Connect with us

DAKSHINA KANNADA

ವಿದ್ಯಾರ್ಥಿ ಭರತ್ ಭಾಸ್ಕರ ಆತ್ಮಹತ್ಯೆ ಪ್ರಕರಣ ತನಿಖೆಗೆ SFI ಒತ್ತಾಯ : ಜಿಲ್ಲಾಧಿಕಾರಿ – ಪೊಲೀಸ್ ಆಯುಕ್ತರಿಗೆ ಮನವಿ..!

Published

on

ಮಂಗಳೂರು : ಮಂಗಳೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿ ಭರತ್ ಭಾಸ್ಕರ ಎಂಬಾತನು ಕಾಲೇಜ್ ಸಮಸ್ಯೆಗಳಿಂದ ಮನನೊಂದು ಆತ್ಮಹತ್ಯೆ ನಡೆಸಿದ ಪ್ರಕರಣವನ್ನು ಸಮಗ್ರ ತನಿಖೆಗೆ ಒಳಪಡಿಸಬೇಕೆಂಬ ಒತ್ತಾಯಗಳು ಕೇಳಿ ಬಂದಿವೆ.

ಭರತ್ ಭಾಸ್ಕರ ಆತ್ಮಹತ್ಯೆ ಪ್ರಕರಣವನ್ನು ಸಮಗ್ರ ತನಿಖೆ ನಡೆಸಿ ಭರತ್ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಮತ್ತು ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಭಾರತ ವಿದ್ಯಾರ್ಥಿ ಫೆಡರೇಶನ್ ದ.ಕ ಜಿಲ್ಲಾ ಸಮಿತಿ ಮನವಿ ಸಲ್ಲಿಸಿದೆ.

ನಿಯೋಗದಲ್ಲಿ SFI ನ ಜಿಲ್ಲಾ ಮುಖಂಡರಾದ ವಿನೀತ್ ದೇವಾಡಿಗ, ವಿನುಶ ರಮಣ, ನಿಶಾಂತ್ ಮತ್ತು ಮನೋಜ್ ವಾಮಂಜೂರ್ ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯು ಒಂದು ಪ್ರಮುಖ ಶಿಕ್ಷಣ ಕೇಂದ್ರವಾಗಿದೆ. ಇಲ್ಲಿಗೆ ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದಲೂ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ಆದರೆ ಇಲ್ಲಿನ ಬಹುತೇಕ ಖಾಸಗೀ ಶಿಕ್ಷಣ ಸಂಸ್ಥೆಗಳು ಸರಕಾರದ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ದುಬಾರಿ ಶುಲ್ಕವನ್ನು ವಸೂಲಿ ಮಾಡುವ ಮೂಲಕ ವಿದ್ಯಾರ್ಥಿಗಳನ್ನು ಸುಲಿಗೆ ನಡೆಸುತ್ತಿವೆ.

ಈ ರೀತಿ ಶುಲ್ಕದ ಹೆಸರಿನಲ್ಲಿ ಸುಲಿಗೆ, ಸರಿಯಾದ ಸಂಖ್ಯೆಯ ಶಿಕ್ಷಕರನ್ನು ನೇಮಿಸದೆ ಇರುವ ಶಿಕ್ಷಕರಿಗೆ ತಿಂಗಳ ವೇತನವನ್ನೂ ನೀಡದೆ ಸತಾಯಿಸುವುದು, ಕೊಠಡಿಗಳ ಕೊರತೆ ಹೀಗೆ ಮೊದಲಾದ ಸಮಸ್ಯೆಗಳು ವಿದ್ಯಾರ್ಥಿಗಳನ್ನು ಗುಣಮಟ್ಟದ ಶಿಕ್ಷಣದಿಂದ ವಂಚಿಸುತ್ತಿವೆ.

ಇದರಿಂದ ವಿದ್ಯಾರ್ಥಿಗಳ ಫಲಿತಾಂಶ ಮತ್ತು ಅವರ ಭವಿಷ್ಯಕ್ಕೆ ತೊಡಕಾಗುತ್ತಿದ್ದು ಇಂತಹ ಗಂಭೀರ ಸಮಸ್ಯೆಗಳು ಅವರ ಮಾನಸಿಕ ಸ್ಥಿತಿಯನ್ನು ಕುಗ್ಗಿಸುವುದರಿಂದ ಕೆಲವೊಂದು ವಿದ್ಯಾರ್ಥಿಗಳು ಖಿನ್ನತೆಗೊಳಗಾಗಿ ಆತ್ಮಹತ್ಯೆಯಂತಹ ಕೆಲಸಗಳಿಗೆ ಪ್ರೇರೇಪಿಸುತ್ತಿದ್ದೆ.

ಈಗಾಗಲೇ ಮಂಗಳೂರಿನ ಬಹುತೇಕ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸಾಲು ಸಾಲು ಶೈಕ್ಷಣಿಕ ಹತ್ಯೆಗಳು ನಡೆದಿದ್ದು ಈ ಕುರಿತು ಜಿಲ್ಲಾಡಳಿತವಾಗಲಿ, ಶಿಕ್ಷಣ ಇಲಾಖೆಯಾಗಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೆ ಜಾಣ ಮೌನ ವಹಿಸುವ ಮೂಲಕ ಖಾಸಗೀ ಶಿಕ್ಷಣ ಸಂಸ್ಥೆಗಳ ಒಡೆಯರ ಹಿತವನ್ನು ರಕ್ಷಿಸುತ್ತಿದೆ.

ಈ ಎಲ್ಲಾ ಹಿನ್ನಲೆಯಲ್ಲಿ ಜಿಲ್ಲಾಡಳಿತವು ಮಂಗಳೂರಿನ ಖಾಸಗೀ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುವ ಶೈಕ್ಷಣಿಕ ಹತ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಈವರೆಗು ಶಿಕ್ಷಣ ಸಂಸ್ಥೆಗಳಲ್ಲಿ ನಡೆದಿರುವ ಎಲ್ಲಾ ಆತ್ಮಹತ್ಯೆ ಪ್ರಕರಣಗಳನ್ನು ತನಿಖೆಗೆ ಒಳಪಡಿಸಬೇಕು.

ವಿದ್ಯಾರ್ಥಿಗಳ ಆತ್ಮಹತ್ಯೆಗೆ ಪ್ರಚೋದಿಸುವ ಹಿಂದಿರುವ ನೈಜ ಕಾರಣಗಳನ್ನು ಪತ್ತೆಹಚ್ಚಬೇಕು ಮತ್ತು ಅವರ ಸಾವಿಗೆ ಕಾರಣರಾದ ಕಾಲೇಜು ಆಡಳಿತ ಮಂಡಳಿಯ ವಿರುದ್ದ ಕಠಿಣ ಕಾನೂನು ಕ್ರಮಕೈಗೊಳ್ಳಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಶನ್ ಎಸ್ಎಫ್ಐ ದ.ಕ ಜಿಲ್ಲಾ ಸಮಿತಿ ಒತ್ತಾಯಿಸುತ್ತದೆ ಎಂದು ಜಿಲ್ಲಾ ಸಂಚಾಲಕ ವಿನಿತ್ ದೇವಾಡಿಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending