Connect with us

DAKSHINA KANNADA

ಆತ್ಮವಿಶ್ವಾಸ ನಮ್ಮಲ್ಲಿದ್ದಾಗ ಯಶಸ್ಸನ್ನು ತಡೆಯಲು ಸಾಧ್ಯವಿಲ್ಲ: ಕಿರಣ್ ವಸಂತ್ ಅಭಿಪ್ರಾಯ

Published

on

ಮಂಗಳೂರು: “ಆತ್ಮವಿಶ್ವಾಸ ನಮ್ಮಲ್ಲಿದ್ದಾಗ ನಮ್ಮ ಯಶಸ್ಸನ್ನು ತಡೆಯಲು ಸಾಧ್ಯವಿಲ್ಲ. ಆಗ ನಮ್ಮ ಪ್ರಯತ್ನಕ್ಕೆ ತಕ್ಕ ಫಲ ಪ್ರಾಪ್ತಿಯಾಗುವುದು, ಶಕ್ತಿ ಪಿಯು ಕಾಲೇಜಿನಲ್ಲಿರುವ ಸೌಲಭ್ಯಗಳನ್ನು ಬಳಸಿಕೊಳ್ಳಿ, ಕೆವಿಸಿ ಜೊತೆಗೆ ಇದು ನಿಮ್ಮ ಯಶಸ್ಸಿಗೆ ಅದ್ಭುತ ಸೂತ್ರವಾಗಿದೆ” ಎಂದು ಖ್ಯಾತ ಲೆಕ್ಕ ಪರಿಶೋಧಕ ಸಿಎ ಕಿರಣ್ ವಸಂತ್ ಅಭಿಪ್ರಾಯ ಪಟ್ಟಿದ್ದಾರೆ.

ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ಸಿಎ ಫೌಂಡೇಶನ್ ಮತ್ತು ಸಿಎಸ್ ಫೌಂಡೇಶನ್ ಆರಂಭಿಸಿದ ವರ್ಚುವಲ್ ಕೋಚಿಂಗ್ ಅನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿ ಪ್ರಯಾಣವು ಮೊದಲ ಹೆಜ್ಜೆಯಿಂದ ಪಾರಂಭವಾಗುತ್ತದೆ. ನಿಮ್ಮ ಮೊದಲ ಹೆಜ್ಜೆ ಪಥಮ ಪಿಯುಸಿನಲ್ಲಿ ಪ್ರಾರಂಭವಾಗುತ್ತದೆ.

ಸಕಾರಾತ್ಮಕವಾಗಿರಿ, ಮುಂದಿನ ನಾಲ್ಕು ಅಥವಾ ಐದು ವರ್ಷಗಳವರೆಗೆ ನಿಮ್ಮ ಬದ್ಧತೆಯನ್ನು ನೀಡಿ, ನೀವು ಯಾವ ಶಕ್ತಿಯನ್ನು ಹೊಂದಿದ್ದೀರಿ ಎಂದು ಊಹಿಸಲಾಗದಷ್ಟು ಬೇಗ ಪದವಿಯನ್ನು ನೀವು ಹೊಂದಿರುತ್ತೀರಿ. ಹಣವು ಹೋಗುತ್ತದೆ, ಸ್ವತ್ತುಗಳು ಹೋಗುತ್ತವೆ. ಆದರೆ ಜ್ಞಾನವು ಯಾವಾಗಲೂ ಉಳಿಯುತ್ತದೆ. ನಿಮಗೆ ಬೇಕಾದುದನ್ನು ಪಡೆಯಲು ಸಿಎ, ಪ್ರಮಾಣಪತ್ರವು ನಿಮಗೆ ಸಹಾಯ ಮಾಡುತ್ತದೆ. ನಿಮ್ಮ ಕುಟುಂಬ ಸದಸ್ಯರನ್ನು ಹೆಚ್ಚು ಆರಾಮವಾಗಿಡಲು ನಿಮ್ಮ ಕನಸು ಸಹಕರಿಸುತ್ತದೆ. ಇದು ಅತ್ಯುತ್ತಮ ಜೀವನ ನಿರ್ಮಾಣ ಮಾರ್ಗವಾಗಿದೆ” ಎಂದು ಅವರು ಹೇಳಿದರು.

“ನಮ್ಮ ಅಧ್ಯಾಪಕರು ನಮ್ಮ ನಮ್ಮ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಬದಲಾವಣೆಯನ್ನುಂಟು ಮಾಡಲು ನಾವು ಬಯಸುತ್ತೇವೆ ಎಂದು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ವಸಾನಿ, ಸಿಎ ವ್ಯಾಸಂಗವನ್ನು ಪಿಯುಸಿ ಹಂತದಲ್ಲಿಯೇ ಪ್ರಾರಂಭಿಸುವುದು ಅತ್ಯುತ್ತಮ ಆಯ್ಕೆಯಾಗಿದೆ. ನಾವು ಯಾವಾಗಲೂ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಸಿದ್ಧಹಸ್ತರು. ಸಿಎ ಕೋರ್ಸ್ ಕಷ್ಟವಾಗಬಹುದು ಅಥವಾ ಕಷ್ಟವಾಗದಿರಬಹುದು, ಆದರೆ ನೀವು ಅದನ್ನು ಪ್ರಯತ್ನಿಸದೆ, ದೂರ ತಳ್ಳಿದರೆ ನೀವು ಖಂಡಿತವಾಗಿಯೂ ವಿಷಾದಿಸುತ್ತೀರಿ, ಸಿಎ ಫೌಂಡೇಶನ್ ಕೋರ್ಸ್ ಭವಿಷ್ಯದಲ್ಲಿ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗೆ ನಿಮ್ಮನ್ನು ಸಿದ್ಧಪಡಿಸುತ್ತದೆ. ಯಶಸ್ಸಿನ ವಿಳಂಬವು ಗಳಿಕೆಯ ಪ್ರಾರಂಭಿಸುವುದು ಉತ್ತಮ.
ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿ ಅಕಾಡೆಮಿಯೊಂದಿಗೆ ಸಂಯೋಜನೆ ಹೊಂದಿದ್ದಕ್ಕೆ ಸಂತೋಷವನ್ನು ವ್ಯಕ್ತಪಡಿಸಿದರು ಮತ್ತು ಕಿವಿಸಿ ಅಕಾಡೆಮಿಯ ಸಹಯೋಗದೊಂದಿಗೆ ಕಲಿಕೆಯ ಹೆಚ್ಚು ಸಂವಾದಾತ್ಮಕ ಪರಿಶೋಧನಾತ್ಮಕ, ಪರಿಣಾಮಕಾರಿಯಾಗಿರುವುದು ಮತ್ತು ಅನುಭವಿ ಶಿಕ್ಷಕ ವೃಂದವು ಎಲ್ಲಾ ವಿದ್ಯಾರ್ಥಿಗಳಿಗೆ ಫಲಪದ ಫಲಿತಾಂಶವನ್ನು ನೀಡಲಿ ಎಂದು ಹಾರೈಸಿದರು. ಇಂಜಿನಿಯರಿಂಗ್ ಮತ್ತು ವೈದ್ಯಕೀಯ ರಂಗವನ್ನು ಕೇಂದ್ರೀಕರಿಸುವ ಜೊತೆ ಜೊತೆಗೆ ಶಕ್ತಿ ಪಿಯು ಕಾಲೇಜು ವಿವಿಧ ಕ್ಷೇತ್ರಗಳಲ್ಲಿ ವಿಸ್ತರಿಸುವುದು ಮತ್ತು ವಾಣಿಜ್ಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಆಯ್ಕೆಗಳನ್ನು ಆಯ್ಕೆ ಮಾಡಲು ಅವಕಾಶ ಕಲ್ಪಿಸುತ್ತದೆ ಎಂದು ಅವರು ಹೇಳಿದರು.

ಶಕ್ತಿ ಪಿಯು ಕಾಲೇಜಿನ ಪ್ರಾಂಶುಪಾಲ ಪ್ರೊ. ಟಿ. ರಾಜರಾಮ್ ರಾವ್ ಅವರು ವಿದ್ಯಾರ್ಥಿಗಳಿಗೆ ಅವಕಾಶವನ್ನು ಬಳಸಿಕೊಳ್ಳಬೇಕು ಮತ್ತು ತಮ್ಮ ಕನಸುಗಳನ್ನು ಸಹಕಾರಗೊಳಿಸಲು ಆಯ್ಕೆಯ ವಿಷಯಗಳ ಬಗ್ಗೆ ಸಂಪೂರ್ಣ ಸಮರ್ಪಣ ಭಾವನೆಯಿಂದ ಕಾರ್ಯ ಪ್ರಾಪ್ತಿಯಡೆಗೆ ಪ್ರಯತ್ನಿಸಬೇಕು ಎಂದು ವಿನಂತಿಸಿದರು. ಸಿಎ ಕಿರಣ್ ವಸಂತ್ ಮತ್ತು ಸಿಎ ದೀಪಿಕಾ ವಸಾನಿ ಅವರು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಎತ್ತಿದ ಪ್ರಶ್ನೆಗಳಿಗೆ ನಿಖರವಾಗಿ ಉತ್ತರಿಸಿದರು.

ಆಡಳಿತಾಧಿಕಾರಿ ಡಾ. ಕೆ.ಸಿ ನ್ಯಾಕ್, ಪ್ರಧಾನ ಸಲಹೆಗಾರ ರಮೇಶ ಕೆ, ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್ ರೈ, ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ. ಶಕ್ತಿ ಪೂರ್ವ ಪ್ರಾಥಮಿಕ ಶಾಲೆ ಸಂಯೋಜಕಿ ನೀಮಾ ಸಕೇನಾ, ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ದ್ವಿತೀಯ ಪಿಯು ವಾಣಿಜ್ಯ ವಿದ್ಯಾರ್ಥಿಗಳಾದ ರಕ್ಷಾ ಎಂ. ಹೊಳ್ಳ ಮತ್ತು ದೀಕ್ಷಾ ಎಂ. ಹೊಳ್ಳ ಅವರು ಪ್ರಾರ್ಥನೆ ಹಾಡಿದರು. ವಾಣಿಜ್ಯ ಉಪನ್ಯಾಸಕಿ ಶಿಲ್ಲಾ ಕಾರ್ಯಕ್ರಮವನ್ನು ನಿರೂಪಿಸಿದರು.

BELTHANGADY

ಕಾಂಗ್ರೆಸ್ ಹಿರಿಯ ಮುಖಂಡ ವಸಂತ ಬಂಗೇರ ವಿಧಿವಶ

Published

on

ಬೆಳ್ತಂಗಡಿ: ಕಾಂಗ್ರೆಸ್ ಹಿರಿಯ ಮುಖಂಡ ಬೆಳ್ತಂಗಡಿ ಮಾಜಿ ಶಾಸಕ, ಸಚಿವ ವಸಂತ ಬಂಗೇರ(79 ವ) ಇಂದು(ಮೇ.8) ಸಂಜೆ 4 ಗಂಟೆಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಇವರು ಬೆಳ್ತಂಗಡಿಯಲ್ಲಿ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

vasanth bangera

ಮುಂದೆ ಓದಿ..; ಹೆಚ್.ಡಿ.ರೇವಣ್ಣಗೆ ಬಿಗ್ ಶಾಕ್; 7 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

1946 ಜನವರಿ 15 ರಂದು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದಲ್ಲಿ ಜನಿಸಿದ ಇವರು ದಿ. ಕೇದೆ ಸುಬ್ಬ ಪೂಜಾರಿ ಹಾಗೂ ದಿ. ದೇವಕಿ ದಂಪತಿ ಪುತ್ರ. 1972 ರಲ್ಲಿ ಪಂಚಾಯತ್ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆ ಆಗುವ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದರು. 1983 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ, 1985 ರಲ್ಲಿ ಮತ್ತೆ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1989 ರಲ್ಲಿ ಬಿಜೆಪಿ ತೊರೆದು ಜೆಡಿಎಸ್‌ನಿಂದ ಸ್ಪರ್ಧಿಸಿ ಸೋಲನ್ನು ಅನುಭವಿಸಿದ್ದರು. ಮತ್ತೆ 1994 ರಲ್ಲಿ  ಜೆಡಿಎಸ್‌ನಿಂದ ಸ್ಪರ್ಧಿಸಿ ಮೂರನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಸುಮಾರು 52 ವರ್ಷಗಳ ಕಾಲ ರಾಜಕೀಯದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಎಂಟು ಬಾರಿ ಸ್ಪರ್ಧಿಸಿ ಐದು ಬಾರಿ ಶಾಸಕರಾಗಿ, ಸರಕಾರದ ಮುಖ್ಯ ಸಚೇತಕರಾಗಿ ಸೇವೆಸಲ್ಲಿಸಿದ್ದ ಬಂಗೇರರು, ಶ್ರೀ ಗುರುನಾರಾಯಣ ಸೇವಾ ಸಂಘದ ಗೌರವಾಧ್ಯಕ್ಷರಾಗಿ, ಗುರುದೇವ ಕಾಲೇಜಿನ ಅಧ್ಯಕ್ಷರಾಗಿ, ಗುರುದೇವ ಸಹಕಾರಿ ಸಂಘದ ಸ್ಥಾಪಕರಲ್ಲಿ ಓರ್ವರಾಗಿ ಕೊಡುಗೈ ದಾನಿಯಾಗಿಯಾಗಿದ್ದರು. ಮೃತರು ಪತ್ನಿ ಸುಜಿತಾ ವಿ. ಬಂಗೇರ ಹಾಗೂ ಇಬ್ಬರು ಪುತ್ರಿಯರು, ಬಂಧು ವರ್ಗದವರನ್ನು ಅಗಲಿದ್ದಾರೆ.

ಮೇ. 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

 

Continue Reading

DAKSHINA KANNADA

ಮೇ 9 ರಂದು SSLC ಫಲಿತಾಂಶ ಪ್ರಕಟ…!

Published

on

ಮಂಗಳೂರು : 2023-24 ರ SSLC ಪರೀಕ್ಷೆಯ ಫಲಿತಾಂಶ ಮೇ 9 ರ ಬೆಳಗ್ಗೆ 10.30ಕ್ಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಮಾರ್ಚ್‌ 25 ರಿಂದ ಎಪ್ರಿಲ್ 6 ರ ವರೆಗೆ ಪರೀಕ್ಷೆ ನಡೆಸಲಾಗಿದ್ದು, ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದೆ. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಈ ಬಾರಿ ಫಲಿತಾಂಶ ಬಿಡುಗಡೆಗೆ ವಿಳಂಭವಾಗಿದೆ ಎಂದು ಹೇಳಿದೆ


2023- 24ರ SSLC ಪರೀಕ್ಷೆಯಲ್ಲಿ ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು ಮತ್ತು 41,375 ವಿದ್ಯಾರ್ಥಿಗಳು ರೀ ಎಕ್ಸಾಂ ಬರೆದಿದ್ದಾರೆ. ಇದರಲ್ಲಿ 4.41 ಲಕ್ಷ ಬಾಲಕರು ಮತ್ತು 4.28 ಲಕ್ಷ ಬಾಲಕಿಯರು ಇದ್ದಾರೆ.

ಫಲಿತಾಂಶವನ್ನು ನೋಡಲು ಈ ವೆಬ್‌ಸೈಟ್ ಬಳಸಿ..!

ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು. kseab.karnataka.gov.in ಹಾಗೂ karresults.nic.in ವೆಬ್‌ಸೈಟ್‌ನಲ್ಲೂ ಫಲಿತಾಂಶ ವೀಕ್ಷಿಸಬಹುದಾಗಿದೆ.

Continue Reading

DAKSHINA KANNADA

ದಕ್ಷಿಣ ಕನ್ನಡ ಜಿಲ್ಲೆಯ ಕಲಾವೈವಿಧ್ಯತೆಗೆ ಮಾರುಹೋದ ವಿದೇಶಿಗರು

Published

on

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯು ವಿವಿಧ ವೈವಿಧ್ಯಮಯ ಕ್ಷೇತ್ರವನ್ನು ಒಳಗೊಂಡಿರುವ ಕರಾವಳಿ ನಗರಿ. ಇಲ್ಲಿಗೆ ಬಂದ ವಿದೇಶಿ ಪ್ರಜೆಗಳು ಇಲ್ಲಿನ ವಿಶೇಷತೆಗಳನ್ನು ನೋಡಿ ಮನಸೋಲುತ್ತಾರೆ. ನವಮಂಗಳೂರು ಬಂದರಿಗೆ ಪ್ರತಿ ವರ್ಷದಂತೆ ಈ ಬಾರಿಯೂ ಹಲವು ವಿದೇಶಿ ಪ್ರವಾಸಿ ಹಡಗುಗಳು ಬಂದಿದ್ದು, ಇಲ್ಲಿನ ವಿಶೇಷ ತಾಣಗಳಿಗೆ ಭೇಟಿ ನೀಡಿ ಆನಂದ ಪಟ್ಟರು.


ವಿದೇಶಿ ಹಡಗಿನಲ್ಲಿ ಬಂದಿಳಿದ ಯುಎಸ್ಎ, ನೆದರ್ ಲ್ಯಾಂಡ್, ಉಕ್ರೇನ್, ಯುನೈಟೆಡ್ ಕಿಂಗ್‌ಡಂ, ಅಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಜಪಾನ್, ಪಿಲಿಫೈನ್ಸ್ ದೇಶದ ಸುಮಾರು 120 ಜನ ವಿದೇಶಿಗಳು, ಜಗತ್ಪ್ರಸಿದ್ದ ಸಾವಿರ ಕಂಬ ಬಸದಿಗೆ ಭೇಟಿ ನೀಡಿ ಅಲ್ಲಿ ಕಲಾಸೌಂದರ್ಯಕ್ಕೆ ಮಾರು ಹೋದರು.

ಇದನ್ನೂ ಓದಿ : ಹರಕೆ ತೀರಿಸಿದ ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ; ಅಭಯವಿತ್ತ ದೈವ!


ಮಂಗಳೂರು ಮೂಲದ ಕ್ಯಾಲಿಫೋರ್ನಿಯ ಉದ್ಯೋಗಿ ಸಚಿನ್ ಪಡಿವಾಳ್ ಅವರನ್ನು ಮೂಡುಬಿದಿರೆ ಭಟ್ಟಾರಕ ಸ್ವಾಮೀಜಿ ಸನ್ಮಾನಿಸಿದರು. ಈ ಸಂದರ್ಭ ಮಂಗಳೂರು ಟ್ರಾವೆಲ್ ಗೈಡ್ ರೋಹನ್, ರೋಷನ್, ಶ್ರೀಕಾಂತ್ ಮೊದಲಾದವರು ಉಪಸ್ಥಿತರಿದ್ದರು.

Continue Reading

LATEST NEWS

Trending