Connect with us

    ಸೌಹಾರ್ದತೆಯ ಶಿವರಾತ್ರಿಗೆ ಸಾಕ್ಷಿಯಾದ ಬಂದರು ನಗರಿ: ಸಿಹಿ ಹಂಚಿ ಸಂಭ್ರಮಿಸಿದ ಹಿಂದೂ-ಮುಸ್ಲಿಂ ಸಹೋದರರು

    Published

    on

    ಸೌಹಾರ್ದತೆಯ ಶಿವರಾತ್ರಿಗೆ ಸಾಕ್ಷಿಯಾದ ಬಂದರು ನಗರಿ: ಸಿಹಿ ಹಂಚಿ ಸಂಭ್ರಮಿಸಿದ ಹಿಂದೂ-ಮುಸ್ಲಿಂ ಸಹೋದರರು

    ಮಂಗಳೂರು: ನಾಡಿನೆಲ್ಲೆಡೆ ಶಿವರಾತ್ರಿ ಉತ್ಸವ ಭಕ್ತಿ ಮತ್ತು ವಿಜ್ರಂಭಣೆಯಿಂದ ಜರುಗುತ್ತಿದೆ.ಕರಾವಳಿ ನಗರಿ ಮಂಗಳೂರಿನಲ್ಲೂ ಶಿವರಾತ್ರಿ ಉತ್ಸವದ ಸಂಭ್ರಮ ಜೋರಾಗಿಯೇ ಇದೆ.

    ನಗರದ ಬಂದರಿನ ನಿರೇಶ್ವಾಲ್ಯದಲ್ಲಿ ಶ್ರೀ ಪರಮೇಶ್ವರ ದೇವಳದಲ್ಲಿ ಶಿವರಾತ್ರಿ ಪ್ರಯುಕ್ತ ಅದ್ದೂರಿ ಶೋಭಾಯಾತ್ರೆಯನ್ನು ನಿತ್ಯಾನಂದ ಆಶ್ರಮದ ಅಶ್ರಯದಲ್ಲಿ ಆಯೋಜಿಸಲಾಗಿತ್ತು. ಶ್ರೀ ದೇವರ ಭಾವಚಿತ್ರವಿರುವ ಶೋಭಾಯಾತ್ರೆ ಕಂದುಕ, ಬಂದರು ಪೊಲೀಸ್‌ ಠಾಣಾ ಮಾರ್ಗಾವಾಗಿ , ಕ್ಲಾಕ್ ಟವರ್ , ಎಬಿ ಶೆಟ್ಟಿ ಸರ್ಕಲ್, ಗೂಡ್ಸ್‌ ಶೆಡ್ ಮಾರ್ಗವಾಗಿ ನಿರೇಶ್ವಾಲ್ಯಕ್ಕೆ ವಾಪಸ್‌ ಬಂತು, ಈ ಸಂದರ್ಭದಲ್ಲಿ ಮುಸ್ಲೀಂ ಬಾಂಧವರು ಸಾಥ್ ನೀಡಿದರು. ಶ್ರೀ ದೇವರ ಮೆರವಣಿಗೆ ಉದ್ದಕ್ಕೂ ನಿಂತ ಮುಸ್ಲೀಂ ಸಹೋದರರು ಹಿಂದೂ ಸಹೋದರರಿಗೆ ಸಾರ್ವಜನಿಕರಿಗೆ ಪಾನಿಯ ಸಿಹಿ ತಿಂಡಿ ವಿತರಿಸಿ ಸಂಭ್ರಮಿಸಿದರು.

    ಅಲ್ಲದೇ ಮೆರವಣಿಗೆಯ ರಸ್ತೆಗಳಲ್ಲಿ ಯಾವುದೇ ಅಡಚನೆಗಳಾಗದಂತೆ ಸ್ವಯಂ ಸೇವಕರಾಗಿ ಕೆಲಸ ಮಾಡಿದರು.ಸಿಎಎ , ಎನ್‌ಆರ್‌ಸಿ ಪ್ರತಿಭಟನೆ ಮತ್ತು ಗೋಲಿಬಾರ್‌ ಬಳಿಕ ಇದೇ ಮೊದಲ ಬಾರಿಗೆ ಬಂದರು ಪ್ರದೇಶ ಎಲ್ಲವನ್ನೂ ಮರೆತು ಸೌಹರ್ದತೆಗೆ ಸಾಕ್ಷಿಯಾಯಿತು.

    Click to comment

    Leave a Reply

    Your email address will not be published. Required fields are marked *

    LATEST NEWS

    ಹಸುಗಳ ಕೆಚ್ಚಲು ಕೊ*ಯ್ದ ಪ್ರಕರಣ; ಆರೋಪಿಯೋರ್ವನ ಬಂಧನ

    Published

    on

    ಮಂಗಳುರು/ಬೆಂಗಳೂರು : ಹಸುಗಳ ಕೆಚ್ಚಲು ಕೊ*ಯ್ದ ಅಮಾನವೀಯ ಘಟನೆಯು ಚಾಮರಾಜಪೇಟೆಯ ಓಲ್ಡ್‌ ಪೆನ್ಷನ್‌ ಮೊಹಲ್ಲಾದ ವಿನಾಯಕನಗರದಲ್ಲಿ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಓರ್ವ ಆರೋಪಿಯನ್ನು ಕಾಟನ್‌ ಪೇಟೆ ಪೊಲೀಸರು ಬಂಧಿಸಿ, ಸ್ಥಳ ಮಹಜರು ಮಾಡಿದ್ದಾರೆ.

    ಆರೋಪಿಯ ಹೆಸರನ್ನು ಪೊಲೀಸರು ಇನ್ನೂ ತಿಳಿಸಲಿಲ್ಲ.

    ಇದನ್ನೂ ಓದಿ : ಛೇ! ಇದೆಂಥ ಅಮಾನವೀಯ ಕೃ*ತ್ಯ; ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಕಿ*ಡಿಗೇಡಿಗಳು

    ನಿನ್ನೆ (ಜ.12) ರಾತ್ರಿ ಓರ್ವ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ಚಿಕ್ಕಪೇಟೆ ಉಪವಿಭಾಗದ ಎಸಿಪಿ ರಮೇಶ್‌ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

    ಗಾಯ ಮಾಸಲು ಇನ್ನೂ ಎರಡು ವಾರ ಬೇಕು ಎಂದು ವೈದ್ಯರು ಹೇಳಲಾಗಿದೆ. ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಕ್ಷೇಮವಾಗಿದೆ.

    Continue Reading

    LATEST NEWS

    ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ತಂದೆ, ಮಗ

    Published

    on

    ಮಂಗಳೂರು/ಮಹಾರಾಷ್ಟ್ರ : ತಂದೆ ಮತ್ತು ಮಗ ಇಬ್ಬರೂ ಒಂದೇ ಮರಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.

    ‘ತಂದೆ ತನಗೆ ಸ್ಮಾರ್ಟ್ ಫೋನ್ ಕೊಡಿಸಲಿಲ್ಲ’ ಎಂದು ಮನನೊಂದು 16 ವರ್ಷದ ಬಾಲಕನೊಬ್ಬ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಇನ್ನೊಂದು ವಿಚಿತ್ರವೆಂದರೆ ಮಗನ ಶವ ನೋಡಿ ಆತನ ತಂದೆ ‘ಮಗನಿಗೆ ಸ್ಮಾರ್ಟ್ ಫೋನ್ ಕೊಡಿಸಲು ಆಗಲಿಲ್ಲ’ ಎಂದು ತಾನೂ ಸಹ ಅದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಂದೇಡ್ ಜಿಲ್ಲೆಯ ಬಿಳೋಳಿ ಮಿನಾಕಿ ಎಂಬಲ್ಲಿ ಈ ದುರ್ಘಟನೆ ನಡೆದಿದೆ.

    ರಾಜು ಅವರಿಗೆ ಮೂವರು ಮಕ್ಕಳು. ಕೊನೆಯ ಮಗ ಓಂಕಾರ್ ಹಾಸ್ಟೆಲ್ ಒಂದರಲ್ಲಿ ಇದ್ದುಕೊಂಡು 10 ನೇ ತರಗತಿ ಓದುತ್ತಿದ್ದ. ಮಕರ ಸಂಕ್ರಮಣದ ರಜೆ ಇರುವುದರಿಂದ ಮನೆಗೆ ಬಂದಿದ್ದ.

    ಇದನ್ನೂ ಓದಿ: ರೀಲ್ಸ್ ಮಾಡಲು ಹೋಗಿ ನೀರುಪಾಲಾದ ಐವರು ಯುವಕರು

    ‘ಇದೇ ವೇಳೆ ಬಾಲಕ ಓಂಕಾರ್ ತನ್ನ ತಂದೆಗೆ ಸ್ಮಾರ್ಟ್ ಫೋನ್ ಕೊಡಿಸುವಂತೆ ಒತ್ತಾಯಿಸುತ್ತಿದ್ದ. ಆದರೆ ಬಡ ರೈತ ಕುಟುಂಬದ ರಾಜು, ಮಗನಿಗೆ ಸ್ಮಾರ್ಟ್ ಫೋನ್ ಕೊಡಿಸಲು ಆಗಿರಲಿಲ್ಲ. ಇದರಿಂದ ಡೆತ್ ನೋಟ್ ಬರೆದಿಟ್ಟು ಹೊಲದಲ್ಲಿನ ಮರಕ್ಕೆ ಬಾಲಕ ನೇಣು ಹಾಕಿಕೊಂಡಿದ್ದ. ಅದೇ ರಾತ್ರಿ ಮಗನನ್ನು ಹುಡುಕಿಕೊಂಡು ಹೋಗಿದ್ದ ತಂದೆಯೂ ಮಗ ನೇಣೂ ಹಾಕಿಕೊಂಡಿದ್ದನ್ನು ನೋಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ’ ಎಂದು ನಾಂದೇಡ್ ಎಸ್ ಪಿ ಅವಿನಾಶ್ ಕುಮಾರ್ ತಿಳಿಸಿದ್ದಾರೆ.

    ಮೃತ ಬಾಲಕನ ತಾಯಿ ನೀಡಿದ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೃತದೇಹಗಳನ್ನು ಸಿವಿಲ್ ಆಸ್ಪತ್ರೆಗೆ ಸಾಗಿಸಿದ್ದು, ಇಬ್ಬರೂ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.

     

    Continue Reading

    LATEST NEWS

    ಛೇ! ಇದೆಂಥ ಅಮಾನವೀಯ ಕೃ*ತ್ಯ; ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಕಿ*ಡಿಗೇಡಿಗಳು

    Published

    on

    ಮಂಗಳೂರು/ಬೆಂಗಳೂರು : ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಅಮಾನವೀಯ ಕೃ*ತ್ಯ ಚಾಮರಾಜಪೇಟೆಯ ವಿನಾಯಕನಗರದಲ್ಲಿ ನಡೆದಿದೆ. ತಡರಾತ್ರಿ ದು*ಷ್ಕರ್ಮಿಗಳು ವಿ*ಕೃತಿ ಮೆರೆದಿದ್ದಾರೆ. ರಸ್ತೆಯಲ್ಲಿ ಮಲಗಿದ್ದ ಕೆಚ್ಚಲುಗಳನ್ನು ಕೊಯ್ದು ಕಿ*ಡಿಗೇಡಿಗಳು ಪರಾರಿಯಾಗಿದ್ದಾರೆ.

    ರಾತ್ರಿಯಿಡೀ ಹಸುಗಳು ರ*ಕ್ತದ ಮಡುವಿನಲ್ಲಿ ನರಳಾಡಿವೆ. ಇಂದು(ಡಿ.12) ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಹಸುಗಳಿಗೆ ಚಾಮರಾಜಪೇಟೆಯ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಟನ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದಿದ್ದಾರೆ.

    ಸಂಸದ ಪಿಸಿ ಮೋಹನ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ತಕ್ಷಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಸ್ಥಳಕ್ಕೆ ಭೇಟಿ ನೀಡಿ ಹಸುವಿನ ಮಾಲೀಕರಿಂದ ಮಾಹಿತಿ ಪಡೆದಿದ್ದಾರೆ.

    Continue Reading

    LATEST NEWS

    Trending