LATEST NEWS
ವೈದ್ಯೆಯಾಗುವ ಕನಸು ಕಂಡಿದ್ದಾಕೆ ಬಾವಿಯಲ್ಲಿ ಶವವಾಗಿ ಪತ್ತೆ..!
ವೈದ್ಯೆಯಾಗುವ ಕನಸು ಕಂಡಿದ್ದಾಕೆ ಬಾವಿಯಲ್ಲಿ ಶವವಾಗಿ ಪತ್ತೆ..!
She was dreamed of becoming a doctor..But..?
ಶಿವಮೊಗ್ಗ :ವೈದ್ಯೆಯಾಗುವ ಕನಸು ಕಂಡಿದ್ದಾಕೆ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ದೇಹ ಬಾವಿಯಲ್ಲಿ ಪತ್ತೆಯಾಗಿದೆ. ಶಿವಮೊಗ್ಗದ ಸಾಗರ ತಾಲೂಕು ತ್ಯಾಗರ್ತಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ತ್ಯಾಗಾರ್ತಿಯ ಮೇಘರಾಜ್ ಎಂಬುವರ ಮಗಳು ಅಂಜಲಿ ಎಂದು ಗುರ್ತಿಸಲಾಗಿದೆ. 19 ವರ್ಷದ ಈ ಯುವತಿ, ಸಾಗರದ ಉಳ್ಳೂರಿನ ಗಂಗೋತ್ರಿ ಕಾಲೇಜಿನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು.
ಗುರುವಾರ ಮುಂಜಾನೆ ಅಂಜಲಿ ಜಾನುವಾರಗಳಿಗೆ ನೀರು ತರಲೆಂದು ಬಾವಿ ಬಳಿ ಹೋಗಿದ್ದರು. ಎನ್ನಲಾಗಿದೆ.
ಎಷ್ಟು ಹೊತ್ತಾದ್ರೂ ಅಂಜಲಿ ಹಿಂದಿರುಗದ ಕಾರಣ ಆಕೆಯ ದೊಡ್ಡಪ್ಪನ ಮಕ್ಕಳು ಬಾವಿ ಬಳಿ ಬಂದು ಪರಿಶೀಲಿಸಿದ್ದಾರೆ.
ಈ ವೇಳೆ, ಹಗ್ಗ ಹಾಗೂ ಕೊಡಪಾನ ಬಾವಿಯಲ್ಲಿ ಬಿದ್ದಿರುವ ದೃಶ್ಯ ಕಂಡು ಬಂತು. ಕೂಡಲೇ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದಾಗ. ಸ್ಥಳಕ್ಕೆ ಬಂದು ಪರಿಶೀಲಿಸಿದ ಅಂಜಲಿ ಅವರ ದೊಡ್ಡಪ್ಪ ದಿಗ್ಭ್ರಾಂತರಾದರು.
ನೆರೆಹೊರೆಯವರನ್ನ ಕರೆದು ಬಾವಿಗಿಳಿದು ಶೋಧಿಸಿದಾಗ ಅಂಜಲಿ ಮೃತ ದೇಹ ಸಿಕ್ಕಿತು. ಕೊಡಪಾನ ಎಳೆಯುವಾಗ ಅಥವಾ ಇಣುಕಿ ನೋಡುವಾಗ ಆಯತಪ್ಪಿ ಅಂಜಲಿ ಬಾವಿಗೆ ಬಿದ್ದು ಮೃತಳಾಗಿರಬಹುದೇ ಹೊರತು ಬೇರೆ ಕಾರಣಗಳಿಲ್ಲ ಎಂದು ಅಂಜಲಿ ದೊಡ್ಡಪ್ಪ ಬಂಗಾರಪ್ಪ ಸಾಗರ ಗ್ರಾಮಾಂತರ ಠಾಣೆಯಲ್ಲಿ ನೀಡಿದ ದೂರಿನಲ್ಲಿ ಹೇಳಿದ್ದಾರೆ.
ತ್ಯಾಗರ್ತಿಯಲ್ಲಿ ಗೂಡಂಗಡಿ ಇಟ್ಟುಕೊಂಡಿರುವ ಅಂಜಲಿ ತಂದೆ ಮೇಘರಾಜ್ ಅಂಗವಿಕಲ.. ಇವರಿಗೆ ಇಬ್ಬರು ಹೆಣ್ಣುಮಕ್ಕಳು. ಬಡ ಕುಟುಂಬದಲ್ಲಿ ವೈದ್ಯೆಯಾಗುವ ಕನಸು ಕಂಡಿದ್ದ ಅಂಜಲಿ ಅವರ ಸಾವು, ಕುಟುಂಬ ಸದಸ್ಯರನ್ನ ದುಃಖತಪ್ತರನ್ನಾಗಿಸಿದೆ.
DAKSHINA KANNADA
Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!
ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.
ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ
DAKSHINA KANNADA
Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು
ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.
ನವೀನ್ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.
LATEST NEWS
ಕೋಟಿಯ ಒಡೆಯನಾದ 8ನೇ ತರಗತಿ ಪೋರ..!!
ನವದೆಹಲಿ: ಕೌನ್ ಬನೇಗಾ ಕರೋಡ್ ಪತಿ ಎಂಬ ಹಿಂದಿ ಶೋ ನಲ್ಲಿ ಕೋಟಿ ಗೆದ್ದ 14ವರ್ಷದ ಪೋರ ಸಣ್ಣ ವಯಸ್ಸಿನಲ್ಲೇ ದಾಖಲೆ ಬರೆದಿದ್ದಾನೆ.
ಬಾಲಿವುಡ್ ಸ್ಟಾರ್ ಅಮಿತಾಭ್ ಬಚ್ಚನ್ ನಡೆಸಿಕೊಡುವಂತಹ ಹಿಂದಿಯ ಕೌನ್ ಬನೇಗಾ ಕರೋಡ್ ಪತಿ ಎಂಬ ಶೋ ನಲ್ಲಿ ಹರಿಯಾಣದ ಮಹೇಂದ್ರಗಢ್ ಮೂಲದ 8ನೇ ತರಗತಿ ವಿದ್ಯಾರ್ಥಿ ಮಯಾಂಕ್ ಭಾಗವಹಿಸಿ 15 ಪ್ರಶ್ನೆಗಳಿಗೆ ಉತ್ತರಿಸಿ ಒಂದು ಕೋಟಿ ಗೆದ್ದು ದಾಖಲೆ ಬರೆದಿದ್ದಾನೆ. ಕೌನ್ ಬನೇಗಾ ಕರೋಡ್ ಪತಿಯಲ್ಲಿ ನಡೆಯುವ ಜನಪ್ರಿಯ ಪ್ರಶ್ನೆಗಳಿಗೆ ಉತ್ತರಿಸಿದ 14 ವರ್ಷದ ಕಿರಿಯ ಪೋರ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.
ಜನಪ್ರಿಯ ರಸಪ್ರಶ್ನೆ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ಪತಿಯಲ್ಲಿ 1 ಕೋಟಿ ರೂ.ಗೆದ್ದ ಹೆಗ್ಗಳಿಕೆಗೆ ಹರಿಯಾಣದ ಮಹೇಂದ್ರಗಢ್ನ 8 ನೇ ತರಗತಿಯ ವಿದ್ಯಾರ್ಥಿ ಮಯಾಂಕ್ ಪಾತ್ರನಾಗಿದ್ದಾನೆ. 14 ವರ್ಷದ ಈ ಬಾಲಕ 1 ಕೋಟಿ ರೂ.ಗೆದ್ದ ಅತ್ಯಂತ ಕಿರಿಯ ಸ್ಪರ್ಧಿಯಾಗಿದ್ದು, ಹೊಸ ಇತಿಹಾಸ ನಿರ್ಮಿಸಿದ್ದಾನೆ. 15 ಪ್ರಶ್ನೆಗಳಿಗೆ ಉತ್ತರ ಕೊಟ್ಟು, 1 ಕೋಟಿ ರೂ ಗೆದ್ದು, 16ನೇ ಪ್ರಶ್ನೆಗೂ ಸರಿಯಾದ ಉತ್ತರ ನೀಡಿದ್ದಾನೆ. ಈತನ ಗುರಿ ಕೇವಲ ಒಂದು ಕೋಟಿ ಆಗಿರಲಿಲ್ಲ. ಏಳು ಕೋಟಿಯನ್ನು ಗುರಿಯಾಗಿಸಿಟ್ಟುಕೊಂಡಿದ್ದ. ಏಳು ಕೋಟಿಯ ಪ್ರಶ್ನೆಗೆ ಉತ್ತರಿಸೋಕೆ ಆಗದೇ ಆಟದಿಂದ ವಾಪಸ್ಸಾಗಿದ್ದಾನೆ. ಈತನ ಸಾಧನೆಗೆ ಹರಿಯಾಣ ಸಿಎಂ ಮನೊಹರ್ ಲಾಲ್ ಖಟ್ಟರ್ ಅಭಿನಂದಿಸಿದ್ದಾರೆ. ಇದು ಮೊದಲ ಬಾರಿ 14 ವರ್ಷದ ಪೋರ ಕೋಟಿಗೆದ್ದ ಇತಿಹಾಸವಾಗಿದೆ.
- bangalore4 days ago
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?
- FILM3 days ago
ಆಲಿಯಾ ಭಟ್ ಡೀಫ್ ಫೇಕ್ ವಿಡಿಯೋ ವೈರಲ್ – ವಿಡಿಯೋ ನೋಡಿದ್ರಾ..?
- bangalore6 days ago
ಬೆಂಗಳೂರು ಕಂಬಳಕ್ಕೆ ಚಾಲನೆ ನೀಡಿದ ಅಶ್ವಿನಿ ಪುನಿತ್ ರಾಜ್ ಕುಮಾರ್
- DAKSHINA KANNADA6 days ago
Puttur: ಮಹಿಳೆಗೆ ಅಮಲು ಬರಿಸುವ ಪಾನೀಯ ಕುಡಿಸಿ ಅತ್ಯಾಚಾರ..!