Connect with us

DAKSHINA KANNADA

ಟಿಪ್ಪು ನಿಮ್ಮ ಅಪ್ಪನ, ಚಿಕ್ಕಪ್ಪ, ದೊಡ್ಡಪನೇ?: ಎಸ್‌ಡಿಪಿಐಗೆ ಶರಣ್‌ ಪಂಪ್‌ವೆಲ್‌ ಪ್ರಶ್ನೆ

Published

on

ಪುತ್ತೂರು: ಟಿಪ್ಪು ನಿಮ್ಮ ಅಪ್ಪನ, ಚಿಕ್ಕಪ್ಪನ, ದೊಡ್ಡಪನಾ? ಎಂದು ವಿಎಚ್‌ಪಿಯ ವಿಭಾಗೀಯ ಸಂಚಾಲಕ ಶರಣ್‌ ಪಂಪ್‌ವೆಲ್‌ ಎಸ್‌ಡಿಪಿಐ ಸಂಘಟನೆಗೆ ಪ್ರಶ್ನೆ ಮಾಡಿದ್ದಾರೆ.


ನಿನ್ನೆ 75ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಕಬಕ ಗ್ರಾಪಂ ವತಿಯಿಂದ ನಡೆದ ಸ್ವಾತಂತ್ರ್ಯ ರಥಯಾತ್ರೆಗೆ ಅಡ್ಡಿಪಡಿಸಿದ ಎಸ್‌ಪಿಐ ವಿರುದ್ಧ ಇಂದು ಪುತ್ತೂರು ಹೊರವಲಯದ ಕಬಕ ಜಂಕ್ಷನ್ ಶ್ರೀ ಮಹಾದೇವಿ ದೇವಸ್ಥಾನದ ದ್ವಾರದ ಎದುರು ಪ್ರತಿಭಟನೆ ನಡೆಯಿತು.
ಈ ವೇಳೆ ಮಾತನಾಡಿದ ಶರಣ್‌ ಪಂಪ್‌ವೆಲ್‌, ರಥಯಾತ್ರೆಯಲ್ಲಿದ್ದ ವೀರ ಸಾವರ್ಕರ್‌ ಫೊಟೋ ತೆಗೆದು ಟಿಪ್ಪುವಿನ ಭಾವಚಿತ್ರ ಹಾಕುವಂತೆ ಒತ್ತಡ ಹೇರಿದ್ದಾರೆ. ಟಿಪ್ಪು ಓರ್ವ ಹಿಂದೂ ವಿರೋಧಿ, ರಾಷ್ಟ್ರವಿರೋಧಿ, ಎಸ್‌ಡಿಪಿಐ ಸಹ ರಾಷ್ಟ್ರವಿರೋಧಿ ಸಂಘಟನೆ ಮತ್ತು ಪಕ್ಷ. ಅದನ್ನು ನಿಷೇಧಿಸಬೇಕೆಂದು ರಾಜ್ಯ, ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುತ್ತೇವೆ ಎಂದು ಹೇಳಿದರು.


ಈ ವೇಳೆ ಬಜರಂಗದಳ ದಕ್ಷಿಣ ಪ್ರಾಂತ ವಿಭಾಗ ಸಂಚಾಲಕ ಮುರಳಿಕೃಷ್ಣ ಹಸಂತಡ್ಕ ಮಾತನಾಡಿ, ಕಬಕ ಪಂಚಾಯ್‌ನಿಂದ ಆರಂಭವಾದ ಯಾತ್ರೆಯನ್ನು ತಡೆಹಿಡಿಯುತ್ತಾರೆ. ಜಗತ್ತಿನಲ್ಲಿ 42 ವರ್ಷ ಕರಿನೀರಿನ ಶಿಕ್ಷೆ ಅನುಭವಿಸಿದ ಏಕೈಕ ವ್ಯಕ್ತಿ ವೀರ ಸಾವರ್ಕರ್‌. ಆ ಮಹಾನ್‌ ವ್ಯಕ್ತಿಯ ಭಾವಚಿತ್ರವನ್ನು ತೆಗೆಯಲು ಹೇಳುತ್ತಾರೆ. ರಥಯಾತ್ರೆ ನಿಲ್ಲಿಸಿದವರಿಗೆ ಸರಿಯಾಗಿ ವೀರ ಸಾವರ್ಕರ್‌ ಉಚ್ಛಾರ ಮಾಡಲು ಬರುವುದಿಲ್ಲ, ಅಂತವರು ರಥಯಾತ್ರೆ ನಿಲ್ಲಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಪೊಲೀಸರನ್ನು ಪ್ರಶ್ನಿಸಿದ ಶರಣ್‌
ನಿನ್ನೆ ಹಿಂದೂ ಸಂಘಟನೆಯವರು ದೂರು ಕೊಡಲು ಹೋದಾಗ ಅಲ್ಲಿನ ಪೊಲೀಸ್‌ ಸಿಬ್ಬಂದಿ ಹೇಳುತ್ತಾರಂತೆ, ಅವರಿಗೆ ಶಿಕ್ಷಣದ ಜ್ಞಾನ ಇಲ್ಲ. ಅವರಿಗೆ ಸ್ವಾತಂತ್ರ್ಯ ಹೋರಾಟ ಮಾಡಿದವರು ಯಾರು ಗೊತ್ತಿಲ್ಲ. ಅವರು ನಾಲ್ಕನೆ ಕ್ಲಾಸು ಕಲಿತವರು ಅವರ ಮೇಲೆ ದೇಶದ್ರೋಹದ ಕೇಸು ದಾಖಲಿಸಲು ಆಗಲ್ಲ ಬದಲಿಗೆ ರಥಯಾತ್ರೆ ತಡೆದ ಬಗ್ಗೆ ಕೇಸು ದಾಖಲಿಸಬಹುದು ಎಂದು ಹೇಳಿದ್ದಾರೆ. ರೀ ಸ್ವಾಮಿ ಅವರು ಅನಕ್ಷರಸ್ಥರು ನೀವು ಉನ್ನತ ಶಿಕ್ಷಣ ಪಡೆದು ಇಲಾಖೆಗೆ ಸೇರಿದ್ದೀರಾ ನಿಮಗೆ ಗೊತ್ತಿಲ್ಲವೇ ಎಂದು ಪೊಲೀಸರನ್ನು ಪ್ರಶ್ನಿಸಿದರು.
ಇದೇ ವೇಳೆ ಆ.17 ರಂದು ಪುತ್ತೂರಿನಲ್ಲಿ ವೀರ ಸಾವರ್ಕರ್ ರಥ ಯಾತ್ರೆಯನ್ನು ನಾವು ಮಾಡಲಿದ್ದು ಮುಂದಿನ ದಿನ ದೇಶ ವ್ಯಾಪಿಯಾಗಿ ರಥ ಯಾತ್ರೆ ಕೈಗೊಳ್ಳಲಾವುದು ತಾಕತ್ತಿದ್ದರೆ ಎಸ್ ಡಿ ಪಿ ಐ ರಥ ಯಾತ್ರೆಯನ್ನು ತಡೆಯಲಿ ಎಂದು ಪ್ರತಿಭಟನಾಕಾರರು ಸವಾಲು ಹಾಕಿದರು.
ವಿಎಚ್‌ಪಿಯ ವಿಭಾಗೀಯ ಸಂಚಾಲಕ ಶರಣ್‌ ಪಂಪ್‌ವೆಲ್‌, ಗಣರಾಜ ಭಟ್ ಕೆದಿಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಅಳ್ವ ಪ್ರತಿಭಟನೆಯಲ್ಲಿ ಮಾತನಾಡಿದರು.

DAKSHINA KANNADA

ಪಾವಂಜೆ ನದಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆ..!

Published

on

ಮುಲ್ಕಿ: ಮಂಗಳೂರು ಹೊರವಲಯದ ಮುಲ್ಕಿಯ ಠಾಣಾ ವ್ಯಾಪ್ತಿಯ ಹಳೆಯಂಗಡಿ ಸಮೀಪದ ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ನಂದಿನಿ ನದಿಯ ದಡದಲ್ಲಿ ಸುಮಾರು 19 ರಿಂದ 20 ವರ್ಷದ ಒಳಗಿನ ಪ್ರಾಯದ ಯುವಕನ ಶವ ಪತ್ತೆಯಾಗಿದೆ.

ಹಳೆಯಂಗಡಿ ಪೂಜಾ ಫ್ರೆಂಡ್ಸ್ ನ ಸದಸ್ಯರು ಸ್ಥಳಕ್ಕೆ ಧಾವಿಸಿ ಶವವನ್ನು ಆಂಬುಲೆನ್ಸ್ ಮೂಲಕ ಮೂಲ್ಕಿ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಯುವಕನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

ಕಳೆದ ದಿನಗಳ ಹಿಂದೆ ಇದೇ ಪರಿಸರದ ಚೇಳಾಯರು ಅಣೆಕಟ್ಟಿನ ಬಳಿ ಯುವಕನೊಬ್ಬ ನಾಪತ್ತೆಯಾಗಿದ್ದು, ಈ ಶವ ಆತನದ್ದೇ ಇರಬೇಕು ಇರಬೇಕೆಂಬ ಶಂಕೆ ವ್ಯಕ್ತವಾಗಿದೆ.

ಮುಲ್ಕಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.

Continue Reading

DAKSHINA KANNADA

Kadaba: ಹಠಾತ್ ಕಾಡಾನೆ ದಾಳಿ- ವ್ಯಕ್ತಿ ಗಂಭೀರ..!

Published

on

ಕಡಬ: ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಗಂಭೀರ ಸ್ಥಿತಿಗೊಂಡು ಆಸ್ಪತ್ರೆಯಲ್ಲಿ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು ಗ್ರಾಮದ ಮರ್ಧಾಳ-ಕೊಣಾಜೆಯಲ್ಲಿ ನಡೆದಿದೆ.

ಐತ್ತೂರು ಗ್ರಾಮದ ಗರ್ತಿಲ ನಿವಾಸಿ ಓಡಿ ಎಂಬವರ ಪುತ್ರ ಕೂಲಿ ಕಾರ್ಮಿಕ ಚೋಮ (56) ಗಾಯಗೊಂಡವರು.

ಚೋಮ ಅವರು ಸಂಜೆ ವೇಳೆ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭ ನೆಲ್ಯಡ್ಕ ಶಾಲೆಯ ಸಮೀಪ ಇರುವ ಕಾರ್ತಿಕೇಯ ಭಜನಾ ಮಂದಿರ ಬಳಿ ಆನೆಯೊಂದು ಹಠತ್ ದಾಳಿ ನಡೆಸಿದೆ.

ಪರಿಣಾಮ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ.

ಸದ್ಯ ಚೋಮ ಅವರ ಸ್ಥಿತಿಯು ಚಿಂತಾಜನಕವಾಗಿದ್ದು, ಕಡಬದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಈ ಹಿಂದೆ ಆನೆ ದಾಳಿಯ ಘಟನೆಗಳು ನಡೆದಿದ್ದು, ಕೃಷಿ ನಾಶದಂತಹ ಘಟನೆಗಳು ದಿನಂಪ್ರತಿ ನಡೆಯುತ್ತಿದೆ ಎನ್ನಲಾಗಿದೆ.

 

 

Continue Reading

DAKSHINA KANNADA

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆ

Published

on

ಮಂಗಳೂರು: ಮಂಗಳೂರು ಸೊಬೆಸ್ಟಿಯನ್ ಹಾಲ್ ನಲ್ಲಿ ನಡೆದ  ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯಲ್ಲಿ  ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ  ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ.

ಸಂಚಾಲಕರಾಗಿ ಕರುಣಾಕರ್ ಕಾನಂಗಿ ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಬಂಟ್ವಾಳ, ಕೋಶಾಧಿಕಾರಿಯಾಗಿ ನವೀನ್ ರೈ ಪಂಜಳ, ಉಪಾಧ್ಯಕ್ಷರಾಗಿ ರಮೇಶ್ ಕಲಾ ಶ್ರೀ ಮಂಗಳೂರು, ಜಯಕರ್ ಸುವರ್ಣ ಉಡುಪಿ, ಜೊತೆ ಕಾರ್ಯದರ್ಶಿ ಹರೀಶ್ ಪಿ ಕೋಟ್ಯಾನ್ ಮುಲ್ಕಿ, ಹೆರಿಕ್ ಡಿಸೋಜ ಬ್ರಹ್ಮಾವರ, ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್ ಕಾಪು, ರಮೇಶ್ ಹೊಸಬೆಟ್ಟು ಸುರತ್ಕಲ್, ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್ ಮೂಡಬಿದ್ರಿ, ಕ್ರೀಡಾ ಕಾರ್ಯದರ್ಶಿ ರಂಜಿತ್ ಕುಂದಾಪುರ, ಭಾರದ್ವಾಜ್ ಬೆಳ್ತಂಗಡಿ, ಸಾಂಸ್ಕೃತಿಕ ಕಾರ್ಯದರ್ಶಿ ಚಿದಾನಂದ್ ಉಳ್ಳಾಲ ಮಾಧ್ಯಮ ಕಾರ್ಯದರ್ಶಿ ಹರೀಶ್ ರಾವ್ ಆಯ್ಕೆಯಾಗಿದ್ದಾರೆ.

ಈ ಚುನಾವಣಾ ಪ್ರಕ್ರಿಯೆಯನ್ನು ಎಸ್ ಕೆಪಿಎ ಯ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಆನಂದ್ ಬಂಟ್ವಾಳ್ ಅವರು ನಡೆಸಿಕೊಟ್ಟರು.

 

Continue Reading

LATEST NEWS

Trending