LATEST NEWS
ಶಿವಮೊಗ್ಗ: ಶಿರಾಳಕೊಪ್ಪ ಪಟ್ಟಣದಲ್ಲಿ ನಿಷೇಧಿತ ಸಂಘಟನೆ PFI, CFI ಪರ ಗೋಡೆ ಬರಹ..!
ನಿಷೇಧಿತ PFI ಸಂಘಟನೆಯ ಅಂಗ ಸಂಸ್ಥೆ CFI ಸೇರುವಂತೆ ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಶಿರಾಳ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೋಡೆಗಳಲ್ಲಿ ಈ ಬರಹಗಳು ಕಾಣಿಸಿಕೊಂಡಿವೆ.
ಶಿವಮೊಗ್ಗ : ನಿಷೇಧಿತ PFI ಸಂಘಟನೆಯ ಅಂಗ ಸಂಸ್ಥೆ CFI ಸೇರುವಂತೆ ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಶಿರಾಳ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೋಡೆಗಳಲ್ಲಿ ಈ ಬರಹಗಳು ಕಾಣಿಸಿಕೊಂಡಿವೆ.
ಶಿರಾಳಕೊಪ್ಪ ಪಟ್ಟಣದ 9 ಸ್ಥಳಗಳಲ್ಲಿ ಸಿ ಎಫ್ ಐ ಗೆ ಸೇರಿ ಎನ್ನುವ ಗೋಡೆ ಬರಹ ಬರೆದಿದ್ದಾರೆ.
ಪೊಲೀಸರಿಗೆ ಗಸ್ತಿನ ಸಮಯದಲ್ಲಿ ಗೋಡೆ ಬರಹ ಕೇಸ್ ಪತ್ತೆಯಾಗಿದ್ದು ಕೂಡಲೇ ಗೋಡೆ ಬರಹ ಅಳಿಸಿ ಹಾಕಿದ್ದಾರೆ.
ಹಳ್ಳೂರು ಕೇರಿ ಭೋವಿ ಕಾಲೋನಿ, ಸಣ್ಣ ಬ್ಯಾಡದ ಕೇರಿ ದೊಡ್ಡ ಬ್ಯಾಂಡದ ಕೇರಿ ಹಾಗೂ ಹಿರೇಕೆರೂರು ರಸ್ತೆ ಭಾಗದಲ್ಲಿ ಗಸ್ತು ಮಾಡುತ್ತಿದ್ದರು. ಈ ಸಂದರ್ಭ ಈ ಬರಹಗಳು ಕಾಣಿಸಿವೆ.
ಶಿರಾಳಕೊಪ್ಪ ಟೌನ್ ನ ಹಳೇ ಪೆಟ್ರೋಲ್ ಬಂಕ್ ಪಕ್ಕದಲ್ಲಿ ನ ಸಿಮೆಂಟ್ ಕಾಂಪೌಂಡ್ ಹಾಗೂ ಭೋವಿ ಕಾಲೋನಿ ಗೆ ಹೋಗುವ ರಸ್ತೆಯಲ್ಲಿರುವ ವಿದ್ಯುತ್ ಕಂಬ, ದೊಡ್ಡ ಬೇಡರ ಕೇರಿಗೆ ಹೋಗುವ ಕ್ರಾಸ್ ಬಳಿ ಇರುವ ಸಿಮೆಂಟ್ ಬೋರ್ಡ್ ಮೇಲೆ ಚಂದ್ರಪ್ಪ ರವರ ಮನೆಯ ಕ್ರಾಸ್ ಹತ್ತಿರ ವಿದ್ಯುತ್ ಕಂಬದ ಮೇಲೆ ಬಿಲಾಲ್ ಮನೆಯ ಕ್ರಾಸ್ ಹತ್ತಿರ ಇರುವ ಗ್ಯಾರೇಜ್ ನ ಗೋಡೆಯ ಮೇಲೆ, ದೊಡ್ಡಬ್ಯಾಡರ ಕೇರಿಯಿಂದ ಮಠದ ಗತ್ತಿಗೆ ಹೋಗುವ ರಸ್ತೆಯಲ್ಲಿನ ಗೋಡೆಯ ಮೇಲೆ, ಬಿಲಾಲ್ ಮಸೀದಿಯ ಪಕ್ಕದಲ್ಲಿರುವ ಮನೆಯ ಗೋಡೆಯ ಮೇಲೆ ಮತ್ತು ಫಾರೂಕ್ ಮಸೀದಿಯ ಪಕ್ಕದಲ್ಲಿರುವ ಮನೆಯ ಗೋಡೆಯ ಮೇಲೆ ಜಾಯಿನ್ ಸಿ ಎಫ್ ಐ ಎಂದು ಬರೆಯಲಾಗಿದೆ.
ನೀಲಿ ಮತ್ತು ಕೆಂಪು ಬಣ್ಣದ ಸ್ಪ್ರೇ ಪೇಂಟ್ ನಿಂದ ಬರೆದಿರುವುದರ ಜೊತೆಗೆ ಸ್ಟಾರ್ ಚಿತ್ರ ಬಿಡಿಸಿರುವುದು ಕಂಡುಬಂದಿರುತ್ತೆ.
ಭಾರತ ಸರ್ಕಾರವು ಪಿಎಫ್ ಐ ಹಾಗೂ ಅದರ ಅಂಗ ಸಂಸ್ಥೆಗಳಲ್ಲಿ ಒಂದಾದ ಸಿ ಎಫ್ ಐ ಸಂಘಟನೆಯನ್ನ ಐದು ವರ್ಷಗಳ ಅವಧಿಗೆ ನಿಷೇಧ ಮಾಡಿದೆ.
ಈ ಆದೇಶದ ನಂತರ ಇದನ್ನ ಯಾರೋ ಉಲ್ಲಂಘಿಸಿ, ಭಾರತೀಯ ಧರ್ಮ, ಭಾಷೆ ಆಧಾರದ ಮೇಲೆ ವೈರತ್ವ ಉದ್ದೇಶದಿಂದ ಹಾಗೂ ಪರಸ್ಪರ ಸೌಹಾರ್ದತೆಗೆ ಭಂಗ ಉಂಟು ಮಾಡುವ ಉದ್ದೇಶದಿಂದ ಬರೆಯಲಾಗಿದೆ.
ಸದ್ಯ ಗೋಡೆ ಬರಹ ಬರೆದ ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದೆ.
DAKSHINA KANNADA
ಪಾವಂಜೆ ನದಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆ..!
ಮುಲ್ಕಿ: ಮಂಗಳೂರು ಹೊರವಲಯದ ಮುಲ್ಕಿಯ ಠಾಣಾ ವ್ಯಾಪ್ತಿಯ ಹಳೆಯಂಗಡಿ ಸಮೀಪದ ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ನಂದಿನಿ ನದಿಯ ದಡದಲ್ಲಿ ಸುಮಾರು 19 ರಿಂದ 20 ವರ್ಷದ ಒಳಗಿನ ಪ್ರಾಯದ ಯುವಕನ ಶವ ಪತ್ತೆಯಾಗಿದೆ.
ಹಳೆಯಂಗಡಿ ಪೂಜಾ ಫ್ರೆಂಡ್ಸ್ ನ ಸದಸ್ಯರು ಸ್ಥಳಕ್ಕೆ ಧಾವಿಸಿ ಶವವನ್ನು ಆಂಬುಲೆನ್ಸ್ ಮೂಲಕ ಮೂಲ್ಕಿ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಯುವಕನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.
ಕಳೆದ ದಿನಗಳ ಹಿಂದೆ ಇದೇ ಪರಿಸರದ ಚೇಳಾಯರು ಅಣೆಕಟ್ಟಿನ ಬಳಿ ಯುವಕನೊಬ್ಬ ನಾಪತ್ತೆಯಾಗಿದ್ದು, ಈ ಶವ ಆತನದ್ದೇ ಇರಬೇಕು ಇರಬೇಕೆಂಬ ಶಂಕೆ ವ್ಯಕ್ತವಾಗಿದೆ.
ಮುಲ್ಕಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.
DAKSHINA KANNADA
Kadaba: ಹಠಾತ್ ಕಾಡಾನೆ ದಾಳಿ- ವ್ಯಕ್ತಿ ಗಂಭೀರ..!
ಕಡಬ: ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಗಂಭೀರ ಸ್ಥಿತಿಗೊಂಡು ಆಸ್ಪತ್ರೆಯಲ್ಲಿ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು ಗ್ರಾಮದ ಮರ್ಧಾಳ-ಕೊಣಾಜೆಯಲ್ಲಿ ನಡೆದಿದೆ.
ಐತ್ತೂರು ಗ್ರಾಮದ ಗರ್ತಿಲ ನಿವಾಸಿ ಓಡಿ ಎಂಬವರ ಪುತ್ರ ಕೂಲಿ ಕಾರ್ಮಿಕ ಚೋಮ (56) ಗಾಯಗೊಂಡವರು.
ಚೋಮ ಅವರು ಸಂಜೆ ವೇಳೆ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭ ನೆಲ್ಯಡ್ಕ ಶಾಲೆಯ ಸಮೀಪ ಇರುವ ಕಾರ್ತಿಕೇಯ ಭಜನಾ ಮಂದಿರ ಬಳಿ ಆನೆಯೊಂದು ಹಠತ್ ದಾಳಿ ನಡೆಸಿದೆ.
ಪರಿಣಾಮ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ.
ಸದ್ಯ ಚೋಮ ಅವರ ಸ್ಥಿತಿಯು ಚಿಂತಾಜನಕವಾಗಿದ್ದು, ಕಡಬದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಈ ಹಿಂದೆ ಆನೆ ದಾಳಿಯ ಘಟನೆಗಳು ನಡೆದಿದ್ದು, ಕೃಷಿ ನಾಶದಂತಹ ಘಟನೆಗಳು ದಿನಂಪ್ರತಿ ನಡೆಯುತ್ತಿದೆ ಎನ್ನಲಾಗಿದೆ.
DAKSHINA KANNADA
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆ
ಮಂಗಳೂರು: ಮಂಗಳೂರು ಸೊಬೆಸ್ಟಿಯನ್ ಹಾಲ್ ನಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ.
ಸಂಚಾಲಕರಾಗಿ ಕರುಣಾಕರ್ ಕಾನಂಗಿ ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಬಂಟ್ವಾಳ, ಕೋಶಾಧಿಕಾರಿಯಾಗಿ ನವೀನ್ ರೈ ಪಂಜಳ, ಉಪಾಧ್ಯಕ್ಷರಾಗಿ ರಮೇಶ್ ಕಲಾ ಶ್ರೀ ಮಂಗಳೂರು, ಜಯಕರ್ ಸುವರ್ಣ ಉಡುಪಿ, ಜೊತೆ ಕಾರ್ಯದರ್ಶಿ ಹರೀಶ್ ಪಿ ಕೋಟ್ಯಾನ್ ಮುಲ್ಕಿ, ಹೆರಿಕ್ ಡಿಸೋಜ ಬ್ರಹ್ಮಾವರ, ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್ ಕಾಪು, ರಮೇಶ್ ಹೊಸಬೆಟ್ಟು ಸುರತ್ಕಲ್, ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್ ಮೂಡಬಿದ್ರಿ, ಕ್ರೀಡಾ ಕಾರ್ಯದರ್ಶಿ ರಂಜಿತ್ ಕುಂದಾಪುರ, ಭಾರದ್ವಾಜ್ ಬೆಳ್ತಂಗಡಿ, ಸಾಂಸ್ಕೃತಿಕ ಕಾರ್ಯದರ್ಶಿ ಚಿದಾನಂದ್ ಉಳ್ಳಾಲ ಮಾಧ್ಯಮ ಕಾರ್ಯದರ್ಶಿ ಹರೀಶ್ ರಾವ್ ಆಯ್ಕೆಯಾಗಿದ್ದಾರೆ.
ಈ ಚುನಾವಣಾ ಪ್ರಕ್ರಿಯೆಯನ್ನು ಎಸ್ ಕೆಪಿಎ ಯ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಆನಂದ್ ಬಂಟ್ವಾಳ್ ಅವರು ನಡೆಸಿಕೊಟ್ಟರು.
- bangalore7 days ago
ಹುಡುಗಿ ಚೇಂಜ್ ಆದ್ರೂ ಡ್ರೆಸ್ ಚೇಂಜ್ ಆಗಿಲ್ಲ ಅಲ್ವಾ ಶೆಟ್ರೇ?
- bengaluru5 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA4 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- DAKSHINA KANNADA6 days ago
ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್- ಮಧು ಬಂಗಾರಪ್ಪ