Connect with us

DAKSHINA KANNADA

ನಾಡಿನಾದ್ಯಂತ ಇಂದು ಷಷ್ಠಿ ಮಹೋತ್ಸವ ಸಂಭ್ರಮ-ನಾಗದೇವರಿಗೆ ವಿಶೇಷ ಪೂಜೆ

Published

on

ಮಂಗಳೂರು: ಚಂಪಾ ಷಷ್ಠಿ ದಿನವಾದ ಮಂಗಳವಾರ ನಾಡಿನೆಲ್ಲೆಡೆ ಸ್ಕಂದ, ಷಣ್ಮುಖ, ಕಾರ್ತಿಕೇಯ, ಕುಮಾರ ಎಂಬೆಲ್ಲ ಹೆಸರುಗಳಿಂದ ಕರೆಯಲ್ಪಡುವ ಶ್ರೀ ಸುಬ್ರಹ್ಮಣ್ಯನ ಪರ್ವ ದಿನ. ಸುಬ್ರಹ್ಮಣ್ಯನ ದೇಗುಲಗಳಲ್ಲಿ ಮತ್ತು ನಾಗಾರಾಧನೆಯ ತಾಣಗಳಲ್ಲಿ ಇಂದು ನಾಗನಿಗೆ ವಿಶೇಷ ಪೂಜೆ, ಸೇವೆಗಳು ನಡೆಯುತ್ತಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ, ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನ, ವರ್ಕಾಡಿ ಶ್ರೀ ಸುಬ್ರಹ್ಮಣ್ಯ ದೇವಳ, ಬೇಳ ಶ್ರೀ ಕುಮಾರ ಮಂಗಲ ದೇವಸ್ಥಾನ ಮತ್ತು ಇತರ ಸುಬ್ರಹ್ಮಣ್ಯ ದೇಗುಲಗಳು ಮತ್ತು ನಾಗ ಕ್ಷೇತ್ರಗಳಲ್ಲಿ ಷಷ್ಠಿ ಮಹೋತ್ಸವದ ಆಚರಣೆ ನಡೆಯುತ್ತಿದೆ.


ಭಕ್ತರು ಅಧಿಕ ಸಂಖ್ಯೆಯಲ್ಲಿ ಈ ದೇವಳಗಳಿಗೆ ಮತ್ತು ನಾಗಾರಾಧನೆಯ ತಾಣಗಳಿಗೆ ಭೇಟಿ ನೀಡಿ ಪೂಜೆ ಪುನಸ್ಕಾರಗಳಲ್ಲಿ ಭಾಗವಹಿಸುತ್ತಿದ್ದಾರೆ. ಷಷ್ಠಿ ಎಂದರೆ ಸಂಸ್ಕೃತದಲ್ಲಿ ಆರು ಎಂದು ಅರ್ಥ. ಪಂಚಾಂಗದಲ್ಲಿ ಬರುವ ಹದಿನೈದು ತಿಥಿಗಳಲ್ಲಿ ಷಷ್ಠಿ ತಿಥಿಗೆ ತನ್ನದೇ ಆದ ಸ್ಥಾನಮಾನವಿದೆ.

ಈ ತಿಥಿಯ ಅಧಿಪತಿ ಸ್ಕಂದ ಅಂದರೆ ಕಾರ್ತಿಕೇಯ. ಈತನನ್ನು ಪೂಜಿಸುವುದರಿಂದ ಒಬ್ಬ ವ್ಯಕ್ತಿ ಕೀರ್ತಿವಂತನೂ ಪ್ರಸಿದ್ಧನೂ ಆಗುತ್ತಾನೆ ಎಂಬ ನಂಬಿಕೆಯಿದೆ. ಬುದ್ಧಿವಂತಿಕೆ ಕಡಿಮೆ ಇರುವ ಮಗು ಅಥವಾ ತೊದಲುವಿಕೆ ಕಡಿಮೆಯಿರುವ ಮಕ್ಕಳು ಕಾರ್ತಿಕೇಯನ ಆರಾಧನೆ ಮಾಡಿದಲ್ಲಿ ಆ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು ಎಂಬ ನಂಬಿಕೆಯಿದೆ.

ನಾಗನ ಅಥವಾ ಸುಬ್ರಹ್ಮಣ್ಯನ ಆರಾಧನೆ ಎಂದರೆ ಪ್ರಕೃತಿಯ ಆರಾಧನೆ. ನಮ್ಮ ಪ್ರಾಚೀನರು ಯಾವುದೇ ಗುಡಿ ಗೋಪುರಗಳನ್ನು ದೇವರಿಗೆ ಕಟ್ಟದೆ ಕೇವಲ ಶಿಲೆ, ವೃಕ್ಷ ಜಲ ನೆಲಗಳಲ್ಲಿ ಭಗವದಾರಾಧನಾ ಕ್ರಮ ಅನುಸರಿಸಿದರು. ಎನ್ನುವುದು ನಮ್ಮ ಪರಂಪರಾಗತ ಆರಾಧನಾ ಕ್ರಮಗಳಿಂದ ತಿಳಿದು ಬರುತ್ತದೆ. ತುಳುನಾಡಿನಲ್ಲಿ ಷಷ್ಠಿಯಂದು ಆಬಾಲ ವೃದ್ಧರಾದಿಯಾಗಿ ಸುಬ್ರಹ್ಮಣ್ಯನ ಆರಾಧನೆ ಮಾಡುತ್ತಾರೆ. ಕೆಲವು ದೇವಾಲಯಗಳಲ್ಲಿ ಸಂತಾನ ಪ್ರಾಪ್ತಿಯಾದವರು ತುಲಾಭಾರ ಸೇವೆ ಮಾಡಿಸುತ್ತಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ, ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನ, ವರ್ಕಾಡಿ ಶ್ರೀ ಸುಬ್ರಹ್ಮಣ್ಯ ದೇವಳ, ಬೇಳ ಶ್ರೀ ಕುಮಾರ ಮಂಗಲ ದೇವಸ್ಥಾನ ಮತ್ತು ಇತರ ಸುಬ್ರಹ್ಮಣ್ಯ ದೇಗುಲಗಳು ಮತ್ತು ನಾಗ ಕ್ಷೇತ್ರಗಳಲ್ಲಿ ಷಷ್ಠಿ ಮಹೋತ್ಸವದ ಆಚರಣೆ ನಡೆಯುತ್ತಿದೆ.


ಭಕ್ತರು ಅಧಿಕ ಸಂಖ್ಯೆಯಲ್ಲಿ ಈ ದೇವಳಗಳಿಗೆ ಮತ್ತು ನಾಗಾರಾಧನೆಯ ತಾಣಗಳಿಗೆ ಭೇಟಿ ನೀಡಿ ಪೂಜೆ ಪುನಸ್ಕಾರಗಳಲ್ಲಿ ಭಾಗವಹಿಸುತ್ತಿದ್ದಾರೆ.

ಷಷ್ಠಿ ಎಂದರೆ ಸಂಸ್ಕೃತದಲ್ಲಿ ಆರು ಎಂದು ಅರ್ಥ. ಪಂಚಾಂಗದಲ್ಲಿ ಬರುವ ಹದಿನೈದು ತಿಥಿಗಳಲ್ಲಿ ಷಷ್ಠಿ ತಿಥಿಗೆ ತನ್ನದೇ ಆದ ಸ್ಥಾನಮಾನವಿದೆ.

ಈ ತಿಥಿಯ ಅಧಿಪತಿ ಸ್ಕಂದ ಅಂದರೆ ಕಾರ್ತಿಕೇಯ. ಈತನನ್ನು ಪೂಜಿಸುವುದರಿಂದ ಒಬ್ಬ ವ್ಯಕ್ತಿ ಕೀರ್ತಿವಂತನೂ ಪ್ರಸಿದ್ಧನೂ ಆಗುತ್ತಾನೆ ಎಂಬ ನಂಬಿಕೆಯಿದೆ. ಬುದ್ಧಿವಂತಿಕೆ ಕಡಿಮೆ ಇರುವ ಮಗು ಅಥವಾ ತೊದಲುವಿಕೆ ಕಡಿಮೆಯಿರುವ ಮಕ್ಕಳು ಕಾರ್ತಿಕೇಯನ ಆರಾಧನೆ ಮಾಡಿದಲ್ಲಿ ಆ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು ಎಂಬ ನಂಬಿಕೆಯಿದೆ. ನಾಗನ ಅಥವಾ ಸುಬ್ರಹ್ಮಣ್ಯನ ಆರಾಧನೆ ಎಂದರೆ ಪ್ರಕೃತಿಯ ಆರಾಧನೆ.

ನಮ್ಮ ಪ್ರಾಚೀನರು ಯಾವುದೇ ಗುಡಿ ಗೋಪುರಗಳನ್ನು ದೇವರಿಗೆ ಕಟ್ಟದೆ ಕೇವಲ ಶಿಲೆ, ವೃಕ್ಷ ಜಲ ನೆಲಗಳಲ್ಲಿ ಭಗವದಾರಾಧನಾ ಕ್ರಮ ಅನುಸರಿಸಿದರು. ಎನ್ನುವುದು ನಮ್ಮ ಪರಂಪರಾಗತ ಆರಾಧನಾ ಕ್ರಮಗಳಿಂದ ತಿಳಿದು ಬರುತ್ತದೆ. ತುಳುನಾಡಿನಲ್ಲಿ ಷಷ್ಠಿಯಂದು ಆಬಾಲ ವೃದ್ಧರಾದಿಯಾಗಿ ಸುಬ್ರಹ್ಮಣ್ಯನ ಆರಾಧನೆ ಮಾಡುತ್ತಾರೆ. ಕೆಲವು ದೇವಾಲಯಗಳಲ್ಲಿ ಸಂತಾನ ಪ್ರಾಪ್ತಿಯಾದವರು ತುಲಾಭಾರ ಸೇವೆ ಮಾಡಿಸುತ್ತಾರೆ.

 

 

Click to comment

Leave a Reply

Your email address will not be published. Required fields are marked *

DAKSHINA KANNADA

ವೋಟ್ ಮಾಡಿ, ಊಟ ಮಾಡಿ: ಹೋಟೆಲ್‌ಗಳಲ್ಲಿ ಸಿಗಲಿದೆ ಫ್ರೀ ದೋಸೆ, ಸಿಹಿ ತಿಂಡಿ!

Published

on

ಬೆಂಗಳೂರು: ಮತದಾನದ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ ಮತ್ತು ಮತದಾನ ಪ್ರಮಾಣ ಹೆಚ್ಚಿಸುವ ಸಲುವಾಗಿ ಬೆಂಗಳೂರಿನ ಕೆಲವು ಹೋಟೆಲ್‌ಗಳು ವಿಶಿಷ್ಟ ಜಾಗೃತಿ ಕಾರ್ಯಕ್ರಮ ಆಯೋಜಿಸುತ್ತಿವೆ. ಕಳೆದ ವರ್ಷ ವಿಧಾನ ಚುನಾವಣೆಯಲ್ಲಿ ಮಾಡಿದಂತೆಯೇ ಈ ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿ ಬಂದವರಿಗೆ ಉಚಿತ ಆಹಾರ, ರಿಯಾಯಿತಿ ದರದಲ್ಲಿ ತಿಂಡಿ ನೀಡುವ ಬಗ್ಗೆ ಘೋಷಣೆ ಮಾಡಿವೆ.

ವೋಟ್ ಮಾಡಿ, ಊಟ ಮಾಡಿ:

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ನಿಸರ್ಗ ಗ್ರ್ಯಾಂಡ್ ಹೋಟೆಲ್‌ ವೋಟ್ ಮಾಡಿ, ಊಟ ಮಾಡಿ’ ಅಭಿಯಾನದಡಿ ಮತದಾನದ ದಿನದಂದು ಮತದಾನ ಮಾಡಿದ ಗುರುತು ತೋರಿಸಿದವರಿಗೆ ಬೆಣ್ಣೆ ದೋಸೆ, ಲಡ್ಡು ಮತ್ತು ಜ್ಯೂಸ್ ನೀಡುವುದಾಗಿ ಘೋಷಿಸಿದೆ. 2018 ರ ವಿಧಾನಸಭಾ ಚುನಾವಣೆ ವೇಳೆಯೂ ಹೋಟೆಲ್ ಇಂತಹ ಕೊಡುಗೆ ನೀಡಿತ್ತು.

ಪ್ರಜಾಪ್ರಭುತ್ವದಲ್ಲಿ ಮತದಾನ ಮಾಡುವುದು ನಮ್ಮ ಹಕ್ಕು. ಈ ಕುರಿತು ಜಾಗೃತಿ ಮೂಡಿಸುವ ನಮ್ಮ ನಿರಂತರ ಪ್ರಯತ್ನದ ಭಾಗವಾಗಿ ಕೆಲವು ಹೋಟೆಲ್​​ಗಳು ಕೆಲವು ತಿನಿಸುಗಳನ್ನು ರಿಯಾಯಿತಿ ದರದಲ್ಲಿ ಅಥವಾ ಉಚಿತವಾಗಿ ಮತದಾನದ ದಿನದಂದು ನೀಡುತ್ತವೆ. ಸಿಹಿತಿಂಡಿಗಳು ಮತ್ತು ಕೇಕ್‌ಗಳಂತಹ ಕೆಲವು ಆಹಾರ ಪದಾರ್ಥಗಳನ್ನು ಉಚಿತವಾಗಿ ನೀಡುತ್ತಿವೆ.

SawaariZimmedariKi ಅಭಿಯಾನದಡಿ ಶುಕ್ರವಾರ ಹಿರಿಯ ನಾಗರಿಕರು ಮತ್ತು ವಿಕಲಚೇತನ ಮತದಾರರಿಗೆ ಉಚಿತ ಆಟೋರಿಕ್ಷಾ ಮತ್ತು ಕ್ಯಾಬ್ ಸೇವೆ ದೊರೆಯಲಿದೆ.
ಈ ವಿಶೇಷ ಸೇವೆಯನ್ನು ಪಡೆಯಲು ಮತದಾರರು ‘VOTENOW’ ಕೋಡ್ ಅನ್ನು ಬಳಸಬಹುದು ಎಂದು Rapido ತಿಳಿಸಿದೆ.

ಬಿಡದಿ ಬಳಿಯ ಜನಪ್ರಿಯ ಅಮ್ಯೂಸ್‌ಮೆಂಟ್ ಪಾರ್ಕ್ ವಂಡರ್ಲಾ, ಮತದಾನದ ಗುರುತು ಪ್ರದರ್ಶಿಸುವವರಿಗೆ ಏಪ್ರಿಲ್ 26, 27 ಮತ್ತು 28 ರಂದು ಟಿಕೆಟ್‌ ಮೇಲೆ ಶೇಕಡಾ 15 ರಷ್ಟು ರಿಯಾಯಿತಿಯನ್ನು ಘೋಷಿಸಿದೆ.

Continue Reading

BANTWAL

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ

Published

on

ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.

ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.

ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.

ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್‌ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.

Continue Reading

DAKSHINA KANNADA

ಕೇರಳದ ಹಕ್ಕಿ ಜ್ವರ…ದಕ್ಷಿಣ ಕನ್ನಡದ ಗಡಿಯಲ್ಲಿ ಕಟ್ಟೆಚ್ಚರ..!

Published

on

ಮಂಗಳೂರು: ಕೇರಳದ ಅಲಪ್ಪುಳ ಜಿಲ್ಲೆಯ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಕೇರಳದ ಗಡಿ ಭಾಗಗಳಲ್ಲಿ ವಿಸೇಷ ನಿಗಾ ವಹಿಸಲಾಗಿದೆ.

ಇಂದಿನಿಂದ ತಲಪಾಡಿ, ಜಾಲ್ಸೂರು ಮತ್ತು ಸಾರಡ್ಕದಲ್ಲಿ ವಿಶೇಷ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗುವುದು. ಈ ಚೆಕ್ ಪೋಸ್ಟ್‌ಗಳಲ್ಲಿ ಕೋಳಿ ಉತ್ಪನ್ನಗಳನ್ನು ಕೇರಳಕ್ಕೆ ತಲುಪಿಸಿದ ನಂತರ ದಕ್ಷಿಣ ಕನ್ನಡಕ್ಕೆ ಹಿಂದಿರುಗುವ ವಾಹನಗಳನ್ನು ಸ್ಯಾನಿಟೈಸ್ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಮಂಗಳೂರಿನಿಂದ ಸುಮಾರು 400 ಕಿಲೋಮೀಟರ್ ದೂರದಲ್ಲಿರುವ ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಆ ಜಿಲ್ಲೆಯಲ್ಲಿ ಇದು ಎರಡನೇ ಪ್ರಕರಣವಾಗಿದೆ. ಇದುವರೆಗೆ ದಕ್ಷಿಣ ಕನ್ನಡದಲ್ಲಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ನಾವು ಜಾಗರೂಕರಾಗಿರುತ್ತೇವೆ ಮತ್ತು ಮೂರು ಆಯಕಟ್ಟಿನ ಸ್ಥಳಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸುತ್ತೇವೆ ಎಂದು ಕರ್ನಾಟಕ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ ಇದು ಕೋವಿಡ್‌ಗಿಂತ ಭೀಕರ ಸೋಂಕು…ಜಗತ್ತಿಗೆ ಹರಡುವ ಆತಂಕದಲ್ಲಿ ತಜ್ಞರು..!

ಏನಿದು ಹಕ್ಕಿ ಜ್ವರ?

ಹೆಚ್​​5ಎನ್​​1 ವೈರಸ್​​ನಿಂದ ಹರಡುವ ಸೋಂಕನ್ನು ಹಕ್ಕಿ ಜ್ವರ ಎಂದು ಕರೆಯಲಾಗುತ್ತದೆ. ಈ ವೈರಸ್ ಹೆಚ್ಚಿನ ಮರಣ ಪ್ರಮಾಣದೊಂದಿಗೆ ತೀವ್ರವಾದ ಜ್ವರವನ್ನು ಉಂಟುಮಾಡಬಲ್ಲದ್ದಾಗಿದೆ. ಆದರೆ, ಮನುಷ್ಯರಲ್ಲಿ ಈ ರೋಗದ ಹರಡುವಿಕೆ ಬಹಳ ಅಪರೂಪ. ಇಲ್ಲಿಯವರೆಗೆ, ಈ ವೈರಸ್ ಮಾನವರಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಹರಡಿದ ಬಗ್ಗೆ ವರದಿಯಾಗಿಲ್ಲ. ಆದರೂ ಈ ಬಗ್ಗೆ ನಿರ್ಲಕ್ಷ್ಯ ತೋರುವಂತಿಲ್ಲ.

ಹಕ್ಕಿ ಜ್ವರ ವಿಶಿಷ್ಟವಾಗಿ ವಲಸೆ ಹಕ್ಕಿಗಳ ಮೇಲೆ ಪರಿಣಾಮ ಬೀರುತ್ತದೆ. ಆದರೆ ಪ್ರಸ್ತುತ ಬೇಸಿಗೆಯಲ್ಲಿ ಹಕ್ಕಿಗಳ ವಲಸೆ ಸಾಮಾನ್ಯವಾಗಿ ಕಡಿಮೆ ಇರುತ್ತದೆ. ವೈರಸ್ ಸೋಂಕಿತ ಕೋಳಿಗಳಿಂದ ಇತರ ಪಕ್ಷಿಗಳಿಗೆ ಮತ್ತು ಮನುಷ್ಯರಿಗೆ, ವಿಶೇಷವಾಗಿ ಕೋಳಿ ಸಾಕಣೆ ಕೇಂದ್ರಗಳು ಮತ್ತು ಮಾಂಸ ಸಂಸ್ಕರಣಾ ಘಟಕಗಳಲ್ಲಿ ಕೆಲಸ ಮಾಡುವವರಿಗೆ ಹರಡಬಹುದು. ಆದಾಗ್ಯೂ, ಇದು ವ್ಯಕ್ತಿಯಿಂದ ವ್ಯಕ್ತಿಗೆ ಹರಡುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

LATEST NEWS

Trending