Connect with us

LATEST NEWS

‘ಆಕ್ಯುಪಂಕ್ಚರ್’​ ಚಿಕಿತ್ಸೆ ನೆಪದಲ್ಲಿ ‘ಲೈಂಗಿಕ ದೌರ್ಜನ್ಯ’..! ಬೆಂಗಳೂರಿನ ‘ನಕಲಿ ವೈದ್ಯ’ನ ಜಾತಕ ಬಿಡಿಸಿದ ಸಿಸಿಬಿ..!

Published

on

ನಗರದಲ್ಲಿ ಆಕ್ಯುಪಂಕ್ಚರ್​​ ಕ್ಲಿನಿಕ್​ ತೆಗೆದು ಚಿಕಿತ್ಸೆ ಕೊಡುವ ನೆಪದಲ್ಲಿ ಬಾಲಕಿಯರು, ಯುವತಿಯರು, ಮಹಿಳೆಯರಿಗೆ ಲೈಂಗಿಕ ಕಿರುಕುಳ ಕೊಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿ ಜಾತಕ ಬಿಡಿಸಿದ್ದಾರೆ.

ಬೆಂಗಳೂರು: ನಗರದಲ್ಲಿ ಆಕ್ಯುಪಂಕ್ಚರ್​​ ಕ್ಲಿನಿಕ್​ ತೆಗೆದು ಚಿಕಿತ್ಸೆ ಕೊಡುವ ನೆಪದಲ್ಲಿ ಬಾಲಕಿಯರು, ಯುವತಿಯರು, ಮಹಿಳೆಯರಿಗೆ ಲೈಂಗಿಕ ಕಿರುಕುಳ ಕೊಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿ ಜಾತಕ ಬಿಡಿಸಿದ್ದಾರೆ. ವೆಂಕಟರಮಣ್​(57) ಬಂಧಿತ ಆರೋಪಿಯಾಗಿದ್ದಾನೆ.

ವೈದ್ಯನೇ ಅಲ್ಲದ ಆಂಧ್ರ ಮೂಲದ ವೆಂಕಟರಮಣ್ ತನ್ನ ಮನೆ ಬಳಿಯೇ 4 ವರ್ಷದ ಹಿಂದೆ ನ್ಯಾಚುರೋಪಥಿ ಮತ್ತು ಆಕ್ಯುಪಂಕ್ಚರ್​ ಕ್ಲಿನಿಕ್​ ತೆರೆದು ಚಿಕಿತ್ಸೆ ನೀಡುವ ಹೆಸರಿನಲ್ಲಿ ಮಹಿಳೆಯರ ಅಂಗಾಗಗಳನ್ನು ಮುಟ್ಟುತಿದ್ದ ಮತ್ತು ಅವರಿಗೆ ಗೊತ್ತಿಲ್ಲದೇ ವಿಡಿಯೋಗಳನ್ನು ಮಾಡುತ್ತಿದ್ದ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಯಶವಂತಪುರ, ಬಸವನಗುಡಿ ಮತ್ತು ಸಿಇಎನ್​ ಠಾಣೆಯಲ್ಲಿ ಆರೋಪಿಯ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ.

ಆಂಧ್ರಪ್ರದೇಶದ ಗುತ್ತಿ ಮೂಲದ ವೆಂಕಟರಮಣ್​ ಅಲಿಯಾಸ್​ ವೆಂಕಟ್, ಜಾಲಹಳ್ಳಿಯ ಬಿಇಎಲ್​ ಶಾಲೆ ಮತ್ತು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿ ಮಾರತ್​ಹಳ್ಳಿಯ ಪಿಟಿಲೆಟ್​ ಇಂಡಸ್ಟ್ರೀಟ್​ ಕಂಪನಿಯಲ್ಲಿ 10 ವರ್ಷ ವಾಣಿಜ್ಯ ವಿಭಾಗದ ವ್ಯವಸ್ಥಾಪಕ ಆಗಿದ್ದ.

ಇದರ ನಡುವೆ ವೈದ್ಯರೊಬ್ಬರ ಸಹಾಯದಿಂದ ಮೆಜೆಸ್ಟಿಕ್​ನಲ್ಲಿನ ಆರ್ಯುರ್ವೇದ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ವೆಂಕಟರಮಣ್​ ಭಾಗವಹಿಸಿದ್ದ.

ಆರೋಪಿ ವೆಂಕಟರಮಣ್​ ಅಲಿಯಾಸ್​ ವೆಂಕಟ್

ಈ ವೇಳೆ ಜಯನಗರ 4ನೇ ಹಂತದಲ್ಲಿ ಆಕ್ಯೂಪೈ ಇ.ಎಂ. ಇನ್​ಸ್ಟಿಟ್ಯೂಟ್​ ಬಗ್ಗೆ ಮಾಹಿತಿ ಪಡೆದು ಅಲ್ಲಿ 2 ವರ್ಷ ಕಾಲ ತರಬೇತಿ ಪಡೆದಿದ್ದ.

ಇದರ ಆಧಾರದ ಮೇಲೆ ಮನೆಯ ಬಳಿ 2018ರಲ್ಲಿ ಆಕ್ಯುಪಂಕ್ಚರ್​ ಕ್ಲಿನಿಕ್​ ತೆರೆದು ಚಿಕಿತ್ಸೆ ನೀಡಲು ಶುರು ಮಾಡಿದ್ದ.

ಕ್ಲಿನಿಕ್​ಗೆ ಬರುತ್ತಿದ್ದ ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಅವರ ಬಟ್ಟೆಗಳನ್ನು ತೆಗೆಸಿ ಅಂಗಾಂಗಗಳನ್ನು ಮುಟ್ಟುತ್ತಿದ್ದ ಮತ್ತು ಅಸಭ್ಯವಾಗಿ ವರ್ತಿಸುತ್ತಿದ್ದ.

ಈ ಬಗ್ಗೆ ರೋಗಿಗಳು ಪ್ರಶ್ನಿಸಿದರೆ ಚಿಕಿತ್ಸೆ ನೀಡುವುದು ಇದೇ ರೀತಿ ಎಂದು ಸಬೂಬು ಹೇಳಿ ಸುಮ್ಮನಾಗಿಸುತ್ತಿದ್ದ.

ರೋಗಿಗಳ ಅರೆನಗ್ನ ವಿಡಿಯೋ, ಫೋಟೋಗಳನ್ನು ಅವರಿಗೇ ಗೊತ್ತಿಲ್ಲದಂತೆ ತನ್ನ ಮೊಬೈಲ್​ನಲ್ಲಿ ರಹಸ್ಯವಾಗಿ ಸೆರೆ ಹಿಡಿದುಕೊಂಡು ವಿಕೃತಿ ಮೆರೆಯುತ್ತಿದ್ದ.

ಚಿಕಿತ್ಸೆಗೆ ಬಂದ 12 ವರ್ಷದ ಬಾಲಕಿಗೂ ವೆಂಕಟರಮಣ್​, ಚಿಕಿತ್ಸೆ ನೀಡುವ ನೆಪದಲ್ಲಿ ಆಕೆಯ ಬಟ್ಟೆ ತೆಗೆಸಿ ಅರೆನಗ್ನ ವಿಡಿಯೋ ಮತ್ತು ಫೋಟೋಗಳನ್ನು ತೆಗೆದುಕೊಂಡಿದ್ದ.

ಈ ಬಗ್ಗೆ ನೊಂದ ಪಾಲಕರು, ಬಸವನಗುಡಿ ಮಹಿಳಾ ಠಾಣೆಗೆ ದೂರು ನೀಡಿದ್ದರು.

ಎಂಟು ತಿಂಗಳ ಹಿಂದೆ ಮಹಿಳೆಯೊಬ್ಬರು ಬಲಗಾಲು ಊದಿಕೊಂಡಿದ್ದ ಕಾರಣ ಚಿಕಿತ್ಸೆಗೆಂದು ವೆಂಕಟರಮಣ್​ ಕ್ಲಿನಿಕ್​ಗೆ ಹೋಗಿದ್ದರು.

20 ಬಾರಿ ಚಿಕಿತ್ಸೆ ಪಡೆದಿದ್ದರು. ಇದರಲ್ಲಿ ಐದು ಬಾರಿ ಕ್ಲಿನಿಕ್​ಗೆ ಮಹಿಳೆಯ ಪತಿ ಹೋಗಿರಲಿಲ್ಲ. ಈ ವೇಳೆ ಕಾಲಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಅವರ ಬಟ್ಟೆ ತೆಗೆಸಿ ಚಿಕಿತ್ಸೆ ಕೊಡಲು ಮುಂದಾದಾಗ ಮಹಿಳೆ ಪ್ರಶ್ನಿಸಿದ್ದರು.

ಅದಕ್ಕೆ ನಿಮ್ಮ ಪತಿಗೆ ವಿಷಯ ತಿಳಿಸಿದ್ದೇನೆ ಎಂದು ಸುಳ್ಳು ಹೇಳಿ ಅವರ ಅರೆನಗ್ನ ವಿಡಿಯೋ ಮಾಡಿಕೊಂಡಿದ್ದ.

ಇದಾದ ಕೆಲ ತಿಂಗಳ ಬಳಿಕ ಮತ್ತೊಬ್ಬ ಮಹಿಳೆ ಹೋದಾಗ ಅವರಿಗೆ ಸಬೂಬು ಹೇಳಿ ಬಟ್ಟೆ ತೆಗೆಸಿ ಚಿಕಿತ್ಸೆ ನೀಡುವ ನೆಪದಲ್ಲಿ ಅರೆನಗ್ನ ವಿಡಿಯೋ ಮಾಡುತ್ತಿದ್ದಾಗ ಸಂತ್ರಸ್ತೆ ನೋಡಿದ್ದಾರೆ.

ತಕ್ಷಣ ವೆಂಕಟರಮಣ್​ನ ಮೊಬೈಲ್​ ತೆಗೆದುಕೊಂಡು ಪರಿಶೀಲನೆ ನಡೆಸಿದಾಗ ಹಲವು ಅಶ್ಲೀಲ ವಿಡಿಯೋ ಇರುವುದು ಗೊತ್ತಾಗಿದೆ.

ಬಂಧನ ಭೀತಿಯಲ್ಲಿದ್ದ ಆತ ಆಂಧ್ರ ಪ್ರದೇಶಕ್ಕೆ ಪರಾರಿಯಾಗಿ ತಲೆ ಮರೆಸಿಕೊಂಡಿದ್ದ. ಸಿಸಿಬಿಯ ಮಹಿಳಾ ಸಂರಕ್ಷಣಾ ದಳ ಕಾರ್ಯಾಚರಣೆ ನಡೆಸಿ ಆಂಧ್ರಪ್ರದೇಶದ ಗುತ್ತಿ ಬಳಿ ಆರೋಪಿಯನ್ನು ಬಂಧಿಸಿ ಬೆಂಗಳೂರಿಗೆ ಕರೆ ತಂದಿದ್ದಾರೆ.

DAKSHINA KANNADA

ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನ-ಇಬ್ಬರು ಅರೆಸ್ಟ್..!

Published

on

ಉಳ್ಳಾಲ: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಯನ್ನು ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಹೊರವಲಯದ ಉಳ್ಳಾಲ ಸಮೀಪದ ಸಿಗ್ರೌಂಡ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಸ್ತಿಕಟ್ಟೆ ಆಝಾದನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪುರ ದ ಸಮೀರ್ ಎಂಬವರನ್ನು ಬಂಧಿಸಲಾಗಿದೆ.

ಈ ಇಬ್ಬರು ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ 14ಗ್ರಾಂ ಎಂಡಿಎಂಎ ಮಾರಾಟ ಮಾಡಲು ಯತ್ನಿಸುವ ಸಂದರ್ಭ ಮಾಹಿತಿ ಪಡೆದ ಉಳ್ಳಾಲ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಗಳನ್ನು ಬಂಧಿಸಿ, 14 ಗ್ರಾಂ ಎಂಡಿಎಂಎ ಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಳೆದ ಎರಡು ದಿನಗಳ ಹಿಂದಷ್ಟೇ ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಬಳಿಯಿಂದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.

ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ, ಪಿಎಸ್ಐ ಶೀತಲ್ ಹಾಗೂ ಸಿಬ್ಬಂದಿಗಳಾದ ರಂಜಿತ್, ಅಕ್ಬರ್, ಅಶೋಕ್, ಮಂಜು, ವೆಂಕಟೇಶ್ ಭಾಗವಹಿಸಿದ್ದರು.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.

Continue Reading

bangalore

‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿ ರಿಲೀಸ್ ಡೇಟ್ ಚೇಂಜ್…!

Published

on

ರಕ್ಷಿತ್ ಶೆಟ್ಟಿ ನಟನೆಯ ಸಪ್ತ ಸಾಗರದಾಚೆ ಎಲ್ಲೋ ಸಿನೆಮಾದ ಸೈಡ್ ಬಿ ಅಕ್ಟೋಬರ್​ 20ರ ಬದಲಿಗೆ ಅಕ್ಟೋಬರ್​ 27ರಂದು ರಿಲೀಸ್​ ಆಗಲಿದೆ.

 

ರಕ್ಷಿತ್ ಶೆಟ್ಟಿ ನಟಿಸಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತೆಲುಗಿನಲ್ಲೂ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದ್ದು ಚಿತ್ರತಂಡ ಮೊದಲೇ ಘೋಷಿಸಿದಂತೆ ಅಕ್ಟೋಬರ್ 20ಕ್ಕೆ ಬಿಡುಗಡೆ ಆಗಬೇಕಿತ್ತು.

ಆದ್ರೆ ಅಕ್ಟೋಬರ್ 20ಕ್ಕೆ ಸಪ್ತ ಸಾಗರದಾಚೆ ಸಿನೆಮಾ ರಿಲೀಸ್ ಆಗುತ್ತಿಲ್ಲ.

ಸೈಡ್ ಬಿ ಪಾರ್ಟ್ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿದ್ದರು. ಭಾರೀ ಬಜೆಟ್ ಚಿತ್ರಗಳು, ಸ್ಟಾರ್ ನಟರ ಚಿತ್ರಗಳು, ಪರಭಾಷೆಯ ಚಿತ್ರಗಳ ಹಾವಳಿಯಿಂದಾಗಿ ಚಿತ್ರ ಬಿಡುಗಡೆಯ ದಿನಾಂಕ ಬದಲಾಗಿದೆ.

ಹೀಗಾಗಿ ಚಿತ್ರತಂಡ ಅಕ್ಟೋಬರ್ 27ಕ್ಕೆ ಪಾರ್ಟ್ ಬಿ ರಿಲೀಸ್ ಮಾಡುವ ಘೋಷಣೆಯನ್ನು ಮಾಡಿದೆ.

ಹೌದು ..ಅಕ್ಟೋಬರ್​ 20ರ ಬದಲಿಗೆ ಅಕ್ಟೋಬರ್​ 27ರಂದು ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ರಿಲೀಸ್​ ಆಗಲಿದೆ.

ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ತೆಲುಗು ನೆಲದಲ್ಲೂ ಸದ್ದು ಮಾಡಿದೆ. ಸ್ಯಾಂಡಲ್‌ವುಡ್‌ನಲ್ಲಿ ಕಮಾಲ್ ಮಾಡಿದ ಈ ಸಿನಿಮಾ, ಈಗ ತೆಲುಗಿನಲ್ಲೂ ಅತ್ಯುತ್ತಮ ಪ್ರತಿಕ್ರಿಯೆನ್ನು ಕಂಡಿದೆ.

ಹೇಮಂತ್ ನಿರ್ದೇಶಿಸಿದ ದೃಶ್ಯ ಕಾವ್ಯಕ್ಕೆ ಕನ್ನಡಿಗರು ಫಿದಾ ಆಗಿದ್ದಾರೆ. ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದಾರೆ.

ಫೈನಲಿ ಜನ ಕಾತುರದಿಂದ ಕಾಯುತ್ತಿರುವ ಸಪ್ತ ಸಾಗರದಾಚೆ ಸಿನೆಮಾದ ಪಾರ್ಟ್ ಬಿ ಅಕ್ಟೋಬರ್ 27ರಂದು ಅದ್ದೂರಿಯಾಗಿ ಬಿಡುಗಡೆಗೆ ಸಿದ್ದವಾಗಿದೆ.

 

Continue Reading

DAKSHINA KANNADA

ಮನೆಯ ಯಜಮಾನನ್ನು ಕಟ್ಟಿ ಹಾಕಿ ನಗ, ನಗದು ದರೋಡೆ- 6 ಜನ ಬಂಧನ..!

Published

on

ಪುತ್ತೂರು: ಮನೆ ಬಾಗಿಲು ಮುರಿದು ಮನೆಯೊಳಗೆ ನುಗ್ಗಿದ ದರೋಡೆಕೋರರ ತಂಡವೊಂದು ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಡಗನ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ಸೆ. 7ರಂದು ನಡೆದಿದ್ದು, ಇದೀಗ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸುಧೀರ್ ಪೆರುವಾಯಿ, ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ಪಚ್ಚಂಬಳ ರವಿ, ಕಿರಣ್, ವಸಂತ, ಫಸಲ್, ನಿಝಾರ್ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಕ್ರಿಮಿನಲ್ ಹಿನ್ನಲೆಯುಳ್ಳ ಆರೋಪಿಗಳಾಗಿದ್ದಾರೆ.

ಪಚ್ಚಂಬಳ ರವಿಯು ಮಂಗಳೂರಿನ ತಾಲೂಕು ಪಂಚಾಯತ್ ಅಧ್ಯಕ್ಷ ಜಬ್ಬಾರ್ ಹತ್ಯೆಯ ಆರೋಪಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ ಆರೋಪಿಯಾಗಿದ್ದಾನೆ.

ಪೆರೋಲ್ ಮೂಲಕ ಜೈಲಿನಿಂದ ಹೊರಗೆ ಬಂದು ಕಳ್ಳವು ಕೃತ್ಯ ನಡೆಸಿದ್ದಾನೆ.

ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಕಾರು, ಚಿನ್ನ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಡಗನ್ನೂರು ಗ್ರಾಮಪಂಚಾಯತ್ ನ ಮಾಜಿ ಸದಸ್ಯರಾಗಿರುವ ಗುರುಪ್ರಸಾದ್ ರೈ ಯವರ ಮನೆಯಲ್ಲಿ ಈ ದರೋಡೆ ಕೃತ್ಯ ನಡೆದಿತ್ತು.

ನಸುಕಿನ ಜಾವ ಸುಮಾರು 2 ಗಂಟೆಗೆ ಮನೆಯ ಮುಂದಿನ ಬಾಗಿಲ ಮೂಲಕ ಮನೆಯೊಳಗೆ ನುಗ್ಗಿದ ಸುಮಾರು 8 ಜನರಿದ್ದ ಮುಸುಕುಧಾರಿಗಳ ತಂಡ ಗುರುಪ್ರಸಾದ್ ಅವರನ್ನು ಕಟ್ಟಿ ಹಾಕಿ, ಕುತ್ತಿಗೆಗೆ ಚಾಕು ಹಿಡಿದು ಕಪಾಟಿನಲ್ಲಿದ್ದ ಸುಮಾರು 40 ಸಾವಿರ ರೂಪಾಯಿ ಮತ್ತು ಸುಮಾರು 15 ಪವನ್ ನಷ್ಟು ಚಿನ್ನವನ್ನು ದರೋಡೆ ಮಾಡಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ವಿಶೇಷ ತಂಡ ರಚಿಸಿ ತನಿಖೆಗೆ ಆದೇಶಿಸಿದ್ದರು.

Continue Reading

LATEST NEWS

Trending