DAKSHINA KANNADA
ಕಟಪಾಡಿಯಲ್ಲಿ ಸರಣಿ ಅಪಘಾ*ತ; ಹಲವು ವಾಹನಗಳು ಜಖಂ
ಕಟಪಾಡಿ: ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಇತರೇ ವಾಹನಗಳಿಗೆ ಡಿ*ಕ್ಕಿ ಹೊಡೆದು ಸರಣಿ ಅಪಘಾ*ತ ಸಂಭವಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ಬಳಿಯ ಸರ್ವೀಸ್ ರಸ್ತೆಯಲ್ಲಿ ಬುಧವಾರ(ಅ.2) ರಾತ್ರಿ ನಡೆದಿದೆ.
ಉಡುಪಿಯಿಂದ ಬರುತ್ತಿದ್ದ ಟಾಟಾ ಪಂಚ್ ಇಲೆಕ್ಟ್ರಿಕ್ ಕಾರು ಸರ್ವೀಸ್ ರಸ್ತೆಯಲ್ಲಿನ ಹಂಪ್ಸ್ ಮೇಲೇರಿದ ಬಳಿಕ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಹೆದ್ದಾರಿ ದಾಟಿ ರಿಕ್ಷಾಕ್ಕೆ ಡಿ*ಕ್ಕಿ ಹೊಡೆದಿದೆ. ಬಳಿಕ ಬಸ್, ಅಮ್ನಿ, ಅಂಗಡಿ ಬಳಿ ಪಾರ್ಕಿಂಗ್ ಮಾಡಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಡಿ*ಕ್ಕಿ ಹೊಡೆದು ವಾಹನಗಳು ಜಖಂಗೊಂಡಿವೆ.
ಸದಾ ಜನ ನಿಬಿಡತೆಯಿಂದ ಕೂಡಿದ್ದ ಈ ಪ್ರದೇಶದಲ್ಲಿ ಪವಾಡ ಸದೃಶವಾಗಿ ಜನರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ಕರಾವಳಿಯಲ್ಲಿ ದಸರಾ ಸಂಭ್ರಮ; ಜಗಮಗಿಸುತ್ತಿರುವ ಮಂಗಳೂರು
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಮುಖ್ಯವಾಗಿ ಮಂಗಳೂರು ದಸರಾವನ್ನು ಆಚರಿಸುತ್ತಾರೆ. ನವರಾತ್ರಿ ಹಬ್ಬ, ವಿಜಯದಶಮಿ ಎಂಬುವುದಾಗಿಯೂ ಕರೆಯುತ್ತಾರೆ. ಈ ಹಬ್ಬದ ಸಮಯದಲ್ಲಿ ಹುಲಿ ನೃತ್ಯ, ಸಿಂಹ ನೃತ್ಯ ಮತ್ತು ಕರಡಿ ನೃತ್ಯ ಬಹು ಆಕರಷಣೀಯವಾಗಿರುತ್ತದೆ. 10 ದಿನಗಳ ಕಾಲ ಮಂಗಳೂರಿನ ಬಹುತೇಕ ರಸ್ತೆಗಳಲ್ಲಿ ದಸರಾ ಮೆರವಣಿಗೆಗಾಗಿ ದೀಪಗಳು ಮತ್ತು ವಿದ್ಯುತ್ ದೀಪಗಳಿಂದ ಅಲಂಕೃತಗೊಂಡಿರುವುದನ್ನು ಕಾಣಬಹುದು. . ಮಂಗಳೂರು ದಸರಾವನ್ನು ಬಿ.ಆರ್.ಕರ್ಕೇರ ಮೊದಲು ಪ್ರಾರಂಭಿಸಿದರು.
ಹುಲಿವೇಷದ ಅಬ್ಬರ:
ಹುಲಿವೇಷ ದಸರಾ ಸಂದರ್ಭದಲ್ಲಿ ಮಾಡುವ ಜಾನಪದ ನೃತ್ಯವಾಗಿದೆ. ವಿಶಿಷ್ಟವಾಗಿ ಯುವ ಪುರುಷರು ಪಡೆ ರಚಿಸಿಕೊಂಡು ಹುಲಿಗಳಂತೆ ಬಣ್ಣ ಹಚ್ಚಿ ವೇಷಭೂಷಣವನ್ನು ಧರಿಸುತ್ತಾರೆ. ತುಳುವಿನಲ್ಲಿ ಇದನ್ನು ತಾಸೆ ತಂಡ ಎಂದು ಕರೆಯುತ್ತಾರೆ.
ಈ ಪಡೆಗಳು ತಮ್ಮ ಬ್ಯಾಂಡ್ಗಳ ಡ್ರಮ್ ಬೀಟ್ಗಳೊಂದಿಗೆ ಪಟ್ಟಣಗಳ ಬೀದಿಗಳಲ್ಲಿ ಸಂಚರಿಸುತ್ತಾರೆ. ಅವರು ಸುಮಾರು ಹತ್ತು ನಿಮಿಷಗಳ ಕಾಲ ಬಿಡುವಿಲ್ಲದೆ ಪ್ರದರ್ಶನವನ್ನು ನೀಡುತ್ತಾರೆ. ದೇವಿಯ ನೆಚ್ಚಿನ ಪ್ರಾಣಿ ಹುಲಿಯಾದ್ದರಿಂದ ಪಿಲಿನಲಿಕೆ ಶಾರದಾ ದೇವಿಯನ್ನು ಗೌರವಿಸಲು ನಡೆಸಲಾಗುತ್ತದೆ.
ಗೋಕರ್ಣನಾಥೇಶ್ವರ ದೇವಾಲಯದ ದೇವಿ ವಿಗ್ರಹಗಳು:
ನವರಾತ್ರಿಯ ಸಮಯದಲ್ಲಿ ಶಾರದಾ ದೇವಿಯೊಂದಿಗೆ ವಿವಿಧ ಮೂರ್ತಿಗಳನ್ನು ಸ್ವರ್ಣ ಕಲಾಮಂಟಪದಲ್ಲಿ ಸ್ತೋತ್ರಗಳ ಪಠಣ ಹಾಗೂ ವೈದಿಕ ಆಚರಣೆಗಳ ನಡುವೆ ಪ್ರತಿಷ್ಠಾಪಿಸುತ್ತಾರೆ. ಒಂಬತ್ತು ದಿನಗಳ ಆಚರಣೆಗಳಲ್ಲಿ, ಮಹಾಗಣಪತಿ ಮತ್ತು ನವದುರ್ಗೆಯರ ಜೊತೆಗೆ ಶಾರದಾ ದೇವಿಯ ಅಲಂಕೃತ ವಿಗ್ರಹಗಳನ್ನು ಪೂಜಿಸಲಾಗುತ್ತದೆ.
ನವರಾತ್ರಿ ನವದುರ್ಗೆಯರು:
ಶಾರದಾ ದೇವಿಯ, ಮಹಾಗಣಪತಿ, ಆದಿ ಶಕ್ತಿ ದೇವಿಯನ್ನು ವಿಶೇಷವಾಗಿ ಪ್ರತಿಷ್ಠಾಪಿಸಲಾಗುತ್ತದೆ. ಜೊತೆಗೆ ನವದರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ, ಕೂಷ್ಮಾಂಡಾಯಿನಿ, ಸ್ಕಂದಮಾತಾ, ಕಾತ್ಯಾಯಿನಿ, ಕಾಳರಾತ್ರಿ, ಮಹಾಗೌರಿ ಹಾಗೂ ಸಿದ್ಧಿದಾತ್ರಿ ಯನ್ನು ಪ್ರತಿಷ್ಠಾಪಿಸಿರುತ್ತಾರೆ,
ಸಂಭ್ರಮದ ಮೆರವಣಿಗೆ:
ವಿಜಯ ದಶಮಿ ದಿನ ಸಂಜೆ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಿಂದ ಮೆರವಣಿಗೆ ಪ್ರಾರಂಭವಾಗಿ ಮರುದಿನ ಮುಂಜಾನೆ ನಡೆಯುತ್ತದೆ. ಮಹಾಗಣಪತಿ ಮತ್ತು ಶಾರದೆಯ ಜೊತೆಗೆ ನವದುರ್ಗೆಯರ ವಿಗ್ರಹಗಳನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತದೆ. ಈ ಮೆರವಣಿಗೆಯಲ್ಲಿ ಪುಷ್ಪಗಳು, ಅಲಂಕಾರಿಕ ಛತ್ರಿಗಳು, ಬ್ಯಾಂಡ್ಗಳು, ಚೆಂಡೆ ಮತ್ತು ಸಾಂಪ್ರದಾಯಿಕ ನೃತ್ಯ, ಜಾನಪದ ನೃತ್ಯಳ, ಯಕ್ಷಗಾನ ಪಾತ್ರಗಳು, ಡೊಳ್ಳು ಕುಣಿತ, ಪಿಲಿನಲಿಕೆ ಮತ್ತು ಇತರ ಸಾಂಪ್ರದಾಯಿಕ ಕಲಾ ಪ್ರಕಾರಗಳು ಇರುತ್ತದೆ. ಕುದ್ರೋಳಿ, ಮಣ್ಣಗುಡ್ಡ, ಲೇಡಿಹಿಲ್, ಲಾಲ್ಬಾಗ್, ಕೆಎಸ್ ರಾವ್ ರಸ್ತೆ, ಹಂಪನಕಟ್ಟೆ, ಕಾರ್ ಸ್ಟ್ರೀಟ್ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಈ ಮೆರವಣಿಗೆ ಸಾಗುತ್ತದೆ.
ದಸರಾ ಸಂಭ್ರಮದ ಇತರ ಸ್ಥಳಗಳು:
ಮಂಗಳೂರು ದಸರಾವನ್ನು ಮಂಗಳಾದೇವಿ ದೇವಸ್ಥಾನ, ಪೊಳಲಿ ರಾಜರಾಜೇಶ್ವರಿ ದೇವದ್ಥಾನ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಮುಲ್ಕಿ ಬಪ್ಪನಾಡು ದೇವಸ್ಥಾನ, ಉರ್ವ ಮಾರಿಯಮ್ಮ ದೇವಸ್ಥಾನ, ಶ್ರೀ ವೆಂಕಟ್ರಮಣ ದೇವಸ್ಥಾನ, ಶ್ರೀ ಜೋಡುಮುತ್ತು ಮುಂತಾದ ದೇವಸ್ಥಾನಗಳಲ್ಲಿ ಆಚರಣೆಯನ್ನುಆಯೋಜಿಸುತ್ತಾರೆ.
ಬಹು ವಿಶೇಷ ಮಂಗಳಾದೇವಿ ದಸರಾ:
ಮಂಗಳಾದೇವಿ ದೇವಸ್ಥಾನ, ಬೋಳಾರ್ ಭಾರತದಾದ್ಯಂತ ಇರುವ ಭಕ್ತರನ್ನು ಆಕರ್ಷಿಸುತ್ತದೆ. ಮಂಗಳೂರು ಎಂಬ ಹೆಸರು ಮಂಗಳಾದೇವಿಯಿಂದ ಬಂದಿದೆ. ಮಂಗಳಾದೇವಿ ದೇವಸ್ಥಾನವು ಜಾನಪದ, ಸಂಗೀತ, ನಾಟಕ, ವಿವಿಧ ವಿಷಯಗಳ ನಾಟಕಗಳು, ಮತ್ತು ಭಕ್ತಿಗೀತೆಗಳಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುತ್ತದೆ. ಮಹಾನವಮಿ ಎಂದು ಕರೆಯಲ್ಪಡುವ ಒಂಬತ್ತನೇ ದಿನದಂದು ಭಕ್ತರು ರಥೋತ್ಸವದಲ್ಲಿ ಭಾಗವಹಿಸುತ್ತಾರೆ. ಅಲಂಕೃತ ದೇವಿಯನ್ನು ಭವ್ಯ ರಥದ ಮೇಲೆ ಕೂರಿಸಿದ ನಂತರ ರಥವನ್ನು ಎಳೆಯಲಾಗುತ್ತದೆ.
DAKSHINA KANNADA
ಸಿಎಂ ರಾಜಿನಾಮೆ ನೀಡಬೇಕು; ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ
ಮಂಗಳೂರು: ಸಿದ್ದರಾಮಯ್ಯ 14 ಸೈಟ್ ವಾಪಾಸ್ ಕೊಟ್ಟಿರುವುದು ಅವರಿಗೆ ಅವರ ತಪ್ಪಿನ ಅರಿವಾದಂತೆ ಇದೆ. ಅವರು ಬದುಕುಳಿಯುವ ಕೊನೆಯ ಯತ್ನವಾಗಿ ಕಾಣುತ್ತದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯಿಸಿದ್ದಾರೆ.
ಸಂವಿಧಾನದ ಆಶಯಗಳಿಗೆ ಗೌರವ ನೀಡಬೇಕು ಕೇವಲ ಕುರ್ಚಿಗೆ ಅಂಟಿಕೊಂಡಿರುವುದಲ್ಲ . ಸಿದ್ದರಾಮಯ್ಯ ಕೇವಲ ಕುರ್ಚಿಗಾಗಿಯೇ ಇರುವಂತೆ ಮಾಡುತ್ತಾರೆ ಎಂದು ಹೇಳಿದರು.
ಆಮಿಷಗಳಿಗೆ ಜನರನ್ನು ಒಳಪಡಿಸುತ್ತಾ ರಾಜ್ಯವನ್ನೇ ದಿವಾಳಿ ಹಂತಕ್ಕೆ ಸಿದ್ದರಾಮಯ್ಯ ತಂದಿಟ್ಟಿದ್ದಾರೆ. ಕಿಂಚಿತ್ತೂ ಆಭಿವೃದ್ಧಿ ಕಾಣುತ್ತಿಲ್ಲ. ವಾಲ್ಮೀಕಿ ನಿಗಮದಿಂದಲೇ ನೇರವಾಗಿ ಲೋಕಸಭಾ ಚುನಾವಣೆಗೆ ಖರ್ಚು ಮಾಡಿದ್ದಾರೆ. ದಲಿತರ ಜಾಗವನ್ನು ಕಬಳಿಸಿ, ಪತ್ನಿ ಹೆಸರಿಗೆ ಸೈಟ್ ಮಾಡಿಕೊಂಡಿದ್ದಾರೆ ಎಂದರು.
BANTWAL
ಬಸ್ಸಿನಿಂದ ಪರಿಸರ ಮಾಲಿನ್ಯ; ಸಾರ್ವಜನಿಕರ ಆಕ್ರೋಶ
ಬಂಟ್ವಾಳ: ಮಂಗಳೂರು ವಿಭಾಗಕ್ಕೆ ಸೇರಿದ ಕೆಎಸ್ಆರ್ಟಿಸಿ ಬಸ್ಸೊಂದು ಮಂಗಳೂರು – ಧರ್ಮಸ್ಥಳ ಸಂಚರಿಸುವ ವೇಳೆಯಲ್ಲಿ ಜೀವಕ್ಕೆ ಹಾಗೂ ಪರಿಸರಕ್ಕೆ ಹಾನಿಕಾರಕವಾದ ಕಪ್ಪು ಹೊಗೆಯನ್ನು ಹೊರ ಹಾಕುತ್ತಿದ್ದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಕೆ.ಎಸ್.ಆರ್.ಟಿ.ಸಿ ಸಂಸ್ಥೆಯು ಸರಿಯಾದ ನಿರ್ವಹಣೆ ಇಲ್ಲದ ಬಸ್ಸುಗಳನ್ನು ರಸ್ತೆಯಲ್ಲಿ ಓಡಿಸುತ್ತಿದ್ದು, ಇದರಿಂದ ಜನರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರವೇ ನಿವಾರಿಸಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
ಕಪ್ಪು ಹೋಗೆ ಹೊರ ಸೂಸುವ ಬಸ್ಸಿನ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಸರ್ಕಾರದ ವಿರುದ್ಧ ಕಿಡಿ ಕಾರುತ್ತಿದ್ದಾರೆ.
- DAKSHINA KANNADA7 days ago
ಮಂಗಳೂರು : ಪಾನಿಪುರಿ ಸವಿಯುತ್ತಿದ್ದ ವಿದ್ಯಾರ್ಥಿನಿಯ ಮೊಬೈಲ್ ಎಗರಿಸಿದ ಭೂಪ!
- DAKSHINA KANNADA6 days ago
ಕೆಬಿಬಿಯಲ್ಲಿ ಮಿಂಚಿದ ಮಂಗಳೂರು ಬೆಡಗಿ; ಕೊನೆಗೂ ನನಸಾದ ಅಪೂರ್ವ ಶೆಟ್ಟಿ ಕನಸು
- DAKSHINA KANNADA7 days ago
ಮೂಡುಬಿದಿರೆ: ಕಾರು ಢಿಕ್ಕಿ ಹೊಡೆದು ವಿದ್ಯಾರ್ಥಿ ಸಾ*ವು
- LATEST NEWS6 days ago
ಪುತ್ತೂರು: ಸಾಲ ವಸೂಲಿಗೆಂದು ಮನೆಗೆ ಬಂದ ಬ್ಯಾಂಕ್ ಸಿಬ್ಬಂದಿಗೆ ಪಿಸ್ತೂಲ್ ತೋರಿಸಿ ಬೆದರಿಸಿದ ತಂದೆ ಮಗ