Connect with us

    DAKSHINA KANNADA

    ಶಿರಾಡಿಘಾಟ್ ನಲ್ಲಿ ಸರಣಿ ಅಪಘಾ*ತ; ರಾಜಹಂಸ, ಐರಾವತ ಬಸ್ ಮುಖಾಮುಖಿ ಡಿ*ಕ್ಕಿ

    Published

    on

    ಶಿರಾಡಿ : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ನಲ್ಲಿ ಸರಣಿ ಅಪಘಾ*ತ ಸಂಭವಿಸಿದೆ. ರಾಜಹಂಸ ಹಾಗೂ ಐರಾವತ ಬಸ್ ಮುಖಾಮುಖಿ ಡಿ*ಕ್ಕಿಯಾಗಿದೆ.

    ಈ ವೇಳೆ ಅಪಘಾ*ತ ತಪ್ಪಿಸಲು ಹೋಗಿ ಟೆಂಪೋವೊಂದು ಚರಂಡಿಗೆ ಬಿದ್ದಿದೆ. ಅದೃಷ್ಟವಶಾತ್ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

    ಇದನ್ನೂ ಓದಿ : ಜೀವ ಉಳಿಸಿದ ನಾಯಿಯ ನಿಯತ್ತು ಹಾಗೂ ಯುವಕನ ಸಮಯ ಪ್ರಜ್ಞೆ!

    ಇನ್ನು ರಸ್ತೆ ಸಂಚಾರ ಬಂದ್ ಮಾಡಿ, ಬಸ್ ಗಳನ್ನು ತೆರವುಗೊಳಿಸುವ ಕಾರ್ಯ ಮಾಡಲಾಯಿತು.

    DAKSHINA KANNADA

    ಮನೆಯೊಳಗೆ ಈ ಪ್ರಾಣಿ ಪಕ್ಷಿಗಳು ಬರಬಾರದಂತೆ, ಯಾವುದು? ಯಾಕೆ ಗೊತ್ತಾ?

    Published

    on

    ಕಷ್ಟಗಳು ಮನುಷ್ಯನಿಗೆ ಬರದೇ ಮರಕ್ಕೆ ಬರುತ್ತಾ ಎನ್ನುವ ಮಾತಿದೆ. ಹುಟ್ಟಿದ ಪ್ರತಿಯೊಬ್ಬ ಮನುಷ್ಯನು ಕಷ್ಟ ಸುಖ ಎರಡನ್ನು ಸಮಭಾಗವಾಗಿ ಸ್ವೀಕರಿಸಬೇಕು. ಆದರೆ ಜ್ಯೋತಿಷ್ಯದ ಪ್ರಕಾರ ಈ ಪ್ರಾಣಿ ಪಕ್ಷಿಗಳು ಮನೆಯೊಳಗೆ ಬಂದರೆ ಸಂಕಷ್ಟ ಕಟ್ಟಿಟ್ಟ ಬುತ್ತಿ. ಹೀಗಾಗಿ ಈ ಕೆಲವು ಪ್ರಾಣಿ ಹಾಗೂ ಪಕ್ಷಿಗಳು ಮನೆಯನ್ನು ಪ್ರವೇಶಿಸಬಾರದು ಎಂದು ಹೇಳುತ್ತಾರೆ. ಆದರೆ ಇದರಿಂದ ಏನೆಲ್ಲಾ ಸಮಸ್ಯೆಗಳು ಉಂಟಾಗುತ್ತದೆ ಎನ್ನುವುದು ಅನೇಕರಿಗೆ ತಿಳಿದಿಲ್ಲ.

    ಏಡಿ : ಏಡಿಯು ಮನೆಯೊಳಗೆ ಪ್ರವೇಶಿಸಿದರೆ ಮನೆಗೆ ಮಾಟ ಮಾಡಿದ್ದಂತೆ ಎನ್ನಲಾಗುತ್ತದೆ. ಇದು ಪ್ರವೇಶಿಸಿದರೆ ಮನೆಯಲ್ಲಿ ಸಂಕಷ್ಟಗಳು ಎದುರಾಗಿ ಮನೆಯೇ ಸರ್ವನಾಶವಾಗುತ್ತದೆ ಎನ್ನಲಾಗುತ್ತದೆ.

    ಕಪ್ಪು ಬೆಕ್ಕು : ಕೆಲವೊಮ್ಮೆ ಬೇರೆಯವರ ಮನೆಯ ಬೆಕ್ಕು ಮನೆಗೆ ಬಂದು ಉಳಿಯುತ್ತವೆ. ಆದರೆ ಕಪ್ಪು ಬೆಕ್ಕು ಮನೆಯನ್ನು ಪ್ರವೇಶಿಸುವುದು ಒಳ್ಳೆಯದಲ್ಲ. ಈ ಬೆಕ್ಕು ಅಪಶಕುನವಂತೆ, ಮನೆಗೆ ಬಂದರೆ ಕೆಟ್ಟದಾಗುತ್ತದೆ ಎನ್ನಲಾಗುತ್ತದೆ.

    ಉಡ : ಅಪರೂಪವಾಗಿ ಕಾಣಸಿಗುವ ಉಡವನ್ನು ನೋಡುವುದೇ, ಅದರ ಬಗ್ಗೆ ಮಾತನಾದುವುದೇ ಕೆಟ್ಟದಂತೆ. ಈ ಪ್ರಾಣಿಯು ಅನಿಷ್ಟವಂತೆ, ಹೀಗಾಗಿ ಮನೆಗೆ ಬರುವುದು ಒಳ್ಳೆಯದಲ್ಲ. ಒಂದು ವೇಳೆ ಅಪ್ಪಿ ತಪ್ಪಿ ಮನೆಯನ್ನು ಪ್ರವೇಶಿಸಿದರೆ ಮನೆಗೆ ಮಾಟ ಮಾಡಿದ್ದಂತೆ. ಇದರಿಂದ ಮನೆಯೇ ನಾಶವಾಗುತ್ತದೆ ಎನ್ನಲಾಗುತ್ತದೆ.

    ಕಾಗೆ : ಕಾಗೆಯು ಮನೆಗೆ ಬಂದರೆ ಶನಿಯು ಮನೆಗೆ ಪ್ರವೇಶಿಸುತ್ತಿದ್ದಾನೆ ಎನ್ನುವುದರ ಸೂಚಕ. ಕಾಗೆಯೂ ಮನೆಯೊಳಗೆ ಬಂದರೆ ಸಂಕಷ್ಟಗಳು ಎದುರಾಗುತ್ತದೆ. ಆರ್ಥಿಕ ಧನನಷ್ಟ ಹಾಗೂ ಆರೋಗ್ಯ ಸಮಸ್ಯೆಯು ಕಾಣಿಸಿಕೊಳ್ಳುತ್ತದೆ ಎನ್ನಲಾಗಿದೆ.

    ಬಾವುಲಿ : ಬಾವಲಿಯು ಮನೆಗೆ ಪ್ರವೇಶಿಸುವುದರಿಂದ ಮನೆಯು ಹಾಳಾಗುತ್ತಿದೆ ಎಂದು ಸೂಚಿಸುತ್ತದೆ. ಇದರಿಂದ ನಕಾರಾತ್ಮಕ ಶಕ್ತಿಗಳು ಮನೆಯಲ್ಲಿ ಉಳಿಯುತ್ತವೆ. ಅಷ್ಟೇ ಅಲ್ಲದೇ, ಮನೆಯಲ್ಲಿ ವಾಸಿಸುವ ಜನರ ಜೀವನದಲ್ಲಿ ಸಮಸ್ಯೆಗಳು ಆರಂಭವಾಗುತ್ತದೆಯಂತೆ.

    ಜೇನುಗೂಡು ಅಥವಾ ಜೇನುಹುಳ: ಮನೆಯೊಳಗೆ ಜೇನುಹುಳಗಳು ಒಂದೆರಡು ಬಂದರೆ ಪರವಾಗಿಲ್ಲ. ಆದರೆ ಜೇನುಹುಳಗಳು ಮನೆಯೊಳಗೆ ಗೂಡು ಕಟ್ಟುವುದು ಒಳ್ಳೆಯದಲ್ಲ. ಇದರಿಂದ ಆ ಮನೆಯಲ್ಲಿ ವಾಸಿಸುತ್ತಿರುವವರಿಗೆ ಸಂಕಷ್ಟ ಎದುರಾಗುತ್ತದೆ.

    ಗೂಬೆ : ಗೂಬೆಯು ಅನಿಷ್ಟ ವಾಗಿದ್ದು ಇದರ ಆಗಮನವು ನಕಾರಾತ್ಮಕ ಶಕ್ತಿಯನ್ನು ಸೃಷ್ಟಿಸುತ್ತದೆ. ಮನೆಗೆ ಗೂಬೆ ಬಂದರೆ ಮನೆಯ ಪ್ರಗತಿಯು ಕುಂಠಿತವಾಗುತ್ತದೆ. ಮನೆಯಲ್ಲಿ ವಾಸಿಸುವ ಸದಸ್ಯರ ನಡುವೆ ವೈಮನಸ್ಸು ಉಂಟಾಗಿ ಮನೆಯೇ ನಾಶವಾಗುವ ಸಾಧ್ಯತೆ ಇರುತ್ತದೆ.

    ರಣಹದ್ದುಗಳು : ರಣ ಹದ್ದುಗಳು ಮನೆಯೊಳಗೆ ಪ್ರವೇಶಿಸಿದರೆ ಯಜಮಾನನಿಗೆ ಸಮಸ್ಯೆಯಾಗುತ್ತದೆ. ಅದಲ್ಲದೇ, ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುತ್ತದೆ ಎನ್ನಲಾಗಿದೆ.

    Continue Reading

    DAKSHINA KANNADA

    ಮಂಗಳೂರು: ವಿಮಾನ ನಿಲ್ದಾಣದ ರನ್ ವೇಯಿಂದ ಮನೆಗಳಿಗೆ ನುಗ್ಗುತ್ತಿದೆ ನೀರು…!

    Published

    on

    ವಿಮಾನ ನಿಲ್ದಾಣ ಮುಖ್ಯದ್ವಾರ ಬಂದ್ ಮಾಡಿ ಸ್ಥಳೀಯರ ಪ್ರತಿಭಟನೆ

    ಮಂಗಳೂರು: ಭಾರೀ ಮಳೆಯಿಂದಾಗಿ ವಿಮಾನ ನಿಲ್ದಾಣದ ರನ್ ವೇಯಿಂದ ಹರಿದು ಬಂದ ನೀರು ಏಳು ಮನೆಗಳಿಗೆ ಹಾನಿ ಉಂಟು ಮಾಡಿದ ಹಿನ್ನೆಲೆಯಲ್ಲಿ ಕರಂಬಾರ ಸ್ಥಳೀಯರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

    ವಿಮಾನ ನಿಲ್ದಾಣದಿಂದ ಮಳೆ ನೀರು ಹರಿದು ಹೋಗಲು ಏರ್ಪೋರ್ಟ್ ಆಡಳಿತ ಸರಿಯಾದ ವ್ಯವಸ್ಥೆ ಕಲ್ಪಿಸಿಲ್ಲ. ಹೀಗಾಗಿ ಕೆಂಜಾರು ಹಾಗೂ ಏರ್ಪೋರ್ಟ್ ಸುತ್ತಮುತ್ತಲಿನ ಹಲವು ಮನೆಗಳಿಗೆ ನೆರೆ ಭೀತಿ ಸೃಷ್ಟಿಯಾಗಿದೆ. ಸೂಕ್ತ ವ್ಯವಸ್ಥೆ ಕಲ್ಪಿಸದೆ ಮಳೆ ನೀರನ್ನು ಅವೈಜ್ಞಾನಿಕವಾಗಿ ಹೊರ ಬಿಡಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಟೇಬಲ್ ಟಾಪ್ ಏರ್ಪೋರ್ಟ್ ಆಗಿರುವ ಕಾರಣ ಕೆಲ ಭಾಗದ ಜನ ವಸತಿ ಪ್ರದೇಶಗಳಿಗೆ ನೀರು ನುಗ್ಗುವ ಭೀತಿ ಉಂಟಾಗಿದೆ. ಈ ಮಧ್ಯೆ, ರಸ್ತೆ ತಡೆ ನಡೆಸಿದ ಕಾರಣ ಬಜ್ಪೆ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಘಟನಾ ಸ್ಥಳದಲ್ಲಿ ಸಿಐಎಸ್ಎಫ್ ಸಿಬ್ಬಂದಿ ಮೊಕ್ಕಾಂ ಹೂಡಿದ್ದಾರೆ.

    ಸದ್ಯ ಗ್ರಾಮಸ್ಥರನ್ನು ಮನವೊಲಿಸಿ ರಸ್ತೆ ತೆರವು ಮಾಡಲಾಗಿದೆ. ಪ್ರತಿಭಟನಾನಿರತರು ಜಿಲ್ಲಾಧಿಕಾರಿ ಸ್ಥಳಕ್ಕೆ ಬರಲು ಒಂದು ಗಂಟೆಯ ಗಡುವು ನೀಡಿದ್ದಾರೆ. ಸ್ಥಳಕ್ಕೆ ಮಂಗಳೂರು ಉತ್ತರ ವಿಭಾಗದ ಎಸಿಪಿ ಮನೋಜ್ ನಾಯಕ್, ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ ಭೇಟಿ ನೀಡಿದ್ದಾರೆ. ಏರ್ಪೋರ್ಟ್ ಆಡಳಿತ ಅಧಿಕಾರಿಗಳು, ಸ್ಥಳೀಯರ ಜೊತೆ ಶಾಸಕ ಭರತ್ ಶೆಟ್ಟಿ ಚರ್ಚೆ ನಡೆಸಿದ್ದಾರೆ.

    Continue Reading

    DAKSHINA KANNADA

    ನಿವೃತ್ತಿಗೊಂಡ ಪೊಲೀಸ್ ಅಧಿಕಾರಿಗೆ ವಿಶೇಷ ಗೌರವ..! ಪುಷ್ಪಾರ್ಚಣೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳು..!

    Published

    on

    ಮೂಡುಬಿದಿರೆ: ಪೊಲೀಸ್‌ ಅಧಿಕಾರಿಯಾದವರು ದಕ್ಷತೆ, ಪ್ರಮಾಣಿಕತೆಯಿಂದ ಕೆಲಸ ಮಾಡಿದರೆ ಎಂತಹ ಗೌರವ ಸಿಗುತ್ತದೆ ಅನ್ನೋದಕ್ಕೆ ಮೂಡಬಿದಿರೆಯ ಈ ಪೊಲೀಸ್‌ ಅಧಿಕಾರಿಯೇ ಸಾಕ್ಷಿ. ಹೌದು, ಪೊಲೀಸ್‌ ಅಧಿಕಾರಿಯಾಗಿ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಇದೀಗ ನಿವೃತ್ತರಾಗಿದ್ದ ಪೊಲೀಸ್ ಉಪನಿರೀಕ್ಷಕ ದಿವಾಕರ್‌ ರೈ ಅವರಿಗೆ ಸಹೋದ್ಯೋಗಿಗಳು ಪುಷ್ಪಾರ್ಚನೆಯ ಗೌರವ ಸಲ್ಲಿಸಿದ್ದಾರೆ.

    ದಿವಾಕರ ರೈ ಅವರು ಸೇವೆಯಿಂದ ನಿವೃತ್ತರಾಗಿದ್ದರು. ಮೂಡಬಿದಿರೆಯ ಪೊಲೀಸ್‌ ಠಾಣೆಯಿಂದ ಅವರು ಸೇವೆಯನ್ನು ಮುಗಿಸಿ ಮನೆಗೆ ತೆರಳುವ ವೇಳೆಯಲ್ಲಿ ಅವರು ಠಾಣೆಯಿಂದ ಪೊಲೀಸ್‌ ಜೀಪ್‌ ಏರುವವರೆಗೂ ಮೂಡಬಿದಿರೆಯ ವೃತ್ತ ನಿರೀಕ್ಷಕರಾದ ಸಂದೇಶ್‌ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪುಷ್ಪಾರ್ಚನೆಯನ್ನು ಮಾಡಿದ್ದಾರೆ. ಪೊಲೀಸ್‌ ಜೀಪ್‌ನಲ್ಲೇ ಪೊಲೀಸ್‌ ಅಧಿಕಾರಿಯಾಗಿಯೇ ದಿವಾಕರ ರೈ ಮನೆಗೆ ತೆರಳಿದ್ದಾರೆ. ಸಹೋದ್ಯೋಗಿಗಳು ನೀಡಿದ ಗೌರವಕ್ಕೆ ದಿವಾಕರ ರೈ ಅವರು ಆನಂದ ಬಾಷ್ಪ ಸುರಿಸಿದ್ದಾರೆ. ಸದಾ ಒಂದೊಲ್ಲೊಂದು ಅಪರಾಧ ಪ್ರಕರಣಗಳಿಂದಲೇ ಬ್ಯುಸಿಯಾಗಿರುತ್ತಿದ್ದ ಮೂಡಬಿದಿರೆಯ ಪೊಲೀಸ್‌ ಠಾಣೆ ಇಂದು ವಿನೂತನ ಸಂದರ್ಭಕ್ಕೆ ಸಾಕ್ಷಿಯಾಗಿತ್ತು.

    ಈ ಪುಣ್ಯಕ್ಷೇತ್ರಕ್ಕೆ ಹೋಗಲು ರಾಜ್ಯ ಸರ್ಕಾರದಿಂದ ಸಹಾಯಧನ ಸಿಗಲಿದೆ..!

    Continue Reading

    LATEST NEWS

    Trending