LATEST NEWS
ಬಿಗ್ಬಾಸ್ನಲ್ಲಿ ಸೆಕ್ಸ್ ನಡೆಯುತ್ತಿದೆ: ಗಂಭೀರ ಆರೋಪ ಮಾಡಿದ ಸ್ಪರ್ಧಿ
ಮುಂಬೈ: ಹಿಂದಿ ಆವೃತ್ತಿಯ ಬಿಗ್ಬಾಸ್ ಸ್ಪರ್ಧಿಗಳು ತಮ್ಮ ಕಚ್ಚಾಟದ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ದೊಡ್ಡ ಮನೆಯಿಂದ ಹೊರಬಂದಿರುವ ಸ್ಪರ್ಧಿ ಉರ್ಫಿ ಜಾವೇದ್, ಅಲ್ಲಿ ನಡೆಯುತ್ತಿದ್ದ ಘಟನಾವಳಿಗಳ ಬಗ್ಗೆ ಟೀಕೆಗಳ ಸುರಿಮಳೆಗೈದಿದ್ದಾರೆ.
ಹಿಂದಿ ಬಿಗ್ಬಾಸ್ ಕಾರ್ಯಕ್ರಮದ ಬಗ್ಗೆ ಸ್ಪರ್ಧೆಯಿಂದ ಹೊರಬಿದ್ದಿರುವ ಉರ್ಫಿ ಜಾವೇದ್ ಗಂಭೀರ ಆರೋಪ ಮಾಡಿದ್ದಾರೆ.
ಹಿಂದಿ ಆವೃತ್ತಿಯ ಬಿಗ್ಬಾಸ್ ಸ್ಪರ್ಧಿಗಳು ತಮ್ಮ ಕಚ್ಚಾಟದ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ದೊಡ್ಡ ಮನೆಯಿಂದ ಹೊರಬಂದಿರುವ ಸ್ಪರ್ಧಿ ಉರ್ಫಿ ಜಾವೇದ್, ಅಲ್ಲಿ ನಡೆಯುತ್ತಿದ್ದ ಘಟನಾವಳಿಗಳ ಬಗ್ಗೆ ಟೀಕೆಗಳ ಸುರಿಮಳೆಗೈದಿದ್ದಾರೆ.
‘ಬಿಗ್ಬಾಸ್ ಮನೆಯಲ್ಲಿ ಕ್ಯಾಮರಾ ಮುಂದೆಯೇ ಸೆಕ್ಸ್ ನಡೆಯುತ್ತಿದೆ’ ಎಂದು ಮನೆಯಿಂದ ಹೊರ ಬಂದಿರುವ ಉರ್ಫಿ ಜಾವೇದ್ ಗಂಭೀರ ಆರೋಪ ಮಾಡಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.
‘ಬಿಗ್ ಬಾಸ್ ಒಟಿಟಿ ಕೆ ಘರ್ ಮೇ ಸೆಕ್ಸ್ ಹೋ ಚುಕಾ ಹೈ ಕ್ಯಾಮೆರಾ’ ಎಂದು ಹೇಳಿಕೊಂಡಿದ್ದಾರೆ. ಈ ವೇಳೆ ಇತರೆ ಸ್ಪರ್ಧಿಗಳು ನೀನು ಏನು ಹೇಳುತ್ತಿದ್ದೀಯಾ ಎಂದು ಪ್ರಶ್ನಿಸಿರುವುದನ್ನು ಬಿಗ್ಬಾಸ್ ಮನೆಯ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯದಲ್ಲಿ ಕಾಣಬಹುದು.
ಬಿಗ್ಬಾಸ್ ಮನೆಯಲ್ಲಿ ಸಂಭೋಗ ನಡೆಯುತ್ತದೆ ಎಂದು ಆಕೆ ಪುನರಾವರ್ತಿಸಿದ ನಂತರ ಇದನ್ನು ಕೇಳಿ ಆಘಾತಕ್ಕೊಳಗಾದ ಮತ್ತೋರ್ವ ಸ್ಪರ್ಧಿ ಪ್ರತೀಕ್ ಸೆಹಜ್ಪಾಲ್, ಏನು ಮಾತನಾಡುತ್ತಿದ್ದೀರಿ? ಎಂದು ಉರ್ಫಿಯನ್ನು ಕೇಳಿದರು.
ಆಗ, ‘ಪ್ರತೀಕ್ ಸೋ ರಹೇ ಕ್ಯಾ? ಜಬ್ ಸೆಕ್ಸ್ ಹೋ ರಹಾ ಥಾ ಕ್ಯಾಮರಾ’ ಎಂದು ಪ್ರಶ್ನಿಸಿದ್ದಾರೆ.ಉರ್ಫಿ ತನ್ನ ತಮಾಷೆಯ ನಟನೆ ಮತ್ತು ಜನರನ್ನು ಅನುಕರಿಸುವ ಮೂಲಕ ಪ್ರೇಕ್ಷಕರನ್ನು ರಂಜಿಸಲು ಪ್ರಯತ್ನಿಸಿದ್ದರು.
ಆದರೂ ಮೊದಲ ವಾರದಲ್ಲಿ ಕಡಿಮೆ ಮತಗಳನ್ನು ಪಡೆದಿದ್ದು ಬಿಗ್ಬಾಸ್ ಮನೆಯಿಂದ ಹೊರಬಿದ್ದರು.
https://twitter.com/bb_live_feeds/status/1426519804513456134?s=20
DAKSHINA KANNADA
ದೇವಸ್ಥಾನದಲ್ಲಿ ಚಪ್ಪಲಿ ಕಳೆದುಹೋದರೆ ಒಳ್ಳೆಯದಾ..? ಕೆಟ್ಟದ್ದಾ..?
ಸಾಮಾನ್ಯವಾಗಿ ಎಲ್ಲರೂ ಚಪ್ಪಲಿ ತೆಗೆದುಕೊಳ್ಳುವಾಗ ಕೊಟ್ಟಂತಹ ಗಮನವನ್ನ ಅದನ್ನು ತೆಗೆದುಕೊಂಡು ಆದ ಮೇಲೆ ಯಾರೂ ಅದನ್ನ ಗಮನಕ್ಕೆ ತೆಗೆದುಕೊಳ್ಳುವುದಿಲ್ಲ. ಚಪ್ಪಲಿಯನ್ನ ಇನ್ನು ಮುಂದೆ ನಿರ್ಲಕ್ಷ್ಯ ಮಾಡಬೇಡಿ. ಚಪ್ಪಲಿ ಸಹ ನಮ್ಮ ನಸೀಬನ್ನ ಬದಲಿಸಿ ನಮ್ಮ ಜೀವನದಲ್ಲಿ ಬದಲಾವಣೆಯನ್ನು ತರಬಲ್ಲದು.
ನಾವು ಫ್ಯಾಶನೇಬಲ್ ಆದ್ರೆ ಮಾತ್ರ ಬೇರೆಯವರ ಗಮನವನ್ನು ನಮ್ಮ ಕಡೆಗೆ ಸೆಳೆಯಬಹುದು ಅಂತ ತುಂಬಾ ಜನ ಅಂದುಕೊಂಡು ಇರುತ್ತಾರೆ. ಫ್ಯಾಶನೇಬಲ್ ಬಟ್ಟೆ, ಟ್ರೆಂಡೀ ಶೂ ಅಥವಾ ಚಪ್ಪಲಿಗಳಿರಬಹುದು ಅಥವಾ ಫ್ಯಾಶನೇಬಲ್ ಜ್ಯುವೆಲ್ಲರಿ ಆಗಿರಬಹುದು ಈ ರೀತಿ ಟ್ರೆಂಡಿಯಾಗಿ ಡ್ರೆಸ್ ಮಾಡಿದ್ರೆ ಎಲ್ಲರ ಗಮನ ನಮ್ಮ ಹತ್ತಿರ ತಿರುಗುತ್ತೆ. ಭಾರತೀಯ ಸಂಸ್ಕೃತಿಯಲ್ಲಿ ಮನೆಯೊಳಗೆ ಚಪ್ಪಲಿಯನ್ನು ಹಾಕಿಕೊಂಡು ಹೋಗುವುದು ಸೂಕ್ತವಲ್ಲ. ನಾವು ಚಪ್ಪಲಿಯನ್ನು ಹೊರಗಡೆ ಎಲ್ಲಿಗೂ ಹೋಗುವಾಗಲು ಹಾಕುತ್ತೇವೆ.
ಹೀಗೆ ದೇವಸ್ಥಾನಕ್ಕೆ ಹೋಗುವಾಗ ಚಪ್ಪಲಿಯನ್ನು ಹಾಕಿಕೊಂಡು ಹೋಗುತ್ತೇವೆ. ಕೆಲವೊಂದು ದೊಡ್ಡ ದೊಡ್ಡ ದೇವಸ್ಥಾನಗಳಲ್ಲಿ ತುಂಬಾ ಭಕ್ತಾಧಿಗಳು ಹೋಗುತ್ತಾ ಬರುತ್ತಾ ಇರುತ್ತಾರೆ. ಅಲ್ಲಿ ಚಪ್ಪಲಿಗೆಂದೇ ಸ್ಟ್ಯಾಂಡ್ ಇಟ್ಟಿರುತ್ತಾರೆ. ನಾವು ಹಣ ಕೊಟ್ಟು ನಮ್ಮ ಚಪ್ಪಲಿಯನ್ನ ಅಲ್ಲಿ ಕಾಪಾಡಬಹುದು. ಆದ್ರೆ ಕೆಲವರು ಚಪ್ಪಲಿಯನ್ನು ಹೊರಗಡೇ ಇಟ್ಟು ಹೋಗುತ್ತಾರೆ. ದೇವರ ದರ್ಶನ ಮಾಡಿ ಹೊರಗೆ ಬರುವಾಗ ಆ ಚಪ್ಪಲಿ ಕಾಣುವುದಿಲ್ಲ. ಕೆಲವೊಮ್ಮೆ ರಶ್ ಇರಬೇಕಾದ್ರೆ ತಿಳಿಯದೇ ಜನರು ಹಾಕಿಕೊಂಡು ಹೋಗುತ್ತಾರೆ. ಕೆಲವೊಮ್ಮೆ ಬೇಕುಬೇಕಂತಲೆ ಅದನ್ನು ಕದ್ದುಕೊಂಡು ಹೋಗುತ್ತಾರೆ. ದೇವಸ್ಥಾನಗಳಲ್ಲಿ ಚಪ್ಪಲಿ ಕಳುವಾದ್ರೆ ಅದು ಒಳ್ಳೆಯದೇ ಎನ್ನುವ ನಂಬಿಕೆ ಕೂಡ ಇದೆ.
ಚಪ್ಪಲಿ ಹಾಳತ್ತಾಗಿದ್ದರೆ ಕಳೆದು ಹೋದರೂ ಬೇಜಾರಿಲ್ಲ. ಆದರೆ ಹೊಸತ್ತಾದರೆ ತುಂಬಾ ಬೇಜಾರ್ ಆಗುತ್ತದೆ. ಇಂತ ಸಮಯದಲ್ಲಿ ಕೆಲವರು ಹೇಳುತ್ತಾರೆ ಚಪ್ಪಲಿ ಕಳೆದು ಹೋದರೆ ನಿನ್ನ ದಾರಿದ್ರ್ಯ ಹೋಯಿತು. ಇನ್ನು ಮುಂದಕ್ಕೆ ನಿನಗೆ ಒಳ್ಳೆಯದಾಗುತ್ತದೆ ಎಂದು ಹೇಳುತ್ತಾರೆ.
ಜ್ಯೋತಿಷ್ಯ ಶಾಸ್ತ್ರದಲ್ಲಿ ಶುಭ ಚಿಹ್ನೆ:
ಚಪ್ಪಲಿ ಕಳೆದುಹೋದರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಶುಭ ಚಿಹ್ನೆ ಎಂದು ಹೇಳುತ್ತಾರೆ. ಅದರಲ್ಲೂ ವಿಶೇಷವಾಗಿ ಶನಿವಾರ ಚಪ್ಪಲಿ ಕಳೆದುಹೋದರೆ ಪಾದರಕ್ಷೆಯೊಂದಿಗೆ ನಿಮ್ಮ ಶನಿಯು ದೂರವಾಯಿತು ಎಂದು ಅರ್ಥ. ನಮ್ಮ ದೇಹದ ಭಾಗಗಳು ಗ್ರಹಗಳಿಂದ ಪ್ರಭಾವಿತವಾಗಿರುತ್ತದೆ. ಶನಿ ಚರ್ಮ ಮತ್ತು ಪಾದಗಳಲ್ಲಿ ವಾಸಿಸುತ್ತಾನೆ. ಹೀಗೆ ಪಾದರಕ್ಷೆ ಕಳುವಾದ್ರೆ ನಿಮ್ಮ ಸಮಸ್ಯೆ ದೂರವಾಯ್ತು ಎಂದು ಹೇಳುತ್ತದೆ ಜ್ಯೋತಿಷ್ಯ ಶಾಸ್ತ್ರ.
LATEST NEWS
ಇಲ್ಲಿ ಕಂಠಪೂರ್ತಿ ವೈನ್ ಕುಡಿದ್ರೂ ಫ್ರೀ! ಆದ್ರೆ ಒಂದು ಕಂಡೀಷನ್!
ಫ್ರೀ ಎಂದರೆ ಯಾರು ತಾನೇ ಬಿಡ್ತಾರೆ ಹೇಳಿ. ಫ್ರೀ ಅನ್ನುವ ಪದ ಕೇಳಿದ ಕೂಡಲೇ ಜನ ನಾ ಮುಂದು ತಾ ಮುಂದು ಅಂತ ನುಗ್ಗುತ್ತಾ ಇರುತ್ತಾರೆ. ಇನ್ನು ವೈನ್ ಫ್ರೀ ಅಂದರೆ ಬಾಯಿ ಬಿಡೋದು ಗ್ಯಾರಂಟಿನೇ. ಆದರೆ ವೈನ್ ಫ್ರೀ ಆಫರ್ ನಮ್ಮ ಭಾರತದಲ್ಲಿ ಅಲ್ವೇ ಅಲ್ಲ. ಈ ರೀತಿಯ ಆಫರ್ ಇರೋದು ಇಟಲಿ ದೇಶದಲ್ಲಿ. ಇಟಲಿಯಲ್ಲಿರುವ ರೆಸ್ಟೋರೆಂಟ್ ಒಂದರಲ್ಲಿ ಎಷ್ಟೇ ವೈನ್ ಕುಡಿದರೂ ಹಣ ಕೇಳಲ್ಲ. ಆದರೆ ರೆಸ್ಟೋರೆಂಟ್ ಮಾಲೀಕರ ಒಂದು ಕಂಡೀಷನ್ ಮಾತ್ರ ಫಾಲೋ ಮಾಡಲೇಬೇಕು. ವೈನ್ ಫ್ರೀ ಆಫರ್, ಮಾಲೀಕರ ಕಂಡೀಷನ್ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು ಈ ಸುದ್ದಿ ನೋಡಿದವರೆಲ್ಲಾ ವ್ಹಾವ್ ಎನ್ನುತ್ತಾ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಈ ರೆಸ್ಟೋರೆಂಟ್ನಲ್ಲಿ ಎಷ್ಟಾದರೂ ವೈನ್ ಕುಡಿಯಬಹುದು!
ಇಟಲಿಯಲ್ಲಿನ ವೆರೋನಾದಲ್ಲಿರುವ ಅಲ್ ಕಾಂಡೋಮಿನಿಯೊ ಹೆಸರಿನ ಇಟಾಲಿಯನ್ ರೆಸ್ಟೋರೆಂಟ್ ಗೆ ಭೇಟಿ ಕೊಡುವ ಗ್ರಾಹಕರಿಗೆ ಉಚಿತವಾಗಿ ವೈನ್ ದೊರೆಯುತ್ತದೆ. ಆದರೆ ಊಟಕ್ಕೆ ಕುಳಿತುಕೊಳ್ಳುವಾಗ ಗ್ರಾಹಕರ ಬಳಿ ಮೊಬೈಲ್ ಫೋನ್ ಗಳು ಇರಬಾರದು. ರೆಸ್ಟೋರೆಂಟ್ ಗೆ ಪ್ರವೇಶಿಸಿದ ಕೂಡಲೇ ಮೊಬೈಲ್ ಫೋನ್ ಅನ್ನು ಸಿಬ್ಬಂದಿ ಬಳಿ ಒಪ್ಪಿಸಿಬಿಡಬೇಕು.
ಮೊಬೈಲ್ ಸೈಡಿಗಿಟ್ಟು ವೈನ್ ಕುಡಿಯಿರಿ!
ಇದೇ ಉದ್ದೇಶಕ್ಕಾಗಿ ಒಂದು ಬಾಟಲ್ ವೈನ್ ಅನ್ನು ಫ್ರೀ ಆಗಿ ಕೊಟ್ಟಿರಬಹುದು ಎಂದು ಅನ್ನಿಸುತ್ತದೆ. ಆದರೆ ಕಾರಣವೇನೆಂದರೆ ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನವೇ ಸಮಸ್ಯೆ ಆಗೋಗಿದೆ. ಪ್ರತಿ 5 ಸೆಕೆಂಡ್ಗೆ ಜನರು ತಮ್ಮ ಫೋನ್ ನೋಡುತ್ತಾ ಇರುತ್ತಾರೆ. ಆದರೆ ಆಗಾಗ ಫೋನ್ ನೋಡುವ ಅವಶ್ಯಕತೆ ಜನರಿಗೆ ಇಲ್ಲ ಕಾಣಿಸುತ್ತದೆ. ಈ ರೆಸ್ಟೊರೆಂಟ್ನಲ್ಲಿ ಜನರು ಸ್ವಲ್ಪ ಕಾಲ ಮೊಬೈಲ್ ಪಕ್ಕಕ್ಕೆ ಇಟ್ಟು ವೈನ್ ಕುಡಿಯಬೇಕು. ವೈನ್ ಕುಡಿದು ಮುಗಿಸುವವರೆಗೆ ಜನರು ಮೋನ್ ಮುಟ್ಟುವಂತಿಲ್ಲ.
ಇನ್ ಸ್ಟಾಗ್ರಾಂನಲ್ಲಿ ರೆಸ್ಟೋರೆಂಟ್ ನ ಆಫರ್, ಕಂಡೀಷನ್ ಬಗ್ಗೆ ಪೋಸ್ಟ್ ವೈರಲ್ ಆಗುತ್ತಿದೆ. ಪೋಸ್ಟ್ ಗೆ ಸುಮಾರು 68000 ಮೆಚ್ಚುಗೆ ವ್ಯಕ್ತವಾಗಿದೆ. ಇದಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದರೆ, ಕೆಲವರು ತಮಾಷೆ ಸಹ ಮಾಡಿದ್ದಾರೆ.
ರೆಸ್ಟೋರೆಂಟ್ ಮಾಲೀಕರ ಈ ಕಾರ್ಯಕ್ಕೆ ಮೆಚ್ಚುಗೆ ತಿಳಿಸಿದ ನೆಟ್ಟಿಗರೊಬ್ಬರು, ಗ್ರಾಹಕರು ತಮ್ಮ ಸಮಯವನ್ನು ಆನಂದಿಸಲು ಈ ಮಾಲೀಕರು ತಮ್ಮ ಹಣವನ್ನು ವೆಚ್ಚ ಮಾಡುತ್ತಿದ್ದಾರೆ. ನಿಜಕ್ಕೂ ಮಾಲೀಕರು ಒಳ್ಳೆಯ ಮನುಷ್ಯ ಎಂದು ಪ್ರತಿಕ್ರಿಯಿಸಿದ್ದಾರೆ.
LATEST NEWS
ರಜೆಯಿದೆ ಎಂದು ಪ್ರವಾಸಕ್ಕೆ ಹೊರಟಿದ್ದೀರಾ? ಗಮನಿಸಿ, ಈ ಪ್ರವಾಸಿ ತಾಣಗಳಿಗಿದೆ ನಿರ್ಬಂಧ
ಮೈಸೂರು : ಶುಕ್ರವಾರ ಮತದಾನ ನಡೆಯಲಿದೆ. ಶನಿವಾರ ಹಾಗೂ ಭಾನುವಾರ ರಜೆ ಇರುತ್ತೆ. ಹಾಗಾಗಿ ಮೈಸೂರಿಗೆ ಪ್ರವಾಸ ಬೆಳೆಸೋಣ ಅಂತ ನೀವಂದುಕೊಂಡಿದ್ರೆ ಅದು ಸಾಧ್ಯವಿಲ್ಲ. ಯಾಕೆಂದ್ರೆ, ಮೈಸೂರಿನ ಪ್ರವಾಸಿ ತಾಣಗಳು ಏಪ್ರಿಲ್ 26 ರಂದು ಬಂದ್ ಆಗಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮತದಾನ ಹೆಚ್ಚಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಹೀಗಾಗಿ ಈ ಕ್ಷೇತ್ರದ ವ್ಯಾಪ್ತಿಯ ಮೈಸೂರು ಮೃಗಾಲಯ, ಕಾರಂಜಿ ಕೆರೆ ಸೇರಿದಂತೆ ಇತರ ಪ್ರವಾಸಿ ತಾಣಗಳನ್ನು ಬಂದ್ ಮಾಡಲು ಅಧಿಕಾರಿಗಳು ನಿರ್ಧಾರ ಕೈಗೊಂಡಿದ್ದಾರೆ. ಏಪ್ರಿಲ್ 26 ರಂದು ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.
ಚಿಕ್ಕಮಗಳೂರು ರೆಸಾರ್ಟ್ ಬುಕ್ಕಿಂಗ್ ನಿರ್ಬಂಧ
ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲೂ ಏಪ್ರಿಲ್ 26 ರಂದು ಚುನಾವಣೆ ನಡೆಯಲಿದೆ. ಹಾಗಾಗಿ ಏಪ್ರಿಲ್ 25 ಹಾಗೂ 26 ರಂದು ಹೋಂ ಸ್ಟೇ, ರೆಸಾರ್ಟ್ ಗಳಲ್ಲಿ ಬೇರೆ ಬೇರೆ ಜಿಲ್ಲೆಯ ಪ್ರವಾಸಿಗರ ಬುಕ್ಕಿಂಗ್ ಸ್ವೀಕರಿಸಬಾರದು ಎಂದು ಡಿಸಿ ಮೀನಾ ನಾಗರಾಜ್ ರೆಸಾರ್ಟ್ ಮಾಲಕರಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ : ರಿಯಾಲಿಟಿ ಶೋಗಳಲ್ಲೂ ಕಾಸ್ಟಿಂಗ್ ಕೌಚ್! ಡ್ಯಾನ್ಸಿಂಗ್ ಕ್ವೀನ್ ಬಿಚ್ಚಿಟ್ಟ ಸತ್ಯವೇನು?
ನಂದಿ ಗಿರಿಧಾಮಕ್ಕೂ ನಿರ್ಬಂಧ :
ನಂದಿ ಗಿರಿಧಾಮಕ್ಕೂ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಇತ್ತೀಚೆಗೆ ಆದೇಶ ಹೊರಡಿಸಿದೆ. ಏಪ್ರಿಲ್ 25 ಹಾಗೂ 26 ರಂದು ನಂದಿಗಿರಿಧಾಮಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
- DAKSHINA KANNADA6 days ago
ಮಂಗಳೂರು : ಬೈಕ್ಗೆ ಕಾರು ಡಿಕ್ಕಿ; ಇಹಲೋಕ ತ್ಯಜಿಸಿದ ವಿದ್ಯಾರ್ಥಿ
- DAKSHINA KANNADA6 days ago
ಸೀರೆ ಉಟ್ರೆ ಕ್ಯಾನ್ಸರ್ ಬರುತ್ತಂತೆ..! ಏನಿದು ಸೀರೆ ಕ್ಯಾನ್ಸರ್?
- DAKSHINA KANNADA7 days ago
ದಂತ ವೈದ್ಯೆಯಾಗಿ ಸೇವೆ ಆರಂಭದ ದಿನವೇ ವಿಧಿಯಾಟ..! ಯುವ ವೈದ್ಯೆ ಸಾ*ವು..!
- DAKSHINA KANNADA7 days ago
ಬಿಜೆಪಿಯಿಂದ ಬಿಲ್ಲವ ನಾಯಕ ಔಟ್..? ನಾರಾಯಣ ಗುರು ಹೈಜಾಕ್..!