ರಾಷ್ಟ್ರ ವಿರೋಧಿ ಸಂಘಟನೆ ಪಿಎಫ್ಐ ಹಣ ರಾಮ ಮಂದಿರಕ್ಕೆ ಅಗತ್ಯವಿಲ್ಲವೆಂದ ಶೋಭಾ ಕರಂದ್ಲಾಜೆ..!
ಉಡುಪಿ : ರಾಮ ಮಂದಿರ ನಿರ್ಮಿಸಲು ನಮಗೆ ಪಿಎಫ್ಐ ಹಣದ ಅಗತ್ಯವಿಲ್ಲ ಎಂದು ಸಂಸದೆ ಶೋಭಾ ಕೆರಂದ್ಲಾಜೆ ಕಿಡಿಕಾರಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು ಪಿಎಫ್ಐ ಕಾರ್ಯಕರ್ತರ ಬಳಿ ನಮ್ಮ ಕಾರ್ಯಕರ್ತರು ಹಣ ಕೇಳಲು ಹೋಗಿಲ್ಲ.ಪಿಎಫ್ಐ ರಾಷ್ಟ್ರ ವಿರೋಧಿ ಸಂಘಟನೆ.
ಪಿಎಫ್ಐ ನಮ್ಮ ಆರ್ಎಸ್ಎಸ್ ಸ್ವಯಂಸೇವಕರನ್ನು ಕೊಲೆ ಮಾಡಿದೆ.
ರಾಮ ಮಂದಿರದ ಬಗ್ಗೆ ಪಿಎಫ್ ಐ ಗೆ ಮಾತನಾಡುವ ಹಕ್ಕಿಲ್ಲ.
ಪಿಎಫ್ಐ ಅನ್ನು ನಿಷೇಧಿಸಲು ನಾನು ಕೇಂದ್ರ ಮತ್ತು ರಾಜ್ಯ ಸರ್ಕಾರದೊಂದಿಗೆ ಮಾತುಕತೆ ಮಾಡಿದ್ದೇನೆ. ಪಿಎಫ್ಐ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಗೃಹ ಸಚಿವಾಲಯ ತನಿಖೆ ನಡೆಸುತ್ತಿದೆ.
ಒಮ್ಮೆ ತನಿಖೆ ಮುಗಿದ ನಂತರ ಅದನ್ನು ನಿಷೇಧಿಸಲಾಗುವುದು ಎಂದರು. ಕೇರಳದಲ್ಲಿ ಆರ್ ಎಸ್ ಎಸ್ ಗೆ ಅವಮಾನಿಸಿ ಪಿಎಫ್ಐ ಮೆರವಣಿಗೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಶೋಭಾ, ಪಿಎಫ್ ಐ ಆಯುಧಗಳನ್ನು ಹಿಡಿದುಕೊಂಡು ಮೆರವಣಿಗೆ ನಡೆಸುತ್ತಿದೆ.
ಪಿಎಫ್ಐ ರಾಷ್ಟ್ರ ವಿರೋಧಿ ಸಂಸ್ಥೆ ಎಂದು ಕೇರಳ ಸರ್ಕಾರಕ್ಕೆ ತಿಳಿದಿದೆ.ತಿಳಿದಿದ್ದರೂ ಮುಸ್ಲಿಂ ರ ವೋಟ್ ಪಡೆಯಲು ಪಿಎಫ್ ಐ ಗೆ ಅನುಮತಿ ನೀಡಿ ಓಲೈಕೆ ಮಾಡುತ್ತಿದೆ ಎಂದು ದೂರಿದ್ದಾರೆ.