Connect with us

    ಕಾರ್ಕಳ ಶಿರ್ಲಾಲು ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇಕಡ ನೂರು ಫಲಿತಾಂಶ..!

    Published

    on

    ಕಾರ್ಕಳ ಶಿರ್ಲಾಲು ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇಕಡ ನೂರು ಫಲಿತಾಂಶ..!

    ಉಡುಪಿ :  ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲು ಸರಕಾರಿ ಪದವಿಪೂರ್ವ ಕಾಲೇಜು ಶೇಕಡ ನೂರು ಫಲಿತಾಂಶ ಸಾಧಿಸಿದೆ.

    ಗ್ರಾಮೀಣ ಪ್ರದೇಶದಲ್ಲಿರುವ ನಾಲ್ಕೂರು ನರಸಿಂಗರಾವ್ ಸ್ಮಾರಕ ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಪಿಯುಸಿ ವಿಭಾಗದಲ್ಲಿ ಉತ್ತೀರ್ಣರಾಗಿದ್ದಾರೆ.

    ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಕಾಲೇಜಿಗೆ ತೆರಳಲು ವಾಹನ ವ್ಯವಸ್ಥೆ ಇರಲಿಲ್ಲ. ಸಾಕಷ್ಟು ಮೂಲಭೂತ ಸೌಕರ್ಯಗಳ ಸಮಸ್ಯೆ ನಡುವೆಯೂ ರಾಜ್ಯದಲ್ಲಿ ವಿಶಿಷ್ಟ ಸಾಧನೆ ಮಾಡಿದೆ.

    ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡ ಶಿರ್ಲಾಲು ಸರ್ಕಾರಿ ಕಾಲೇಜನ್ನು ಪತ್ರಿಕಾಗೋಷ್ಠಿಯಲ್ಲಿ ಶ್ಲಾಘಿಸಿದ್ದಾರೆ.

    ಶೇಕಡ ನೂರು ಫಲಿತಾಂಶ ಬಂದಿರುವುದರಿಂದ ಕಾಲೇಜಿನ ಉಪನ್ಯಾಸಕರು ಆಡಳಿತ ಮಂಡಳಿ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

    ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರ ಅವಿರತ ಶ್ರಮದಿಂದ ಈ ಸಾಧನೆ ಸಾಧ್ಯವಾಗಿದೆ ಎಂದಿದ್ದಾರೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಕನ್ನಡದಲ್ಲಿ ಔಷಧ ಚೀಟಿ ಬರೆದು ಮಗನ ಸೆಳೆದ ಕಾಸರಗೋಡು ಜಿಲ್ಲೆಯ ದಂತ ವೈದ್ಯ..!

    Published

    on

    ಮಂಜೇಶ್ವರ/ಮಂಗಳೂರು: ಈ ಹಿಂದೆ ವೈದ್ಯರೊಬ್ಬರು ಕನ್ನಡದಲ್ಲಿ ಔಷಧ ಚೀಟಿಯನ್ನು ಬರೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಬಳಿಕ ಕರ್ನಾಟಕದಲ್ಲಿ ವೈದ್ಯರು ಕನ್ನಡದಲ್ಲೇ  ಔಷಧ ಚೀಟಿಯನ್ನು ಬರೆಯುವಂತೆ ಕನ್ನಡ ಪ್ರಾಧಿಕಾರ ಸೂಚನೆ ಕೂಡಾ ನೀಡಿತ್ತು. ಆದರೆ ಕರ್ನಾಟಕದಲ್ಲಿ ಈ ಸೂಚನೆ ಕಟ್ಟುನಿಟ್ಟಾಗಿ ಜಾರಿಯಾಗುವ ಮೊದಲೇ ಕೇರಳದ ಕಾಸರಗೋಡಿನಲ್ಲಿ ವೈದ್ಯರೊಬ್ಬರು ಕನ್ನಡದಲ್ಲಿ ಔಷಧ ಚೀಟಿ ಬರೆದು ಎಲ್ಲರ ಗಮನ ಸೆಳೆದಿದ್ದಾರೆ.

    ಹೌದು, ಕಾಸರಗೋಡಿನ ಮಂಜೇಶ್ವರದಲ್ಲಿರುವ ಸುರಕ್ಷಾ ದಂತ ಚಿಕಿತ್ಸಾಲಯದ ಡಾ.ಮುರಳೀ ಮೋಹನ ಚೂಂತೂರು ರವರು ಕನ್ನಡ ಪ್ರೇಮ ಮೆರೆದಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿನೆಲೆ ಅವರು ಇತ್ತೀಚೆಗೆ ಮಂಗಳೂರು ಭೇಟಿ ನೀಡಿದ ವೇಳೆ ವೈದ್ಯರು ಕೂಡಾ ಕನ್ನಡದಲ್ಲಿ ಔಷಧ ಚೀಟಿಯನ್ನು ಜನರಿಗೆ ಅರ್ಥವಾಗುವಂತೆ ಬರೆಯಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಹೇಳಿದ್ದರು.

    ಹಾಗಾಗಿ ರಾಜ್ಯದಲ್ಲಿ ಒಬ್ಬ ವೈದ್ಯರು ಕನ್ನಡದಲ್ಲಿ ಔಷಧ ಚೀಟಿ ಬರೆಯುವ ಮೂಲಕ ಮೊದಲ ಸ್ಪಂದನ ನೀಡಿದ್ದರು. ಇದೀಗ ಕೇರಳ ರಾಜ್ಯದಲ್ಲಿ ವೈದ್ಯರೊಬ್ಬರು ಕನ್ನಡದಲ್ಲಿ  ಔಷಧ ಚೀಟಿ ಬರೆಯುವ ಮೂಲಕ ತನ್ನ ಕನ್ನಡ ಪ್ರೇಮವನ್ನು ತೋರಿಸಿದ್ದಾರೆ.

    ಸರ್ಕಾರಿ ವೈದ್ಯರು ಕನ್ನಡದಲ್ಲೇ ಔಷಧ ಚೀಟಿ ಬರೆಯಲು ಆದೇಶಿಸುವಂತೆ ಸಚಿವರಿಗೆ ಪ್ರಾಧಿಕಾರ ಪತ್ರ

    ಅದಾದ ಬಳಿಕ ಆರೋಗ್ಯ ಸಚಿವರು ಪತ್ರಿಕಾ ಹೇಳಿಕೆ ಹೊರಡಿಸಿ, ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಿ, ಮುಖ್ಯಮಂತ್ರಿಗಳೊಂದಿಗೂ ಚರ್ಚೆ ನಡೆಸಿ ಬಳಿಕ ಸಾಧಕ ಬಾಧಕ ನೋಡಿಕೊಂಡು ಅನುಷ್ಠಾನಕ್ಕೆ ತರವಲಾಗುವುದು ಎಂದಿದ್ದರು. ಈಗ ಗಡಿನಾಡಿನ ಕನ್ನಡಿಗ ವೈದ್ಯರು ಔಷಧ ಚೀಟಿಯನ್ನು ಕನ್ನಡದಲ್ಲಿ ಬರೆಯುವ ಮೂಲಕ ಇತರರಿಗೆ ಮಾರ್ಗದರ್ಶಿಯಾಗಿರುವುದನ್ನು ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಸಂತಸ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

    Continue Reading

    LATEST NEWS

    ಲೋ ಬಿಪಿಯಿಂದ ಕುಸಿದು ಬಿದ್ದು 5ನೇ ತರಗತಿ ವಿದ್ಯಾರ್ಥಿ ಸಾ*ವು

    Published

    on

    ಬೆಂಗಳೂರು : ತರಗತಿಯಲ್ಲೇ ಏಕಾಏಕಿ ಲೋ ಬಿಪಿಯಿಂದ ಕುಸಿದು ಬಿದ್ದು ವಿದ್ಯಾರ್ಥಿ ಸಾ*ವನಪ್ಪಿದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ  ಗಬ್ಯೂರು ಗ್ರಾಮದಲ್ಲಿ  ನಡೆದಿದೆ.

    5ನೇ ತರಗತಿ ವಿದ್ಯಾರ್ಥಿ ಶಿವಪ್ರಸಾದ್ ಮೃ*ತ ಬಾಲಕ. ಗಬ್ಯೂರ್‌ನಲ್ಲಿ ಸೈನಿಕ, ನವೋದಯ ಕೋಚಿಂಗ್ ಪಡೆಯುತ್ತಿದ್ದ. ಇನ್ನು ಕೋಚಿಂಗ್ ಸೆಂಟರ್‌ನಲ್ಲೇ ಏಕಾಏಕಿ ಲೋ ಬಿಪಿಯಾಗಿ ಬಾಲಕ ಶಿವಪ್ರಸಾದ್ ಸಾವನಪ್ಪಿದ್ದು, ಗಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    ಇಂದು ದೆಹಲಿ ನೂತನ ಸಿಎಂ ಆಗಿ ಆತಿಶಿ ಪ್ರಮಾಣವಚನ ಸ್ವೀಕಾರ

    Published

    on

    ನವದೆಹಲಿ: ದೆಹಲಿ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷ ದ ಆತಿಶಿ ಇಂದು (ಸೆ.21) ಅಧಿಕಾರ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಐದು ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

    ರಾಜಭವನದಲ್ಲಿ ಸಂಜೆ 4.30ಕ್ಕೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಅತಿಶಿ ಜೊತೆಗೆ ಆಪ್ ನ ಹಿರಿಯರಾದ ಗೋಪಾಲ್ ರೈ, ಕೈಲಾಶ್ ಗಹ್ಲೋಟ್, ಸೌರಭ್ ಭಾರದ್ವಾಜ್, ಮುಖೇಶ್ ಅಹ್ಲಾವತ್ ಮತ್ತು ಇಮ್ರಾನ್ ಹುಸೇನ್ ಕೂಡ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದಲಿತ ನಾಯಕ ಮುಖೇಶ್ ಅಹ್ಲಾವತ್ ಅವರು ದಿಲ್ಲಿ ಕ್ಯಾಬಿನೆಟ್ಗೆ ಹೊಸದಾಗಿ ಪ್ರವೇಶಿಸುತ್ತಿದ್ದಾರೆ. ಸುಲ್ತಾನ್ಪುರ ಮಜ್ರಾದಿಂದ ಅವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.

    ನಿರ್ಗಮಿತ ಕೇಜ್ರಿವಾಲ್ ಸರ್ಕಾರದಲ್ಲಿ ಅತಿಶಿ ಅವರು ಹಣಕಾಸು, ಕಂದಾ ಯ, ಲೋಕೋಪಯೋಗಿ, ವಿದ್ಯುತ್ ಮತ್ತು ಶಿಕ್ಷಣ ಸೇರಿದಂತೆ 13 ಪ್ರಮುಖ ಖಾತೆಗಳನ್ನು ಹೊಂದಿದ್ದರು.ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಅರವಿಂದ ಕೇಜ್ರಿವಾಲ್ ಅವರು ಜಾಮೀನಿನ ಮೇಲೆ ಹೊರಬಂದ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು . ಅದಾದ ಬಳಿಕ ಶಾಸಕಾಂಗ ಸಭೆಯಲ್ಲಿ ಅವಿರೋಧವಾಗಿ ಆತಿಶಿ ಅವರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಲಾಗಿತ್ತು.

    Continue Reading

    LATEST NEWS

    Trending