Connect with us

    LATEST NEWS

    ಕೇಕ್ ನಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆ

    Published

    on

    ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಗೋಬಿ, ಕಬಾಬ್ ಮತ್ತು ಪಾನಿಪುರಿ ಪ್ರಿಯರಿಗೆ ಇವುಗಳ ತಯಾರಿಕೆಯಲ್ಲಿ ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದೆ ಎಂಬ ಶಾಕಿಂಗ್ ಸುದ್ದಿಯೊಂದನ್ನು ನೀಡಿತ್ತು. ಆದರೆ ಇದೀಗ ಮತ್ತೆ ಇಂತಹದ್ದೇ ಸುದ್ದಿಯೊಂದನ್ನು ಕೇಕ್ ಪ್ರಿಯರಿಗೆ ನೀಡುತ್ತಿದೆ.

    ಕೇಕ್ ಬಳಸುವ ಪದಾರ್ಥಗಳಲ್ಲೂ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ತಿಳಿಸಿದೆ. ಈ ನಿಟ್ಟಿನಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ಕೇಕ್ ಬಳಸುವ ಪದಾರ್ಥಗಳು ಕಲಬರಕೆಯಿಂದ ಕೂಡಿವೆ ಎಂಬ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿಯೇ ಕೇಕ್ ಮಾದರಿಗಳನ್ನು ಸಂಗ್ರಹಿಸಿ, ಪರಿಶೀಲನೆಗೆ ಒಳಪಡಿಸಿದ್ದಾರೆ.

    ಈ ಪರಿಶೀಲನೆಯ ಸಂದರ್ಭದಲ್ಲಿ ಸಂಗ್ರಹಿಸಿದ್ದ 12 ಮಾದರಿ ಕೇಕ್ ಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಇನ್ನು ವಿಶೇಷವಾಗಿ ರೆಡ್ ವೆಲ್ವೆಟ್ ಹಾಗೂ ಬ್ಲಾಕ್ ಫಾರೆಸ್ಟ್ ಕೇಕ್ ನಲ್ಲಿ ಅತೀ ಹೆಚ್ಚು ಬಣ್ಣ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಹಾನಿ ಉಂಟು ಮಾಡುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ.

    LATEST NEWS

    ಮಗನಿಗೆ ಐ ಫೋನ್‌ 16 ಪ್ರೋ ಮ್ಯಾಕ್ಸ್‌ ಗಿಫ್ಟ್‌ ಕೊಟ್ಟ ತಂದೆ..! ಆ ತಂದೆ ಯಾರು..?

    Published

    on

    ವಾರಗಳ ಹಿಂದೆಯಷ್ಟೇ ಮಾರುಕಟ್ಟೆಗೆ ಬಂದ ಐ ಫೋನ್‌ 16 ಪ್ರೋ ಮ್ಯಾಕ್ಸ್‌ ಖರೀದಿಗೆ ಜನ ಇನ್ನಿಲ್ಲದ ಆಸಕ್ತಿ ತೋರಿಸಿದ್ದಾರೆ. ಕೆಲವೊಂದು ಕಡೆಗಳಲ್ಲಿ 21 ಗಂಟೆಗಳ ಕಾಲ ಕ್ಯೂ ನಿಂತು ಜನ ಐ ಫೋನ್ 16 ಪ್ರೋ ಮ್ಯಾಕ್ಸ್ ಖರೀದಿ ಮಾಡಿದ ಸುದ್ದಿ ಕೂಡಾ ವರದಿಯಾಗಿತ್ತು. ಐ ಫೋನ್‌ ಕೈಲಿದ್ರೆ ಅದೇ ಒಂದು ದೊಡ್ಡ ಭಾಗ್ಯ ಅಂತ ಸಾಕಷ್ಟು ಜನ ಹೇಗಾದ್ರೂ ಮಾಡಿ ಐ ಫೋನ್ ಖರೀದಿ ಮಾಡ್ತಾರೆ. ಹಾಗಂತ ಈ ಫೋನ್‌ ಬಡವರು ಖರೀದಿ ಮಾಡೋದು ಕನಸಿನ ಮಾತು ಅನ್ನೋ ಅಷ್ಟು ದುಬಾರಿಯಾಗಿದೆ.

    ಆದ್ರೆ ಹೊಸದಾಗಿ ಲಾಂಚ್ ಆಗಿರೋ ಐ ಫೋನ್ 16 ಪ್ರೋ ಮ್ಯಾಕ್ಸ್ ಕುರಿತಾದ ಅಚ್ಚರಿಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಡ ತಂದೆಯೊಬ್ಬ ತನ್ನ ಮಗನಿಗಾಗಿ ಐ ಫೋನ್ 16 ಪ್ರೋ ಮ್ಯಾಕ್ಸ್ ಖರೀದಿಸಿ ಗಿಫ್ಟ್‌ ನೀಡಿದ್ದಾನೆ. ಈ ವೈರಲ್‌ ವಿಡಿಯೋ ಸಾಕಷ್ಟು ಜನ ಹಂಚಿಕೊಂಡಿದ್ದು, ತಂದೆಗೆ ಮೆಚ್ಚುಗೆ ಸಲಾಂ ನೀಡಿದ್ದಾರೆ.

    ರಸ್ತೆ ಬದಿಯಲ್ಲಿ ಚಿಂದಿ ಆಯುವ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬ ಹಣ ಒಟ್ಟು ಮಾಡಿ 1.5 ಲಕ್ಷದ ಈ ಫೋನ್ ಖರೀದಿಸಿದ್ದಾನೆ. ಹರಿದ ವಸ್ತ್ರ ಧರಿಸಿದ್ದ ವ್ಯಕ್ತಿಯ ಕೈನಲ್ಲಿ ಐ ಫೋನ್ ನೋಡಿದ ಯಾರೋ ಒಬ್ಬರು ಆತನ ಪೂರ್ವಾ ಪರ ವಿಚಾರಿಸಿ ವಿಡಿಯೋ ಮಾಡಿದ್ದಾರೆ. ವಿಡಿಯೋದಲ್ಲಿ ಫೋನ್ ಖರೀದಿಸಿದ ವ್ಯಕ್ತಿ ತಾನು ಚಿಂದಿ ಆಯುವ ಕೆಲಸ ಮಾಡುತ್ತಿರುವುದಾಗಿಯೂ, ತನ್ನ ಮಗನಿಗೆ ಈ ಫೋನ್ ಗಿಪ್ಟ್‌ ನೀಡುತ್ತಿರುವುದಾಗಿಯೂ ಹೇಳಿದ್ದಾರೆ. ಮಗ ಬೋರ್ಡ್‌ ಪರೀಕ್ಷೆಯಲ್ಲಿ ಉತ್ತಮ ಅಂಕದೊಂದಿಗೆ ಪಾಸ್ ಆಗಿದ್ದು, ಆತನ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಈ ಐಫೋನ್ 16 ಪ್ರೋ ಮ್ಯಾಕ್ಸ್‌ ಗಿಫ್ಟ್‌ ನೀಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

    ಚಿಂದಿ ಆಯ್ದುಕೊಂಡು ಮಗನನ್ನು ಚೆನ್ನಾಗಿ ಓದಿಸ್ತಾ ಇರುವ ಈ ತಂದೆಯ ಬಗ್ಗೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಷ್ಟದ ಪರಿಸ್ಥಿತಿಯಲ್ಲೂ ಮಗನ ಶಿಕ್ಷಣದ ಬಗ್ಗೆ ಕಾಳಜಿ ಹೊಂದಿರುವ ತಂದೆ ನಿಜಕ್ಕೂ ಗ್ರೇಟ್ ಎಂದ ಕೆಲವರು ಕಮೆಂಟ್ ಮಾಡಿದ್ದಾರೆ.

    Continue Reading

    bangalore

    ಏನಾಶ್ಚರ್ಯ! ನಿದ್ದೆ ಮಾಡಿ 9 ಲಕ್ಷ ಗೆದ್ದ ಬೆಂಗಳೂರಿನ ಯುವತಿ

    Published

    on

    ಮಂಗಳೂರು/ಬೆಂಗಳೂರು : ಬೆಂಗಳೂರು ಮೂಲದ ಇನ್ವೆಸ್ಟ್ಮೆಂಟ್ ಬ್ಯಾಂಕರ್ ಒಬ್ಬರು ಹೆಚ್ಚು ನಿದ್ದೆ ಮಾಡುವ ಕನಸನ್ನು ಲಾಭದಾಯಕವಾಗಿ ಪರಿವರ್ತಿಸಿಕೊಂಡು 9 ಲಕ್ಷ ರೂಪಾಯಿಗಳನ್ನು ಗೆದ್ದು, ಫುಲ್ ಫೇಮಸ್ ಆಗಿದ್ದಾರೆ. ‘ವೇಕ್ಫಿಟ್’ ಎಂಬ ಬೆಂಗಳೂರಿನ ಸ್ಮಾರ್ಟ್ಅಪ್ ಸಂಸ್ಥೆಯ ಸ್ಲೀಪ್ ಇಂಟರ್ನ್ಶಿಪ್ ಕಾರ್ಯಕ್ರಮದ ಮೂರನೇ ಸೀಸನಲ್ಲಿ ಸಾಯಿಶ್ವರಿ ಪಾಟೀಲ್ ‘ಸ್ಲೀಪ್ ಚಾಂಪಿಯನ್’ ಎಂಬ ಬಿರುದನ್ನು ಪಡೆದಿದ್ದಾರೆ.


    ಏನಿದು ಸ್ಪರ್ಧೆ?
    ಕಾರ್ಯಕ್ರಮದ ಇತರ 12 ಸ್ಲೀಪ್ ಇಂಟರ್ನ್ಗಳಲ್ಲಿ ಸಾಯಿಶ್ವರಿ ಪಾಟೀಲ್ ಕೂಡ ಒಬ್ಬರಾಗಿದ್ದು, ಪ್ರತಿಯೊಬ್ಬ ವ್ಯಕ್ತಿಯು ಪ್ರತಿ ರಾತ್ರಿ ಎಂಟರಿಂದ ಒಂಬತ್ತು ಗಂಟೆಗಳ ಕಾಲ ಸಂಪೂರ್ಣವಾಗಿ ನಿದ್ರೆ ಮಾಡಬೇಕಾಗಿತ್ತು.
    ಪ್ರತಿಯೊಬ್ಬರಿಗೂ ತಮ್ಮ ನಿದ್ರೆಯ ಮಾದರಿಗಳನ್ನು ಮೇಲ್ವಿಚಾರಣೆ ಮಾಡಲು ಪ್ರೀಮಿಯಂ ಹಾಸಿಗೆ ಮತ್ತು ಕಾಂಟ್ಯಾಕ್ಟ್ಲೆಸ್ ಸ್ಲೀಪ್ ಟ್ರ್ಯಾಕರ್ಗಳನ್ನು ಒದಗಿಸಲಾಗಿತ್ತು. ಇಂಟರ್ನ್ಗಳು ತಮ್ಮ ನಿದ್ರೆಯ ಅಭ್ಯಾಸವನ್ನು ಹೆಚ್ಚಿಸಲು ಅನುಭವಿ ನಿದ್ರೆ ಮಾರ್ಗದರ್ಶಕರ ನೇತೃತ್ವದಲ್ಲಿ ಕಾರ್ಯಾಗಾರಗಳಿಗೆ ಹಾಜರಾಗಿದ್ದರು.
    ಯಾಕೆ ಈ ಸ್ಪರ್ಧೆ?
    ಜಡ ಜೀವನಶೈಲಿಯಿಂದಾಗಿ ಜನರು, ವಿಶೇಷವಾಗಿ ಯುವಕರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳಿಗೆ ಒಡ್ಡಿಕೊಳ್ಳುವುದು, ಯಾವುದೇ ಪೌಷ್ಟಿಕ ಆಹಾರ ಮತ್ತು ನಿದ್ರೆಯ ತೀವ್ರ ಕೊರತೆಯು ಯುವ ವಯಸ್ಕರಲ್ಲಿ ಒಂದು ಪ್ರವೃತ್ತಿಯಾಗಿದ್ದು, ಇದು ಗಂಭೀರವಾದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ.
    ಇಂಟರ್ನ್ಗಳಿಗೆ ಸ್ಟೈಫಂಡ್ನೊಂದಿಗೆ ಪ್ರೋತ್ಸಾಹಿಸುವ ಮೂಲಕ ನಿದ್ರೆಯೊಂದಿಗೆ ಭಾರತದ ಸಂಬಂಧವನ್ನು ಪುನರುಜ್ಜೀವನಗೊಳಿಸಲು ವೇಕ್ಫಿಟ್ ಕಂಪನಿ ಸ್ಪರ್ಧೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

    Continue Reading

    bangalore

    ಹೆಸರು ಬದಲಿಸಿಕೊಂಡು ಬೆಂಗಳೂರಲ್ಲಿ ವಾಸವಿದ್ದ ಪಾಕಿಸ್ತಾನಿ ಕುಟುಂಬ ಅರೆಸ್ಟ್

    Published

    on

    ಮಂಗಳೂರು / ಬೆಂಗಳೂರು :  ಪಾಕಿಸ್ತಾನದ ವ್ಯಕ್ತಿಯೊಬ್ಬ ತನ್ನ ಕುಟುಂಬದೊಂದಿಗೆ ಆನೇಕಲ್‌ ಬಳಿಯ ಜಿಗಣಿಯಲ್ಲಿ ವಾಸವಿದ್ದ ವಿಚಾರ ಇದೀಗ ಬೆಳಕಿಗೆ ಬಂದಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಜಿಗಣಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

    ಇತ್ತೀಚೆಗಷ್ಟೇ ಎನ್​ಐಎ ಅಧಿಕಾರಿಗಳು ಜಿಗಣಿಯಲ್ಲಿ ಒಬ್ಬ ಶಂಕಿತ ಉಗ್ರನನ್ನು ಬಂಧಿಸಿದ್ದರು. ಈಗ ಇಲ್ಲಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ಪಾಕಿಸ್ತಾನದ ವ್ಯಕ್ತಿ ವಾಸ್ತವ್ಯವಿದ್ದ ವಿಚಾರ ಗೊತ್ತಾಗಿದೆ. ಒಟ್ಟು ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಾಕಿಸ್ತಾನದ ರಷೀದ್ ಸಿದ್ದಿಕಿ ಅಲಿಯಾಸ್​ ಶಂಕರ್ ಶರ್ಮಾ, ಆಯುಷಾ ಅನಿಫ್ ಅಲಿಯಾಸ್​ ಆಶಾ ಶರ್ಮಾ, ಮೊಹಮ್ಮದ್ ಹನೀಫ್ ಅಲಿಯಾಸ್​ ರಾಮ್ ಬಾಬಾ ಶರ್ಮಾ, ರುಬೀನಾ ಅಲಿಯಾಸ್​ ರಾಣಿ ಶರ್ಮಾ ಬಂಧಿತರು. ಹೆಸರು ಬದಲಿಸಿಕೊಂಡು ಇವರು ಬೆಂಗಳೂರಿನಲ್ಲಿ ನೆಲೆಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

    ಪಾಕ್ ನಿಂದ ಬಾಂಗ್ಲಾ, ಭಾರತದತ್ತ:

    ಪಾಕಿಸ್ತಾನದಲ್ಲಿದ್ದಾಗ ಧರ್ಮದ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಈತ ಪಾಕಿಸ್ತಾನ ತೊರೆದಿದ್ದ. ಬಳಿಕ ಬಾಂಗ್ಲಾದೇಶದ ಢಾಕಾದಲ್ಲಿ ಕೆಲವು ಸಮಯದವರೆಗೆ ನೆಲೆಸಿದ್ದ. ಕೊನೆಗೆ ಅಲ್ಲಿಯೇ ಒಬ್ಬ ಮಹಿಳೆಯನ್ನು ಮದುವೆ ಮಾಡಿಕೊಂಡಿದ್ದ. ಇದಾದ ನಂತರ ಆತ ತನ್ನ ಹಾಗೂ ಮಕ್ಕಳೊಂದಿಗೆ ಮತ್ತೆ 2014ರಲ್ಲಿ ದೆಹಲಿಗೆ ಬಂದಿದ್ದ ಎನ್ನಲಾಗಿದೆ.

    ಅಲ್ಲಿ ಕೆಲವರ ಸಹಾಯದಿಂದ ಆಧಾರ್‌ ಕಾರ್ಡ್‌, ಡ್ರೈವಿಂಗ್‌ ಲೈಸೆನ್ಸ್‌, ಪಾಸ್‌ಪೋರ್ಟ್‌ ಸೇರಿದಂತೆ ಇನ್ನಿತರ ದಾಖಲೆಗಳನ್ನು ಮಾಡಿಸಿಕೊಂಡು, ಕುಟುಂಬದೊಂದಿಗೆ ಬೆಂಗಳೂರಿನ ಜಿಗಣಿಗೆ ಬಂದು ನೆಲೆಸಿದ್ದ ಎಂದು ಪೊಲೀಸರು ಹೇಳಿದ್ದಾರೆ. ಧರ್ಮದ ವಿಚಾರವಾಗಿಯೇ ರಷೀದ್‌ನನ್ನು ಪಾಕಿಸ್ತಾನದಿಂದ ಹೊರದಬ್ಬಲಾಗಿತ್ತು. ಬಳಿಕ ಬಾಂಗ್ಲಾದಿಂದ ನೇಪಾಳಕ್ಕೆ ಹೋಗಿದ್ದಾಗ ಅಲ್ಲಿನ ಧಾರ್ಮಿಕ ಸಂಸ್ಥೆಗೆ ಸೇರಿಕೊಂಡು, ಧರ್ಮ ಪ್ರಚಾರದಲ್ಲಿ ನಿರತನಾಗಿದ್ದ. ಅಲ್ಲಿನ ಧರ್ಮಗುರು ಸೂಚನೆ ಮೇರೆಗೆ ಧರ್ಮಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿಳಿದಿದ್ದ ಎನ್ನಲಾಗಿದೆ.

    ಇದನ್ನೂ ಓದಿ : 500ರ ನೋಟಿನಲ್ಲಿ ಗಾಂಧಿ ಜಾಗದಲ್ಲಿ ನಟ ಅನುಪಮ್‌ ಖೇರ್‌..!?

    ಬೆಂಗಳೂರಿಗೆ ಬಂದಿದ್ದ ರಷೀದ್‌ ಮೊದಲಿಗೆ ಇಬ್ಬರನ್ನು ಪರಿಚಯ ಮಾಡಿಕೊಂಡು ಅವರನ್ನೂ ಧರ್ಮ ಸಂಸ್ಥೆಗೆ ಸೇರ್ಪಡೆ ಮಾಡಿಕೊಂಡಿದ್ದ. ಅವರ ಸಹಕಾರದಿಂದಲೇ ಜಿಗಣಿಯಲ್ಲಿ ವಾಸ್ತವ್ಯಕ್ಕೆ ಅನುಕೂಲ ಮಾಡಿಕೊಂಡಿದ್ದ. ಕೊನೆಗೆ ಜಿಗಣಿಯಲ್ಲಿ ಮನೆ ಮಾಡಿಕೊಂಡು ಡೆಲಿವರಿ ಬಾಯ್‌ ಕೆಲಸ ಕೂಡ ಮಾಡುತ್ತಿದ್ದ. ಬಿರಿಯಾನಿ ತಯಾರಿಸಿ ಆನ್‌ಲೈನ್‌ನಲ್ಲಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

    ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಈತನ ಮೇಲೆ ಕಣ್ಣಿಟ್ಟು ಚಲನವಲನ ಗಮನಿಸುತ್ತಿತ್ತು. ಬಳಿಕ ಗುಪ್ತಚರ ಅಧಿಕಾರಿಗಳೇ ರಷೀದ್ ಜಿಗಣಿಯಲ್ಲಿ ವಾಸವಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದನ್ನು ಆಧರಿಸಿ ಜಿಗಣಿ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದು, ಕೊನೆಗೆ ಇಡೀ ಕುಟುಂಬವನ್ನು ಬಂಧಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

    LATEST NEWS

    Trending