bangalore
ಶೋಭಾ ಕರಂದ್ಲಾಜೆ ಕಾರಿಗೆ ಸಿಕ್ಕಿ ಯುವಕನ ದುರ್ಮ*ರಣ..!
ಬೆಂಗಳೂರು : ಬಿರುಸಿನ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ಶೋಭಾ ಕರಂದ್ಲಾಜೆ ಅವರ ಕಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರನೊಬ್ಬ ಅಸು ನೀಗಿದ್ದಾನೆ.
ಟಿಸಿ ಪಾಳ್ಯ ನಿವಾಸಿ ಪ್ರಕಾಶ್( 35 ) ಎಂಬವರು ಅಸುನೀಗಿದ ದುರ್ದೈವಿ. ಬೆಂಗಳೂರಿನ ಕೆ.ಆರ್.ಪುರಂ ಸಮೀಪ ಈ ಅಪ*ಘಾತ ಸಂಭವಿಸಿದ್ದು, ಕೆ.ಆರ್.ಪುರಂ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ದೇವಸಂದ್ರ ವಿನಾಯಕ ದೇವಸ್ಥಾನ ಬಳಿ ಕಾರು ನಿಲ್ಲಿಸಿದ ಕಾರಿನಿಂದ ಸಡನ್ ಆಗಿ ಬಾಗಿಲು ತೆರೆದು ಈ ದುರ್ಘಟನೆ ನಡೆದಿದೆ. ಕಾರಿನ ಡೋರ್ ತೆಗೆದಾಗ ಹಿಂಬಂದಿಯಿಂದ ಬಂದಿದ್ದ ಬೈಕ್ ಸವಾರ ಕಾರಿನ ಡೋರ್ಗೆ ತಾಗಿ ಕೆಳಗೆ ಬಿದ್ದಿದ್ದಾನೆ.
ತಲೆಗೆ ಗಂ*ಭೀರ ಗಾಯಗೊಂಡಿದ್ದ ಬೈಕ್ ಸವಾರ ಪ್ರಕಾಶ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಪ್ರಕಾಶ್ ಇಹಲೋಕ ತ್ಯಜಿಸಿದ್ದಾರೆ.
ಇದನ್ನೂ ಓದಿ : ಬೇಸಿಗೆಯ ಬಿಸಿ ತಡೆಯಲಾರದೆ 14 ಲಕ್ಷ ವೆಚ್ಚದಲ್ಲಿ ಕೂಲ್ ಹೋಮ್ ನಿರ್ಮಾಣ ಮಾಡಿದ ಯುವ ಇಂಜಿನಿಯರ್
bangalore
ವರದಕ್ಷಿಣೆ ಕಿರುಕುಳ; ನೇ*ಣಿಗೆ ಶರಣಾದ ಟೆಕ್ಕಿ
ಮಂಗಳೂರು/ಬೆಂಗಳೂರು : ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿಯಲ್ಲಿ ನಡೆದಿದೆ. ಪೂಜಾ (22) ಜೀವಾಂತ್ಯಗೊಳಿಸಿದ ವಿವಾಹಿತೆ. ಪೂಜಾ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ.
ಕಳೆದ ಎರಡು ವರ್ಷಗಳ ಹಿಂದೆ ಸುನೀಲ್ ಎಂಬಾತನನ್ನು ಪೂಜಾ ಮದುವೆಯಾಗಿದ್ದರು. ಮದುವೆಯಾದ ಬಳಿಕ ವರದಕ್ಷಿಣೆಗಾಗಿ ಪತಿ ಪೀಡಿಸುತ್ತಿದ್ದ. ಇದರಿಂದ ಮನನೊಂದು ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಇದನ್ನೂ ಓದಿ : ಸೀಲ್ಡ್ ತಂಪು ಪಾನೀಯ ಬಾಟಲ್ ಒಳಗಿತ್ತು ಜೇಡರ ಹುಳ!
ಮಗಳ ಸಾವಿಗೆ ಪತಿ ಸುನೀಲ್ ಹಾಗೂ ಮೈದುನ ಅನಿಲ್ ಕಾರಣ ಎಂದು ಪೂಜಾ ಪೋಷಕರು ಆರೋಪಿಸಿದ್ದಾರೆ. ಈ ಬಗ್ಗೆ ಗಂಗಮ್ಮನಗುಜಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bangalore
ಈ ಪುಣ್ಯಕ್ಷೇತ್ರಕ್ಕೆ ಹೋಗಲು ರಾಜ್ಯ ಸರ್ಕಾರದಿಂದ ಸಹಾಯಧನ ಸಿಗಲಿದೆ..!
ಬೆಂಗಳೂರು : ಕರ್ನಾಟಕ ರಾಜ್ಯದಿಂದ ಕೈಲಾಸ ಮಾನಸ ಸರೋವರ ಹಾಘೂ ಚಾರ್ಧಾಮ್ ಯಾತ್ರಿಗಳಿಗೆ ಅನುದಾನ ನೀಡುವ ಕುರಿತು ಮುಜರಾಯಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಮಾನಸ ಸರೋವರ ಯಾತ್ರಿಗಳಿಗೆ ರೂ.30 ಸಾವಿರ, ಚಾರ್ಧಾಮ್ ಯಾತ್ರಿಗಳಿಗೆ ರೂ.20 ಸಾವಿರ , ಹಾಗೂ ಈಗಾಗಲೇ ಕಾಶಿ ಯಾತ್ರೆ ಕೈಗೊಂಡ 30 ಸಾವಿರ ಯಾತ್ರಿಗಳಿಗೆ ತಲಾ ರೂ.5 ಸಾವಿರ ಸಹಾಯಧನ ನೀಡಲಾಗುತ್ತದೆ.
ಕೇವಲ ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳು ಮಾತ್ರ ಈ ಸಹಾಯಧನ ಪಡೆಯಲು ಅರ್ಹರಾಗಿದ್ದಾರೆ. ಈಗಾಗಲೇ ಈ ತೀರ್ಥ ಕ್ಷೇತ್ರಗಳಿಗೆ ಹೋಗಿ ಬಂದಿರುವವರು ಸಹಾಯಧನವನ್ನು ಪಡೆಯಲು ಅರ್ಹರಾಗಿದ್ದಾರೆ. ಇದಕ್ಕಾಗಿ ರೂ.25 ಪಾವತಿಸಿ ಸಂಬಂಧಿಸಿದ ವೆಬ್ಸೈಟ್ ಅಥವಾ ಮೊಬೈಲ್ ಆಪ್ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.
ಚಾರ್ಧಾಮ್ ಯಾತ್ರೆಯ ಮಾರ್ಗಸೂಚಿಗಳು
- ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ಚುನಾವಣಾ ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್ ಅನ್ನು ಅಪ್ಲೋಡ್ ಮಾಡುವುದು.
- 45 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ಮಾತ್ರ ಈ ಯೋಜನೆಯಡಿ ಸಹಾಯಧನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಇದಕ್ಕೆ ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಅಪ್ಲೋಡ್ ಮಾಡಬೇಕು.
- ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರದಲ್ಲಿ ಅದೇ ವ್ಯಕ್ತಿಗೆ ಮತ್ತೊಮ್ಮೆ ಅನುದಾನ ನೀಡಲಾಗುವುದಿಲ್ಲ.
ಕಾಶಿ ಯಾತ್ರೆಯ ಮಾರ್ಗಸೂಚಿಗಳು
- ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ಆಯಾ ಆರ್ಥಿಕ ವರ್ಷದ ಮೊದಲ ದಿನಕ್ಕೆ ಅನ್ವಯಿಸುವಂತೆ ಏಪ್ರಿಲ್ 1ಕ್ಕೆ 18 ವರ್ಷಗಳ ಮೇಲ್ಪಟ್ಟವರಾಗಿರತಕ್ಕದ್ದು.
- 18 ವಯಸ್ಸಿನ ಕೆಳಗಿನವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಹಾಜರುಪಡಿಸಬೇಕು.
ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಮಾರ್ಗಸೂಚಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುತ್ತದೆ
bangalore
ಗೋಬಿ ಮಂಚೂರಿ ಆಯ್ತು..! ಈಗ ಚಿಕನ್ ಕಬಾಬ್, ಫಿಶ್ ಫುಡ್ ಮೇಲೆ ಕಣ್ಣು…!
ಮಂಗಳೂರು : ಫಿಶ್ ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನ ನಿಷೇಧಿಸಲಾಗಿತ್ತು.
ಇದೀಗ ಆರೋಗ್ಯ ಸಚಿವರ ಸೂಚನೆಯಂತೆ ಪರಿಶೀಲನೆ ನಡೆಸಿದ ಅಧಿಕಾರಿಗಳು ಚಿಕನ್ ಕಬಾಬ್ ಮತ್ತು ಫಿಶ್ ಫುಡ್ ನಲ್ಲಿ ಕಲರಿಂಗ್ ಇರುವುದು ಪತ್ತೆಯಾಗಿದೆ. ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಚಿಕನ್ ಕಬಾಬ್ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದು ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಹಿನ್ನೆಲೆಯಲ್ಲಿ ಚಿಕನ್ ಕಬಾಬ್, ಫಿಶ್ ಆಹಾರಗಳಲ್ಲಿ ಕೃತಕ ಬಣ್ಣ ಬೆರಸುವಿಕೆಯನ್ನ ನಿಷೇಧಿಸಿ ಆಹಾರ ಸುರಕ್ಷತಾ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಕಾನೂನು ಉಲ್ಲಂಘಿಸಿದ್ರೆ 7 ವರ್ಷದಿಂದ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ವರೆಗಿನ ದಂಡ ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಸಲಾಗಿದೆ.
ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ಪರೀಕ್ಷಿಸಲಾಗಿದೆ. 08 ಕಬಾಬ್ನ ಮಾದರಿಗಳು ಕೃತಕ ಬಣ್ಣದಿಂದ ಕೂಡಿರುವುದರಿಂದ ಅಸುರಕ್ಷಿತ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡುಬಂದಿದೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ