Connect with us

    LATEST NEWS

    ಬಾಲಿವುಡ್ ಸ್ಟಾರ್‌ಗಳ ಫೇವರೆಟ್ ಅಂತೆ ಶಾರುಖ್ ಪರ್ಫ್ಯೂಮ್..!!ಅಷ್ಟಕ್ಕೂ ಬಾದ್‌ಶಾ ಯಾವ ಸೆಂಟ್‌ ಬಳಸ್ತಾರೆ? ಬೆಲೆ ಎಷ್ಟು?

    Published

    on

    ಮುಂಬಯಿ: ಬಾಲಿವುಡ್‌ನ ಬಾದ್‌ಶಾ ಶಾರುಖಾನ್.. ಒಂದು ಕಾಲದಲ್ಲಿ ಅದೆಷ್ಟೋ ಹೆಂಗಳೆಯರ ಫೇವರೆಟ್ ಆಗಿದ್ರು ಖಾನ್. ಈಗಲೂ ಏನು ಕಮ್ಮಿ  ಐವತ್ತು ದಾಟಿದರೂ ಚಿರ ಯುವಕನಂತಿರುವ ಇವರು ಎಲ್ಲರ ಫೇವರೆಟ್ ಪರ್ಸನ್ ಕಮ್ ಹೀರೋ ಆಗಿದ್ದಾರೆ. ಬಾಲಿವುಡ್ ನ ಶ್ರೀಮಂತ ನಟ ಅಂದ್ರೂನು ತಪ್ಪಾಗಲ್ಲ. ಶಾರುಖಾನ್ ಬಳಸುವ ಸುಗಂಧ ದ್ರವ್ಯ ಬಹಳ ವಿಶೇಷ. ಯಾಕಂದ್ರೆ ಎಲ್ಲಾ ಸೆಲೆಬ್ರೆಟಿಗಳೂ ಕೂಡಾ ಅವರ ಪರ್ಫ್ಯೂಮ್ ಗೆ ಮಾರುಹೋಗಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ಸ್ಟಾರ್ ಸೆಲೆಬ್ರೆಟಿಗಳು ಶಾರುಖಾನ್ ಬಳಸುವ ಪರ್ಫ್ಯೂಮ್ ಬಗ್ಗೆ ಮಾತನಾಡಿದ್ದಾರೆ. ಹಾಗಿದ್ರೆ ಶಾರುಖಾನ್ ಯಾವ ಪರ್ಫ್ಯೂಮ್ ಬಳಸ್ತಾರೆ? ಅದರ ಬೆಲೆ ಎಷ್ಟು ಅನ್ನುವ ಕುತೂಹಲ ನಿಮಗೂ ಇದಿಯಲ್ವಾ..

    ಸೆಲೆಬ್ರೆಟಿಗಳೇ ಹಾಗೆ ತಾವು ಉಡುವ ಉಡುಪುಗಳಿಂದ ಕಾಲಿಗೆ ಹಾಕೋ ಚಪ್ಪಲಿ ತನಕ ಬ್ರಾಂಡೆಡ್ ಆಗಿರುತ್ತೆ. ಕೆಲವರು ಒಮ್ಮೆ ಬಳಸಿದ ವಸ್ತುಗಳನ್ನು ಮತ್ತೊಮ್ಮೆ ಉಪಯೋಗಿಸೋದಿಲ್ಲ. ಒಂದು ಖಾಸಗಿ ಕಾರ್ಯಕ್ರಮವೊಂದರಲ್ಲಿ ಅನುಷ್ಕಾ ಶರ್ಮಾ, ದೀಪಿಕಾ ಪಡುಕೋಣೆ ಸೇರಿದಂತೆ  ಸ್ಟಾರ್ ಸೆಲೆಬ್ರೆಟಿಗಳು ಶಾರುಖಾನ್ ಬಳಸುವ ಸುಗಂಧ ದ್ರವ್ಯದ ಕುರಿತು ಮಾತನಾಡಿದ್ದಾರೆ. ಶಾರುಖಾನ್ ವಾಸವಿರುವ ಐಶಾರಾಮಿ ಮನೆ ‘ಮನ್ನತ್’ ಹಾಗೂ ಶಾರುಖಾನ್ ಬಳಸುವ ಸುಗಂಧ ದ್ರವ್ಯದ ಬಗ್ಗೆ ಹಲವು ಸೆಲೆಬ್ರಿಟಿಗಳು ಮಾತನಾಡಿದ್ದಾರೆ.

    sharukhan

    ಈ ಬಗ್ಗೆ ಸಂದರ್ಶನವೊಂದರಲ್ಲಿ  ಶಾರುಖ್ ಖಾನ್  ರವರು ತಾವು ಬಳಸುವ ಪರ್ಫ್ಯೂಮ್ ಬಗ್ಗೆ ಹೇಳಿಕೊಂಡಿದ್ದಾರೆ.  ಇವರು ಎರಡು ಪರ್ಫ್ಯೂಮ್​ಗಳನ್ನು ಬೆರೆಸಿ ಮಿಶ್ರಣ ಮಾಡಿ ಬಳಸುತ್ತಾರಂತೆ. ಡನ್​ಹಿಲ್ ಸೆಂಟ್ ಅನ್ನು ಬಳಸುತ್ತಿದ್ದು ಅದು ಲಂಡನ್ ಸ್ಟೋರ್‌ನಲ್ಲಿ ಮಾತ್ರ ದೊರಕುವ ಸುಗಂಧವಾಗಿದೆಯಂತೆ. ಇದರ ಜೊತೆಗೆ ಡಿಪ್ಟಿ ಕ್ಯೂ ಹೆಸರಿನ ಮತ್ತೊಂದು ಪರ್ಫ್ಯೂಮ್ ಅನ್ನು ಸಣ್ಣ ಪ್ರಮಾಣದಲ್ಲಿ ಬೆರೆಸಿ ಮೈಗೆ ಹಾಕಿಕೊಳ್ಳುತ್ತಾರಂತೆ ಶಾರುಖ್. ಇದೀಗ ಶಾರುಖಾನ್ ಬಳಸುವುದು ವಿದೇಶಿ ಬ್ರ್ಯಾಂಡ್​ನ ಸುಗಂಧ ದ್ರವ್ಯ ಅನ್ನೋದು ಗೊತ್ತಾಗಿದೆ.

    ಆದರೂ ಡನ್​ಹಿಲ್ ಬ್ರ್ಯಾಂಡ್​ನ ಯಾವ ಸೆಂಟ್ ಅನ್ನು ಬಳಸುತ್ತೇನೆಂದು ಶಾರುಖ್ ಖಾನ್ ಹೇಳಿಲ್ಲ. ಆದರೆ ಡನ್​ಹಿಲ್​ನ ಆನ್​ಲೈನ್ ಮಳಿಗೆಯಲ್ಲಿ 10,000 ದ ವರೆಗೆ ಬೆಲೆಯ ಪರ್ಫ್ಯೂಮ್​ಗಳು ಮಾರಾಟಕ್ಕಿದೆ. ಇನ್ನು ಡಿಪ್ಟಿ ಕ್ಯೂ ಪರ್ಫ್ಯೂಮ್​ನ ಬೆಲೆ ಸುಮಾರು 30,000 ರೂಪಾಯಿಗಳು.  ಶಾರುಖ್ ಖಾನ್ ಈ ಹಿಂದೆ ಕೆಲವು ಪರ್ಫ್ಯೂಮ್ ಬ್ರ್ಯಾಂಡ್​ಗಳ ರಾಯಭಾರಿಯಾಗಿ ಕೆಲಸ ಮಾಡಿದ್ದಾರೆ. ಪ್ರಸ್ತುತ ಡೆನ್ವರ್​ರ ರಾಯಭಾರಿ ಆಗಿದ್ದಾರೆ.

     

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending