DAKSHINA KANNADA
ರಾಜ್ಯ ಬಂದ್ ಗೆ ಕರೆನೀಡಿದ ಕನ್ನಡ ಸಂಘಟನೆಗಳನ್ನು ಶೂಟ್ ಮಾಡಿ ಬಿಸಾಕಲಿ : ಕಾಳಿ ಶ್ರೀರಿಷಿ ಕುಮಾರ ಸ್ವಾಮೀಜಿ
ರಾಜ್ಯ ಬಂದ್ ಗೆ ಕರೆನೀಡಿದ ಕನ್ನಡ ಸಂಘಟನೆಗಳನ್ನು ಶೂಟ್ ಮಾಡಿ ಬಿಸಾಕಲಿ : ಕಾಳಿ ಶ್ರೀರಿಷಿ ಕುಮಾರ ಸ್ವಾಮೀಜಿ
ಮಂಗಳೂರು : ಡಿಸೆಂಬರ್ 5ರ ಕನ್ನಡ ಸಂಘಟನೆಗಳ ಬಂದ್ ವಿಚಾರವಾಗಿ ಕನ್ನಡ ಸಂಘಟನೆ ವಿರುದ್ಧ ಕಾಳಿ ಶ್ರೀರಿಷಿ ಕುಮಾರ ಸ್ವಾಮೀಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಂದ್ ಮಾಡಲು ಬಂದರೆ ಪ್ರತಿಭಟನಾಕಾರರನ್ನು ಕಲ್ಲು ಹೊಡೆದು ಓಡಿಸಿ ಎಂದು ಕರೆ ನೀಡಿದ್ದಾರೆ.
ಮಂಗಳೂರಿನಲ್ಲಿ ರಾಮ್ ಸೇನಾ ಕರ್ನಾಟಕ ವತಿಯಿಂದ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಡಿಸೆಂಬರ್ 5ರ ಕನ್ನಡ ಸಂಘಟನೆಗಳ ಬಂದ್ ವಿಚಾರವಾಗಿ ಕನ್ನಡ ಸಂಘಟನೆ ವಿರುದ್ಧ ಕಾಳಿ ಶ್ರೀರಿಷಿ ಕುಮಾರ ಸ್ವಾಮೀಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಯೊಂದಕ್ಕೂ ಬಂದ್, ಬಂದ್ ಎನ್ನುತ್ತೀರಲ್ಲ ? ಕರ್ನಾಟಕವೇನು ನಿಮ್ಮ ಅಪ್ಪನ ಮನೆಯ ಆಸ್ತಿನಾ? ಎಂದು ಕನ್ನಡ ಪರ ಸಂಘಟನೆಗಳನ್ನು ಖಾರವಾಗಿಯೇ ಪ್ರಶ್ನಿಸಿದ್ದಾರೆ.
ಈ ಸಂಘಟನೆಗಳು ಕನ್ನಡದ ಹೆಸರೇಳಿ ಕಿಡಿಗೇಡಿತನ ನಡೆಸುತ್ತಿದ್ದಾರೆ. ಸಂಘಟನೆ ಹೆಸರೇಳಿ ಪುಡಿ ರೌಡಿಸಂ ಮಾಡುತ್ತಿದ್ದಾರೆ. ಮರಾಠರಿಗೆ ಪ್ರಾಧಿಕಾರ ಕೊಟ್ಟರೆ ನಿಮಗೇನು? ನೀವು 20 ಮಂದಿ ಸೇರಿದ್ರಷ್ಟೇ ಕರ್ನಾಟಕನಾ? ಅಥವಾ 6.5 ಕೋಟಿ ಜನ ನಿಮ್ಮ ಮಾತು ಕೇಳಬೇಕಾ? ಎಂದು ಪ್ರಶ್ನಿಸಿದ ಕಾಳಿ ಸ್ವಾಮೀಜಿ ವರುಷಕ್ಕೆ 20 ರಷ್ಟು ಹಿಂದೂ ಸಂಘಟನೆ ಕಾರ್ಯಕರ್ತರು ಸಾಯುತ್ತಿದ್ದಾರೆ.
ಕನ್ನಡ ಸಂಘಟನೆಯಲ್ಲಿ ಒಬ್ಬನಾದ್ರೂ ಸತ್ತಿದ್ದೀರಾ?. ಅವನ್ಯಾವನೋ ನರಿ, ಕತ್ತೆ ತಗೊಂಡು ಬಂದು ಕೂಗಾಡ್ತಾನೆ. ಒದ್ದಾಡಿ, ಉರುಳಾಡಿ ಆಮೇಲೆ ಮನೆಗೆ ಹೋಗ್ತಾನೆ. ವಾಟಾಳ್ ನಾಗರಾಜ್ ಹೆಸರೇಳದೆ ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಯಡಿಯೂರಪ್ಪನವರಿಗೆ ಮನವಿ ಮಾಡುತ್ತಿದ್ದೇನೆ ಇಂತವರನ್ನ ಯಾಕೆ ರಾಜ್ಯದ ಪ್ರಾಣ ತೆಗೀಲಿಕ್ಕೆ ಇಟ್ಟುಕೊಂಡಿದ್ದೀರ? ಇಂತವರನ್ನ ಸರಕಾರ ಶೂಟ್ ಮಾಡಿ ಬಿಸಾಕಲಿ.ಶಾಸ್ತ್ರ ಮತ್ತು ಶಸ್ತ್ರ ಇವೆರಡೂ ನಮ್ಮ ಸಂಸ್ಕೃತಿ ಎಂದು ಮಂಗಳೂರಿನಲ್ಲಿ ಶ್ರೀರಿಷಿ ಕುಮಾರ ಸ್ವಾಮೀಜಿ ಹರಿ ಹಾಯ್ದಿದ್ದಾರೆ.
DAKSHINA KANNADA
ಅನುಷ್ಕಾ ಶೆಟ್ಟಿ ರಾಜಕೀಯಕ್ಕೆ ಎಂಟ್ರಿ…! ಯಾವ ಕ್ಷೇತ್ರದಿಂದ ಸ್ಪರ್ಧೆ..!?
ದಕ್ಷಿಣ ಕನ್ನಡ ಜಿಲ್ಲೆಯ ಚೆಲುವೆ…ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸದ್ಯ ರಾಜಕೀಯ ವಲಯದಲ್ಲಿ ಸುದ್ದಿಯಾಗಿದ್ದಾರೆ. ಟಾಲಿವುಡ್ನ ಬ್ಯೂಟಿ ಕ್ವೀನ್ ಆಗಿ ಮೆರೆದಿದ್ದ ಅನುಷ್ಕಾ ಶೆಟ್ಟಿಗೆ ಇರುವ ದೊಡ್ಡ ಅಭಿಮಾನಿ ಬಳಗ ಕೂಡಾ ಇಂತಹ ಒಂದು ಚರ್ಚೆ ನಡೆಸ್ತಾ ಇದೆ. ಆಂಧ್ರ ಹಾಗೂ ತೆಲಂಗಾಣದಲ್ಲಿ ಅನುಷ್ಕಾ ಅವರಿಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಹೀಗಾಗಿ ಈ ಬಾರಿ ಅನುಷ್ಕಾ ಶೆಟ್ಟಿ ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಅನ್ನೋ ದೊಡ್ಡ ಚರ್ಚೆ ಆರಂಭವಾಗಿದೆ.
ಲೋಕಸಭೆ ಚುನಾವಣೆಯ ಜೊತೆಯಲ್ಲೇ ಆಂಧ್ರ ವಿಧಾನಸಭೆಗೂ ಚುನಾವಣೆ ನಡೆಯುತ್ತಿರುವುದೇ ಈ ಚರ್ಚೆಗೆ ಕಾರಣವಾಗಿದೆ. ಅನುಷ್ಕಾ ಶೆಟ್ಟಿ ಆಂಧ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು ಅಭಿಮಾನಿಗಳು ಮಾತ್ರವಲ್ಲದೆ, ರಾಜಕೀಯ ವಲಯದಲ್ಲೂ ಚರ್ಚೆ ನಡೆದಿದೆ.
ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷದಿಂದ ಅನುಷ್ಕಾ ಶೆಟ್ಟಿ ಚುನಾವಣಾ ಕಣಕ್ಕೆ ಧುಮುಕಲಿದ್ದಾರೆ ಅನ್ನೋ ಸುದ್ದಿ ಹರಡಿದೆ. ಬಿಜೆಪಿ ಹಾಗೂ ಟಿಡಿಪಿ ಪಕ್ಷದ ಬೆಂಬಲ ಹೊಂದಿರುವ ಜನಸೇನಾ ಪಕ್ಷದ ಪ್ರಮುಖ ನಾಯಕರ ಜೊತೆ ಅನುಷ್ಕಾ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ. ಆದ್ರೆ ಅನುಷ್ಕಾ ಜನಸೇನಾ ಪಕ್ಷಕ್ಕೆ ಸ್ಟಾರ್ ಪ್ರಚಾರಕಿಯಾಗಿ ಹೋಗಲಿದ್ದಾರೆ. ಚುನಾವಣೆಗೆ ನಿಲ್ಲೋದು ಸುಳ್ಳು ಸುದ್ದಿ ಎಂದು ಕೆಲ ಅಭಿಮಾನಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅನುಷ್ಕಾ ಶೆಟ್ಟಿ ರಾಜಕೀಯ ಪ್ರವೇಶ ಮಾಡ್ತಾರೆ ಅನ್ನೋದೊಂದು ನಕಲಿ ಸುದ್ದಿ ಎಂದು ಕೆಲ ಸುದ್ದಿ ವಾಹಿನಿಗಳು ಕೂಡಾ ವರದಿ ಮಾಡಿದೆ. ಅನುಷ್ಕಾ ಶೆಟ್ಟಿ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದು, ರಾಜಕೀಯದಿಂದ ದೂರ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.
ಇದನ್ನು ಓದಿ ಹಿಂದಿಗೆ ರಿಮೇಕ್ ಆಗುತ್ತಿದೆ ಝೀ ಕನ್ನಡದ ಫೇಮಸ್ ಸೀರಿಯಲ್…! ಪ್ರೋಮೋ ರಿಲೀಸ್..!
ಮಲಯಾಳಂ ಸಿನಿಮಾದಲ್ಲಿ ಬಿಝಿ :
‘ಬಾಹುಬಲಿ’ ಸಿನಿಮಾದ ಬಳಿಕ ಅನುಷ್ಕಾ ಶೆಟ್ಟಿ ಭಾರಿ ದೊಡ್ಡ ಬ್ರೇಕ್ ತೆಗೆದುಕೊಂಡಿದ್ದಾರೆ. ‘ಬಾಹುಬಲಿ 2’ ಸಿನಿಮಾದ ಬಳಿಕ ಕೇವಲ ಎರಡು ಸಿನಿಮಾಗಳಲ್ಲಿ ಮಾತ್ರವೇ ಅನುಷ್ಕಾ ನಟಿಸಿದ್ದಾರೆ. ಅನುಷ್ಕಾ ಶೆಟ್ಟಿ ನಟನೆಯ ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ’ ಸಿನಿಮಾ ಕಳೆದ ವರ್ಷ ಬಿಡುಗಡೆ ಆಗಿ ಸೂಪರ್ ಹಿಟ್ ಎನಿಸಿಕೊಂಡಿದೆ. ಕಾಮಿಡಿ ಹಾಗೂ ಡ್ರಾಮಾ ಕಥೆಯಾಗಿದ್ದ ಇದು ಪ್ರೇಕ್ಷಕರನ್ನು ರಂಜಿಸಿದೆ.ಇದೀಗ ಅನುಷ್ಕಾ ಶೆಟ್ಟಿ ಮಲಯಾಳಂ ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದಾರೆ.
ಮಲಯಾಳಂನಲ್ಲಿ RIAL 5- ಹಾರರ್ ಸಿನಿಮಾ ಒಂದರಲ್ಲಿ ಅನುಷ್ಕಾ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಅನುಷ್ಕಾ ಶೆಟ್ಟಿ ರಾಜಕೀಯ ಪ್ರವೇಶ ಮಾಡುವ ಬದಲಿಗೆ ಹೆಚ್ಚು ಹೆಚ್ಚು ಸಿನಿಮಾಗಳಲ್ಲಿ ನಟಿಸುತ್ತಾ ಪ್ರೇಕ್ಷಕರನ್ನು ರಂಜಿಸುತ್ತಿರಲಿ ಎಂಬುದು ಅಭಿಮಾನಿಗಳ ಆಶಯ. ಆದ್ರೆ, ಅನುಷ್ಕಾ ರಾಜಕೀಯ ಎಂಟ್ರಿಯನ್ನೂ ತಳ್ಳಿ ಹಾಕಲು ಸಾದ್ಯವಿಲ್ಲ ಅನ್ನೋದು ಸದ್ಯ ಚಾಲ್ತಿಯಲ್ಲಿರುವ ಚರ್ಚಾ ವಿಷಯ.
DAKSHINA KANNADA
ಟಿಕೆಟ್ ಕೈ ತಪ್ಪಿದ್ರೂ ಕೈ ಬಿಡದ ಹೈಕಮಾಂಡ್..! ಕೇರಳದ ಸಹ ಉಸ್ತುವಾರಿಯಾದ ನಳಿನ್ ಕುಮಾರ್ ಕಟೀಲ್
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈ ತಪ್ಪಿದ್ದ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಬಿಜೆಪಿ ಹೈಕಮಾಂಡ್ ಮಹತ್ವದ ಜವಾಬ್ದಾರಿ ವಹಿಸಿದೆ. ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳದ ಚುನಾವಣಾ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆ ಆಗಿದ್ದ ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪಿದ್ದು ಬಾರಿ ನಿರಾಸೆ ತಂದಿತ್ತು. ಕ್ಯಾಪ್ಟನ್ ಬ್ರಿಜೇಶ್ ಚೌಟರ ಮೂಲಕ ಹೊಸ ಮುಖವನ್ನು ಪಕ್ಷ ಕಣಕ್ಕೆ ಇಳಿಸಿದೆ. ಇದು ನಳಿನ್ ಕುಮಾರ್ ಕಟೀಲ್ ಅವರಿಗೆ ಬೇಸರ ತಂದಿದ್ದರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದರು. ಮಾಧ್ಯಮಗಳಿಗೆ ಹೇಳಿಕೆ ನೀಡುವಾಗ ಬಹಳಷ್ಟು ಭಾವುಕರಾಗಿದ್ದ ನಳಿನ್ ಕುಮಾರ್ ಕಟೀಲ್ ಪಕ್ಷ ನಿಂತ ನೀರಾಗಬಾರದು, ಹೊಸ ಮುಖಗಳು ಬರುತ್ತಿರಬೇಕು, ನಾನು ಪಕ್ಷ ಗುಡಿಸಿ ಒರೆಸು ಅಂತ ಹೇಳಿದ್ರೂ ಮಾಡ್ತೇನೆ ಅಂತ ಹೇಳಿದ್ದರು. ಆದ್ರೆ ಇದೀಗ ಪಕ್ಷ ಅವರಿಗೆ ಕೇರಳದ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಪಕ್ಷದಲ್ಲಿ ದೊಡ್ಡ ಜವಾಬ್ದಾರಿಯನ್ನೇ ನೀಡಿದೆ.
ಇದನ್ನೂ ಓದಿ : ಅನುಷ್ಕಾ ಶೆಟ್ಟಿ ರಾಜಕೀಯಕ್ಕೆ ಎಂಟ್ರಿ…! ಯಾವ ಕ್ಷೇತ್ರದಿಂದ ಸ್ಪರ್ಧೆ..!?
DAKSHINA KANNADA
ಗಾಂ*ಜಾ ಸಾಗಾಟದ ವೇಳೆ ಪೊಲೀಸರ ಬಲೆಗೆ ಬಿದ್ದ ಆರೋಪಿ..!
ಮಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ನಗರಕ್ಕೆ ನಿಷೇಧಿತ ಮಾ*ದಕ ವಸ್ತು ಗಾಂ*ಜಾವನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಮಂಗಳೂರು ಸಿಸಿಬಿ ಪೊಲೀಸರು 6.325 ಕೆಜಿ ಗಾಂ*ಜಾವನ್ನು ಬುಧವಾರ(ಮಾ.27) ದಂದು ವಶಪಡಿಸಿಕೊಂಡಿದ್ದಾರೆ.
ಆರೋಪಿಯನ್ನು ವಾಮಂಜೂರು ಸಮೀಪದ ಕುಡುಪು ಪೆದಮಲೆಯ ನಿಶಾಂತ್ ಶೆಟ್ಟಿ (36)ಎಂದು ಗುರುತಿಸಲಾಗಿದೆ. ಈತ ಸಣ್ಣ ಸಣ್ಣ ಪ್ಯಾಕೆಟ್ನಲ್ಲಿ ರೈಲಿನಲ್ಲಿ ಸಾಗಾಟ ಮಾಡಿಕೊಂಡು ಬಂದು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ತೊಕ್ಕೊಟ್ಟು ಒಳಪೇಟೆಯ ಕೃಷ್ಣನಗರ ಪರಿಸರದಲ್ಲಿ ಗೂಡ್ಸ್ ಟೆಂಪೋವೊಂದರಲ್ಲಿ ಗಾಂ*ಜಾ ಸಾಗಿಸಿ ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿ ಬಂಧಿಸಿದ್ದಾರೆ.
ಆರೋಪಿಯಿಂದ ಗೂಡ್ಸ್ ಟೆಂಪೋ, 1.50 ಲಕ್ಷ ರೂ.ಮೌಲ್ಯದ 6 ಕೆಜಿ 325 ಗ್ರಾಂ ಗಾಂ*ಜಾ, 2 ಮೊಬೈಲ್ ಫೋನ್ಗಳು, ಡಿಜಿಟಲ್ ತೂಕ ಮಾಪಕ ಮತ್ತಿತರ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಮೌಲ್ಯ 9,11,500 ರೂ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಹ*ಲ್ಲೆ ಪ್ರಕರಣ, ಮಂಗಳೂರು ಪೂರ್ವ ಠಾಣೆಯಲ್ಲಿ ಅಕ್ರಮ ಪಿಸ್ತೂಲ್ ಹೊಂದಿದ ಮತ್ತು ಕಳವು ಪ್ರಕರಣ, ಬರ್ಕೆ ಠಾಣೆಯಲ್ಲಿ ಸರಕಳ್ಳತನ ಪ್ರಕರಣ, ಉಳ್ಳಾಲ ಠಾಣೆಯಲ್ಲಿ ಹ*ಲ್ಲೆ ಪ್ರಕರಣ, ವಿಟ್ಲ ಠಾಣೆಯಲ್ಲಿ ಹ*ಲ್ಲೆ ಮತ್ತು ಕಳ್ಳತನ ಪ್ರಕರಣ, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಗಾಂ*ಜಾ ಮಾರಾಟ ಸಹಿತ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುತ್ತದೆ.