Connect with us

    DAKSHINA KANNADA

    ಸತ್ಯವಾದ ದೈವದ ನುಡಿ… ನ್ಯಾಯಾಲಯಕ್ಕೆ ಶರಣಾದ ಕೊಲೆ ಆರೋಪಿ

    Published

    on

    ಉಡುಪಿ: ಅಭಯ ನೀಡಿದ್ದ ದೈವದ ಕಾರ್ಣಿಕದಿಂದ ಕೊಲೆ ಆರೋಪಿ ಪತ್ತೆಯಾಗಿದ್ದು, ತಾನಾಗೆ ಬಂದು ನ್ಯಾಯಾಲಯಕ್ಕೆ ಶರಣಾಗಿರುವ ಅಚ್ಚರಿಯ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಕಳೆದ ವರ್ಷ ಪಾಂಗಾಳದಲ್ಲಿ ಡ್ರ್ಯಾಗರ್ ನಿಂದ ಚುಚ್ಚಿ ಶರತ್‌ ಶೆಟ್ಟಿಯನ್ನು ಕೊಲೆಗೈದ ಆರೋಪಿ ಇದೀಗ ನ್ಯಾಯಾಲಯದ ಮುಂದೆ ಶರಣಾಗಿದ್ದಾನೆ. ಹಿಂದೆ ದೈವ ನೀಡಿದ್ದ ಕಾರ್ಣಿಕದ ನುಡಿ ಸತ್ಯವಾಯಿತಾ ಎಂಬ ಮಾತು ಕೇಳಿ ಬರುತ್ತಿದೆ. ಶರತ್‌ ಶೆಟ್ಟಿ ಹತ್ಯೆ ನಡೆದು ದಿನಗಳು ಕಳೆದರೂ ಕೊಲೆ ಆರೋಪಿಯ ಪತ್ತೆಯಾಗದೇ ಇದ್ದಾಗ ಕುಟುಂಬದವರು ದೈವದ ಮೊರೆ ಹೋಗಿದ್ದರು. ಈ ವೇಳೆ ‘ಕೊಲೆಗಾರ ಎಲ್ಲೇ ಇದ್ದರೂ ತಂದು ನಿಲ್ಲಿಸುತ್ತೇನೆ’ ಎಂದು ದೈವ ಅಭಯ ನೀಡಿತ್ತು. ಇದೀಗ ಆರೋಪಿ ತಾನಾಗಿಯೇ ಬಂದು ನ್ಯಾಯಾಲಯಕ್ಕೆ ಶರಣಾಗಿರುವುದು ಅಚ್ಚರಿಗೆ ಕಾರಣವಾಗಿದೆ.

                                                        ಶರತ್ ಶೆಟ್ಟಿ

    ಘಟನೆ:
    2023 ರ ಫೆಬ್ರವರಿ 5 ರಂದು ಉಡುಪಿಯ ಪಾಂಗಳ ಪಡುವಿನಲ್ಲಿ ಬಬ್ಬು ಸ್ವಾಮಿ ದೈವಸ್ಥಾನದ ನೇಮದಲ್ಲಿ ಭಾಗವಹಿಸಿದ್ದ ಶರತ್ ಶೆಟ್ಟಿ (42) ಅವರು ದುಷ್ಕರ್ಮಿಗಳಿಗೆ ಬಲಿಯಾಗಿದ್ದರು. ಮಾತುಕತೆಗೆ ಎಂದು ಕರೆದಿದ್ದ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದುರ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತಾದ್ರೂ ಆರೋಪಿಗಳು ಯಾರು ಅನ್ನೋದು ಪತ್ತೆಯಾಗಿರಲಿಲ್ಲ. ಇದರಿಂದ ಬೇಸತ್ತ ಕುಟುಂಬಸ್ಥರು ಪಾಂಗಾಳದ ಮನೆಯಲ್ಲಿ ವರ್ತೆ ಪಂಜುರ್ಲಿಗೆ ನೇಮೋತ್ಸವವನ್ನು ಆಯೋಜಿಸಿದ್ದರು. ಈ ಸಂದರ್ಭದಲ್ಲಿ ದೈವ ಆರೋಪಿಯನ್ನು ಪಾತಾಳದಲ್ಲಿದ್ದರೂ ಹುಡುಕಿ ಮುಂದೆ ನಿಲ್ಲಿಸುತ್ತೇನೆ ಎಂದು ಅಭಯ ನೀಡಿತ್ತು.

    Read More..; ಪಾಂಗಳ ಶರತ್ ಶೆಟ್ಟಿ ಕೊಲೆ ಪ್ರಕರಣ-ನಾಲ್ವರ ಬಂಧನ: ಕಲಿ ಯೋಗೀಶ ಸೇರಿ ಹಲವರಿಗೆ ಶೋಧ

    ಅದರಂತೆಯೇ ಮೇ.23ರಂದು ಪ್ರಕರಣ ಎ1 ಆರೋಪಿ ಯೋಗೀಶ್ ಆಚಾರ್ಯ ತಾನಾಗಿಯೇ ನ್ಯಾಯಾಲಯದ ಮುಂದೆ ಶರಣಾಗಿದ್ದಾನೆ. ಒಂದು ವರ್ಷ ಮೂರು ತಿಂಗಳು ತಲೆಮರಿಸಿಕೊಂಡಿದ್ದ ಈತ ಉಡುಪಿ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಹಾಜರಾಗಿದ್ದಾರೆ.
    ಶರತ್ ಶೆಟ್ಟಿ ಪ್ರಕರಣದ ಪ್ರಮುಖ ಆರೋಪಿ ಯೋಗೀಶ್ ಆಚಾರ್ಯನನ್ನು ಮೇ.30ರ ವರೆಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿತ್ತು. ಪ್ರಕರಣದ ಪ್ರಸ್ತುದ ತನಿಖಾಧಿಕಾರಿ ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ ಆರೋಪಿಯನ್ನು ನ್ಯಾಯಾಂಗ ಬಂಧನದಿಂದ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

    DAKSHINA KANNADA

    ಕರಾವಳಿಯಲ್ಲಿ ಮಳೆಗೆ ಮತ್ತೊಂದು ಬ*ಲಿ; ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಸಾ*ವು

    Published

    on

    ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಹಲವು ಜೀವಗಳನ್ನು ಬ*ಲಿ ಪಡೆದಿದೆ. ಇದೀಗ ಕರಾವಳಿಯಲ್ಲಿ ಮಳೆಗೆ ಮತ್ತೊಂದು ಬ*ಲಿಯಾಗಿದ್ದು, ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಸಾ*ವನ್ನಪಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.


    ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಗಣೇಶ್ ಶೆಟ್ಟಿ ಪುತ್ರಿ ಪ್ರತೀಕ್ಷಾ ಶೆಟ್ಟಿ(20) ಮೃ*ತ ದುರ್ದೈವಿ. ಯುವತಿ ಕಲ್ಲಡ್ಕದ ಮೆಡಿಕಲೊಂದರಲ್ಲಿ ಕೆಲಸ ಮಾಡುತ್ತಿದ್ದಳು.

    ಪ್ರತೀಕ್ಷಾ ಶೆಟ್ಟಿ ಮನೆಯ ಬಳಿ ಪಾರ್ಸೆಲ್ ಬಂದಿದೆ ಎಂದು ತೆಗೆದುಕೊಂಡು ಹೋಗಲು ಮನೆ ಸಮೀಪದ ರಸ್ತೆಗೆ ಬಂದಿದ್ದಾಳೆ. ರಸ್ತೆಯಲ್ಲಿ ವಿದ್ಯುತ್ ತಂತಿ ಮುರಿದು ಬಿದ್ದಿದ್ದು, ನೀರಿಗೆ ವಿದ್ಯುತ್‌ ಪ್ರವಹಿಸಿದೆ. ಈ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿದ್ದು, ಸ್ಥಳದಲ್ಲೇ ಯುವತಿ ಮೃ*ತಪಟ್ಟಿದ್ದಾಳೆ.

    ಇದನ್ನೂ ಓದಿ : ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರ ದುರಂ*ತ ಅಂ*ತ್ಯ

    ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು, ಯುವತಿಯ ಮೃ*ತದೇಹ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

    Continue Reading

    DAKSHINA KANNADA

    ಮಂಗಳೂರು : ಸೂರಜ್ ಪದವಿಪೂರ್ವ ಕಾಲೇಜಿನಲ್ಲಿ ಯೋಗ ದಿನಾಚರಣೆ

    Published

    on

    ಮಂಗಳೂರು : ಸೂರಜ್ ಪದವಿಪೂರ್ವ ಕಾಲೇಜಿನಲ್ಲಿ ಯೋಗ ದಿನಾಚರಣೆಯನ್ನು ನಡೆಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕ ರಾಜೇಶ್ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಾದ ಕೃ ತಿಕ್ ಮತ್ತು ಪೃತ್ವಿಕ್ 6 ರಿಂದ 10ನೇ ತರಗತಿಯ ಮಕ್ಕಳಿಗೆ ಯೋಗವನ್ನು ಹೇಳಿಕೊಟ್ಟರು.

    ಶಾಲೆಯ ವಿದ್ಯಾರ್ಥಿಗಳು ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು.

     

    Continue Reading

    DAKSHINA KANNADA

    ವಿಟ್ಲ : ಬಾಲವಿಕಾಸದಲ್ಲಿ ‘ವಿಕಾಸೋತ್ಸವ 2024-25 – ದ ಕಲ್ಚರಲ್ ಫೆಸ್ಟ್’

    Published

    on

    ವಿಟ್ಲ : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳಲ್ಲಿ ಸುಪ್ತವಾಗಿ ಹುದುಗಿರುವ ಪ್ರತಿಭೆಗಳನ್ನು ಹೊರತರಲು ಸೂಕ್ತವಾದ ವೇದಿಕೆಯನ್ನು ಒದಗಿಸಲು ಮೂರು ದಿನಗಳ ಕಾಲ ನಡೆಯಲಿರುವ ಶಾಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳು “ವಿಕಾಸೋತ್ಸವ 2024-25 – ದ ಕಲ್ಚರಲ್ ಫೆಸ್ಟ್ ” ಹಾಗೂ ವಿಜ್ಞಾನ ಮತ್ತು ಕಲಾ ಸಂಘಗಳ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.


    “ವಿಕಾಸೋತ್ಸವ 2024-25 ದ ಕಲ್ಚರಲ್ ಫೆಸ್ಟ್ -ಫೆಸ್ಟಿವಿಟಿ ಆಫ್ ಕ್ರಿಯೇಟಿವಿಟಿ ” ಎಂದು ಉಲ್ಲೇಖಿಸಲಾದ ವಿಜಯದ ಚೌಕಟ್ಟಿನ ಪರದೆಯನ್ನು ಅನಾವರಣಗೊಳಿಸುವುದರ ಮೂಲಕ ಹಾಗೂ ವಿವಿಧ ಲಲಿತ ಕಲೆಗಳನ್ನು ಬಿಂಬಿಸುವಂತಹ ವಿನ್ಯಾಸವಿರುವ ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕಗಳಿರುವ ಪೆಟ್ಟಿಗೆಯನ್ನು ತೆರೆಯುವ ಮೂಲಕ ವಿಕಾಸೋತ್ಸವ 2024-25 ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ನಂತರ “ಇನಾಗರೇಷನ್ ಆಫ್ ಸೈನ್ಸ್ ಅಂಡ್ ಆರ್ಟ್ಸ್ ಕ್ಲಬ್ ” ಎಂದು ಉಲ್ಲೇಖಿಸಲಾದ ಎಲ್ ಈ ಡಿ ಬೋರ್ಡಿನ ಗುಂಡಿಯನ್ನು ಒತ್ತುವ ಮೂಲಕ 2024-25ನೇ ಶೈಕ್ಷಣಿಕ ಸಾಲಿನ ವಿಜ್ಞಾನ ಹಾಗೂ ಕಲಾ ಸಂಘವನ್ನು ಉದ್ಘಾಟಿಸಲಾಯಿತು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷ ಪ್ರಹ್ಲಾದ್ ಶೆಟ್ಟಿ ಜೆ, ವಿದ್ಯಾರ್ಥಿಗಳು ಕೇವಲ ಪಠ್ಯ ಚಟುವಟಿಕೆಗಳಿಗೆ ತಮ್ಮನ್ನು ತಾವು ಸೀಮಿತಗೊಳಿಸದೆ ವಿಕಾಸೋತ್ಸವದಂತಹ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಪೋಷಕರ ಹಾಗೂ ಶಿಕ್ಷಕರ ಸೂಕ್ತ ಮಾರ್ಗದರ್ಶನವನ್ನು ಪಡೆದುಕೊಂಡು ತಮ್ಮಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಗಳನ್ನು ಹೊರತರುವ ಪ್ರಯತ್ನವನ್ನು ಮಾಡಿ ಜಯಗಳಿಸಬೇಕು ಎಂದು ಶುಭಹಾರೈಸಿದರು.


    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರಿನ ವಿವೇಕಾನಂದ ಕೇಂದ್ರೀಯ ಶಾಲೆಯ ಅಧ್ಯಕ್ಷ ವಸಂತಿ ಕೆ. , “ಮಾಣಿಯಂತಹ ಗ್ರಾಮೀಣ ಪರಿಸರದಲ್ಲಿ ಒಂದು ಅಚ್ಚುಕಟ್ಟಾದ ಹಾಗೂ ಸೌಲಭ್ಯಭರಿತ ಅತ್ಯದ್ಭುತವಾದ ಶಾಲಾ ಕಟ್ಟಡವನ್ನು ನಿರ್ಮಿಸಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅತ್ಯುತ್ತಮವಾದ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರ ಹಾಗೂ ಕಾರ್ಯದರ್ಶಿಗಳ ತ್ಯಾಗ ಮತ್ತು ಸೇವಾ ಮನೋಭಾವನೆ ಶ್ಲಾಘನೀಯವಾದುದು. ಶಾಲೆಯಲ್ಲಿ ರಚನೆ ಮಾಡುವ ವಿಜ್ಞಾನ ಸಂಘಗಳಂತಹ ವಿವಿಧ ಸಂಘಗಳು ವಿದ್ಯಾರ್ಥಿಗಳನ್ನು ವಿವಿಧ ಸಂಶೋಧನಾ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ0ತೆ ಮಾಡಿ ಜೀವನಾನುಭವಗಳನ್ನು ಗಳಿಸಿಕೊಳ್ಳಲು ನೆರವಾಗುತ್ತವೆ. ಆದ್ದರಿಂದ ಎಲ್ಲಾ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸಿ ಸ್ವಂತಿಕೆ ಮತ್ತು ಜೀವನಾಸಾಕ್ತಿಗಳನ್ನು ಹೆಚ್ಚಿಸಿಕೊಳ್ಳಬೇಕು “ಎಂದರು.

    ಇನ್ನೋರ್ವ ಮುಖ್ಯ ಅತಿಥಿ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕರಾದ ಕರುಣಾಕರ ಬಳ್ಕೂರು ಮಾತನಾಡಿ, ” ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಒಂದು ಅತ್ಯುತ್ತಮ ಶಿಕ್ಷಣ ಸಂಸ್ಥೆ. ಎಲ್ಲಾ ಪೋಷಕರು ತಮ್ಮ ನಿಷ್ಕಲ್ಮಶ ಮನಸ್ಸಿನ ಮಕ್ಕಳಿಗೆ ಇಂತಹ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣವನ್ನು ಒದಗಿಸುತ್ತಿರುವುದು ಸಾರ್ಥಕ. ಹಳ್ಳಿಯ ಪರಿಸರದಲ್ಲಿ ಸುಂದರವಾದ ಪ್ರಕೃತಿ ಮಾತೆಯ ಮಡಿಲಲ್ಲಿ ಅತ್ಯದ್ಭುತವಾದ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಗುಣಮಟ್ಟದ ಶಿಕ್ಷಣವನ್ನು ಒದಗಿಸುತ್ತಿರುವ ಇಂತಹ ಶಾಲೆಯಲ್ಲಿ ನಾನು ಕೂಡ ಒಬ್ಬ ವಿದ್ಯಾರ್ಥಿಯಾಗಿರಬೇಕಿತ್ತು ಎಂದು ಅನಿಸುತ್ತಿದೆ. ವಿದ್ಯೆ ಕದಿಯಲಾಗದ ಸಂಪತ್ತು. ಅಂತಹ ವಿದ್ಯೆಯನ್ನು ಮಕ್ಕಳೆಲ್ಲರೂ ಇಷ್ಟಪಟ್ಟು ಕಲಿತು ವಿದ್ಯೆಯ ಜೊತೆಗೆ ಸಾಂಸ್ಕೃತಿಕವಾಗಿಯೂ ಕೂಡ ಬೆಳೆಯಬೇಕು. ಈ ಮೂರು ದಿನಗಳ ಕಾಲ ಶಾಲೆಯಲ್ಲಿ ನಡೆಯುವ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಮಕ್ಕಳೆಲ್ಲರೂ ತಮ್ಮನ್ನು ತಾವು ತೊಡಗಿಸಿಕೊಂಡು ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಿ ಜೀವನದಲ್ಲಿ ಸಾಧನೆಯನ್ನು ಮಾಡಬೇಕು” ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.

    “ಬಾಲವಿಕಾಸ ನೀಡುತ್ತಿರುವ ಈ ಅದ್ಭುತವಾದ ಶಿಕ್ಷಣ ಸೇವೆ ಇನ್ನೂ ಹಲವಾರು ವರ್ಷಗಳವರೆಗೆ ಹಾಗೇ ಮುಂದುವರಿಯಲಿ ” ಎಂದು ಶುಭ ಹಾರೈಸಿದರು.

    ಕಾರ್ಯಕ್ರಮದಲ್ಲಿ ಬಾಲವಿಕಾಸ ಟ್ರಸ್ಟಿನ ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ, ಶಾಲಾ ವ್ಯವಸ್ಥಾಪಕಿ ನಯನ ಎಂ, ಶಾಲಾ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ವಿಜಯಲಕ್ಷ್ಮಿ ವಿ.ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

    ಇದನ್ನೂ ಓದಿ : ಕಚೇರಿಗೆ ತೆರಳಲು ಸಿದ್ಧವಾಗುತ್ತಿದ್ದಾಗ ಹೃದಯಾ*ಘಾತ; 24 ವರ್ಷದ ಯುವತಿ ದುರ್ಮ*ರಣ

    ಶಾಲಾ ಪ್ರಾಂಶುಪಾಲರಾದ ರವೀಂದ್ರ ದರ್ಬೆ ಸ್ವಾಗತಿಸಿ, ಸಹಶಿಕ್ಷಕಿ ಯಜ್ಞೆಶ್ವರಿ ಎನ್ ವಂದಿಸಿ, ಸಹಶಿಕ್ಷಕಿಯರಾದ ಜಯಶ್ರೀ ಆಚಾರ್ಯ ಹಾಗೂ ಅನಿತಾ ಜಿ. ನಿರೂಪಿಸಿದರು.

    ಜೂನ್ 26 ರಿಂದ ಜೂನ್ 28ರವರೆಗೆ 3 ದಿನಗಳ ಕಾಲ ನಡೆಯುವ ಈ ಸಾಂಸ್ಕೃತಿಕ ಹಬ್ಬದಲ್ಲಿ ಒಟ್ಟು 83 ಸ್ಪರ್ಧೆಗಳು ನಡೆಯಲಿದ್ದು ಒಂದರಿಂದ ಹತ್ತನೆ ತರಗತಿಯವರೆಗಿನ ಒಟ್ಟು 647 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

    Continue Reading

    LATEST NEWS

    Trending