Connect with us

DAKSHINA KANNADA

ಟೋಲ್‌ಗೇಟ್‌ಗೆ ಮುತ್ತಿಗೆ-ಹೋರಾಟಗಾರರು & ಪೊಲೀಸರ ನಡುವೆ ವಾಗ್ವಾದ..! ಪ್ರತಿಭಟನಾಕಾರರ ಬಂಧನ..!

Published

on

ಮಂಗಳೂರು: ವಿವಾದಾತ್ಮಕ ಸುರತ್ಕಲ್‌ ಟೋಲ್‌ಗೇಟ್ ತೆರವುಗೊಳಿಸಿಯೇ ಸಿದ್ಧ ಎಂದು ಅಖಾಡಕ್ಕೆ ಇಳಿದ ಟೋಲ್‌ಗೇಟ್‌ ಹೋರಾಟಗಾರರನ್ನು ಪೊಲೀಸರು ಇಂದು ವಶಕ್ಕೆ ತೆಗೆದುಕೊಳ್ಳುವ ಮೂಲಕ ವಿವಾದಾತ್ಮಕ ಟೋಲ್‌ಗೇಟ್‌ ವಿರುದ್ಧದ ಹೋರಾಟ ಇನ್ನಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ.

ಕಳೆದ 7 ವರ್ಷಗಳಿಂದ ವಿವಾದಾತ್ಮಕ ಟೋಲ್‌ಗೇಟ್ ಆಗಿ ರೂಪುಗೊಂಡಿರುವ ಟೋಲ್‌ಗೇಟನ್ನು ತೆರವುಗೊಳಿಸಲು ಹಲವು ಹೋರಾಟದ ಬಳಿಕ ಇಂದು ಬೆಳಿಗ್ಗೆ ದೊಡ್ಡ ಮಟ್ಟದ ಹೋರಾಟ ಆಯೋಜಿಸಿತ್ತು.

ಸಂಸದ ನಳಿನ್‌ ಕುಮಾರ್ ಮತ್ತೆ 20 ದಿನಗಳ ಕಾಲಾವಕಾಶ ಕೇಳಿದ್ದರೂ ಪಟ್ಟು ಬಿಡದ ಪ್ರತಿಭಟನಾಕಾರರು ಟೋಲ್‌ಗೇಟ್ ತೆರವು ಮಾಡದೇ ಮಾಡ್ತೀವಿ, ಇವತ್ತಿನಿಂದಲೇ ಶುಲ್ಕ ವಸೂಲಾತಿ ಕೈಬಿಡಿ ಎಂದು ಆಗ್ರಹಿಸಿದ್ದರು.

ಈ ನಡುವೆ ಪೊಲೀಸರು ರಾತೋರಾತ್ರಿ ಪ್ರತಿಭಟನಾಕಾರರ ಮನೆಗೆ ನುಗ್ಗಿ ನೊಟೀಸ್ ನೀಡಿ ಹೋರಾಟ ಹತ್ತಿಕ್ಕಲು ಯತ್ನಿಸಿದ್ದರು. ಇದರಿಂದ ಪ್ರತಿಭಟನಾಕಾರರ ಆಕ್ರೋಶ ಇನ್ನುಷ್ಟ ಹೆಚ್ಚಾಗಿತ್ತು.

ಇಂದು ಬೆಳಿಗ್ಗೆಯಿಂದಲೇ ಟೋಲ್‌ಗೇಟ್‌ ಬಳಿ ಪೊಲೀಸರು ಬಿಗು ಬಂದೋಬಸ್ತ್‌ ಏರ್ಪಡಿಸಿದ್ದರೂ ಕ್ಯಾರೇ ಅನ್ನದೇ ಪ್ರತಿಭಟನಾಕಾರರು ಜಮಾಯಿಸಿ ಶಾಂತಿಯುತವಾಗಿಯೇ ಪ್ರತಿಭಟನೆ ನಡೆಸತೊಡಗಿದ್ದರು. ಸರಕಾರ ಹಾಗೂ ಸಂಸದ ನಳಿನ್‌ ಕುಮಾರ್ ಕಟೀಲು ಅವರಿಗೆ ಧಿಕ್ಕಾರ ಕೂಗುತ್ತಾ ಶಾಂತಯುತವಾಗಿಯೇ ಪ್ರತಿಭಟನೆ ನಡೆಸುತ್ತಿದ್ದರು.

ಈ ನಡುವೆ ಏಕಾಏಕಿ ಟೋಲ್‌ಗೇಟ್‌ ಬಳಿಗೆ ಹೊರಟ ಪ್ರತಿಭಟನಾಕಾರರಿಗೆ ಪೊಲೀಸರು ತಡೆಯೊಡ್ಡಿ ಅವರನ್ನು ದರದರನೇ ಎಳೆದೊಯ್ದು ವಶಕ್ಕೆ ಪಡೆದಿದ್ದಾರೆ.

ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿ, ಐವನ್ ಡಿ ಸೋಜಾ, ಮಿಥುನ್ ರೈ, ವಿನಯಕುಮಾರ್ ಸೊರಕೆ, ಜೆ ಆರ್ ಲೋಬೋ, ಯಶವಂತ ಮರೋಳಿ, ಅಕ್ಷಿತ್ ಸುವರ್ಣ, ದಿನೇಶ್ ಹೆಗ್ಡೆ ಉಳೇಪಾಡಿ, ಆರ್ ಪದ್ಮರಾಜ್‌ ಸಹಿತ ಹಲವು ಮಂದಿ ನಾಯಕರನ್ನು ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಷ್ಟೇ ಅಲ್ಲದೇ, ಉಡುಪಿ ಭಾಗದಿಂದಲೂ ಆಗಮಿಸಿದ್ದ ಹೋರಾಟಗಾರರು ಟೋಲ್‌ಹೆಸರಿನಲ್ಲಿ ವಸೂಲಿ ಮಾಡುತ್ತಿರುವ ಸರಕಾರದ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿನಿಯರು ಕೂಡಾ ತಮ್ಮ ಅಸಮಧಾನವನ್ನು ವ್ಯಕ್ತಪಡಿಸಿ ಸಂಸದ ನಳಿನ್‌ ಕುಮಾರ್ ಕಟೀಲು ವಿರುದ್ಧ ವಾಗ್ದಾಳಿ ನಡೆಸಿದರು.

ಪೊಲೀಸರು ಬಿಗು ಬಂದೋಬಸ್ತ್ ಕ್ರಮ ಕೈಗೊಂಡಿದ್ದು, ಬಳಿಕ ಹೆದ್ದಾರಿಯನ್ನು ತೆರವುಗೊಳಿಸಿದರು.

ಸುರತ್ಕಲ್ ಟೋಲ್‌ಗೇಟ್‌ನ್ನು ತೆರವುಗೊಳಿಸಲು ಇಂದು ಮುಂಜಾನೆಯಿಂದಲೇ ಹೋರಾಟಗಾರರು ಸ್ಥಳಕ್ಕೆ ಆಗಮಿಸಿದ್ದು ಆಕ್ರೋಶಭರಿತರಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿಯನ್ನು ನಿಯಂತ್ರಿಸಲಾಗದೆ ಪೊಲೀಸರು ಎತ್ತಿಕೊಂಡು ಹೋಗುವ ದೃಶ್ಯ ಕೂಡಾ ಕಂಡುಬಂದಿತ್ತು.


ಇನ್ನು ಕಾಂಗ್ರೆಸ್ ಮುಖಂಡ ಮಿಥುನ್‌ ರೈ ಅವರು ಟೋಲ್‌ಗೇಟ್ ಮೇಲೇರಿ ಘೋಷಣೆ ಕೂಗಿದರು, ಏಕಾಏಕಿ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಹೋರಾಟಗಾರರನ್ನು ಎಳೆದುಕೊಂಡು ಹೋಗುವ ಪರಿಸ್ಥಿತಿಯೂ ನಿರ್ಮಾಣವಾಯಿತು.


ಈ ಸಂದರ್ಭ ಓರ್ವ ಮಹಿಳೆಯೂ ಸೇರಿದಂತೆ ಅನೇಕರು ಬಿಜೆಪಿ ಸರ್ಕಾರಕ್ಕೆ ಛೀಮಾರಿ ಹಾಕಿದರು. ‘ಇದೇನಾ ಹೆಣ್ಣು ಮಕ್ಕಳಿಗೆ ಬಿಜೆಪಿ ಸರ್ಕಾರ ಕೊಡುವ ಗೌರವ’ ಎಂದು ಆಕ್ರೋಶವನ್ನು ವ್ಯಕ್ತಪಡಿಸಿದರು.

ಪೊಲೀಸರು ಪ್ರತಿಭಟನಾಕಾರರಿಗೆ ಲಾಠಿಯಿಂದ ಹೊಡೆದಿದ್ದು, ಅಬ್ದುಲ್ ಖಾದರ್ ಎಂಬವರು ಗಾಯಗೊಂಡಿದ್ದು ಸುರತ್ಕಲ್ ಪದ್ಮಾವತಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.


ಸುರತ್ಕಲ್‌ ಟೋಲ್‌ಗೇಟ್ ಹೋರಾಟಗಾರರನ್ನು ಹತ್ತಿಕ್ಕಲು ಪೊಲೀಸರು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು , ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.

ಕಾರ್ಯಾಚರಣೆ ತಡೆಯಲು ಮಂಗಳೂರು ಪೊಲೀಸ್ ಕಮಿಷನರೇಟ್‌ ವ್ಯಾಪ್ತಿಯ ಹಾಗೂ ಜಿಲ್ಲೆಯ ಹೆಚ್ಚುವರಿ ಪೊಲೀಸರನ್ನು ಸೋಮವಾರದ ಸಂಜೆಯಿಂದಲೇ ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಸುಮಾರು 400ಕ್ಕೂ ಅಧಿಕ ಹೆಚ್ಚು ಪೊಲೀಸರನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.

Click to comment

Leave a Reply

Your email address will not be published. Required fields are marked *

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

bangalore

ಮಹಿಳೆಯ ಅತಿಯಾದ ಕಾಮದಾಹ…! ದಾಹಕ್ಕೆ ಅಂತ್ಯ ಹಾಡಿದ ಯುವಕ..!

Published

on

ಬೆಂಗಳೂರು : ಆಕೆ 48 ವರ್ಷ ಪ್ರಾಯದ ಮಹಿಳೆಯಾಗಿದ್ದು, ತನ್ನಿಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಿ ಗಂಡನ ಮನೆಗೆ ಕಳುಹಿಸಿ ಕೊಟ್ಟಿದ್ದಾಳೆ. ಬೆಂಗಳೂರಿನ ಕೊಡಿಗೆ ಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿದ್ದ ಆಕೆಯ ದೇಹ ನಗ್ನವಾಗಿ ಬೆಡ್‌ರೂಮಿನಲ್ಲಿ ಪತ್ತೆಯಾಗಿತ್ತು. ಎಪ್ರಿಲ್ 19 ರಂದು ನಡೆದಿದ್ದ ಈ ಘಟನೆಯನ್ನು ಭೇದಿಸಿದ ಪೊಲೀಸರಿಗೆ ಶಾಕ್ ಆಗುವಂತ ವಿಚಾರಗಳು ಗೊತ್ತಾಗಿದೆ.

ಕೊಡಿಗೆ ಹಳ್ಳಿಯ ಭದ್ರಪ್ಪ ಲೇಔಟ್‌ನಲ್ಲಿ ನಡೆದಿದ್ದ ಶೋಭಾ ಎಂಬ ಮಹಿಳೆಯ ಕೊ*ಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ಕೊಲೆ ಆರೋಪಿಯಾಗಿರುವ ನವೀನ್ ಎಂಬ ಯುವಕನನ್ನು ಕೊಡಿಗೆ ಹಳ್ಳಿಯ ಪೊಲೀಸರು ಬಂದಿಸಿದ್ದಾರೆ. ವಿಚಾರಣೆ ವೇಳೆ ಬಾಯ್ಬಿಟ್ಟ ವಿಚಾರ ಕೇಳಿ ಪೊಲೀಸರೇ ಸುಸ್ತಾಗಿದ್ದಾರೆ. ಬಳಿಕ ಹೆಚ್ಚಿನ ತನಿಖೆ ನಡೆಸಿದ ಪೊಲೀಸರಿಗೆ ಶೋಭಾಳ ಕಾಮದಾಹ ಬೆಳಕಿಗೆ ಬಂದಿದೆ.

ಇದನ್ನೂ ಓದಿ ಗಂಡ-ಹೆಂಡತಿ ಬೇರೆ ಬೇರೆ ಮಲಗಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?

ಶೋಭಾಳಿಗೆ ಇನ್‌ಸ್ಟಾಗ್ರಾಂ ಮೂಲಕ ಪರಿಚಿತನಾಗಿದ್ದ ನವೀನ್ ಬಳಿಕ ಸ್ನೇಹಿತನಾಗಿ, ಅದು ಪ್ರೀತಿಗೆ ತಿರುಗಿ ಬಳಿಕ ಇಬ್ಬರ ನಡುವೆ ಅನೈತಿಕ ಸಂಬಂಧದವರೆಗೂ ಬಂದು ನಿಂತಿತ್ತು. ಮಗನ ವಯಸ್ಸಿನ ಹುಡುಗನ ಜೊತೆಯಲ್ಲಿ ನಿರಂತರ ಸೆಕ್ಸ್ ಮಾಡುತ್ತಿದ್ದ ಶೋಭಾಳ ಅತಿಯಾದ ಕಾಮಧಾಹದಿಂದ ಬೇಸತ್ತು ಆಕೆಯನ್ನು ಕೊಲೆ ಮಾಡಿದ್ದಾಗಿ ಹೇರೋಹಳ್ಳಿ ಮೂಲದ ಆರೋಪಿ ನವೀನ್ ಹೇಳಿಕೆ ನೀಡಿದ್ದಾನೆ.

ಕೊಲೆ ನಡೆದ ದಿನವೂ ಶೋಭಾ ಮನೆಗೆ ನವೀನ್ ಬಂದಿದ್ದ. ಏ.19ರಂದು ಇಬ್ಬರು ದೈಹಿಕ ಸಂರ್ಪಕವನ್ನು ಬೆಳೆಸಿದ್ದರು. ಆ ನಂತರ ಶೋಭಾ ಮತ್ತೆ ನವೀನ್‌ಗೆ ಸೆಕ್ಸ್‌ಗೆ ಒತ್ತಾಯಿಸಿದ್ದು ನಿರಾಕರಿಸಿದಾಗ ಬ್ಲ್ಯಾಕ್‌ಮೇಲ್ ಮಾಡಿದ್ದಾಳೆ. ಈಕೆ ಅತಿಯಾಗಿ ಸೆಕ್ಸ್‌ಗೆ ಒತ್ತಾಯಿಸಿದ್ದಕ್ಕೆ ಬೇಸರಗೊಂಡ ನವೀನ್‌ ಬೆಡ್‌ ರೂಮಿನಲ್ಲೇ ಆಕೆಯ ಕಥೆ ಮುಗಿಸಿದ್ದ.

48ರ ಮಹಿಳೆಗೆ ಯುವಕರ ಮೇಲೆ ಹುಚ್ಚು

48ರ ಶೋಭಾ ಕೇವಲ ನವೀನ್ ಮಾತ್ರವಲ್ಲದೇ ಅನೇಕ ಯುವಕರ ಸಹವಾಸ ಬೆಳೆಸಿದ್ದಳು. ಒಬ್ಬೊಬ್ಬ ಹುಡುಗರಿಗೂ ಒಂದೊಂದು ಹಣ್ಣಿನ ಹೆಸರಿಟ್ಟಿದ್ದು, ನವೀನ್‌ಗೆ ಆ್ಯಪಲ್ ಎಂದು ಹೆಸರಿಟ್ಟಿದ್ದಳಂತೆ. ಆ್ಯಪಲ್, ಆರೆಂಜ್, ಬನಾನ ಹೆಸರಿನಲ್ಲಿ ಹುಡುಗರ ಹೆಸರು ಸೇವ್ ಮಾಡಿಕೊಳ್ಳುತ್ತಿದ್ದಳು. ಆ್ಯಪ್‌ಗಳಲ್ಲಿಯೂ ಆ್ಯಕ್ಟಿವ್ ಆಗಿದ್ದ ಶೋಭಾ ಸುಮಾರು 20 ಕ್ಕೂ ಹೆಚ್ಚು ಹುಡುಗರನ್ನು ಖೆಡ್ಡಾಗೆ ಬೀಳಿಸಿಕೊಂಡಿದ್ದಳು. ಈಕೆ ಕರೆದಾಗ ಯುವಕರು ಏನಾದರೂ ಬಾರದೆ ಇದ್ದರೆ ಅವರ ಮನೆ ಬಳಿಯೇ ಹೋಗುತ್ತಿದ್ದಳು. ನಂತರ ಕಾರಿನ ಹಾರ್ನ್ ಜೋರಾಗಿ ಹಾಕುತ್ತಿದ್ದಳು. ಇಷ್ಟಕ್ಕೂ ಜಗ್ಗದೆ ಹೋದರೆ ಮನೆಯವರಿಗೆ ಖಾಸಗಿ ಫೋಟೊವನ್ನು ತೋರಿಸುವುದಾಗಿ ಬೆದರಿಕೆ ಹಾಕುತ್ತಿದ್ದಳು. ಅಷ್ಟೇ ಅಲ್ಲದೆ ಆ ಯುವಕರ ಮದುವೆಗೂ ಅಡ್ಡಿ ಪಡಿಸಿ ಮದುವೆ ನಿಲ್ಲಿಸಿದ್ದಳು.

ಇದನ್ನೂ ಓದಿ ರಿಯಾಲಿಟಿ ಶೋಗಳಲ್ಲೂ ಕಾಸ್ಟಿಂಗ್ ಕೌಚ್! ಡ್ಯಾನ್ಸಿಂಗ್ ಕ್ವೀನ್ ಬಿಚ್ಚಿಟ್ಟ ಸತ್ಯವೇನು?

ಕೊಲೆಯಾದ ದಿನವೂ ನವೀನ್‌ಗೆ ಬ್ಲಾಕ್ ಮೇಲ್ ಮಾಡಿ ಕರೆಸಿಕೊಂಡಿದ್ದಳು. ನವೀನ್‌ ಎಡಗೈಗೆ ಗಾಯವಾಗಿತ್ತು, ಗಾಯದ ಮೇಲೆ ಕೂತು ನೀನು‌ ಮದುವೆ ಆಗಬಾರದು, ಹೀಗೆ ನನ್ನ ಜತೆ ಇರಬೇಕು. ಮದುವೆ ಆದರೆ ಅಲ್ಲೆ ಬಂದು ಗಲಾಟೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಳು. ಇದರಿಂದ ಬೇಸತ್ತ ನವೀನ್‌, ಶೋಭಾಳ ಕತ್ತು ಹಿಸುಕಿ ಕೊ*ಲೆ‌ ಮಾಡಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾನೆ.

Continue Reading

LATEST NEWS

Trending