DAKSHINA KANNADA
ವಿದ್ಯಾರ್ಥಿನಿಗೆ ಲೈಂ*ಗಿಕ ಕಿರು*ಕುಳ; ಶಿಕ್ಷಕ ಜೈಲಿಗೆ
ಮಂಗಳೂರು: ಶಾಲಾ ಶಿಕ್ಷಕನು ವಿದ್ಯಾರ್ಥಿನಿಗೆ ಲೈಂ*ಗಿಕ ಕಿರುಕುಳ ನೀಡಿದ್ದ ಆರೋಪ ಕೇಳಿ ಬಂದಿತ್ತು. ವಾದವಿವಾದದ ಬಳಿಕ ಅರೋಪ ಸಾಬೀತಾಗಿ ಶಿಕ್ಷಕನನ್ನು ಬಂಧಿಸಲಾಗಿದೆ.
ಗುರುಗಳ ಮೇಲಿನ ಬಲವಾದ ನಂಬಿಕೆಯಿಂದ ತಂದೆ ತಾಯಿ ಹೆಣ್ಣು ಮಕ್ಕಳನ್ನು ಧೈರ್ಯದಿಂದ ಶಾಲೆಗೆ ಕಳುಹಿಸುತ್ತಾರೆ ಆದರೆ, ಅಂತಹ ಗುರುವೇ ಇಂತಹ ಹೀನಾಯ ಕೃತ್ಯ ಎಸಗಿದರೆ ಮಕ್ಕಳನ್ನು ಶಾಲೆಗೆ ಕಳುಹಿಸಲೂ ಹಿಂದೆ ಮುಂದೆ ನೋಡುವ ಸ್ಥತಿ ಬರಬಹುದು.
ಆರೋಪಿ ಶಿಕ್ಷಕನಿಗೆ 5 ವರ್ಷ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೋ ಎಫ್ಟಿಎಸ್ಸಿ-1) ಆದೇಶ ನೀಡಿದೆ.
ಮೂಲತಃ ಹತ್ಯಡ್ಕ ಅರಸಿನಮಕ್ಕಿ ಪಡ್ಡಾಯಿಬೆಟ್ಟು, ಕಲ್ಲಮುಂಡ್ಕೂರಿನಲ್ಲಿ ವಾಸವಾಗಿದ್ದ ಗುರುವ ಮೊಗೇರ ಯಾನೆ ಗುರುವ ಎಂ.ಪಿ. (49) ಶಿಕ್ಷೆಗೆ ಒಳಗಾದ ಶಾಲಾ ಶಿಕ್ಷಕ. ಆತ ವಿದ್ಯಾರ್ಥಿನಿಯರಿಗೆ ರಜೆ ಬೇಕಿದ್ದರೆ, ಪಾಠಕ್ಕೆ ಸಂಬಂಧಪಟ್ಟ ಏನಾದರೂ ಸಂದೇಹಗಳ ಕೇಳಲು ಹೋದಾಗ ಶಾಲೆಯಯಲ್ಲಿರುವ ಪ್ರತ್ಯೇಕ ಕೊಠಡಿಗೆ ಬರಲು ಹೇಳುತ್ತಿದ್ದ. ಅಲ್ಲಿ ಲೈಂ*ಗಿಕ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ವಿದ್ಯಾರ್ಥಿನಿಯರು ಶಾಲೆಯ ಮುಖ್ಯ ಶಿಕ್ಷಕರಲ್ಲಿ ದೂರು ನೀಡಿದ್ದರು.
ಇದನ್ನೂ ಓದಿ : ಪುತ್ತೂರು : ಅಪ್ರಾಪ್ತೆ ಮತ್ತು ಕಾಲೇಜ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ -ಆರೋಪಿ ನಿತೀಶ್ ರೈ ವಿರುದ್ದ ದೂರು ದಾಖಲು..!
ವಿದ್ಯಾರ್ಥಿನಿಯೊಬ್ಬಳಿಗೆ ಎರಡು ಬಾರಿ ಲೈಂ*ಗಿಕ ಕಿರುಕುಳ ನೀಡಿದ್ದು, ಆಕೆ ನೀಡಿದ ದೂರಿನಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೋ ಎಫ್ಟಿಎಸ್ಸಿ-೧) ನ್ಯಾಯಾಧೀಶರಾದ ಡಿ.ವಿನಯ್ ಸಮಗ್ರ ವಿಚಾರಣೆ ನಡೆಸಿ ಆದೇಶ ನೀಡಿದ್ದಾರೆ. ಸಂತ್ರಸ್ತೆ ಪರವಾಗಿ ವಿಶೇಷ ಸರಕಾರಿ ಅಭಿಯೋಜಕರಾದ ಸಹನಾದೇವಿ ಬೋಳೂರು ವಾದ ಮಂಡಿಸಿದ್ದರು.
DAKSHINA KANNADA
ರೈಲು ಸಂಚಾರದ ವೇಳೆ ಕೇಳಿಸಿದ ಭಾರೀ ಸದ್ದು; ಹಳಿಯಲ್ಲಿ ಜಲ್ಲಿ ರಾಶಿ ಪತ್ತೆ
ಮಂಗಳೂರು: ಮಂಗಳೂರಿನಿಂದ ಕೇರಳಕ್ಕೆ ಹೋಗುವ ಮಾರ್ಗದಲ್ಲಿ ಉಳ್ಳಾಲ ರೈಲು ನಿಲ್ದಾಣದ ಬಳಿ ರೈಲು ಹಳಿಯ ಮೇಲೆ ಜಲ್ಲಿಕಲ್ಲು ಸುರಿದಿರುವ ಘಟನೆ ಬೆಳಕಿಗೆ ಬಂದಿದೆ. ಶನಿವಾರ ತಡರಾತ್ರಿಯಲ್ಲಿ ಕೇರಳಕ್ಕೆ ತೆರಳುತ್ತಿದ್ದ ರೈಲು ಸಂಚರಿಸಿದ ವೇಳೆ ಭಾರಿ ಸದ್ದು ಕೇಳಿ ಬಂದಿತ್ತು. ಕೆಲ ಹೊತ್ತಿನ ಬಳಿಕ ಮತ್ತೊಂದು ರೈಲು ಸಂಚರಿಸುವಾಗಲೂ ಇದೇ ರೀತಿಯ ಸದ್ದು ಕೇಳಿಸಿತ್ತು.
ಸ್ಥಳೀಯರು ಈ ಸದ್ದು ಕೇಳಿ ಭೂಕಂಪ ಇರಬಹುದು ಎಂದು ಮನೆಯಿಂದ ಹೊರ ಬಂದಿದ್ದರು. ಈ ವೇಳೆ ಕೆಲವರು ರೈಲು ಹೋದ ಸಮಯದಲ್ಲಿ ಈ ಸದ್ದು ಕೇಳಿಸಿದ್ದ ಕಾರಣ ಹಳಿಯಲ್ಲಿ ತಪಾಸಣೆ ನಡೆಸಿದ್ದಾರೆ. ತಪಾಸಣೆಯ ವೇಳೆ ಹಳಿಯ ಮೇಲೆ ಜಲ್ಲಿಕಲ್ಲು ಸುರಿದಿರುವುದು ಪತ್ತೆಯಾಗಿದ್ದು, ರೈಲ್ವೇ ಪೊಲೀಸರು ಹಾಗೂ ಉಳ್ಳಾಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆಯಿಂದ ಯಾರೋ ಉದ್ದೇಶಪೂರ್ವಕವಾಗಿ ಹಳಿಗಳ ಮೇಲೆ ಜಲ್ಲಿ ಕಲ್ಲು ಸುರಿದಿರ ಬಹುದೇ ಎಂಬ ಅನುಮಾನ ವ್ಯಕ್ತವಾಗಿದೆ.
ಇತ್ತೀಚೆಗೆ ಹಲವು ರೈಲು ಅಪಘಾತಗಳು ಸಂಭವಿಸುತ್ತಿದ್ದು, ಇದೂ ಕೂಡ ಅಂತಹ ಒಂದು ಪ್ರಯತ್ನದ ಭಾಗವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ರೈಲ್ವೇ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
DAKSHINA KANNADA
ಸಂಜೀವ ಪೂಜಾರಿಯ ಹೇಳಿಕೆ ಸಮರ್ಥನೆ; ಆಯೋಜಕರಿಗೆ ಪ್ರತಿಭಾ ಕುಳಾಯಿ ಸವಾಲ್
ಮಂಗಳೂರು : ಭಜನೆಯಲ್ಲಿ ಭಾಗವಹಿಸುವ ಯುವತಿಯರ ವಿರುದ್ಧ ಹೇಳಿಕೆ ನೀಡಿದ್ದ ಪಂಜ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಪರವಾಗಿ, ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಬ್ಯಾಟಿಂಗ್ ಮಾಡಿದ್ದಾರೆ.
ಇನ್ನೊಬ್ಬರ ಮನೆಯ ಹೆಣ್ಣು ಮಕ್ಕಳನ್ನು ನೃತ್ಯ ಭಜನೆಯ ಹೆಸರಿನಲ್ಲಿ ರಸ್ತೆಯಲ್ಲಿ ಕುಣಿಸುವುದು ಎಷ್ಟು ಸರಿ? ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಇದು ಈ ಹಿಂದೆ ಇತ್ತಾ ಎಂದು ಕೇಳಿರುವ ಅವರು ಇದೊಂದು ರಾಜಕೀಯ ಉದ್ದೇಶದಿಂದ ಆರಂಭವಾದ ಆಚರಣೆ ಎಂದು ಆರೋಪಿಸಿದ್ದಾರೆ. ಹೆಣ್ಣು ಮಕ್ಕಳನ್ನು ಈ ರೀತಿ ಕುಣಿಸುವ ಯಾವೊಬ್ಬನ ಮನೆಯ ಹೆಣ್ಣು ಮಕ್ಕಳೂ ಈ ರೀತಿ ಕುಣಿಯುವುದಿಲ್ಲ. ಈ ಬಗ್ಗೆ ಮಾತಾಡುವ ಯಾವ ನಾಯಕರಾದ್ರೂ ತನ್ನ ಹೆಂಡತಿ, ತಂಗಿ ಅಥವಾ ಮಕ್ಕಳನ್ನು ಈ ರೀತಿ ಕುಣಿದಿದ್ರೆ ನನಗೆ ತೋರಿಸಲಿ ಎಂದು ಸವಾಲೆಸೆದಿದ್ದಾರೆ.
ಇದನ್ನೂ ಓದಿ : 12 ವರ್ಷಗಳಿಂದ ಹೊಟ್ಟೆಯಲ್ಲಿತ್ತು ಕತ್ತರಿ; ಮುಂದೇನಾಯ್ತು ??
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರತಿಭಾ ಕುಳಾಯಿ, ನೃತ್ಯ ಭಜನೆ ಸಹಿತ ರಾತ್ರಿ ಹೊತ್ತಿನಲ್ಲಿ ನಡೆಯುವ ಮನೆಮನೆಯ ಭಜನೆಯ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಂಜ ವಲಯ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ಅವರು ಹೇಳಿರುವ ಕೆಲ ವಿಚಾರಗಳಲ್ಲಿ ಸತ್ಯಾಂಶ ಇದೆ ಎಂದು ಈ ಮೂಲಕ ಸಮರ್ಥಿಸಿಕೊಂಡಿದ್ದಾರೆ.
DAKSHINA KANNADA
ಮೂಲ್ಕಿ : ಮನೆಯ ಅಡುಗೆ ಕೋಣೆಗೆ ಏಕಾಏಕಿ ನುಗ್ಗಿದ ಚಿರತೆ
ಮೂಲ್ಕಿ : ಮೂಲ್ಕಿಯ ಅಕ್ಕಸಾಲಿಗರ ಕೇರಿ ಬಳಿಯ ಸದಾನಂದ ಕೋಟ್ಯಾನ್ ಎಂಬವರ ಮನೆಯ ಅಡುಗೆ ಕೋಣೆಯೊಳಗೆ ಏಕಾಏಕಿ ಚಿರತೆ ನುಗ್ಗಿದ ಘಟನೆ ಸಂಭವಿಸಿದೆ. ಮೂಡುಬಿದಿರೆ ವಲಯ ಅರಣ್ಯ ಅಧಿಕಾರಿಗಳು ಸಕಾಲದಲ್ಲಿ ಕಾರ್ಯಾಚರಣೆ ನಡೆಸಿ ಬೋನಿನ ಮೂಲಕ ಚಿರತೆಯನ್ನು ಸೆರೆ ಹಿಡಿದು ಜನರ ಆತಂಕವನ್ನು ದೂರ ಮಾಡಿದರು.
ಶನಿವಾರ ರಾತ್ರಿ 9:30 ಸುಮಾರಿಗೆ ಸದಾನಂದ ಕೋಟ್ಯಾನ್ ಅವರ ಮನೆಯ ಅಡುಗೆ ಕೋಣೆಗೆ ಸುಮಾರು ಒಂದು ವರ್ಷ ಪ್ರಾಯದ ಚಿರತೆ ದಿಢೀರನೆ ನುಗ್ಗಿದೆ. ಈ ಸಂದರ್ಭ ಸದಾನಂದ ಕೋಟ್ಯಾನ್ ಅವರ ನಾಯಿ ಬೊಗಳಲು ಶುರು ಮಾಡಿದ್ದು ಸದಾನಂದ ಕೋಟ್ಯಾನ್ ಚಿರತೆಯನ್ನು ನೋಡಿ ಕಂಗಾಲಾಗಿದ್ದಾರೆ.
ಕೂಡಲೇ ಸ್ಥಳೀಯರಾದ ಭಾಸ್ಕರ್ ಕಾಂಚನ್ ಮತ್ತಿತರರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಚಿರತೆ ಹಿಡಿಯಲು ಮುಂದಾಗಿ ಅಡುಗೆ ಮನೆಯ ಮುಂಭಾಗ ಬಾಗಿಲಿಗೆ ಬೋನ್ ಅಳವಡಿಸಿದರು. ಮಧ್ಯ ರಾತ್ರಿ ಸುಮಾರು 2.30 ರ ವೇಳೆಗೆ ಚಿರತೆ ಬೋನಿನೊಳಗೆ ಬಿದ್ದಿದೆ.
ಇದನ್ನೂ ಓದಿ : ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ಹೊಸ ಸದಸ್ಯ… ಯಾರು ಗೊತ್ತಾ ??
ಚಿರತೆಯನ್ನು ನೋಡಲು ಜನರ ದಂಡೇ ಸೇರಿತ್ತು. ಅರಣ್ಯ ಇಲಾಖೆಯ ಅಧಿಕಾರಿಗಳು, ಮೂಲ್ಕಿ ಪೊಲೀಸರು ಮತ್ತು ಸಾರ್ವಜನಿಕರ ಸಹಕಾರದಿಂದ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಅದೃಷ್ಟವಶಾತ್ ಚಿರತೆ ಯಾರಿಗೂ ಯಾವುದೇ ಹಾನಿ ಮಾಡಿಲ್ಲ.
- BIG BOSS4 days ago
ಲಾಯರ್ ಜಗದೀಶ್ ಹೊರಗೆ, ಪತ್ನಿ ಒಳಗೆ: ಕಲರ್ಸ್ ಶೋನಲ್ಲಿ ಜಗದೀಶ್ ಪತ್ನಿ
- LATEST NEWS7 days ago
ಹಿರಿಯಡ್ಕ: ಉದ್ಯಮಿ ಪ್ರಸನ್ನ ಶೆಟ್ಟಿ ತೀರ್ಥಹಳ್ಳಿಯ ವಸತಿ ಗೃಹದಲ್ಲಿ ಆತ್ಮಹ*ತ್ಯೆ
- BIG BOSS2 days ago
ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ: ಬಿಗ್ ಬಾಸ್ ನಿಂದ ಹೊರಬಂದ ಜಗದೀಶ್ ಫಸ್ಟ್ ರಿಯಾಕ್ಷನ್!
- FILM5 days ago
ಖ್ಯಾತ ಹಾಸ್ಯ ನಟ ಇನ್ನಿಲ್ಲ: ಅತುಲ್ ಪರ್ಚುರೆ ವಿಧಿವಶ