LATEST NEWS
ವಿಟ್ಲ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಶ್ರಫ್ – ಒಂದು ವಾರದಲ್ಲಿ ಜಾಮೀನು.!!
ವಿಟ್ಲ: ಅಂಗಡಿಗೆ ತೆರಳಿದ್ದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯ ಅಂಗಡಿಗೆ ಆಕ್ರೋಶಿತರು ಬೆಂಕಿ ಹಚ್ಚಿದ ಘಟನೆ ಕುದ್ದುಪದವು ಎಂಬಲ್ಲಿ ನಡೆದಿದೆ.
ಕೆಲವು ದಿನಗಳ ಹಿಂದೆ ಕುದ್ದುಪದವು ನಿವಾಸಿ ಅಶ್ರಫ್ ಎಂಬಾತ ಅಂಗಡಿಗೆ ತೆರಳಿದ್ದ ಬಾಲಕಿಗೆ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ನಡೆದಿತ್ತು.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿ 40 ವರ್ಷ ಪ್ರಾಯದ ಅಶ್ರಫ್ ಎಂಬಾತನನ್ನು ವಿಟ್ಲ ಪೊಲೀಸರು బంధిసి ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕೇವಲ ಒಂದು ವಾರದಲ್ಲಿ ಆರೋಪಿಗೆ ಜಾಮೀನು ಮಂಜೂರಾಗಿತ್ತು.
ಆರೋಪಿಯು ಅಂಗಡಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ದೌರ್ಜನ್ಯ ನಡೆಸಿರುವುದರಿಂದ ಆ ಅಂಗಡಿಯ ವ್ಯಾಪಾರ ಪರವಾನಿಗೆಯನ್ನು ರದ್ದುಗೊಳಿಸುವಂತೆ ಸಾರ್ವಜನಿಕರು ಗ್ರಾ. ಪಂಗೆ ಮನವಿ ನೀಡಿದ್ದರು.
ಇದೀಗ ಆರೋಪಿ ಅಶ್ರಫ್ ನ ಗೂಡಂಗಡಿಗೆ ಆಕ್ರೋಶಿತರು ಸೆ.27 ಶುಕ್ರವಾರ ತಡರಾತ್ರಿ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ತಡರಾತ್ರಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಆ ದಾರಿಯಾಗಿ ಸಾಗುತ್ತಿದ್ದ ವಾಹನ ಚಾಲಕರು ಇದನ್ನು ಗಮನಿಸಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
FILM
ನಟಿ ಸುಕೃತಾ ನಾಗ್ ಸಿಲ್ಕ್ ಸೀರೆಯಲ್ಲಿ ಮಿಂಚಿಂಗ್… ಬಿಗ್ ಬಾಸ್ ಗೆ ಸ್ವಾಗತ ಅಂತಿದ್ದಾರೆ ಜನ!
ಬೆಂಗಳೂರು: ಕಿರುತೆರೆ ನಟಿ ಸುಕೃತಾ ನಾಗ್ ಬಿಗ್ ಬಾಸ್ ಗೆ ಹೋಗ್ತಿದ್ದಾರೆ ಎನ್ನುವ ಸುದ್ದಿ ಹರದಾಡುತ್ತಿರುವ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಮುದ್ದಾದ ಫೋಟೊಗಳನ್ನು ಶೇರ್ ಮಾಡಿದ್ದಾರೆ ನಟಿ.
ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ಸಿದ್ಧಾರ್ಥನ ತಂಗಿಯಾಗಿ ನಟಿಸಿ ಜನಪ್ರಿಯತೆ ಗಳಿಸಿದ ನಟಿ ಸುಕೃತಾ ನಾಗ್ ಇದೀಗ ಬಿಗ್ ಬಾಸ್ ಸೀಸನ್ 11 ನಲ್ಲಿ ಭಾಗವಹಿಸಲಿದ್ದಾರೆ ಎನ್ನುವ ಸುದ್ದಿ ಕೇಳಿ ಬರುತ್ತಿದೆ. ಸ್ಪರ್ಧಿಗಳ ಲಿಸ್ಟ್ ನಲ್ಲಿ ಸುಕೃತಾ ಹೆಸರು ಕಂಡು ಬರುತ್ತಿದೆ.
ಅಷ್ಟಕ್ಕೂ ಸುಕೃತಾ ನಾಗ್ ಬಿಗ್ ಬಾಸ್ ಗೆ ತೆರಳಲಿದ್ದಾರ ಇಲ್ವಾ ಅನ್ನೋದು ಇನ್ನೂ ಕನ್ ಫರ್ಮ್ ಆಗಿಲ್ಲ. ಇವತ್ತು ರಾಜಾ ರಾಣಿ ಶೋ ನಲ್ಲಿ ಹೆಸರುಗಳು ರಿವೀಲ್ ಆಗಲಿದೆ. ಆವಾಗ್ಲೇ ಗೊತ್ತಾಗೋದು ಸುಕೃತಾ ನಿಜವಾಗಿಯೂ ಬಿಗ್ ಬಾಸ್ ಗೆ ಬರ್ತಿದ್ದಾರಾ ಇಲ್ವಾ ಅನ್ನೋದು. ಬಿಗ್ ಬಾಸ್ ಸುದ್ದಿಯ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುವ ಸುಕೃತಾ ಮೈಸೂರು ಸಿಲ್ಕ್ ಸೀರೆಯುಟ್ಟು ಮುದ್ದಾಗಿ ಫೋಟೊ ಶೂಟ್ ಮಾಡಿಸಿದ್ದು, ಸಾಂಪ್ರದಾಯಿಕ ಅವತಾರದಲ್ಲಿ ದೇವತೆಯಂತೆ ಕಾಣ್ತಿದ್ದಾರೆ ಅನ್ನೋದು ಸುಳ್ಳಲ್ಲ.
ಕಳೆದ ಬಾರಿ ಅಂದ್ರೆ ಬಿಗ್ ಬಾಸ್ ಸೀಸನ್ 10ರ ಸಮಯದಲ್ಲೂ ಸುಕೃತಾ ಬಿಗ್ ಬಾಸ್ ಗೆ ಹೋಗೋದಾಗಿ ಸುದ್ದಿಯಾಗಿತ್ತು, ಆದರೆ ಕಳೆದ ವರ್ಷ ನಟಿ ಭಾಗವಹಿಸಿರಲಿಲ್ಲ. ಈ ಬಾರಿಯಾದ್ರೂ ಸುಕೃತಾ ಬಿಗ್ ಬಾಸ್ ಸೀಸನ್ 11 ರಲ್ಲಿ ಭಾಗವಹಿಸಲಿದ್ದಾರೆ ಕಾದು ನೋಡಬೇಕು.
DAKSHINA KANNADA
ಮಂಗಳೂರು : ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು
ಮಂಗಳೂರು : ಮಂಗಳೂರಿನ ಹೊರವಲಯದ ಅಡ್ಯಾರ್ ಗಾರ್ಡನ್ ಬಳಿ ಚಲಿಸುತ್ತಿದ್ದ ಕಾರೊಂದು ಹೊತ್ತಿ ಉರಿದಿದೆ. ಕಾರಿನಲ್ಲಿ ಬೆಂ*ಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಕೆಲ ಹೊತ್ತು ಸ್ಥಗಿತಗೊಂಡಿತ್ತು.
ಏಕಾಏಕಿ ಕಾರಿಗೆ ಬೆಂ*ಕಿ ಹೊತ್ತಿಕೊಂಡಿದ್ದು ಸ್ಥಳೀಯರು ಬೆಂ*ಕಿಯನ್ನು ನಂದಿಸಲು ಯತ್ನಿಸುವ ಮೊದಲೇ ಕಾರು ಸುಟ್ಟು ಸಂಪೂರ್ಣ ಕರಕಲಾಗಿತ್ತು. ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದರು ಅಗ್ನಿಶಾಮಕ ದಳ ತಲುಪುವಷ್ಟರಲ್ಲಿ ಕಾರು ಸಂಪೂರ್ಣ ಭಸ್ಮವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
LATEST NEWS
ವೈದ್ಯನ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಬ*ಲಿ – ಪ್ರಕರಣ ದಾಖಲು
ಚಿಕ್ಕಮಗಳೂರು: ಖಾಸಗಿ ಕ್ಲಿನಿಕ್ ವೈದ್ಯ ನೀಡಿದ ಇಂಜೆಕ್ಷನ್ನಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕ ಮೃ*ತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ.
ಅಜ್ಜಂಪುರ ಸಮೀಪದ ಕೆಂಚಾಪುರ ಗ್ರಾಮದ ಅಶೋಕ್ ಅವರ 7 ವರ್ಷದ ಮಗ ಸೋನೇಶ್ ಕಳೆದ ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ. ಪೋಷಕರು ಸೋನೇಶ್ ನನ್ನು ಅಜ್ಜಂಪುರ ಪಟ್ಟಣದ ಖಾಸಗಿ ಕ್ಲಿನಿಕ್ ವೈದ್ಯ ವರುಣ್ ಬಳಿ ಸೆಪ್ಟೆಂಬರ್ 24 ರಂದು ಚಿಕಿತ್ಸೆಗಾಗಿ ಕರೆದೊಯ್ದಿದ್ರು. ವೈದ್ಯ ವರುಣ್, ಬಾಲಕನ ಸೊಂಟಕ್ಕೆ ಇಂಜೆಕ್ಷನ್ ಮಾಡಿದ್ದು ಇದೆ ಇಂಜೆಕ್ಷನ್ ಓವರ್ ಡೋಸ್ ಆಗಿ ಬಾಲಕನ ಜೀವವನ್ನೇ ತೆಗೆದಿದೆ.
ವೈದ್ಯ ವರುಣ್ ನೀಡಿದ ಓವರ್ ಡೋಸ್ ಇಂಜೆಕ್ಷನ್ ನಿಂದ ಬಾಲಕನ ಸೊಂಟದ ಭಾಗದಲ್ಲಿ ಬೊಬ್ಬೆಗಳು ಕಾಣಿಸಿಕೊಂಡಿದ್ದವು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸೋನೇಶ್ ಮೃ*ತಪಟ್ಟಿದ್ದಾರೆ.
ಶ*ವ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಸರ್ಕಾರಿ ಆಸ್ಪತ್ರೆಗೆ ಬಾಲಕನ ಮೃ*ತದೇಹವನ್ನು ರವಾನೆ ಮಾಡಲಾಗಿದೆ. ಈ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಡಾ ವರುಣ್ ವಿರುದ್ಧ ಪ್ರಕರಣ ದಾಖಲಾಗಿದೆ.