದರು ಶಾಸಕರು ಅಂತಹ ಸ್ಥಳಗಳಿಗೆ ಭೇಟಿ ನೀಡಿ ಸ್ಥಳ ವೀಕ್ಷಣೆ ನಡೆಸಿ ಪರಿಹಾರ ಕಾರ್ಯ ಮಾಡದೇ ಇರುವುದರಿಂದ ಕ್ಷೇತ್ರದ ಜನತೆ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದರಿಂದ ಕಂಗೆಟ್ಟಿರುವ ಶಾಸಕ ಭರತ್ ಶೆಟ್ಟಿ ಜನರ ದಿಕ್ಕು ತಪ್ಪಿಸುವ ಸಲುವಾಗಿ ಭಾವನಾತ್ಮಕ ವಿಚಾರಗಳನ್ನು ಮುನ್ನೆಲೆಗೆ ತಂದು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಬಿಜೆಪಿ ಸಂಘಪರಿವಾರದ ಹಲವಾರು ನಾಯಕರು 40% ಕಮಿಷನ್ ದಂದೆ, ಪಿಎಸೈ ಹಗರಣ, ಬಿಡಿಎ ಹಗರಣ ಸೇರಿದಂತೆ ಹಲವಾರು ಹಗರಣಗಳ ಸರಮಾಲೆಯನ್ನೆ ನಡೆಸಿದವರು ಇದ್ದಾರೆ.

ಶಾಸಕ ಭರತ್ ಶೆಟ್ಟಿಗೆ ತಾಕತ್ತಿದ್ದರೆ ಮೊದಲು ಅಂತಹ ಬಿಜೆಪಿ ಸಂಘಪರಿವಾರ ನಾಯಕರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಿ ಎಂದು ಸವಾಲೆಸಿದಿದ್ದಾರೆ.

ಅದೇ ರೀತಿ ವಿದೇಶಕ್ಕೆ ಬೀಫ್ ಸರಬರಾಜಿನಲ್ಲಿ ವಿಶ್ವದಲ್ಲೇ ಬಿಜೆಪಿ ಆಡಳಿತ ಸರ್ಕಾರ ಇರುವ ಭಾರತ ಮೊದಲನೇ ಸ್ಥಾನದಲ್ಲಿ ಇದೆ. ಬಿಜೆಪಿ ಶಾಸಕ ಸಂಗೀತ್ ಸೋಮ್,

ಸಂಸದ ರಾಜೀವ್ ಚಂದ್ರಶೇಖರ ಸೇರಿದಂತೆ ಹಲವು ಬಿಜೆಪಿ ನಾಯಕರ ಒಡೆತನದಲ್ಲಿ ಇರುವ ಫ್ಯಾಕ್ಟರಿಗಳೇ ಭಾರತದಿಂದ ಬೀಫ್ ರಪ್ತು ಮಾಡುವ ಪ್ರಮುಖ ಕಂಪನಿಗಳಾಗಿದೆ. ಹಾಗಾಗಿ ಜನ ಸಾಮಾನ್ಯರು ಬಿಜೆಪಿಯ ಭಾವನಾತ್ಮಕ ವಿಚಾರಗಳಿಗೆ ಬಲಿ ಬೀಳಬಾರದೆಂದು ಆಗ್ರಹಿಸಿದ್ದಾರೆ.

ಅದಲ್ಲದೇ ಸ್ವತಃ ಭರತ್ ಶೆಟ್ಟಿಯೆ ಶಾಸಕನಾದ ನಂತರ ಕೋಟಿಗಟ್ಟಲೆ ಅಕ್ರಮ ಬೇನಾಮಿ ಹೆಸರಿನಲ್ಲಿ ಆಸ್ತಿ ಸಂಪಾದಿಸಿದ ಬಗ್ಗೆ ಜನ ಸಾಮಾನ್ಯರೆಡೆಯಲ್ಲಿ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ.

ಹಾಗಾಗಿ ಶಾಸಕರು ತಮ್ಮ ಆಸ್ತಿಯ ಬಗ್ಗೆ ಸಂಬಂಧಪಟ್ಟ ಇಲಾಖೆಯ ನಿಷ್ಪಕ್ಷಪಾತ ಅಧಿಕಾರಿಗಳಿಂದ ತನಿಖೆಗೆ ಆದೇಶಿಸಲಿ ಅದು ಬಿಟ್ಟು ಉತ್ತರ ಪ್ರದೇಶದ ರೀತಿಯಲ್ಲಿ ದಕ್ಷಿಣ ಕನ್ನಡದಲ್ಲಿ ಕ್ರೌರ್ಯ ನಡೆಸಬಹುದು ಎಂಬ ಕನಸು ನನಸಾಗದು ಎಂದು ಅವರು ಪ್ರಕಟಣೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.

LATEST NEWS

ಆಭರಣ ಮಳಿಗೆಯಲ್ಲಿ ಎಸಿ ಸ್ಫೋಟ; ಮೂವರಿಗೆ ಗಂ*ಭೀರ ಗಾಯ

Published

on

ಬಳ್ಳಾರಿ :ಎಸಿ ಸ್ಫೋ*ಟಗೊಂಡ ಪರಿಣಾಮ ಮೂವರು ಗಂ*ಭೀರವಾಗಿ ಗಾ*ಯಗೊಂಡಿರುವ ಘಟನೆ ಬಳ್ಳಾರಿಯ ಕಲ್ಯಾಣ್ ಜ್ಯುವೆಲರ್ಸ್‍ನಲ್ಲಿ ನಡೆದಿದೆ. ಗಾಯಾಳುಗಳನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಬಳ್ಳಾರಿ ಬೆಂಗಳೂರು ರಸ್ತೆಯಲ್ಲಿರುವ ಮಳಿಗೆಯಲ್ಲಿ ಈ ಅವಘ*ಡ ಸಂಭವಿಸಿದೆ. ಏಕಾಏಕಿ ಎಸಿ ಬ್ಲಾ*ಸ್ಟ್ ಆದ ಪರಿಣಾಮ ಮಳಿಗೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ.

ಇದನ್ನೂ ಓದಿ : ಏನಾಶ್ಚರ್ಯ! ರೋಬೋಟ್ ಜೊತೆ ಮದುವೆಯಾಗುತ್ತಿದ್ದಾನೆ ಈ ಯುವಕ!

ಸ್ಫೋ*ಟದ ತೀವ್ರತೆಗೆ ಕಿಟಕಿ ಗಾಜುಗಳು ಒಡೆದು ಹೋಗಿವೆ. ಘಟನೆಯಿಂದಾಗಿ ಮಳಿಗೆಯಲ್ಲಿ ದಟ್ಟ ಹೊಗೆ ಆವರಿಸಿತ್ತು. ಶಾರ್ಟ್ ಸರ್ಕ್ಯೂಟ್‌ನಿಂದ ಸ್ಫೋ*ಟ ಸಂಭವಿಸಿದೆ ಎಂದು ತಿಳಿದು ಬಂದಿದೆ.

Continue Reading

FILM

‘ಅರ್ಜುನ’ ಆನೆಯನ್ನು ನೆನೆದ ಡಿಬಾಸ್; ದರ್ಶನ್ ಕೋರಿಕೆ ಏನು?

Published

on

ಚಂದನವನ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅದ್ಭುತ ಕಲಾವಿದ ಜೊತೆಗೆ ಪ್ರಾಣಿ ಪ್ರಿಯರೂ ಹೌದು. ಅವರ ಪ್ರಾಣಿ ಪ್ರೇಮದ ಬಗ್ಗೆ ಹೇಳ್ಬೇಕಾ? ಹಲವಾರು ನಿದರ್ಶನಗಳನ್ನು ನಾವು ನೋಡಿದ್ದೇವೆ. ಇದೀಗ ದರ್ಶನ್ ‘ಅರ್ಜುನ’ ನ ಬಗ್ಗೆ ಮಾತನಾಡಿದ್ದಾರೆ.


ಕಾಡಾನೆ ಸೆರೆ ವೇಳೆ ನಡೆದಿದ್ದ ದುರಂ*ತ :

ಹಾಸನದ ಅರಣ್ಯದಲ್ಲಿ ಕಾಡಾನೆ ಸೆರೆ ಹಿಡಿದು, ರೇಡಿಯೋ ಕಾಲರ್ ಅಳವಡಿಸುವ ಕಾರ್ಯಾಚರಣೆ ವೇಳೆ ದಸರಾ ಆನೆ ಅರ್ಜುನ ಮೃ*ತಪಟ್ಟಿದ್ದ. ಅವರಿಗೆ 63 ವರ್ಷ ವಯಸ್ಸಾಗಿತ್ತು. 2023 ರ ಡಿಸೆಂಬರ್ ತಿಂಗಳಲ್ಲಿ ಈ ಘಟನೆ ನಡೆದಿತ್ತು. ಅರ್ಜುನ 8 ಬಾರಿ ಜಂಬೂ ಸವಾರಿಯಲ್ಲಿ ಅಂಬಾರಿ ಹೊತ್ತಿದ್ದ. ಆತನ ನಿಧ*ನ ಕನ್ನಡಿಗರನ್ನು ಶೋಕಸಾಗರದಲ್ಲಿ ಮುಳುಗಿಸಿತ್ತು.

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ನಡೆಯುತ್ತಿತ್ತು. ಈ ವೇಳೆ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿದೆ. ಕಾರ್ಯಾಚರಣೆ ವೇಳೆ ಒಂಟಿಸಲಗ ದಾಳಿ ಮಾಡುತ್ತಿದ್ದಂತೆ, ಉಳಿದ ಮೂರು ಸಾಕಾನೆಗಳು ಓಡಿ ಹೋಗಿವೆ. ಕೊನೆಗೆ ಒಂಟಿಸಲಗದ ಜೊತೆ ಅರ್ಜುನ ಆನೆಯು ಒಂಟಿಯಾಗಿ ಹೋರಾಟ ನಡೆಸಿದೆ. ಈ ಕಾಳಗ ಆರಂಭವಾಗುತ್ತಿದ್ದಂತೆ ಅರ್ಜುನನ ಮೇಲಿನಿಂದ ಮಾವುತ ಇಳಿದು ಓಡಿದ್ದಾರೆ. ಅರ್ಜುನ ಇಹಲೋಕ ತ್ಯಜಿಸಿದ್ದ. ಈ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಜನ ಕಂಬನಿ ಮಿಡಿದಿದ್ದರು.

ಅಂದು ಡಿ ಬಾಸ್ ದರ್ಶನ್ ಕೂಡ ಸಂತಾಪ ಸೂಚಿಸಿದ್ದರು. ಇದೀಗ ಮತ್ತೆ ಡಿ ಬಾಸ್ ‘ಅರ್ಜುನ’ನನ್ನು ಸ್ಮರಿಸಿದ್ದಾರೆ.

ಏನಂದ್ರು ಡಿಬಾಸ್?

ದರ್ಶನ್ ಅರ್ಜುನ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅರ್ಜುನನಿಗೆ ಸಲ್ಲಬೇಕಾದ ಗೌರವದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

‘ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ.

ಇದನ್ನೂ ಓದಿ : ತಿಮ್ಮಪ್ಪನ ಸನ್ನಿಧಾನದಲ್ಲಿ ಮಾಂಗಲ್ಯ ಮಾರಾಟ; ಮಾಂಗಲ್ಯ ಪಡೆಯುವುದು ಹೇಗೆ?

ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ ಇದಕ್ಕೊಂದು ಒಳ್ಳೆ ವ್ಯವಸ್ಥೆಯಾಗಲಿ ಎಂಬ ಕೋರಿಕೆ ನಮ್ಮದು ಎಂದು ಅವರು ಬರೆದುಕೊಂಡಿದ್ದಾರೆ.

Continue Reading

BELTHANGADY

ಮುಂದಿನ ನಾಲ್ಕು ದಿನ ಕರಾವಳಿಯಲ್ಲಿ ಮಳೆಯ ಸಿಂಚನ..! ಹವಾಮಾನ ಇಲಾಖೆ ಮುನ್ಸೂಚನೆ

Published

on

ಮಂಗಳೂರು: ಕಳೆದ ಕೆಲವು ದಿನಗಳಿಂದ ಸುಡು ಬಿಸಿಲಿಗೆ ಬಸವಳಿದು ಜನರು ಕಂಗಾಲಾಗಿದ್ದು, ಕೆಲವೊಂದು ಕಡೆ ವರುಣನ ಕೃಪೆಗಾಗಿ ಜನರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪೂಜಾ ಕಾರ್ಯಗಳನ್ನು ನೆರವೇರಿಸುತ್ತಿದ್ದಾರೆ.

rain

ಈ ನಡುವೆ ಬಿಸಿ ಶಾಖದಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಜನರು ನಿನ್ನೆ ಕೆಲವೆಡೆ ಸುರಿದ ಮಳೆಯಿಂದಾಗಿ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಇನ್ನು ಬೆಂಗಳೂರಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಅಲ್ಲಲ್ಲಿ ಅಲ್ಪಾ ಸ್ವಲ್ಪ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ರಾಜ್ಯದ ​ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ.

ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ. ಅದರಲ್ಲೂ ಬೆಂಗಳೂರಿನಲ್ಲಿ ಗುಡುಗು, ಮಿಂಚಿನ ಜತೆಗೆ ಅಲ್ಲಲ್ಲಿ ಚದುರಿದ ಮಳೆ ಬೀಳುವ ಸಂಭವವಿದೆ. ಮೇ 6 ಮತ್ತು 7 ರಂದು ಸಾಧಾರಣ ಅಥವಾ ಅದಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಬಿಸಿಗಾಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Continue Reading

LATEST NEWS

Trending