DAKSHINA KANNADA
ಬಾಂಬ್ ತಯಾರಿಸುತ್ತಿದ್ದ ವೀಡಿಯೋಗಳನ್ನು ಐಸಿಸ್ ಸಹಚರರಿಗೆ ಶೇರ್ ಮಾಡಿದ್ದ ಶಾರೀಕ್…!
ಶಿವಮೊಗ್ಗ: ಮಂಗಳೂರಿನ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಂಕಿತ ಉಗ್ರ ಶಾರಿಕ್ ಸಹಚರನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೈಸೂರಿನಲ್ಲಿ ವಾಸಿಸುತ್ತಿದ್ದ.
ಆರೋಪಿ ಶಾರಿಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವುದರಿಂದ ಆತನ ವಿಚಾರಣೆ ನಡೆಸಲು ಪೊಲೀಸರಿಗೆ ಸಾಧ್ಯವಾಗಿಲ್ಲ. ಆದರೆ ಈತನ ಬಗೆಗಿನ ಭಿನ್ನ ತೆರನಾದ ತನಿಖೆಯಿಂದ ಅನೇಕ ಮಾಹಿತಿಗಳು, ನೈಜ ಅಂಶಗಳು ಬೆಳಕಿಗೆ ಬರುತ್ತಿದೆ.
ತುಂಗಾ ನದಿ ಸ್ಫೋಟ ಪ್ರಕರಣದಲ್ಲೂ ಸಿಂಹಪಾಲು ಶಾರೀಕ್ದ್ದೇ ಆಗಿತ್ತೆಂದು ಹೇಳಲಾಗುತ್ತಿದೆ. ಈ ಮಧ್ಯೆ ಈತನ ಹಿನ್ನೆಲೆ ನೋಡ ಹೊರಟಾಗ ಶಿವಮೊಗ್ಗ ಪೊಲೀಸರು ಸೆಪ್ಟೆಂಬರ್ನಲ್ಲಿ ನಡೆಸಿದ ತನಿಖೆಯ ಪ್ರಕಾರ, ಟೆಲಿಗ್ರಾಮ್ನಲ್ಲಿರುವ ಐಸಿಸ್ನ ಅಧಿಕೃತ ಮಾಧ್ಯಮ ಕೇಂದ್ರ ಅಲ್-ಹಯಾತ್ನ ಸದಸ್ಯರಾಗಿದ್ದ ತನ್ನ ಇಬ್ಬರು ಸಹಚರರಿಗೆ ಬಾಂಬ್ ತಯಾರಿಕೆಗೆ ಸಂಬಂಧಿಸಿದ ವೀಡಿಯೊಗಳು ಮತ್ತು ದಾಖಲೆಗಳನ್ನು ಶಾರಿಕ್ ಕಳುಹಿಸುತ್ತಿದ್ದ ಎಂಬ ಸತ್ಯ ಬಹಿರಂಗವಾಗಿದೆ.
ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಪ್ರೇಮ್ ಸಿಂಗ್ ಎಂಬಾತನಿಗೆ ಚೂರಿ ಇರಿದ ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರು, ಪ್ರಮುಖ ಆರೋಪಿ ಜಬೀವುಲ್ಲಾ ಸೇರಿದಂತೆ ನಾಲ್ವರನ್ನು ಬಂಧಿಸಿ ಯುಎಪಿಎ ಹಾಕಿದ್ದರು.
ತನಿಖೆಯ ಸಂದರ್ಭದಲ್ಲಿ, ಶಾರಿಕ್ಗೆ ಮಾಜ್ ಮುನೀರ್ ಮತ್ತು ಸಯ್ಯದ್ ಯಾಸೀನ್ ಎಂಬ ಇಬ್ಬರು ಸಹಚರರು ಇದ್ದಾರೆ ಎಂದು ಪೊಲೀಸರಿಗೆ ತಿಳಿದು ಬಂದಿದೆ. ಶಾರಿಕ್ ಮತ್ತು ಮಾಜ್ 2020 ರ ಮಂಗಳೂರಿನ ಗೋಡೆ ಮೇಲೆ ಬರೆದ ಪ್ರಕರಣದಲ್ಲಿ ಭಾಗಿಯಾಗಿದ್ದರು.
ಶಿವಮೊಗ್ಗದ ಚೂರಿ ಇರಿತ ಘಟನೆಯ ತನಿಖೆ ನಡೆಸಿದ ದೊಡ್ಡಪೇಟೆ ಪೊಲೀಸರು, ಐಸಿಸ್ನ ಭಯೋತ್ಪಾದಕ ಚಟುವಟಿಕೆಗಳನ್ನು ಮತ್ತಷ್ಟು ಹೆಚ್ಚಿಸಲು ಮತ್ತು ದೇಶದ ಏಕತೆ, ಭದ್ರತೆ ಮತ್ತು ಸಾರ್ವಭೌಮತೆಗೆ ಧಕ್ಕೆ ತರಲು ಸಂಚು ರೂಪಿಸಲಾಗಿದೆ ಎಂದು ಕಂಡುಹಿಡಿದಿದ್ದಾರೆ.
ಆರೋಪಿಗಳು ಸಾರ್ವಜನಿಕ ಆಸ್ತಿ ಮತ್ತು ಜೀವಕ್ಕೆ ಅಪಾಯವನ್ನುಂಟುಮಾಡುವ ಸ್ಫೋಟಕಗಳನ್ನು ಅಕ್ರಮವಾಗಿ ಹೊಂದಿದ್ದರು ಎಂದು ತಿಳಿದು ಬಂದಿದೆ. ರಾಷ್ಟ್ರಧ್ವಜ ಸುಟ್ಟ ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಸೆ.19ರಂದು ಪ್ರತ್ಯೇಕ ಪ್ರಕರಣ ದಾಖಲಾಗಿತ್ತು.
ಈ ಎಲ್ಲ ಕೃತ್ಯಗಳಲ್ಲಿ ಶಾರಿಕ್ ಪ್ರಮುಖ ಆರೋಪಿಯಾಗಿದ್ದರೆ, ಮಾಜ್ ಮತ್ತು ಯಾಸೀನ್ ಕ್ರಮವಾಗಿ ಎರಡು ಮತ್ತು ಮೂರನೇ ಆರೋಪಿಯಾಗಿದ್ದಾರೆ.
ಯಾಸೀನ್ ಮಾಜ್ ಮತ್ತು ಶಾರಿಕ್ ಭೇಟಿಯಾದಾಗಲೆಲ್ಲಾ ಜಿಹಾದ್ನ ಮೂಲಭೂತ ವಿಚಾರಗಳು ಮತ್ತು ಪರಿಕಲ್ಪನೆಗಳನ್ನು ಚರ್ಚಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಟೆಲಿಗ್ರಾಮ್, ಸಿಗ್ನಲ್, ಇನ್ಸ್ಟಾಗ್ರಾಮ್, ವೈರ್, ಎಲಿಮೆಂಟ್ ಮುಂತಾದ ಮೆಸೆಂಜರ್ ಆ್ಯಪ್ಗಳ ಮೂಲಕ ಶಾರಿಕ್ ಉಗ್ರವಾದ, ಮೂಲಭೂತವಾದ, ಐಸಿಸ್ ಮತ್ತು ಇತರ ಭಯೋತ್ಪಾದಕ ಸಂಘಟನೆಗಳ ಕೆಲಸಗಳಿಗೆ ಸಂಬಂಧಿಸಿದ ಪಿಡಿಎಫ್ ಫೈಲ್ಗಳು, ವಿಡಿಯೋ ಮತ್ತು ಆಡಿಯೋ ಮತ್ತು ಲಿಂಕ್ಗಳನ್ನು ಯಾಸಿನ್ಗೆ ಕಳುಹಿಸುತ್ತಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.
ಬಾಂಬ್ಗಳನ್ನು ತಯಾರಿಸುವ ಪರಿಕಲ್ಪನೆಯ ಬಗ್ಗೆ ಶಾರಿಕ್ ಹಂಚಿಕೊಂಡ ಪಿಡಿಎಫ್ ಫೈಲ್ಗಳು ಮತ್ತು ವೀಡಿಯೊಗಳಲ್ಲಿ ತಿಳಿದುಕೊಂಡ ನಂತರ ಇಬ್ಬರು ಆರೋಪಿಗಳು ಇ-ಕಾಮರ್ಸ್ ಸೈಟ್ ಮತ್ತು ಬ್ಯಾಟರಿಗಳು, ಸ್ವಿಚ್ಗಳು, ವೈರ್ಗಳು, ಮ್ಯಾಚ್ಬಾಕ್ಸ್ಗಳು ಮತ್ತು ಇತರ ಸ್ಫೋಟಕ ವಸ್ತುಗಳನ್ನು ಬಾಂಬ್ ತಯಾರಿಸಲು ಬೇಕಾದ ಟೈಮರ್ ರಿಲೇ ಸರ್ಕ್ಯೂಟ್ಗಳನ್ನು ವಮೊಗ್ಗದಲ್ಲಿ ಖರೀದಿಸಿದ್ದರು.
ಇವರು ಸ್ಪೋಟಕಗಳನ್ನು ಕೂಡಾ ತಯಾರಿಸುತ್ತಿದ್ದರು ಎಂದು ತಿಳಿದುಬಂದಿದೆ.
ಸ್ವಾತಂತ್ರ್ಯ ದಿನಾಚರಣೆಯ ನಂತರದ ದಿನಗಳಲ್ಲಿ, ಬಾಂಬ್ ಪರೀಕ್ಷೆಯ ಸ್ಥಳದ ಬಳಿ ರಾಷ್ಟ್ರಧ್ವಜವನ್ನು ಸುಟ್ಟು ಅದನ್ನು ವೀಡಿಯೊ ಚಿತ್ರೀಕರಿಸಲಾಯಿತು.
ಬಾಂಬ್ ತಯಾರಿಸಲು ಬೇಕಾದ ಹಣವನ್ನು ಯಾಸಿನ್ಗೆ ಕ್ರಿಪ್ಟೋಕರೆನ್ಸಿ ಮೂಲಕ ಶಾರಿಕ್ ಕಳುಹಿಸಿದ್ದ ಎಂದು ಪೊಲೀಸರು ಪತ್ತೆ ಹಚ್ಚಿದ್ದರು. ಶಾರಿಕ್ ಈಗ ಆಸ್ಪತ್ರೆಗೆ ದಾಖಲಾಗಿದ್ದರೆ, ಮಾಜ್ ಮತ್ತು ಯಾಸೀನ್ ನ್ಯಾಯಾಂಗ ಬಂಧನದಲ್ಲಿದ್ದಾರೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
DAKSHINA KANNADA
ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು
ಮಂಗಳೂರು: ಗುಜರಾತ್ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.
ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್ ಗಾರ್ಡ್ ತಂಡ ಹೆಲಿಕಾಪ್ಟರ್ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.
ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್ ಗಾರ್ಡ್ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್ ಗಾರ್ಡ್ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
DAKSHINA KANNADA
ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!
ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.
ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.
ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.
ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.
ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ