Connect with us

DAKSHINA KANNADA

ಹಿರಿಯ ಸಾಹಿತಿ, ಸಂಶೋಧಕ, ಪತ್ರಕರ್ತ, ಉಪನ್ಯಾಸಕ ಪ್ರೊ ಬಿ ಎಂ ಇಚ್ಲಂಗೋಡು ಇನ್ನಿಲ್ಲ..!

Published

on

ಮಂಗಳೂರು: ದಕ್ಷಿಣ ಕನ್ನಡ  ನಾಡಿನ ಹಿರಿಯ ಸಾಹಿತಿ, ಬ್ಯಾರಿ ಸಂಶೋಧಕ, ಪತ್ರಕರ್ತ, ನಿವೃತ್ತ ಉಪನ್ಯಾಸಕ (84) ಪ್ರೊ. ಬಿ.ಎಂ. ಇಚ್ಲಂಗೋಡು  ಅವರು   ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ತಡರಾತ್ರಿ ನಿಧನರಾದರು.ಮಂಗಳೂರಿನ ಅತ್ತಾವರ ನಂದಿಗುಡ್ಡೆಯ ನಿವಾಸಿಯಾಗಿದ್ದ ಬಿ.ಎಂ. ಇಚ್ಲಂಗೋಡು ಅವರು ಪತ್ನಿ, ನಾಲ್ವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಬ್ಯಾರಿ ಕ್ಷೇತ್ರ ಕಾರ್ಯದಲ್ಲಿ ಆಳವಾದ ಅಧ್ಯಯನ ನಡೆಸಿದ್ದ ಅವರು ಇಳಿ ವಯಸ್ಸಿನಲ್ಲೂ ಯುವಕರನ್ನು ನಾಚಿಸುವಂತೆ ಸಂಶೋಧನೆಯಲ್ಲಿ ನಿರತರಾಗಿದ್ದರು.

ಅನೇಕ ಯುವ ಸಂಶೋಧಕರಿಗೆ ಮಾರ್ಗದರ್ಶನ ನೀಡಿದ್ದರು. ಗ್ರಾಹಕರಿಗಾಗುತ್ತಿದ್ದ ಅನ್ಯಾಯದ ವಿರುದ್ಧ ಕಾನೂನು ಹೋರಾಟ ಮಾಡಿ ಗಮನ ಸೆಳೆದಿದ್ದರು.

ಅಲ್ಲದೆ ಜನಸಾಮಾನ್ಯರಿಗೆ ಕಾನೂನು ನೆರವು ನೀಡುತ್ತಿದ್ದರು. ಇಳಿವಯಸ್ಸಿನಲ್ಲೂ ಸಾಹಿತ್ಯ, ಅಧ್ಯಯನದಲ್ಲಿ ಉತ್ಸಾಹದಿಂದ ತೊಡಗಿಸಿಕೊಂಡಿದ್ದರು.

ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೈಯಾಡಿಸಿದ್ದರು. ಆಳವಾದ ಅಧ್ಯಯನ, ಕ್ಷೇತ್ರ ಕಾರ್ಯಗಳ ಮೂಲಕ ಮೌಲ್ಯಯುತ ಪ್ರಬಂಧಗಳನ್ನು ಮಂಡಿಸಿದ್ದ ಅವರು ಕತೆ, ಕವನ, ಲೇಖನ, ಹಾಸ್ಯಲೇಖನಗಳನ್ನೂ ಬರೆದು ಗಮನ ಸೆಳೆದಿದ್ದರು.

ಸದ್ದಿಲ್ಲದೆ ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿದ್ದರು. ಬ್ಯಾರಿ ಭಾಷೆ, ಸಾಹಿತ್ಯ, ಸಂಸ್ಕೃತಿಯ ಕುರಿತಾಗಿ ಅವರು ನಡೆಸಿದ ಅಧ್ಯಯನಕ್ಕೆ ಮನ್ನಣೆ ಎಂಬಂತೆ ಉಡುಪಿಯಲ್ಲಿ 2001ರಲ್ಲಿ ನಡೆದ ಮೂರನೇ ಬ್ಯಾರಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯ ಗೌರವ ಲಭಿಸಿತ್ತು.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಪ್ರಥಮ ಅವಧಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಹೊರತಂದ ಬ್ಯಾರಿ, ಕನ್ನಡ, ಇಂಗ್ಲಿಷ್ ಡಿಕ್ಷನರಿಯ ಪ್ರಧಾನ ಸಂಪಾದಕರಾಗಿ ಕೆಲಸ ಮಾಡಿದ್ದರು.

ಕಾಸರಗೋಡು ಜಿಲ್ಲೆಯ ಇಚ್ಲಂಗೋಡು ಎಂಬಲ್ಲಿ ಅಬ್ದುಲ್ಲಾ ಹಾಜಿ ಮತ್ತು ಕುಂಞಲಿಮಾ ದಂಪತಿಯ ಪುತ್ರನಾಗಿ ಮಾ.2, 1937ರಂದು ಜನಿಸಿದ್ದ ಬಿ.ಮುಹಮ್ಮದ್ (ಬಿಎಂ ಇಚ್ಲಂಗೋಡು) ದ.ಕ.ಜಿಲ್ಲೆಯ ಮೂಡುಬಿದಿರೆಯಲ್ಲಿ ಇತಿಹಾಸ ಉಪನ್ಯಾಸಕರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು. ನಿವೃತ್ತಿಯ ಬಳಿಕ ಮಂಗಳೂರಿನ ನಂದಿಗುಡ್ಡದಲ್ಲಿ ನೆಲೆಸಿದ್ದರು.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending