ಮಂಗಳೂರು : ಬಸವಶ್ರೀ ಫೌಂಡೇಷನ್ (ರಿ.) ಬೆಂಗಳೂರು ಇದರ ೧೫ನೇ ವಾರ್ಷಿಕೋತ್ಸವದ ಪ್ರಯುಕ್ತ ಮಹಾಸಂಗಮ ಸಮಾವೇಶ, ಜನಸ್ಪಂದನ ಹಾಗೂ ಭಗವಾನ್ ಬುದ್ದ, ಶ್ರೀ ಬಸವೇಶ್ವರ, ಡಾ|| ಬಿ.ಆರ್ ಅಂಬೇಡ್ಕರ್ ಮತ್ತು ಡಾ|| ಶಿವಕುಮಾರ ಸ್ವಾಮೀಜಿ ಜಯಂತಿಯ ವಿಶೇಷ ಸಂಚಿಕೆ ಬಿಡುಗಡೆ ಸಮಾರಂಭವು ಜೂ ೨೧ ರ ಶುಕ್ರವಾರ ಅಪರಾಹ್ನ ೩ ಗಂಟೆಗೆ ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಜರುಗಲಿದೆ.
ಈ ಸಮಾರಂಭದಲ್ಲಿ ವಿಶೇಷ ಸೇವೆ ಸಲ್ಲಿಸಿದ ಗಣ್ಯರಿಗೆ “ ಸಿದ್ಧಗಂಗಾ ರಾಷ್ಟ್ರೀಯ ರತ್ನ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸಾಧನೆಗಾಗಿ ಈ ಪ್ರಶಸ್ತಿಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ರವರು ಆಯ್ಕೆಯಾಗಿದ್ದಾರೆ.
ಸಹಕಾರ ಕ್ಷೇತ್ರದ ಜೊತೆಗೆ ಸಾಮಾಜಿಕ, ಧಾರ್ಮಿಕ ಹೀಗೆ ಹತ್ತು ಹಲವಾರು ಕ್ಷೇತ್ರಗಳಲ್ಲಿ ಸಲ್ಲಿಸಿದ ಅನನ್ಯ ಸೇವೆಗೆ ಅನೇಕ ರಾಷ್ಟ್ರೀಯ, ರಾಜ್ಯ ಮಟ್ಟದ ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದಾರೆ. ಇವರಿಗೆ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ “ಉತ್ತಮ ಸಹಕಾರಿ ಪ್ರಶಸ್ತಿ”, “ರಾಷ್ಟ್ರೀಯ ಬಸವಶ್ರೀ ಪ್ರಶಸ್ತಿ”, “ಸಮಾಜ ರತ್ನ ಪ್ರಶಸ್ತಿ””, “ಸಜ್ಜನ – ಚಂದನ ಸದ್ಭಾವನಾ ರಾಜ್ಯ ಪ್ರಶಸ್ತಿ”, “ಪರಿವರ್ತನಶ್ರೀ ರಾಜ್ಯ ಪ್ರಶಸ್ತಿ”, “ಭಾರತ ರತ್ನ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ರಾಷ್ಟ್ರೀಯ ಪ್ರಶಸ್ತಿ”, “ಐಐಬಿ ಬೆಸ್ಟ್ ಬುಸಿನೆಸ್ ಲೀಡರ್ಶಿಪ್ ಅವಾರ್ಡ್ -೨೦೨೩ ಪ್ರಶಸ್ತಿ”, “ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ” “ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ”, “ಸಹಕಾರ ರತ್ನ ಪ್ರಶಸ್ತಿ” ಜೊತೆಯಲ್ಲಿ ಸಂಘ -ಸಂಸ್ಥೆಗಳಲ್ಲಿ ಸಕ್ರೀಯವಾಗಿರುವ ಇವರನ್ನು ಹಲವಾರು ಸಹಕಾರ ಸಂಘ- ಸಂಸ್ಥೆಗಳು ಗುರುತಿಸಿ ಸನ್ಮಾನಿಸಿದೆ.
ಇದನ್ನೂ ಓದಿ : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಡುಬಿದ್ರಿ: ಜೂ. 23 ರಂದು ಉಚಿತ ವೈದ್ಯಕೀಯ ತಪಾಸಣಾ ಶಿಬಿರ
ಸಂಘದ ಸಕ್ರೀಯ ಚಟುವಟಿಕೆಯೊಂದಿಗೆ ಅಧ್ಯಕ್ಷರ ಕ್ರಿಯಾಶೀಲತೆಯು ಉಲ್ಲೇನೀಯ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಮೂರನೇ ಬಾರಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿರುವ ಇವರು, ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ (ನಿ.) ಬೆಂಗಳೂರು ಇದರ ಆಡಳಿತ ಮಂಡಳಿಗೆ ಮೈಸೂರು ವಿಭಾಗದಿಂದ ಕರಾವಳಿ ಕ್ಷೇತ್ರ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಥಮ ಬಾರಿಗೆ ನಿರ್ದೇಶಕರಾಗಿ ಬಹುಮತದಿಂದ ಆಯ್ಕೆಯಾದವರು. ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆ ಆಡಳಿತ ಮಂಡಳಿ ಸದಸ್ಯರಾಗಿ, ಸಹಕಾರಿ ಭಾರತಿ ಮಂಗಳೂರು ನಗರ ಜಿಲ್ಲೆ ಇದರ ನಿಕಟಪೂರ್ವ ಅಧ್ಯಕ್ಷರಾಗಿ ಸೇವೆ ಸಲ್ಲಿಕೆ, ದ. ಕ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಮಂಗಳೂರು ಇದರ ನಿರ್ದೇಶಕರಾಗಿ ಅವಿರೋಧ ಆಯ್ಕೆ, ದ.ಕ. ಜಿಲ್ಲಾ ಸಗಟು ಮಾರಾಟ ಸಹಕಾರ ಸಂಘ ಇದರ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ.