Connect with us

DAKSHINA KANNADA

ಮುಲ್ಕಿ ಬಪ್ಪನಾಡು ಕ್ಷೇತ್ರದಲ್ಲಿ ಶಯನೋತ್ಸವ – ಭಕ್ತರಿಂದ ಶ್ರೀದೇವಿಗೆ ಸಾವಿರಾರು ಚೆಂಡು ಮಲ್ಲಿಗೆ ಅರ್ಪಣೆ..!

Published

on

ಗರ್ಭಗುಡಿಯಲ್ಲಿ ಜೋಡಿಸಿದ ಮಲ್ಲಿಗೆಯಲ್ಲಿ ದುರ್ಗೆ ಸುಖನಿದ್ರೆಗೆ ಜಾರುತ್ತಾಳೆ ಎಂಬ ನಂಬಿಕೆ ಮಾತ್ರವಲ್ಲದೆ ಶಯನಕ್ಕೆ ಮಲ್ಲಿಗೆ ಅರ್ಪಿಸಿದರೆ ತಮ್ಮ ಇಷ್ಟಾರ್ಥವನ್ನು ಪೂರೈಸುತ್ತಾಳೆ ಎಂಬ ನಂಬಿಕೆ ಭಕ್ತರದ್ದು.

ಮುಲ್ಕಿ :  ಬಪ್ಪನಾಡು ಜಾತ್ರೆ ಬಂತೆಂದರೆ ಎಲ್ಲಿಲ್ಲದ ಸಡಗರ ಸಂಭ್ರಮ, ಹಿಂದೂ‌ ಮುಸ್ಲಿಂ ಭಾವೈಕ್ಯದ ಸಂಕೇತವಾದ ಬಪ್ಪನಾಡು ದೇವಳದಲ್ಲಿ ಜಾತ್ರಾಮಹೋತ್ಸವ ಸಂದರ್ಭ ಶಯನೋತ್ಸವ ವಿಶೇಷ ಸ್ಥಾನವನ್ನು ಪಡೆದಿದೆ,     

ಶಯನೋತ್ಸವ ಜಾತ್ರಾಮಹೋತ್ಸವ ಸಂದರ್ಭ ನಡೆಯುವ ವಿಶೇಷ ಪ್ರಕ್ರಿಯೆ, ಹೆಚ್ಚಿನ ಎಲ್ಲಾ ದೇವಸ್ಥಾನಗಳಲ್ಲೂ ಈ ಪ್ರಕ್ರಿಯೆ ನಡೆದರೆ, ಬಪ್ಪನಾಡು ದೇವಳದಲ್ಲಿ ಮಾತ್ರ ವಿಶೇಷ ಸ್ಥಾನವನ್ನು ಪಡೆದಿದೆ.

ಹಗಲು ರಥೋತ್ಸವವದ ರಾತ್ರಿ ಈ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದು, ಮದ್ಯಾಹ್ನ ದಿಂದಲೇ ದೇವರಿಗೆ ಭಕ್ತರಿಂದ ಮಲ್ಲಿಗೆ ಸಮರ್ಪಣೆ ಪ್ರಾರಂಭವಾಗುತ್ತದೆ, ಹೂವು ಸಮರ್ಪಣೆ‌ ಮಾಡಿದ ನಂತರ ಭಕ್ತರು ನೀಡಿದ ಹೂವಿನ ಪ್ರಮಾಣದ ಚೀಟಿಯನ್ನು ನೀಡಲಾಗುತ್ತೆ,

ಈಗೆ ದೇವಳಕ್ಕೆ ಭೇಟಿ ನೀಡುವ ಲಕ್ಷಾಂತರ ಮಂದಿ ಭಕ್ತರು ಸಾವಿರಾರು ಚೆಂಡು ಮಲ್ಲಿಗೆಯನ್ನು ಸಮರ್ಪಣೆ ಮಾಡುತ್ತಾರೆ,

ರಾತ್ರಿ ನಡೆಯುವ ಶ್ರೀ ದುರ್ಗೆಯ ಶಯನೋತ್ಸವಕ್ಕೆ ಈ ಮಲ್ಲಿಗೆಯನ್ನು ಗರ್ಭಗುಡಿಯಲ್ಲಿ ಜೋಡಿಸಲಾಗುತ್ತದೆ.

ಹಗಲು ರಥೋತ್ಸವದಂದು ರಾತ್ರಿ ಶಯನೋತ್ಸವ ನಡೆದರೆ ಮರುದಿನ ಬೆಳಿಗ್ಗೆ ಕವಾಟೋದ್ಘಾಟನೆ ನಡೆಯುತ್ತದೆ,

ನಂತರ ಮಲ್ಲಿಗೆಯನ್ನು ತೆಗೆದು ಭಕ್ತರಿಗೆ ಹಂಚಲಾಗುತ್ತದೆ, ಭಕ್ತರು ತಾವು ನೀಡಿದ ಪ್ರಮಾಣದ ಅರ್ಧದಷ್ಟು ಪ್ರಮಾಣದ ಮಲ್ಲಿಗೆಯನ್ನು ಭಕ್ತರಿಗೆ ನೀಡಲಾಗುತ್ತಿದೆ,

ಗರ್ಭಗುಡಿಯಲ್ಲಿ ಜೋಡಿಸಿದ ಮಲ್ಲಿಗೆಯಲ್ಲಿ ದುರ್ಗೆ ಸುಖನಿದ್ರೆಗೆ ಜಾರುತ್ತಾಳೆ ಎಂಬ ನಂಬಿಕೆ ಮಾತ್ರವಲ್ಲದೆ ಶಯನಕ್ಕೆ ಮಲ್ಲಿಗೆ ಅರ್ಪಿಸಿದರೆ ತಮ್ಮ ಇಷ್ಟಾರ್ಥವನ್ನು ಪೂರೈಸುತ್ತಾಳೆ ಎಂಬ ನಂಬಿಕೆ ಭಕ್ತರದ್ದು, ಒಟ್ಟಿನಲ್ಲಿ ಬಪ್ಪನಾಡು ದೇವಳದಲ್ಲಿ ನಡೆಯುವ ಶಯನೋತ್ಸವ ವಿಶೇಷ ಸ್ಥಾನವನ್ನು ಪಡೆದಿದೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending