Connect with us

    LATEST NEWS

    ದಿಢೀರ್‌ ಟೊಮೆಟೊ ದರ ಭಾರೀ ಏರಿಕೆ: ಗ್ರಾಹಕರು ಶಾಕ್!

    Published

    on

    ಬೆಂಗಳೂರು: ಕಳೆದ ಒಂದು ವಾರದ ಹಿಂದೆ ಕೆಜಿಗೆ 40 ರೂ. ಇದ್ದ ದರ ಈಗ ಎರಡು ಪಟ್ಟು ಹೆಚ್ಚಳವಾಗಿದೆ. ಶುಕ್ರವಾರದಿಂದ ಕೆಜಿಗೆ 80 ರೂ. ದರದಲ್ಲಿ ಟೊಮೆಟೊ ಮಾರಾಟವಾಗುತ್ತಿದೆ.

    ಜನಸಾಮಾನ್ಯರಿಗೆ ಒಂದರ ಹಿಂದೆ ಒಂದರಂತೆ ದರ ಏರಿಕೆಯ ಬರೆ ಬೀಳುತ್ತಿದ್ದು ಈರುಳ್ಳಿ, ಬೆಳ್ಳುಳ್ಳಿ ಬಳಿಕ ಟೊಮೆಟೊ ದರ ಏರಿಕೆಯಾಗಿದೆ.

    ಅಕಾಲಿಕ ಮಳೆ‌ಯಿಂದ ಟೊಮೆಟೊ ಇಳುವರಿ ಕುಸಿತಗೊಂಡಿದೆ. ಇದರ ಜೊತೆ ಈಗ ನವರಾತ್ರಿ ಹಬ್ಬ ಆರಂಭಗೊಂಡಿದೆ. ಬೇಡಿಕೆ ಜಾಸ್ತಿ ಇದೆ. ಪೂರೈಕೆ ಕಡಿಮೆ ಇರುವ ಕಾರಣ ಟೊಮೆಟೊ ಬೆಲೆ ದಿಢೀರ್‌ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ.

    ಈಗಾಗಲೇ ಅಕಾಲಿಕ ಮಳೆಯಿಂದಾಗಿ 1 ಕೆಜಿ ಈರುಳ್ಳಿ ದರ 70 ರೂ. ದಾಟಿದೆ. 1 ಕೆಜಿ ಬೆಳ್ಳುಳ್ಳಿ ದರ 500 ರೂ. ಆಗಿದೆ. ಈಗ ಟೊಮೆಟೊ ದರ ಏರಿಕೆಯಿಂದಾಗಿ ದಸರಾ ಹಬ್ಬದ ಸಮಯದಲ್ಲಿ ಜನರ ಜೇಬು ಮತ್ತಷ್ಟು ಖಾಲಿಯಾಗಲಿದೆ.

    FILM

    ನಡುರಸ್ತೇಲಿ ನಿಂತ ಕಾರಲ್ಲೇ ಡ್ರೆಸ್ ಚೇಂಜ್ ಮಾಡುತ್ತಿದ್ದ ಈ ನಟಿ…ಯಾರು ಗೊತ್ತಾ?

    Published

    on

    ನಮಗೆಲ್ಲಾ ತಿಳಿದಿರುವಂತೆ, ಕಹಾನಿ 2012 ರಲ್ಲಿ ಬಿಡುಗಡೆಯಾಗಿತ್ತು. ಇದರಲ್ಲಿ ನವಾಜುದ್ದೀನ್ ಸಿದ್ದಿಕಿ, ಪರಂಬ್ರತ ಚಟರ್ಜಿ, ಶಾಶ್ವತ ಚಟರ್ಜಿ, ಇಂದ್ರನೀಲ್ ಸೆಂಗುಪ್ತ, ಧೃತಿಮಾನ್ ಚಟರ್ಜಿ, ದರ್ಶನ್ ಜರಿವಾಲಾ ಮತ್ತು ಇತರರು ನಟಿಸಿದ್ದರು. ಕಾಣೆಯಾದ ಗಂಡನನ್ನು ಹುಡುಕಲು ಲಂಡನ್‌ನಿಂದ ಕೋಲ್ಕತ್ತಾಗೆ ಪ್ರಯಾಣಿಸುವ ವಿದ್ಯಾ ಬಾಗ್ಚಿ ಎಂಬ ಗರ್ಭಿಣಿ ಮಹಿಳೆಯನ್ನು ಕಥೆಯನ್ನು ಇದು ಹೊಂದಿದೆ. ಆದರೆ, ಸಿನಿಮಾದ ಕ್ಲೈಮ್ಯಾಕ್ಸ್‌ ಮಾತ್ರ ಬಹಳ ವಿಭಿನ್ನವಾಗಿ ಚಿತ್ರಿಸಲಾಗಿತ್ತು.


    ಕಹಾನಿ ಸ್ಲೀಪರ್ ಹಿಟ್ ಆಗಿ ಹೊರಹೊಮ್ಮಿ 12 ವರ್ಷಗಳಾಗಿವೆ. ಆದರೆ, ಸುಜಯ್‌ ಘೋಷ್‌ ನಿರ್ದೇಶನದ ಈ ಸಿನಿಮಾದ ಇನ್‌ಸೈಡ್‌ ಸ್ಟೋರಿಗಳು ಇಂದಿಗೂ ಈ ಸಿನಿಮಾ ಬಗ್ಗೆ ಕುತೂಹಲ ಹುಟ್ಟಿಸುವಂತೆ ಮಾಡುತ್ತದೆ. ಕೋಲ್ಕತ್ತಾದ ದುರ್ಗಾಪೂಜೆಯ ಸಂಭ್ರವವನ್ನು ಸಿನಿಮಾದಲ್ಲಿ ದೊಡ್ಡ ಮಟ್ಟದಲ್ಲಿ ಚಿತ್ರಿಸಲಾಗಿತ್ತು. ಅದರೊಂದಿಗೆ ಸಿನಿಮಾವನ್ನು ಗೆರಿಲ್ಲಾ ಫಿಲ್ಮ್‌ಮೇಕಿಂಗ್‌ ಮಾಡಲಾಗಿತ್ತು. ಅದೇನೇ ಇದ್ದರೂ ಕಹಾನಿ ಸಿನಿಮಾವನ್ನು ಶೂಟಿಂಗ್‌ ಮಾಡೋದು ನಿರ್ದೇಶಕರಿಗೆ ಮಾತ್ರವಲ್ಲ ನಟರಿಗೂ ಕಷ್ಟವಾಗಿತ್ತು.


    “ಈ ಸಿನಿಮಾಗಾಗಿ ದೊಡ್ಡ ಬಜೆಟ್‌ ಇದ್ದಿರಲಿಲ್ಲ. ವ್ಯಾನಿಟಿ ವ್ಯಾನ್‌ ಸೌಲಭ್ಯವೂ ಇರಲಿಲ್ಲ. ನಿಸಲ್ಲಿಸುವ ಹಾಗೆಯೂ ಇರಲಿಲ್ಲ. ಹಾಗಾಗಿ ಪ್ರತಿ ಬಾರಿ ಅವರು ಬಟ್ಟೆ ಬದಲಾಯಿಸಬೇಕಾದಾಗ, ಅವರ ಇನ್ನೋವಾ ಕಾರ್‌ಗೆ ಕಪ್ಪು ಬಟ್ಟೆ ಹೊದಿಸಿ, ನಡು ರಸ್ತೆಯಲ್ಲಿ ನಿಂತಿದ್ದ ಕಾರ್‌ನಲ್ಲಿಯೇ ಬಟ್ಟೆ ಬಸಲಾಯಿಸಿ, ಶೂಟಿಂಗ್‌ಗೆ ಬರುತ್ತಿದ್ದರು” ಎಂದು ನಿರ್ದೇಶಕರು ಹೇಳಿದ್ದಾರೆ.
    “ಅಲಾದಿನ್‌ನ ವೈಫಲ್ಯದ ನಂತರ, ವಿದ್ಯಾ ಅವರು ಕಹಾನಿ ಬೇಡ ಎಂದು ಸುಲಭವಾಗಿ ಹೇಳಬಹುದಿತ್ತು. ಆದರೆ, ಅವರು ಅದಾಗಲೇ ಮಾತು ಕೊಟ್ಟಾಗಿತ್ತು. ಅಮಿತಾಬ್‌ ಬಚ್ಚನ್‌, ಶಾರುಖ್‌ ಖಾನ್‌ ರೀತಿಯಲ್ಲಿ ಕೊಟ್ಟ ಮಾತನ್ನು ಪಾಲಿಸುವಂತ ಕಲಾವಿದೆ ವಿದ್ಯಾ ಬಾಲನ್‌” ಎಂದು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

    Continue Reading

    LATEST NEWS

    ಮ್ಯಾನೇಜರ್‌ಗೆ ವಂಚನೆ; ಲಕ್ಷಾಂತರ ನಗದು ಸಹಿತ ವೈಟರ್ ಪರಾರಿ

    Published

    on

    ಮಣಿಪಾಲ: ಹೊಟೇಲ್ ಮ್ಯಾನೇಜರ್‌ಗೆ ವೈಟರ್ ವಂಚಿಸಿ ಲಕ್ಷಾಂತರ ನಗದಿನೊಂದಿಗೆ ಪರಾರಿಯಾದ ಘಟನೆ ಮಣಿಪಾಲದ ಈಶ್ವರನಗರ ಹೊಟೇಲ್‌ನಲ್ಲಿ ನಡೆದಿದೆ.


    ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿರುವ ಗಿರೀಶ್ ವಂಚನೆಗೊಳಗಾದವರು.
    ಹೊಟೇಲ್‌ನಲ್ಲಿ ವೈಟರ್‌ ಆಗಿ ಕೆಲಸ ಮಾಡಿಕೊಂಡಿದ್ದ ಜಯಮೋಹನ್ ಸೊಮೇಶ್ ಎಂಬಾತ ಗಿರೀಶ್ ಅವರೊಂದಿಗೆ ವಾಸವಾಗಿದ್ದನು. ಸೆ.29 ರಂದು ಗಿರೀಶ್ ಅವರು ಕೆಲಸ ಮುಗಿಸಿ ರೂಮಿಗೆ ಬಂದು 26,650 ರೂ. ನಗದು ಹಾಗೂ 10,000 ರೂ. ಬೆಲೆಬಾಳುವ ವಿವೋ ವೈ 18 ಮಾದರಿಯ ಮೊಬೈಲ್ ಫೋನ್ ಅನ್ನು ತನ್ನ ರೂಮಿನ ಡ್ರಾವರಲ್ಲಿಟ್ಟು ಮಲಗಿದ್ದರು.
    ಮರುದಿನ ಬೆಳಿದ್ದೆ ನೋಡಿದಾಗ ಜಯಮೋಹನ್ ಸ್ಥಳದಲ್ಲಿರಲಿಲ್ಲ. ಡ್ರಾವರ್‌ನಲ್ಲಿ ಇಟ್ಟಿದ್ದ ನಗದು, ಮೊಬೈಲ್ ಹಾಗೂ ಹೊಟೇಲ್ ಹೆಸರಿನಲ್ಲಿರುವ ಎಚ್‌ಡಿಎಫ್‌ಸಿ ಖಾತೆಯಿಂದ 81,000 ರೂ. ಗಳನ್ನು ಗೂಗಲ್ ಪೇ ಮೂಲಕ ಆರೋಪಿ ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾದ್ದು, ತನಿಖೆ ನಡೆಸುತ್ತಿದ್ದಾರೆ.

    Continue Reading

    BIG BOSS

    ಮಹಿಳೆಯರ ಒಳ ಉಡುಪಿನ ಬಗ್ಗೆ ಲಾಯರ್ ಜಗದೀಶ್ ಮಾತು.. ಏನಿದು ವಿವಾದ?

    Published

    on

    ಲಾಯರ್ ಜಗದೀಶ್ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಸದ್ಯ ಮಹಿಳೆಯರ ಒಳಉಡುಪಿನ ಬಗ್ಗೆ ಮಾತನಾಡಿ ವಿವಾದ ಸೃಷ್ಟಿ ಮಾಡಿದ್ದಾರೆ. ಈ ವಿಚಾರದ ಬಗ್ಗೆ ಸಖತ್ ಚರ್ಚೆ ಆಗುತ್ತಿದೆ.

    ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ಸಿ ಟಾಸ್ಕೆ ಅವಕಾಶ ನೀಡಲಾಗಿತ್ತು. ಇದರಲ್ಲಿ ಸ್ವರ್ಗ ನಿವಾಸಿಗಳು ಮಾತ್ರ ಭಾಗಿ ಆಗಲು ಅವಕಾಶ ಇತ್ತು. 10 ಮಂದಿಯಲ್ಲಿ ಆರು ಜನರು ಮಾತ್ರ ಕ್ಯಾಪ್ಟನ್ಸಿ ಟಾಸ್ಕಲ್ಲಿ ಇರಬಹುದು ಎಂದು ಬಿಗ್ ಬಾಸ್ ಆದೇಶ ಕೊಟ್ಟರು. ಇಷ್ಟೇ ಅಲ್ಲ, ಆರು ಮಂದಿಯನ್ನು ಸ್ವರ್ಗ ನಿವಾಸಿಗಳ ಒಮ್ಮತದ ನಿರ್ಧಾರದಿಂದ ಆಯ್ಕೆ ಮಾಡಬೇಕು ಎಂದು ಬಿಗ್ ಬಾಸ್ ಆದೇಶ ನೀಡಿದರು.

    ವೋಟಿಂಗ್ ಆಧಾರದ ಮೇಲೆ ಸ್ಪರ್ಧಿಗಳನ್ನು ಆಯ್ಕೆ ಮಾಡೋಣ ಎನ್ನುವ ನಿರ್ಧಾರಕ್ಕೆ ಎಲ್ಲರೂ ಬಂದರು. ಇದು ಜಗದೀಶ್ ಅವರ ಕೋಪಕ್ಕೆ ಕಾರಣ ಆಯಿತು. ಅವರು ನೇರವಾಗಿ ಸ್ಪರ್ಧಿಗಳ ವಿರುದ್ಧ ಹರಿಹಾಯ್ದರು. ಅದರಲ್ಲೂ ಈ ಐಡಿಯಾ ನೀಡಿದ ಉಗ್ರಂ ಮಂಜು ವಿರುದ್ಧ ಸಿಡಿದೆದ್ದರು. ಮಾತು ಮಿತಿ ಮೀರುತ್ತಿತ್ತು. ‘ನೀನು ಸಿನಿಮಾದಲ್ಲಿ ಮಾತ್ರ ಉಗ್ರಂ ನಿಜ ಜೀವನದಲ್ಲಿ ನಾನು ನಿನಗೆ ಉಗ್ರಂ ತೋರಿಸುತ್ತೇನೆ’ ಎಂದು ಜಗದೀಶ್ ಹೇಳಲು ಆರಂಭಿಸಿದರು.

    ಇದಕ್ಕೆ ಮಂಜು ಹೆಚ್ಚಿನ ಉತ್ತರ ಕೊಡೋಕೆ ಹೋಗಿಲ್ಲ.’ಬೋ..’ `ಬೋ..’ ಎಂದಷ್ಟೇ ಹೇಳಿದರು.’ಬೋ ಪ್ಯಾಂಟೀಸ್ ಎಲ್ಲ ನೋಡಿದೀನಿ.ನನ್ನ ಹೆಂಡತಿ ಹಾಕೋದು ಇದನ್ನೇ’ ಎಂದು ಜಗದೀಶ್ ಹೇಳಿದ್ದಾರೆ. ಇದು ಮನೆಯವರ ಅಸಮಾಧಾನಕ್ಕೆ ಕಾರಣ ಆಗಿದೆ. ಈ ವೇಳೆ ನಿಜವಗಾಲೂ ಇನ್ಸ್‌ಕ್ಯೂರ್ ಫೀಲ್ ಆಗ್ತಿದೆ ಎಂದು ಭವ್ಯಾ ಗೌಡ ಹೇಳಿದ್ದಾರೆ.

    Continue Reading

    LATEST NEWS

    Trending