Connect with us

LATEST NEWS

ಶಿವಮೊಗ್ಗ:ಎಂಜಿನಿಯರ್ ಪತ್ನಿ ಹತ್ಯೆ ಪ್ರಕರಣ-ಕಾರು ಚಾಲಕ ಸೇರಿ 7 ಜನರ ಬಂಧನ,33.74 ಲಕ್ಷ ನಗದು ವಶ..!

Published

on

ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಮಲ್ಲಿಕಾರ್ಜುನ ಅವರ ಪತ್ನಿ ಕಮಲಮ್ಮ ಅವರನ್ನು ಕೊಲೆ ಮಾಡಿ ನಗದು ದೋಚಿದ್ದ ಆರು ಆರೋಪಿಗಳನ್ನು ಶಿವಮೊಗ್ಗ ಪೊಲೀಸರು ಬಂಧಿಸಿ, 33,74,800 ನಗದು ಸೇರಿದಂತೆ 2 ಬೈಕ್, ಒಂದು ಕಾರು ಹಾಗೂ 7 ಮೊಬೈಲ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗ: ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಮಲ್ಲಿಕಾರ್ಜುನ ಅವರ ಪತ್ನಿ ಕಮಲಮ್ಮ ಅವರನ್ನು ಕೊಲೆ ಮಾಡಿ ನಗದು ದೋಚಿದ್ದ ಆರು ಆರೋಪಿಗಳನ್ನು ಶಿವಮೊಗ್ಗ ಪೊಲೀಸರು ಬಂಧಿಸಿ, 33,74,800 ನಗದು ಸೇರಿದಂತೆ 2 ಬೈಕ್, ಒಂದು ಕಾರು ಹಾಗೂ 7 ಮೊಬೈಲ್‌ಗಳನ್ನು ವಶಕ್ಕೆ ಪಡೆದಿದ್ದಾರೆ. 

ಈ ಕುರಿತು ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಮಲ್ಲಿಕಾರ್ಜುನ್ ಅವರ ಕಾರು ಚಾಲಕನಾಗಿದ್ದ ಹುಣಸೋಡು ತಾಂಡಾದ ಹನುಮಂತನಾಯ್ಕ (22), ಗುಂಡಪ್ಪ ಶೆಡ್ನ ಪ್ರದೀಪ್ ವಿ. ಯಾನೆ ಮೊದಲಿಯಾರ್ (21), ಅನುಪಿನಕಟ್ಟೆ ತಾಂಡಾದ ಅಪ್ಪುನಾಯ್ಕ ಸಿ. ಯಾನೆ ಅಪ್ಪು (21), ಗುಂಡಪ್ಪ ಶೆಡ್‌ನ ಸತೀಶ್ ವಿ. (26), ಅನುಪಿನಕಟ್ಟೆ ತಾಂಡಾದ ರಾಜು ವೈ. ಯಾನೆ ತೀತಾ(24) ಬಂಧಿತ ಆರೋಪಿಗಳಾಗಿದ್ದಾರೆ.

ಈ ಕೃತ್ಯಕ್ಕೆ ಕಾರು ನೀಡಿದ್ದ ಕೌಶಿಕ್ ಎಂಬ 7ನೇ ಆರೋಪಿಯನ್ನು ಕೂಡ ಬಂಧಿಸಲಾಗಿದೆ ಎಂದು ಮಿಥುನ್‌ ಕುಮಾರ್ ಮಾಹಿತಿ ನೀಡಿದ್ದಾರೆ.

ಎಂಜಿನಿಯರ್ ಕೆ.ವಿ. ಮಲ್ಲಿಕಾರ್ಜುನ ಅವರು ತಮ್ಮ ಮಗನ ವೈದ್ಯಕೀಯ ಶಿಕ್ಷಣಕ್ಕೆ ಶುಲ್ಕ ಕಟ್ಟುವ ಸಲುವಾಗಿ 37 ಲಕ್ಷ ರೂ. ಕೈ ಸಾಲ ಪಡೆದು ಮನೆಯಲ್ಲಿ ತಂದಿಟ್ಟಿದ್ದರು.

ಈ ಎಲ್ಲಾ ಹಣವನ್ನು ಚಾಲಕ ಹನುಮಂತನಾಯ್ಕ ಮೂಲಕವೇ ಸ್ನೇಹಿತರ ಬಳಿಯಿಂದ ತರಿಸಿ ಮನೆಯಲ್ಲಿಟ್ಟಿದ್ದರು.

ಹೀಗಾಗಿ ಈ ಹಣ ಲಪಟಾಯಿಸುವ ಉದ್ದೇಶದಿಂದ ಹನುಮಂತನಾಯ್ಕ ಸ್ನೇಹಿತರೊಂದಿಗೆ ಸೇರಿ ತಂತ್ರ ರೂಪಿಸಿದ್ದ ಎಂದು ವಿವರಿಸಿದರು.

ಮಲ್ಲಿಕಾರ್ಜುನ ಅವರು ಗೋವಾಕ್ಕೆ ತೆರಳಿದ ಸಂದರ್ಭ ನೋಡಿಕೊಂಡ ಆರೋಪಿ ಹನುಮಂತನಾಯ್ಕ ತನ್ನ ಸೋದರನಿಗೆ ಅಪಘಾತವಾಗಿದ್ದು, ಆತನ ಚಿಕಿತ್ಸೆಗೆ 2 ಸಾವಿರ ಹಣ ಬೇಕೆಂದು ಜೂನ್ 16 ರ ರಾತ್ರಿ ಮಲ್ಲಿಕಾರ್ಜುನ ಅವರ ಮನೆಗೆ ಹೋಗಿ ಕಮಲಮ್ಮನವರ ಬಳಿ ಕೇಳಿದ್ದ.

ಆ ಸಂದರ್ಭದಲ್ಲಿ ಅವರು ಹಣ ನೀಡದೆ ಮಾರನೇ ದಿನ ಬರುವಂತೆ ಹೇಳಿದ್ದರು.

ಇದನ್ನು ತನ್ನ ಸ್ನೇಹಿತರಿಗೆ ತಿಳಿಸಿದ ಆರೋಪಿ ಹನುಮಂತನಾಯ್ಕ ಜೂನ್ 17 ರಂದು ರೆಮ್ಯಾಟೋ ಕಂಪನಿಯ ಟೀ ಶರ್ಟ್ ಖರೀದಿಸಿ ಮೂವರೂ ಧರಿಸಿಕೊಂಡು ಮನೆಯ ಬಳಿ ಹೋಗಿ ಚಿಕಿತ್ಸೆಗೆ ಹಣ ಕೇಳಿದ್ದಾರೆ.

ಕೊಲೆಯಾದ ಕಮಲಮ್ಮ

ಕೊಡಲು ಅವರು ನಿರಾಕರಿಸಿದ್ದಾರೆ, ಬಳಿಕ ಆರೋಪಿಗಳು ನೀರು ಕೇಳಿದ್ದಾರೆ,  ನೀರು ಕೊಡಲು ಕಮಲಮ್ಮ ಒಳಗೆ ಹೋಗಲು ತಿರುಗುತ್ತಿದ್ದಂತೆ ಅಪ್ಪುನಾಯ್ಕ ಹಿಂದೆಯೇ ಒಳಗೆ ಹೋಗಿ ಬಾಯಿ ಒತ್ತಿ ಹಿಡಿಯಲು ಮುಂದಾದಾಗ ಕಮಲಮ್ಮ ಪ್ರತಿರೋಧ ವ್ಯಕ್ತಪಡಿಸಿದ್ದಾರೆ.

ಆಗ ಕಬ್ಬಿಣದ ಚೂಪಾದ ರಾಡಿನಿಂದ ಕುತ್ತಿಗೆಗೆ ಹೊಡೆದು ಸಾಯಿಸಿದ್ದಾನೆ. ಬಳಿಕ ಹಣ ತೆಗೆದುಕೊಂಡು ಎಲ್ಲರೂ ಪರಾರಿಯಾಗಿದ್ದಾಗಿ ಒಪ್ಪಿಕೊಂಡಿರುವುದಾಗಿ ಹೇಳಿದರು.

ಬಳಿಕ ಎಲ್ಲರೂ ಬೇರೆ ಬೇರೆ ಕಡೆ ತೆರಳಿದ್ದರು. ಹೋಟೆಲ್‌ನಲ್ಲಿ ಉಳಿದುಕೊಂಡು ಹೊಸ ಮೊಬೈಲ್‌ಗಳನ್ನು ಖರೀದಿ ಮಾಡಿದ್ದರು.

ಇನ್ನೋರ್ವ ಆರೋಪಿ ಕೌಶಿಕ್ ಎಂಬಾತ ಇವರಿಗೆ ಕಾರು ನೀಡಿ ಸಹಾಯ ಮಾಡಿದ್ದು, ಆತನ ಮೇಲೆಯೂ ಪ್ರಕರಣ ದಾಖಲಿಸಲಾಗಿದೆ ಎಂದರು.

ಲಪಟಾಯಿಸಿದ್ದ 35 ಲಕ್ಷ ರೂಪಾಯಿಯಲ್ಲಿ 33,74,800 ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜೊತೆಗೆ ಕೃತ್ಯಕ್ಕೆ ಬಳಸಿದ್ದ ಇಂಡಿಕಾ ಕಾರು, 7 ಮೊಬೈಲ್, 3 ಬೈಕ್, ಕೊಲೆ ಮಾಡಿದ ಆಯುಧ ಸೇರಿದಂತೆ ಸುಮಾರು 41,14,800 ಮೌಲ್ಯದ ಹಣ ಮತ್ತು ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದರು.

ತುಂಗಾ ನಗರ ಪೊಲೀಸರು ಮತ್ತು ಅಧಿಕಾರಿಗಳ ತನಿಖಾ ತಂಡ ಉತ್ತಮವಾಗಿ ಕೆಲಸ ನಿರ್ವಹಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅವರಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಅಭಿನಂದಿಸಲಾಗುವುದು ಎಂದು ಎಸ್‌ಪಿ ಮಿಥುನ್ ಕುಮಾರ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಎಎಸ್‌ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್‌ಪಿ ಬಾಲರಾಜು, ತುಂಗಾನಗರ ಪೊಲೀಸ್ ಠಾಣೆಯ ಮಂಜುನಾಥ್, ಪಿಎಸ್ಐ ಕುಮಾರ್, ರಘುವೀರ್, ಸಿಬ್ಬಂದಿಗಳಾದ ಕಿರಣ್, ರಾಜು, ಅರುಣ್‌ಕುಮಾರ್, ಅಶೋಕ್, ಮೋಹನ್, ಕೇಶವ್ ಕುಮಾರ್, ಕಾಂತರಾಜ್, ನಾಗಪ್ಪ, ಹರೀಶ್ ನಾಯ್ಕ ಮತ್ತಿತರರು ಇದ್ದರು.

ನಂಬಿಕಸ್ಥ ಮನೆ ಕಾರು ಚಾಲಕನೇ ಹಂತಕನಾದ..!

ಪ್ರಕರಣದ ಮುಖ್ಯ ಆರೋಪಿ ಹನುಮಂತನಾಯ್ಕ್, ಕಳೆದ ಒಂದು ವರ್ಷದಿಂದ ಮಲ್ಲಿಕಾರ್ಜುನ್ ಅವರ ಮನೆಯ ಕಾರು ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ.

ಡ್ರೈವರ್ ಹನುಮಂತ ನಾಯ್ಕ್

ಪ್ರತಿನಿತ್ಯ ಮಲ್ಲಿಕಾರ್ಜುನ್ ಅವರನ್ನು ಶಿವಮೊಗ್ಗದಿಂದ ಅವರು ಕರ್ತವ್ಯನಿರ್ವಹಿಸುತ್ತಿದ್ದ ಹೊಸದುರ್ಗ ಪಟ್ಟಣಕ್ಕೆ ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದ.

ಆತನ ಬಗ್ಗೆ ಕುಟುಂಬ ಸದಸ್ಯರಿಗೂ ಒಳ್ಳೆಯ ಅಭಿಪ್ರಾಯವಿತ್ತು.

ಈ ನಡುವೆ ಮಲ್ಲಿಕಾರ್ಜುನ್ ಅವರ ಪುತ್ರ ಎಂಬಿಬಿಎಸ್ ವ್ಯಾಸಂಗ ಪೂರ್ಣಗೊಳಿಸಿದ್ದು, ಎಂಡಿ ವಿದ್ಯಾಭ್ಯಾಸ ಮಾಡಲು ನಿರ್ಧರಿಸಿದ್ದರು.

ಇದಕ್ಕಾಗಿ ಮಲ್ಲಿಕಾರ್ಜುನ್ ಅವರು ಸ್ನೇಹಿತರು, ಸಂಬಂಧಿಗಳಿಂದ 35 ಲಕ್ಷ ರೂ.ಗಳನ್ನು ಪಡೆದುಕೊಂಡಿದ್ದರು.

ಈ ಹಣದ ಬ್ಯಾಗ್ ನ್ನು ಆರೋಪಿ ಹನುಮಂತನಾಯ್ಕ್ ನೇ ಕಾರಿನಲ್ಲಿ ಮನೆಗೆ ತಂದು, ಬೆಡ್ ರೂಂನ ವಾರ್ಡ್ ರೋಬ್ ನಲ್ಲಿಟ್ಟಿದ್ದ.

ಆದ್ರೆ ಈ ಭಾರೀ ದೊಡ್ಡ ಹಣವು ಆರೋಪಿಯ ಚಿತ್ತ ಕೆಡಿಸಿತ್ತು ಮಾತ್ರವಲ್ಲ ಈ ಕುರಿತಂತೆ ಇತರೆ ಆರೋಪಿಗಳಿಗೆ ಮಾಹಿತಿ ನೀಡಿದ್ದ.

ತದನಂತರ ಎಲ್ಲರೂ 35 ಲಕ್ಷ ಹಣ ದೋಚಲು ಸಂಚು ರೂಪಿಸಿದ್ದರು.

ಮಲ್ಲಿಕಾರ್ಜುನ್ ಅವರು ಮನೆಯಲ್ಲಿರದ ವೇಳೆ ಜೂ. 17 ರಂದು ಮಧ್ಯಾಹ್ನ ಸರಿಸುಮಾರು 3.30 ರ ವೇಳೆಗೆ ಹನುಮಂತನಾಯ್ಕ್ ವಿಜಯನಗರದಲ್ಲಿರುವ ಮನೆಗೆ ಇತರೆ ಆರೋಪಿಗಳಾದ ಪ್ರದೀಪ್ ಮತ್ತು ಅಪ್ಪುನಾಯ್ಕ್ ಜೊತೆ ಆಗಮಿಸಿದ್ದ.

ತನ್ನ ಅಣ್ಣನಿಗೆ ಅಪಘಾತವಾಗಿದ್ದು, ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾಗಿದೆ.

ಇದಕ್ಕಾಗಿ 3000 ರೂ. ನೀಡುವಂತೆ ಕೇಳಿಕೊಂಡಿದ್ದ. ಹಣ ನೀಡಲು ಕಮಲಮ್ಮ ನಿರಾಕರಿಸಿದ್ದರು.

ನಂತರ ಆರೋಪಿಗಳು ಕುಡಿಯಲು ನೀರು ಕೊಡುವಂತೆ ಕೇಳಿದ್ದರು.

ಅವರು ನೀರು ತರಲು ಅಡುಗೆ ಮನೆಗೆ ತೆರಳಿದಾಗ, ಮೂರು ಜನ ಆರೋಪಿಗಳು ಬಟ್ಟೆಯಿಂದ ಬಾಯಿ ಮುಚ್ಚಿದ್ದರು.

ನಂತರ ತೆಂಗಿನಕಾಯಿ ಸುಲಿಯುವ ಆಯುಧದಿಂದ ಕುತ್ತಿಗೆಗೆ ಚುಚ್ಚಿ ಹತ್ಯೆ ಮಾಡಿದ್ದರು.

ನಂತರ ಮನೆಯಲ್ಲಿದ್ದ 35 ಲಕ್ಷ ರೂ.ಗಳನ್ನು ದೋಚಿದ್ದರು. ತದನಂತರ ಗೋಪಾಳದಲ್ಲಿದ್ದ ಇತರೆ ಮೂವರು ಆರೋಪಿಗಳಾದ ಪ್ರಭುನಾಯ್ಕ್, ರಾಜ ಯಾನೆ ತೀತಾ ಮತ್ತು ಸತೀಶ್ ಜೊತೆ ಕಾರಿನಲ್ಲಿ ಪರಾರಿಯಾಗಿದ್ದರು.

ದೋಚಿದ ಹಣದಲ್ಲಿ ಎಲ್ಲರೂ ಒಂದೊಂದು ಹೊಸ ಮೊಬೈಲ್ ತೆಗೆದುಕೊಂಡು ಬೇರೆ ಬೇರೆ ಕಡೆ ಪರಾರಿಯಾಗಿ ಲಾಡ್ಜ್‌ಗಳಲ್ಲಿ ವಾಸವಾಗಿದ್ದರು.

ತುಂಗಾ ನಗರ ಪೊಲೀಸರು ಮತ್ತು ಅಧಿಕಾರಿಗಳ ತನಿಖಾ ತಂಡ ಉತ್ತಮವಾಗಿ ಕೆಲಸ ನಿರ್ವಹಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

LATEST NEWS

Baindoor: ರೈಲ್ವೆ ಸುರಂಗ ಮಾರ್ಗದಲ್ಲಿ ಕೋಮಾ ಸ್ಥಿತಿಯಲ್ಲಿದ್ದ ವ್ಯಕ್ತಿಯ ರಕ್ಷಣೆ..!

Published

on

ಬೈಂದೂರು: ಬೈಂದೂರು- ಶಿರೂರು ನೆರೆಗುದ್ದೆ ರೈಲ್ವೆ ಸುರಂಗ ಮಾರ್ಗದಲ್ಲಿ ಕೋಮಾ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದ ಯುವಕನೊಬ್ಬನನ್ನು ಆರೋಗ್ಯ ಕವಚ 108 ಆ್ಯಂಬುಲೆನ್ಸ್ ಸಿಬಂದಿ ರಕ್ಷಿಸಿ ಪ್ರಾಣ ಉಳಿಸಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಗಾಯಾಳು ವ್ಯಕ್ತಿಯನ್ನು ರಾಜೇಶ್  (25)ಎಂದು ಗುರುತಿಸಲಾಗಿದೆ.

ಮಂಗಳವಾರ ರಾತ್ರಿ 10 ಗಂಟೆಗೆ ರೈಲ್ವೆ ಇಲಾಖೆ ನೀಡಿದ ಮಾಹಿತಿಯ ಮೇರೆಗೆ ಆರೋಗ್ಯ ಕವಚ 108 ಸಿಬಂದಿ ಕಾರ್ಯಚರಣೆ ನಡೆಸಿದರು.

ರೈಲ್ವೇ ಸುರಂಗ ಮಾರ್ಗದೊಳಗೆ ಸುಮಾರು 3 ಕಿ.ಮೀ ನಡೆದು ಕೊಂಡು ಹೋಗಿ ಹಳಿಯ ಪಕ್ಕದಲ್ಲಿ ಮುಗುಚಿ ಬಿದ್ದಿದ್ದ ವ್ಯಕ್ತಿಯನ್ನು ಸ್ಟ್ರೆಚರ್ ನಲ್ಲಿ ಹಾಕಿ ಹೊತ್ತು ಹೊರತಂದು ಬೈಂದೂರು ಆಸ್ಪತ್ರೆಗೆ ದಾಖಲಿಸಿದರು.

ಅಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಅಲ್ಲಿಂದ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ‌.

ಆ್ಯಂಬುಲೆನ್ಸ್‌ನ ಪೈಲೆಟ್ ಶರಣ ಬಸವ ಮತ್ತು ಇ ಎಂ ಟಿ ಪ್ರತಿಭಾ ಅವರು ಅಸ್ವಸ್ಥ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲು ಮಾಡಿ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.

Continue Reading

LATEST NEWS

ಕೊರಗಜ್ಜನ ಪವಾಡ- ವಾರವಿಡೀ ಕಾಡಿನಲ್ಲಿ ಸಿಲುಕಿದ ಯುವಕನ ರಕ್ಷಣೆ ಮಾಡಿದ ನಾಯಿಯ ಅದ್ದೂರಿ ಮೆರವಣಿಗೆ

Published

on

ಕುಂದಾಪುರ: ತುಳುನಾಡಿನಲ್ಲಿ ಕೊರಗಜ್ಜನ ದೈವದ ಕಾರ್ಣಿಕದ ಶಕ್ತಿ ಅಪಾರವಾದದ್ದು. ಹಾಗಾಗಿ ನಂಬುವ ಜನರಿಗೆ ಕೊರಗಜ್ಜ ಯಾವತ್ತೂ ಕೈ ಬಿಡುದಿಲ್ಲ ಎಂಬ ನಂಬಿಕೆ ಇದೆ.

ಆ ನಂಬಿಕೆಯಂತೆ ಉಡುಪಿ ಜಿಲ್ಲೆಯಲ್ಲೊಂದು ಅಚ್ಚರಿ ಘಟನೆ ನಡೆದಿದೆ.

ಕುಂದಾಪುರದ ಯುವಕನೋರ್ವ ಕಾಣೆಯಾಗಿದ್ದಾನೆ ಎಂದು ತಿಳಿದ ಮನೆಯವರು ದೈವದ ಮೊರೆ ಹೋದ ಬೆನ್ನಲೇ ಆತ ನಾಯಿಯೊಂದಿಗೆ ವಾಪಸು ಮನೆಗೆ ಮರಳಿದ್ದಾನೆ.

ಇದು ನಂಬಿದ ದೈವವೇ ಯುವಕನನ್ನು ಮರಳಿ ಮನೆಗೆ ಕರೆಸಿದೆ ಎಂದು ಗ್ರಾಮಸ್ಥರು ನಂಬಬಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮಚ್ಚೆಟ್ಟು ವ್ಯಾಪ್ತಿಯ ವಿವೇಕಾನಂದ ಎಂಬ ಯುವಕನು ಕಾಡಿಗೆ ಕಟ್ಟಿಗೆ ತರಲು ಎಂದು ಹೋದವನು 8 ದಿನವಾದರೂ ಮನೆಗೆ ವಾಪಸು ಬಂದಿರಲಿಲ್ಲ.

ಹಾಗಾಗಿ ಮನೆಯವರು ದೈವದ ಮೊರೆ ಹೋಗಿದ್ದಾರೆ.

ಈ ವೇಳೆ ಆತ ಜೀವಂತವಾಗಿರುವುದು ತಿಳಿದು ಬಂದ ಕೂಡಲೇ ದೈವದ ಭರವಸೆಯಂತೆ ಪೊಲೀಸರು, ಎಎನ್‌ಎಫ್‌ ಪಡೆಯೊಂದಿಗೆ ಗ್ರಾಮಸ್ಥರು ಹಗಲು ರಾತ್ರಿ ಇಡೀ ಆತನ ಪತ್ತೆಗೆ ಹುಡುಕಾಡಿದ್ದಾರೆ.

ಆದರೆ ಆತನ ಸುಳಿವು ಸಿಕ್ಕಿರದ ಕಾರಣ ಮನೆಯವರು ಮುಳ್ಳುಗುಡ್ಡೆ ಕೊರಗಜ್ಜ ಸನ್ನಿಧಾನಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿದರು.

“ಆತ ಹಂದಿಯೊಂದನ್ನು ಓಡಿಸಿಕೊಂಡು ಹೋಗುವಾಗ ದಾರಿ ತಪ್ಪಿದ್ದಾನೆ.  ಹಕ್ಕಿಯೊಂದು ದಾರಿ ತೋರಿಸಿದೆ.

ಹಳದಿ ಬಣ್ಣದ ಅಂಗಿ ಹಾಕಿ ಕಾಡಿನಲ್ಲಿ ಅಡಗಿ ಕುಳಿತ್ತಿದ್ದಾನೆ.

5 ಜನ ಸೇರಿ ಅಲ್ಲಿ ಹೋಗಿ ಹುಡುಕಿ. ಆಗಲಿಲ್ಲವಾದರೆ ಇನ್ನು ಎರಡು ದಿನದ ಒಳಗೆ ಆತ ಮನೆಗೆ ಬರುತ್ತಾನೆ” ಎಂದು ಕ್ಷೇತ್ರದ ಧಮ೯ದಶಿ೯ ಪುನೀತ್ ಅವರು ಹೇಳಿದ್ದರು.

ಅದರಂತೆ ಮಗನ ಬರುವಿಕೆಗೆ ಮನೆಯವರು ಕಾಯುತ್ತಿದ್ದರು.

ಇದೀಗ ಮನೆಯವರಿಗೆ ಹಾಗೂ ಗ್ರಾಮಸ್ಥರಿಗೆ ಕೊರಗಜ್ಜನ ದೈವದ ಶಕ್ತಿ ಅಚ್ಚರಿಯನ್ನುಂಟು ಮಾಡಿದೆ.

ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ಪುನೀತ್ ಅವರ ನುಡಿಯಂತೆ ಎಂಟು ದಿನಗಳ ಬಳಿಕ ಆತ ನಾಯಿಯೊಂದಿಗೆ ಮರಳಿ ಬರುತ್ತಾನೆ.

ಆದರೆ ಆತನಿಗೆ ತಾನೂ ಎಲ್ಲಿ ಹೋಗಿದ್ದೆ ಎಂದು ಗೊತ್ತಿಲ್ಲ. ಕಾಡಿನಲ್ಲಿ ಸಿಲುಕಿದ ಕಾರಣ ಆಹಾರವಿಲ್ಲದೆ ವಿವೇಕಾನಂದನು ನಿತ್ರಾಣಗೊಂಡಿದ್ದ.

ಆತನ ಜೊತೆಗಿದ್ದದ್ದು ಮಾತ್ರ  ಮನೆಯ ಸಾಕು ನಾಯಿ, ಆತನ ಮರಳಿ ಬರುವಂತೆ ದಾರಿ ತೋರಿಸಿ ರಕ್ಷಿಸಿದೆ.

ಹಾಗಾಗಿ ಆತನ ಜೀವ ಉಳಿಸಿದ ನಾಯಿಯನ್ನು ಗ್ರಾಮಸ್ಥರು ಸೇರಿ ಅದ್ದೂರಿಯಾಗಿ  ತೆರೆದ ಪಿಕಪ್ ವಾಹನದಲ್ಲಿ ಕುಳ್ಳಿರಿಸಿ ಮೆರವಣಿಗೆ ನಡೆಸಿದರು.

50ಕ್ಕಿಂತ ಹೆಚ್ಚು ಬೈಕ್ ಟೆಂಪೋ ಆಟೋರಿಕ್ಷಾಗಳ ಜೊತೆಗೆ ತೆರೆದ ವಾಹನದಲ್ಲಿ ಚಿಂಟು ಮತ್ತು ವಿವೇಕಾನಂದ ಕುಟುಂಬಸ್ಥರು ಆಪ್ತರನ್ನು ಗೆಳೆಯರ ಬಳಗ ಮೆರವಣಿಗೆ ಮಾಡಿದೆ.

ನಂತರ ಮನೆಯಲ್ಲಿ ಕೇಕ್ ಕತ್ತರಿಸಿ ಹುಟ್ಟು ಹಬ್ಬದ ರೀತಿಯಲ್ಲೇ ವಿವೇಕಾನಂದ ವಾಪಾಸ್ ಬಂದ ಖುಷಿಯನ್ನು ಆಚರಿಸಿದರು.

ಸುತ್ತಮುತ್ತಲ ಮನೆಯವರಿಗೆ ಗೆಳೆಯರ ಬಳಗಕ್ಕೆ ಹುಡುಕಾಡಲು ಸಹಾಯ ಮಾಡಿದ ಎಲ್ಲರಿಗೆ ಶೀನಾ ನಾಯ್ಕ ಕುಟುಂಬ ಸಿಹಿಯೂಟ ಹಾಕಿಸಿದೆ.

Continue Reading

LATEST NEWS

Udupi: ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಸಾಗಾಟಗಾರರ ಮುಷ್ಕರ..!

Published

on

ಉಡುಪಿ: ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಸಾಗಾಟಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾಡಳಿತ ಮತ್ತು ಸರಕಾರದ ನೀತಿಗಳನ್ನು ಖಂಡಿಸಿ ಲಾರಿ, ಟೆಂಪೋ ಚಾಲಕ, ಮಾಲಕರು ಕಟ್ಟಡ ಸಾಮಾಗ್ರಿ ಸಾಗಾಟವನ್ನು ಸ್ಥಗಿತಗೊಳಿಸಿ ಇಂದು ಅನಿರ್ದಿಷ್ಟವಾದಿ ಮುಷ್ಕರ ಕೈಗೊಂಡಿದ್ದಾರೆ.

ಈ ನಿಟ್ಟಿನಲ್ಲಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಗಳಲ್ಲಿ ಲಾರಿಗಳನ್ನು ಪಾರ್ಕಿಂಗ್ ಮಾಡಲಾಗಿದೆ.

ಉದ್ಯಾವರ, ಕಟಪಾಡಿ, ಬ್ರಹ್ಮಾವರ,ಕೋಟ ಸಾಸ್ತಾನ, ಕುಂದಾಪುರ, ಬೈಂದೂರು ಭಾಗದಲ್ಲಿ ರಸ್ತೆ ಬದಿ ಲಾರಿ, ಟೆಂಪೋಗಳು ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡು ಬಂದಿದೆ.

ಒನ್ ಸ್ಟೇಟ್ ಒನ್ ಜಿಪಿಎಸ್, ಲಾರಿಗಳ ಮೇಲೆ ಅಕ್ರಮ ಸಾಗಾಟ ನೆಪದಲ್ಲಿ ಕೇಸ್, ಪರವಾನಿಗೆ ಅವ್ಯವಸ್ಥೆ ಮತ್ತು ಜಿಲ್ಲಾಡಳಿತದ ಏಕಾಏಕಿ ಹೊಸ ನಿಯಮಗಳ ಜಾರಿಯಿಂದ ಸಂಕಷ್ಟಕ್ಕೆ ಒಳಗಾಗಿರುವ ಲಾರಿ ಮಾಲಕರು ಸಮಸ್ಯೆ ಬಗೆ ಹರಿಯುವವರೆಗೆ ಮುಷ್ಕರ ಮುಂದುವರೆಸಲು ನಿರ್ಧಾರವನ್ನು ಮಾಡಿದ್ದಾರೆ.

ಪ್ರತಿಭಟನೆ ಹೀಗೆ ಮುಂದುವರಿದ್ರೆ ಕಟ್ಟಡ ನಿರ್ಮಾಣ ಕಾಮಗಾರಿಗೆ ದೊಡ್ಡ ಹೊಡೆತ ಬೀಳುವ ಸಾಧ್ಯತೆ ಕೂಡ ಇದೆ.

ಈ ವೇಳೆ  ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಸಾಗಾಟಗಾರರ ಸಂಘದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕಟಪಾಡಿ ಅವರು ಮಾತನಾಡಿ, ಇದು ಲಾರಿಯವರು ದಂಧೆ ಕೋರರು ಎನ್ನುವುದಾದರೆ ನೀವು ಯಾರು? ಈ ಹಿಂದೆ ಇದ್ದ ಅಧಿಕಾರಿಗಳು ಯಾಕೆ ಕ್ರಮ ಕೈಗೊಳ್ಳಲಿಲ್ಲ.

ನೀವು ಅನಾದಿ‌ ಕಾಲದಿಂದಲೂ ಶಿಸ್ತು ಬದ್ದ ಪರವಾನಿಗೆ ವ್ಯವಸ್ಥೆ ಯಾಕೆ ಮಾಡಿಲ್ಲ. ಕೋಟಾ ನೋಟ್ ಪ್ರಿಂಟ್ ಮಾಡಿದ ಹಾಗೆ ನಾವು ಪರವಾನಿಗೆ‌ ಪ್ರಿಂಟ್ ಮಾಡಲು ಆಗುತ್ತದಾ?

ನಮ್ಮನ್ನು ಯಾಕೆ ಬಲಿಪಶು ಮಾಡುತ್ತಿದ್ದೀರಿ? ಲಾರಿಯವರ ಮೇಲೆ ದೊಡ್ಡ ದೊಡ್ಡ ಕೇಸ್ ಹಾಕುತ್ತಿದ್ದಾರೆ.

ಕಟ್ಟಡ ಸಾಮಾಗ್ರಿಗಳು ಇಲ್ಲದಿದ್ದರೆ ಎಲ್ಲರಿಗೂ ಸಮಸ್ಯೆ ಎಂದು ಸರ್ಕಾರದ ನಡೆ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

10ಸಾವಿರಕ್ಕೆ ಇದ್ದ ಒಂದು ಲೋಡ್ ಜಲ್ಲಿ ಕಲ್ಲು ಇವತ್ತು 20ಸಾವಿರಕ್ಕೆ ಹಾಕುತ್ತಿದ್ದಾರೆ.

ಇದಕ್ಕೆ ನೇರ ಕಾರಣ ಜಿಲ್ಲಾಡಳಿತ ನಿಮ್ಮ ಅಹಂಕಾರಕ್ಕೆ ನಮ್ಮ ಉತ್ತರ ನಮ್ಮ ಹೆಣ ಬೀಳುವುದು ಅಷ್ಟೇಮುಂದೆ ಏನೆಂದು ನಮಗೆ ದಾರಿ ಕಾಣುತ್ತಿಲ್ಲ.

ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳ ನಿರ್ಧಾರಗಳೇ ನಮಗೆ ಸಮಸ್ಯೆಯಾಗಿದೆ.

ಇದಕ್ಕೆ ನೇರ ಕಾರಣ ಜಿಲ್ಲಾಡಳಿತ ಎಂದು ಆರೋಪಿಸಿ ಅವರು ನಿಮ್ಮ ಅಹಂಕಾರಕ್ಕೆ ನಮ್ಮ ಉತ್ತರ ನಮ್ಮ ಹೆಣ ಬೀಳುವುದು ಅಷ್ಟೇ.

ಮುಂದೆ ಏನೆಂದು ನಮಗೆ ದಾರಿ ಕಾಣುತ್ತಿಲ್ಲ.

ಒಂದು ವೇಳೆ ಜಿಲ್ಲೆಯಲ್ಲಿ ಲಾರಿ ಮಾಲಕರ ಮೇಲೆ ದಬ್ಬಾಳಿಕೆ ನಡೆದರೆ, ಎಲ್ಲಾ ವಾಹನಗಳನ್ನು ಪೊಲೀಸ್ ಠಾಣೆಯ ಮುಂದೆ ನಿಲ್ಲಿಸಿ ನಮ್ಮನ್ನು ಬಂಧಿಸುವಂತೆ ಆಂದೋಲನ ನಡೆಸುತ್ತವೆ ಎಂದು ಎಚ್ಚರಿಕೆ ನೀಡಿದರು.

ಇಂದು ನಾವು ಬೀದಿಗೆ ಬರಲು ಸರಕಾರ ಮತ್ತು ಜಿಲ್ಲಾಡಳಿತ ಕಾರಣ.

ಈ ಪ್ರತಿಭಟನೆಯಲ್ಲಿ ನ್ಯಾಯ ಸಿಗದೆ ಇದ್ರೆ ನಮ್ಮ ಪ್ರಾಣ ಹೋಗುವ ತನಕ ಪ್ರತಿಭಟನೆ ನಡೆಸುತ್ತೇವೆ ಎಂದು ಪಟ್ಟು ಹಿಡಿದರು.

Continue Reading

LATEST NEWS

Trending