LATEST NEWS
ಯುವಕರಲ್ಲೇ ಯಾಕೆ ಹೆಚ್ಚಾಗುತ್ತಿದೆ ಹೃದಯಾಘಾತ: ICMRಗೆ ಪತ್ರ ಬರೆದ ಪತ್ರಕರ್ತ ರಾಜಾರಾಂ ತಲ್ಲೂರು
ಬೆಂಗಳೂರು: ರಾಜ್ಯದಲ್ಲಿ 30 ರಿಂದ 55ರ ಪ್ರಾಯದವರಲ್ಲಿ ಹೃದಯಾಘಾತ ಪ್ರಮಾಣ ಹೆಚ್ಚುತ್ತಿರುವುದು ಮತ್ತು ಅದಕ್ಕೆ ಕಾರಣ ಪತ್ತೆ ಹಚ್ಚುವಂತೆ ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಗೆ (ಐಸಿಎಂಆರ್) ಬಹಿರಂಗ ಪತ್ರ ಬರೆದಿದ್ದಾರೆ.
ಅದರ ಯಥಾವತ್ತು ಇಲ್ಲಿದೆ
ಇಂದು ನಾನು ಒಂದು ಕಳವಳದೊಂದಿಗೆ ಈ ಪತ್ರವನ್ನು ತಮಗೆ ಬರೆಯುತ್ತಿದ್ದೇನೆ. ದೇಶದಾದ್ಯಂತ, ಅದರಲ್ಲೂ ವಿಶೇಷವಾಗಿ ಕರಾವಳಿ ಕರ್ನಾಟಕದಲ್ಲಿ ನಡೆದಿರುವ ಒಂದು ವಿಲಕ್ಷಣವಾದ ಬೆಳವಣಿಗೆಯತ್ತ ನಾನು ನಿಮ್ಮ ಗಮನವನ್ನು ಸೆಳೆಯಬಯಸುತ್ತೇನೆ.
ಐಸಿಎಂಆರ್ ಈ ಘಟನೆಗೆ ಸಂಬಂಧಿಸಿದಂತೆ ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಕಾರ್ಯಾಚರಿಸುವುದು ಅತ್ಯಗತ್ಯ ಎಂದು ನನಗನ್ನಿಸಿದ ಹಿನ್ನೆಲೆಯಲ್ಲಿ ಈ ಪತ್ರವನ್ನು ತಮಗೆ ಬರೆಯುತ್ತಿದ್ದೇನೆ.
ಕೋವಿಡ್ ಜಗನ್ಮಾರಿಯ ಅವಧಿಯಲ್ಲಿ, ಕೋವಿಡ್ ಕಾರಣಕ್ಕಾಗಿ ಸಂಭವಿಸಿದ ಜೀವನಷ್ಟಗಳ ಜೊತೆ ಜೊತೆಗೇ ಹೃದಯಾಘಾತದ ಕಾರಣಕ್ಕೆ ಸಾವುಗಳು ಸಂಭವಿಸಿವೆ. ಈಗ ಕೋವಿಡ್ ತೀವ್ರತೆ ಕಡಿಮೆ ಆದ ಬಳಿಕವೂ ಈ ಸಾವಿನ ಸರಣಿ ಮುಂದುವರಿದಿದ್ದು, ದೇಶದೊಳಗೆ ದೊಡ್ಡ ಸಂಖ್ಯೆಯಲ್ಲಿ ಜನರು ಹೃದಯಾಘಾತಕ್ಕೆ ಬಲಿ ಆಗುತ್ತಿದ್ದಾರೆ.
ರಾಜಾರಾಂ ತಲ್ಲೂರು
ಅದರಲ್ಲೂ ವಿಶೇಷವಾಗಿ, 30-55ರ ಪ್ರಾಯ ವರ್ಗದಲ್ಲೇ ಈ ರೀತಿಯ ಸಾವುಗಳು ದೊಡ್ಡ ಪ್ರಮಾಣದಲ್ಲಿ ಕಾಣಿಸಿಕೊಳ್ಳುತ್ತಿವೆ. ಕಳೆದ ಒಂದು ವಾರದಲ್ಲೇ ಈ ಪ್ರದೇಶದ ಪತ್ರಿಕೆಗಳಲ್ಲಿ ಕನಿಷ್ಠ 5-6ಇಂತಹ ಸಾವಿನ ವರದಿಗಳು ನನಗೆ ಓದಲು ಸಿಕ್ಕಿವೆ. ದೇಶದಾದ್ಯಂತವೂ ಇದೇ ಪರಿಸ್ಥಿತಿ ಇದೆ ಎಂಬುದು ನನ್ನ ಅಭಿಪ್ರಾಯ.
ಹೀಗೆ ಅನಿರೀಕ್ಷಿತವಾಗಿ ನಿಧನ ಹೊಂದಿದವರೆಲ್ಲರೂ ಎಳೆಯರು ಮತ್ತು ಆರೋಗ್ಯವಂತರಾಗಿ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದವರು.
ಇದೊಂದು ಅಪಾಯಕಾರಿ ಬೆಳವಣಿಗೆಯಾಗಿದ್ದು, ಐಸಿಎಂಆರ್ ನಂತಹ ಸುಸಜ್ಜಿತ ಸಂಶೋಧನಾ ಸಂಸ್ಥೆ ಈ ವಿಚಾರದಲ್ಲಿ ಆಳವಾಗಿ ಅಧ್ಯಯನ/ ಸಂಶೋಧನೆ ನಡೆಸಿ, ಕಾರಣವನ್ನು ಪತ್ತೆಹಚ್ಚುವುದು ಬಹಳ ಮುಖ್ಯ ಎಂದು ನಾನು ನಂಬಿದ್ದೇನೆ.
ರೀತಿಯ ಹಠಾತ್ ಸಾವಿನ ಬಗ್ಗೆ ಜನಸಾಮಾನ್ಯರಲ್ಲಿ ಹಲವು ಅಪನಂಬಿಕೆಗಳು ತಲೆ ಎತ್ತಿವೆ. ಈ ರೀತಿಯ ಸಾವುಗಳಿಗೆ ಕೋವಿಡೋತ್ತರ ದೀರ್ಘಕಾಲಿಕ ಪರಿಣಾಮಗಳು ಅಥವಾ ಕೋವಿಡ್ ಲಸಿಕೆ ಅಥವಾ ಮಾನಸಿಕ ಒತ್ತಡ / ಜೀವನ ಶೈಲಿ ಕಾರಣ ಆಗಿರಬಹುದೆಂಬ ಸಂಶಯಗಳು ಜನಮನದಲ್ಲಿ ಬೆಳೆಯುತ್ತಿವೆ.
ಈ ಮರಣದ ಆಘಾತಗಳು ಅದಕ್ಕೆ ತುತ್ತಾದವರ ಕುಟುಂಬಗಳಲ್ಲಿ ಸಾಮಾಜಿಕ, ಆರ್ಥಿಕ ಸಂಕಟಗಳಿಗೆ ಕಾರಣವಾಗುತ್ತಿವೆ. ಯಾಕೆಂದರೆ, ಹೀಗೆ ಮೃತಪಟ್ಟಿರುವ ಹೆಚ್ಚಿನವರು ತಮ್ಮ ಕುಟುಂಬಗಳ ವರಮಾನದ ಆಧಾರಸ್ಥಂಭಗಳಾಗಿದ್ದವರು.
ಇಂತಹ ಪ್ರಕರಣಗಳು ಹೆಚ್ಚಾದಲ್ಲಿ ಇದು ಸಾಮಾಜಿಕವಾಗಿ-ಆರ್ಥಿಕವಾಗಿ ಕ್ಷೋಭೆಗೆ ಕಾರಣವಾದರೂ ಅಚ್ಚರಿ ಇಲ್ಲ.
ಐಸಿಎಂಆರ್ ಈ ನಿಟ್ಟಿನಲ್ಲಿ ತಕ್ಷಣ ಕಾರ್ಯಾರಂಭಿಸಬೇಕು ಮತ್ತು ಈ ರೀತಿಯ ಸಾವುಗಳ ಮಾಹಿತಿಗಳನ್ನು ಸಂಗ್ರಹಿಸಿ, ಅದಕ್ಕೆ ಕಾರಣಗಳ ವಿಶ್ಲೇಷಣೆ ನಡೆಸಬೇಕು. ಅಂತಹ ಜೀವನಷ್ಟವನ್ನು ತಡೆಯಲು ಸಕಾಲಿಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಈ ಮೂಲಕ ನಾನು ಒತ್ತಾಯಿಸುತ್ತೇನೆ.
ತಮ್ಮಿಂದ ಸಕಾರಾತ್ಮಕವಾದ ಮತ್ತು ಸಮಾಧಾನಕರವದ ಪ್ರತಿಕ್ರಿಯೆ ತಡಮಾಡದೇ ಬಂದೀತೆಂಬ ನಿರೀಕ್ಷೆಯಲ್ಲಿದ್ದೇನೆ ಎಂದು ಅವರು ಭಾರತೀಯ ವೈದ್ಯವಿಜ್ಞಾನ ಸಂಶೋಧನಾ ಸಂಸ್ಥೆಯ ಮಹಾನಿರ್ದೇಶಕ ರಾಜೇಶ್ ಭೂಷಣ್ ಅವರಿಗೆ ಪತ್ರ ಬರೆದಿದ್ದಾರೆ.
BANTWAL
ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!
ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.
LATEST NEWS
ವಧು ಕೇಳಿದ ಆ ಒಂದು ಪ್ರಶ್ನೆ; ತಬ್ಬಿಬ್ಬಾದ ವರ..ಮದುವೆ ಕ್ಯಾನ್ಸಲ್!
ಮಂಗಳೂರು : ಇತ್ತೀಚಿನ ದಿನಗಳಲ್ಲಿ ಮದುವೆ ಎಂಬುದರ ಸಂಭ್ರಮ ಹೇಳತೀರದು. ಅದ್ದೂರಿತನವೇ ಮೇಲುಗೈ ಸಾಧಿಸುತ್ತೆ. ಈ ನಡುವೆ ಮದುವೆ ಮುರಿದು ಬೀಳುವ ಘಟನೆಯೂ ಹೆಚ್ಚುತ್ತಲಿದೆ. ಕ್ಷುಲ್ಲಕ ಕಾರಣ ಇರಬಹುದು ಅಥವಾ ಇನ್ಯಾವುದೇ ಕಾರಣ ಇರಬಹುದು ಮದುವೆ ಮುರಿದು ಬೀಳುತ್ತಿದೆ.
ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು ಅನ್ನೋ ಗಾದೆ ಮಾತಿದೆ. ಅಂತೆಯೇ ಇಲ್ಲಿ ವರ ಸುಳ್ಳು ಹೇಳಿದ್ದಾನೆ. ಹಾಗಂತ ಮದುವೆ ಆಗಿಲ್ಲ. ಬದಲಿಗೆ ಸಿಕ್ಕಿ ಬಿದ್ದಿದ್ದಾನೆ. ವಧು ಕೇಳಿದ ಆ ಒಂದು ಪ್ರಶ್ನೆಯಿಂದ ಮದುವೆ ಮುರಿದು ಬಿದ್ದಿದೆ.
ಸುಳ್ಳು ಹೇಳಿ ತಗ್ಲಾಕ್ಕೊಂಡ!
ಸುಳ್ಳು ಹೇಳಿ ಮದುವೆಯಾಗಲು ಹೊರಟಿದ್ದ ವರನ ಅಸಲಿ ವಿಚಾರ ಗೊತ್ತಾಗಿದೆ. ಹೀಗಾಗಿ ಯುವತಿ ಮದುವೆ ನಿರಾಕರಿಸಿದ್ದಾಳೆ. ಅಂದಹಾಗೆ ಈ ಘಟನೆ ನಡೆದಿರೋದು ಉತ್ತರ ಪ್ರದೇಶದ ಪನ್ವಾರಿನಲ್ಲಿ. ಓದು, ಬರಹ ಏನೊಂದು ಬರದ ಅನಕ್ಷರಸ್ಥನೊಬ್ಬ ತಾನು ದೊಡ್ಡ ಸರ್ಕಾರಿ ಅಧಿಕಾರಿ ಎಂದು ಮದುವೆಯಾಗಲು ಹೊರಟಿದ್ದ.
ಆದರೆ, ಈ ಸತ್ಯ ಮದುವೆ ಮನೆಯಲ್ಲೇ ಬಯಲಾಗಿದೆ. ಸಂಶಯಗೊಂಡ ವಧು ವರನ ಬಳಿ, ಎರಡರ ಮಗ್ಗಿ ಹೇಳಲು ತಿಳಿಸಿದ್ದಾಳೆ. ಆಗ ಆತ ತಡವರಿಸಿದ್ದಾರೆ. ಹಾಗಾಗಿ, ಯುವತಿಗೆ ಸತ್ಯಾಂಶ ಗೊತ್ತಾಗಿದೆ. ಎರಡರ ಮಗ್ಗಿ ಬೇಸಿಕ್ ಗಣಿತವೂ ಗೊತ್ತಿಲ್ಲ, ನೀನು ಅಧಿಕಾರಿಯಾಗಲು ಹೇಗೆ ಸಾಧ್ಯ? ಎಂದು ಮದುವೆ ಮುರಿದುಕೊಂಡಿದ್ದಾಳೆ.
ಇದನ್ನೂ ಓದಿ : ಮತ್ತೆ ಬಾಯ್ ಫ್ರೆಂಡ್ ಬದಲಾಯಿಸಿದ ಶೃತಿ ಹಾಸನ್..!
ಇಷ್ಟಾದರೂ ಬಿಡದ ಕುಟುಂಬದವರು ವಧುವಿನ ಮನವೊಲಿಸುವ ಯತ್ನ ಮಾಡಿದ್ದಾರೆ. ಆದರೆ, ವಧು ಮಾತ್ರ ಇದಕ್ಕೆ ಒಪ್ಪಿಲ್ಲ. ಹೀಗಾಗಿ ವರದಕ್ಷಿಣೆಯನ್ನು ಹಿಂದಿರುಗಿಸಿದ್ದಾರೆ. ಪರಸ್ಪರ ನೀಡಿದ ಉಡುಗೊರೆ, ಆಭರಣಗಳನ್ನು ಹಿಂದಿರುಗಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
LATEST NEWS
ಮತಗಟ್ಟೆಯನ್ನೇ ಧ್ವಂಸ ಮಾಡಿದ ಗ್ರಾಮಸ್ಥರು!
ಚಾಮರಾಜನಗರ : ಲೋಕಸಭಾ ಚುನಾವಣೆಗೆ ನಡೆಯುತ್ತಿರುವ ಮತದಾನ ರಾಜ್ಯದೆಲ್ಲಡೆ ಸುಸೂತ್ರವಾಗಿಯೇ ನಡೆದಿದೆ. ಆದರೆ ಚಾಮರಾಜನಗರದಲ್ಲಿ ಮಾತ್ರ ಜನರು ಮತಗಟ್ಟೆಯನ್ನೇ ಪುಡಿ ಮಾಡಿ ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದಾರೆ. ಚಾಮರಾಜನಗರದ ಲೋಕಸಭಾ ಕ್ಷೇತ್ರದ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ ಮಾಡಲಾಗಿತ್ತು. ಈ ವೇಳೆ ಇಂಡಿಗನತ್ತ ಎಂಬ ಗ್ರಾಮದಲ್ಲಿ ಮತಗಟ್ಟೆಯನ್ನು ಗ್ರಾಮಸ್ಥರು ಧ್ವಂಸ ಮಾಡಿದ್ದಾರೆ.
ಚುನಾವಣೆ ಬಹಿಷ್ಕಾರಿಸಿದ್ದ 5 ಗ್ರಾಮ :
ಮೂಲ ಸೌಕರ್ಯದಿಂದ ವಂಚಿತರಾಗಿದ್ದ ಈ ಗ್ರಾಮದ ಜನರು ತಮ್ಮ ಹಕ್ಕಿಗಾಗಿ ಹಲವು ಹೋರಾಟ ನಡೆಸಿದ್ದರು. ಆದರೆ, ಚುನಾವಣೆಯಲ್ಲಿ ಆಶ್ವಾಸನೆ ನೀಡಿ ಹೋಗುವ ಜನ ಪ್ರತಿನಿಧಿಗಳು ಬಳಿಕ ಇತ್ತ ಸುಳಿಯುತ್ತಿರಲಿಲ್ಲ. ಹೀಗಾಗಿ ಐದು ಗ್ರಾಮಗಳ ಜನರು ಈ ಬಾರಿ ಮತ ಕೇಳಲು ಬರಬೇಡಿ, ನಾವು ಮತದಾನ ಮಾಡೋದಿಲ್ಲ ಎಂದಿದ್ದರು.
ಚುನಾವಣೆ ಬಹಿಷ್ಕಾರ ಮಾಡಿದ್ದರೂ ಕಾನೂನು ರೀತಿಯಲ್ಲಿ ಗ್ರಾಮದಲ್ಲಿ ಮತಗಟ್ಟೆಯನ್ನು ತೆರೆಯಲಾಗಿತ್ತು. ಇಂಡಿಗನತ್ತ, ತೇಕಣೆ, ಮೆಂದಾರೆ ಈ ಗ್ರಾಮದಲ್ಲಿ ಯಾವೊಬ್ಬ ಗ್ರಾಮಸ್ಥರೂ ಮತದಾನ ಮಾಡಿಲ್ಲ. ಇನ್ನು ಪಡಸಲನತ್ತ ಗ್ರಾಮದಲ್ಲಿ 85 ಮತದಾರು ಇದ್ದು ಇಬ್ಬರು ಮತದಾನ ಮಾಡಿದ್ದಾಗಿ ಮಾಹಿತಿ ಲಭ್ಯವಾಗಿದೆ.
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ತೆರೆಯುವುದಕ್ಕೆ ಗ್ರಾಮಸ್ಥರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರು. ಆದಾಗ್ಯೂ, ಚುನಾವಣಾ ಆಯೋಗ ಇಲ್ಲಿ ಮತಗಟ್ಟೆ ತೆರೆದು ‘ಮತದಾನ ಮಾಡಲು ಬನ್ನಿ’ ಎಂದು ಜನರನ್ನು ಕರೆದಿದ್ದರು. ಆದ್ರೆ ರೊಚ್ಚಿಗೆದ್ದ ಜನರು ಮತದಾನ ಕೇಂದ್ರದ ಒಳಗೆ ನುಗ್ಗಿ ಇವಿಎಂ ಮೆಷಿನ್ ಸಹಿತ ಮೇಜು ಕುರ್ಚಿ ಎಲ್ಲವನ್ನೂ ಧ್ವಂಸ ಮಾಡಿದ್ದಾರೆ.
ಕನಿಷ್ಠ ಮೂಲಭೂತ ಸೌಕರ್ಯವಾದ ಕುಡಿಯುವ ನೀರು, ರಸ್ತೆ, ವಿದ್ಯುತ್, ಆರೋಗ್ಯ, ಶಿಕ್ಷಣ ಯಾವುದೂ ಇಲ್ಲದ ನಮ್ಮ ಗ್ರಾಮದ ಮತ ಯಾಕೆ ಬೇಕು? ಎಂದು ಜನ ಪ್ರಶ್ನೆ ಮಾಡಿದ್ದಾರೆ.
ಇದನ್ನೂ ಓದಿ : ಸುಡುಬಿಸಿಲಿನಲ್ಲೂ ಮತದಾನ; ಇಹಲೋಕ ತ್ಯಜಿಸಿದ 6 ಮಂದಿ
ಪೊಲೀಸ್ ಲಾಠಿ ಚಾರ್ಜ್…ಕೆರಳಿದ ಗ್ರಾಮಸ್ಥರು!
ಜನರು ಮತಗಟ್ಟೆ ಧ್ವಂಸಕ್ಕೆ ಮುಂದಾಗುತ್ತಿದ್ದಂತೆ ಭದ್ರತೆಯಲ್ಲಿದ್ದ ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳಿಗೆ ಹಾಗೂ ಪೊಲೀಸರಿಗೆ ಹಲ್ಲೆ ಮಾಡಿದ ಜನರು ಬಳಿಕ ಕಲ್ಲು ತೂರಾಟ ನಡೆಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಹಾಗೂ ಅಧಿಕಾರಿಗಳಿಗೆ ಗಾಯಗಳಾಗಿದೆ.
ಪೊಲೀಸರು ಮಹಿಳೆಯರು ಪುರುಷರು ಎಂದು ನೋಡದೆ ಎಲ್ಲರ ಮೇಲೂ ಲಾಠಿ ಚಾರ್ಚ್ ಮಾಡಿರುವುದು ಗ್ರಾಮಸ್ಥರನ್ನು ಕೆರಳಿಸಿದೆ. ಸದ್ಯಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಮತದಾನ ಕೇಂದ್ರವನ್ನು ಬಂದ್ ಮಾಡಲಾಗಿದೆ.
- FILM5 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM5 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM6 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru5 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!