LATEST NEWS
ಶಿವಮೊಗ್ಗ : ಗಾಂಧಿ ಬಜಾರ್ ನಲ್ಲಿ ಅಗ್ನಿ ಅವಘ*ಡ; ಹಲವು ಅಂಗಡಿಗಳಿಗೆ ಹಾ*ನಿ
ಶಿವಮೊಗ್ಗ: ಶಿವಮೊಗ್ಗ ನಗರದ ಗಾಂಧಿ ಬಜಾರ್ನಲ್ಲಿರುವ ಬಟ್ಟೆ ಮಾರುಕಟ್ಟೆಯಲ್ಲಿ ರಾತ್ರಿ 10 ಗಂಟೆ ವೇಳೆಗೆ ಅಗ್ನಿ ಅವಘ*ಡ ಉಂಟಾಗಿ, ಅಪಾರ ಪ್ರಮಾಣದ ಹಾ*ನಿಯಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿ ಏಳೆಂಟು ಬಟ್ಟೆ ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿ ಹೋಗಿವೆ. ಒಳಗಿದ್ದ ವಸ್ತುಗಳು ಬೆಂ*ಕಿಗಾಹುತಿಯಾಗಿವೆ.
ಬಸವೇಶ್ವರ ದೇವಸ್ಥಾನದ ಹಿಂಭಾಗದ ಬಟ್ಟೆ ಮಾರುಕಟ್ಟೆಯ ಅಂಗಡಿಗಳಿಗೆ ಬೆಂ*ಕಿ ತಗುಲಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು, ಸ್ಥಳಕ್ಕೆ ಆಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಆದರೆ ಈ ವೇಳೆಗೆ ಇಡೀ ಆವರಣದಲ್ಲಿ ದಟ್ಟ ಹೊಗೆ ಆವರಿಸಿದೆ. ಹಾಗಾಗಿ ಎಲ್ಲೆಲ್ಲಿ ಬೆಂ*ಕಿ ಹೊತ್ತಿಕೊಂಡಿದೆ ಎಂಬುದು ಗಮನಕ್ಕೆ ಬಾರದೆ, ಕಾರ್ಯಾಚರಣೆಗೆ ಅಡ್ಡಿಯಾಗಿದೆ.
ಇದನ್ನೂ ಓದಿ : ಮಂಗಳೂರು ಸಬ್ ಜೈಲಿನಲ್ಲಿ ಮಾರಾಮಾರಿ..! ಇಬ್ಬರು ಆಸ್ಪತ್ರೆಗೆ ದಾಖಲು
ಬಟ್ಟೆ ಮಾರುಕಟ್ಟೆ ಭಾಗದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿದೆ.
DAKSHINA KANNADA
ಕರಾವಳಿ ಭಾಗದಲ್ಲಿ ಇಂದಿನಿಂದ ಮೂರು ದಿನ ಭರ್ಜರಿ ಮಳೆಯಾಗುವ ಸಾಧ್ಯತೆ
ರಾಜ್ಯದಲ್ಲಿ ಮುಂದಿನ 3 ದಿನ ಕಾಲ ಮಳೆರಾಯ ಅಬ್ಬರಿಸಲಿದ್ದಾನೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಕರ್ನಾಟಕ ಭಾಗದಲ್ಲಿ ಇಂದಿನಿಂದ ಮೂರು ದಿನ ಭರ್ಜರಿ ಮಳೆಯಾಗುವ ಎಚ್ಚರಿಕೆಯ ಸಂದೇಶ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕರಾವಳಿಯ ಭಾಗದಲ್ಲಿ ಎಚ್ಚರಿಕೆ ವಹಿಸಲಾಗಿದೆ.
ಈಗಾಗಲೇ ಕಳೆದ ಹಲವು ದಿನಗಳಿಂದಲೂ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದೆ. ಮತ್ತೆ ಮಳೆ ಅಬ್ಬರಿಸುತ್ತಿದೆ. ಹಾಗೇ ಮುಂದಿನ ಕೆಲವು ದಿನಗಳ ಕಾಲ ಇದೇ ರೀತಿ ಮಳೆ ಆರ್ಭಟಿಸುವ ಮುನ್ಸೂಚನೆಯು ಸಿಗುತ್ತಿದೆ.
ಚಿಕ್ಕಮಗಳೂರು ಜಿಲ್ಲೆಗೆ ಜುಲೈ 7ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಇಂದಿನಿಂದ ಜುಲೈ 7ರವರೆಗೆ ಸಾಧಾರಣ ಮಳೆಯ ಮುನ್ಸೂಚನೆ ಇದೆ.
BELTHANGADY
ಮಳೆ ಅಬ್ಬರ: ದಕ್ಷಿಣ ಕನ್ನಡ ಜಿಲ್ಲೆಯ ಈ ಪ್ರವಾಸಿ ತಾಣಗಳಿಗೆ ನೋ ಎಂಟ್ರಿ
ಮಂಗಳೂರು: ಕರಾವಳಿ ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬೆಟ್ಟಗಳು, ಜಲಪಾತಗಳ ಬಳಿ ತೆರಳದಂತೆ ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ.
ಬೆಳ್ತಂಗಡಿ ತಾಲೂಕಿನ ಜಮಲಾಬಾದ್ (ಗಡಾಯಿಕಲ್ಲು) ಬೆಟ್ಟ, ಅರಿಶಿನಗುಂಡಿ, ಕೂಡ್ಲು, ಬರ್ಕಳ, ಹಿಡ್ಲುಮನೆ, ವನಕಬ್ಬಿ, ಬಂಡಾಜೆ ಫಾಲ್ಸ್ ಸೇರಿದಂತೆ ಕೆಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಬೆಳ್ತಂಗಡಿ ಆರ್ಎಫ್ಒಗೆ ಕುದುರೆಮುಖ ಸಿಎಫ್ ಆದೇಶ ಹೊರಡಿಸಿದ್ದಾರೆ.
LATEST NEWS
ಲಾಲ್ ಕೃಷ್ಣ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು
ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಮತ್ತೆ ಆಸ್ಪತ್ರೆ ದಾಖಲಾಗಿದ್ದಾರೆ. ಅವರ ಆರೋಗ್ಯದಲ್ಲಿ ಬುಧವಾರ ಮತ್ತೆ ಏರು ಪೇರು ಕಾಣಿಸಿಕೊಂಡಿದ್ದು, ತಕ್ಷಣವೇ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಹಿಂದೆ ಜೂನ್ 27 ರಂದು ಕೂಡ ಎಲ್ ಕೆ ಅಡ್ವಾಣಿ ಆರೋಗ್ಯ ಹದಗೆಟ್ಟ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಸುದ್ದಿ ಸಂಸ್ಥೆ ಎಎನ್ಐ ಪ್ರಕಾರ, ಡಾ.ವಿನೀತ್ ಪುರಿ ಅವರು ಅಪೋಲೋ ಆಸ್ಪತ್ರೆಯಲ್ಲಿ ಎಲ್ಕೆ ಅಡ್ವಾಣಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಬಿಜೆಪಿ ನಾಯಕನ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದರು.
ಕಳೆದ ವಾರವೂ ಭಾರತದ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಜೂನ್ 26 ರಂದು ತಡರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾಖಲಾದ ಮರು ದಿನವೇ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.
ಲಾಲ್ ಕೃಷ್ಣ ಅಡ್ವಾಣಿಗೆ 96ವರ್ಷ ವಯಸ್ಸಾಗಿದ್ದು, ವಯೋಸಹಜ ಅನಾರೋಗ್ಯದ ಹಿನ್ನೆಲೆಯಲ್ಲಿ ಆರೋಗ್ಯ ಏರುಪೇರಾಗುತ್ತಿದೆ.
- DAKSHINA KANNADA6 days ago
ಕರಾವಳಿಯಲ್ಲಿ ಮಳೆಗೆ ಮತ್ತೊಂದು ಬ*ಲಿ; ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಸಾ*ವು
- DAKSHINA KANNADA5 days ago
ಶಿರಾಡಿಘಾಟ್ ನಲ್ಲಿ ಸರಣಿ ಅಪಘಾ*ತ; ರಾಜಹಂಸ, ಐರಾವತ ಬಸ್ ಮುಖಾಮುಖಿ ಡಿ*ಕ್ಕಿ
- DAKSHINA KANNADA5 days ago
ಜೀವ ಉಳಿಸಿದ ನಾಯಿಯ ನಿಯತ್ತು ಹಾಗೂ ಯುವಕನ ಸಮಯ ಪ್ರಜ್ಞೆ!
- FILM7 days ago
ಟಿಆರ್ ಪಿನಲ್ಲಿ ಟಾಪ್ 10 ರೊಳಗಿನ ಸ್ಥಾನ ಗಿಟ್ಟಿಸಿಕೊಂಡ ಹೊಸ ಧಾರಾವಾಹಿ; ನಂಬರ್ 1 ಸ್ಥಾನ ಯಾವುದಕ್ಕೆ?