Thursday, March 23, 2023

15 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ 32ರ ಮಹಿಳೆ..!

ಮುಂಬೈ: ಮಹಿಳೆಯೊಬ್ಬಳು 15 ವರ್ಷದ ಬಾಲಕನ ಮೇಲೇ ಲೈಂಗಿಕ ದೌರ್ಜನ್ಯ (Sexual Abuse) ಎಸಗಿರುವ ಘಟನೆ ಮಹಾರಾಷ್ಟ್ರದ ನಾಸಿಕ್‌ ಜಿಲ್ಲೆಯಲ್ಲಿ ನಡೆದಿದೆ.

ಈ ಸಂಬಂಧ ಮಹಿಳೆಯ ವಿರುದ್ಧ ಪೋಸ್ಕೋ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

32 ವರ್ಷದ ವಿವಾಹಿತ ಮಹಿಳೆ ಬಾಲಕನ ಕುಟುಂಬಕ್ಕೆ ಪರಿಚಯಸ್ಥಳಾಗಿದ್ದು, ಇತ್ತೀಚೆಗೆ ನಾಸಿಕ್‌ನ ಕಲ್ಯಾಣ್‌ದಲ್ಲಿರುವ ಅವರ ಮನೆಗೆ ಬಂದಿದ್ದಳು.

ಆಗಲೇ ಆಕೆಗೆ ಬಾಲಕನ ಮೇಲೆ ಪ್ರೀತಿ ಹುಟ್ಟಿದ್ದು, ಬಾಲಕನಿಗೆ ತನ್ನೊಂದಿಗೆ ದೈಹಿಕ ಸಂಬಂಧ ಇಟ್ಟುಕೊಳ್ಳುವಂತೆ ಪುಸಲಾಯಿಸಿದ್ದಾಳೆ.

ಬಾಲಕನಿಗೆ 20,000 ರೂ. ಮೌಲ್ಯದ ಕಾಸ್ಲಿ ಫೋನ್ ಕೊಡಿಸಿದ್ದಾಳೆ. ಮಹಿಳೆಯು ಬಾಲಕನ ಮನೆಯಿಂದ ಹೋದ ನಂತರವೂ ಆತನಿಗೆ ಕರೆ ಮಾಡಿ ಸಂಪರ್ಕ ಬೆಳೆಸಿದ್ದಾಳೆ.

ಬಾಲಕನ ನಡವಳಿಕೆಯಲ್ಲಿ ಬದಲಾವಣೆ ಕಂಡುಬಂದ ಹಿನ್ನೆಲೆ ಪೋಷಕರು ನಿಜಾಂಶವನ್ನು ತಿಳಿದುಕೊಳ್ಳಲು ಯತ್ನಿಸಿದ್ದಾರೆ. ಶಾಲೆಯ ಶಿಕ್ಷಕರ ಸಹಾಯವನ್ನೂ ಪಡೆದುಕೊಳ್ಳಲಾಗಿದೆ. ಶಿಕ್ಷಕರು ಬಾಲಕನನ್ನು ಕರೆದು ವಿಚಾರಿಸಿದಾಗ ಆತ ನಡೆದ ವಿಚಾರ ತಿಳಿಸಿದ್ದಾನೆ.

ಈ ವಿಚಾರವಾಗಿ ಬಾಲಕನ ಪೋಷಕರು ಮಹಿಳೆಗೆ ಎಚ್ಚರಿಕೆ ನೀಡಿದ್ದು, ಸಂಪರ್ಕ ಮಾಡದಿರುವಂತೆ ತಿಳಿಸಿದ್ದಾರೆ.

ಆದರೂ ಸುಮ್ಮನಾಗದ ಮಹಿಳೆ ಬಾಲಕನನ್ನು ಸಂಪರ್ಕಿಸಿದ್ದು, ಆತನನ್ನು ಭೇಟಿಯಾಗಿರುವುದಾಗಿಯೂ ಹೇಳಲಾಗಿದೆ. ಆ ಹಿನ್ನೆಲೆ ಪೋಷಕರು ಮಹಿಳೆಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

ಕೊಲ್ಸೆವಾಡಿ ಪೊಲೀಸ್‌ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

LEAVE A REPLY

Please enter your comment!
Please enter your name here

Hot Topics

ಓಮನ್‌ನಲ್ಲಿ ಹೃದಯಾಘಾತದಿಂದ ಅನಿವಾಸಿ ಭಾರತೀಯ ಮಹಿಳೆ ಮೃತ್ಯು..!

ಓಮನ್‌ ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೇರಳ ಕೊಟ್ಟಾಯಂನ ಮಹಿಳೆ ಸೈಮಾ ಬಾಲಕೃಷ್ಣ ಮೃತ ಮಹಿಳೆಯಾಗಿದ್ದಾಳೆ.ಓಮನ್ : ಓಮನ್‌ ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೇರಳ ಕೊಟ್ಟಾಯಂನ...

ಕಲಬುರಗಿಯಲ್ಲಿ ಹಾಡು ಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ..!

ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ ಮಾಡಲಾದ ಘಟನೆ ಕಲಬುರಗಿಯ ಹಾಗರಗಾ ಕ್ರಾಸ್ ಬಳಿ ನಡೆದಿದೆ. ಮಜತ್ ಸುಲ್ತಾನ್ (35) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಲಬುರಗಿ : ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ...

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ..!

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆವರು ಜಿನೈಕ್ಯರಾಗಿದ್ದಾರೆ.ಹಾಸನ : ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ...