Connect with us

    DAKSHINA KANNADA

    ಟೋಲ್‌ಗೇಟ್‌ಗೆ ಮುತ್ತಿಗೆ-ಹೋರಾಟಗಾರರು & ಪೊಲೀಸರ ನಡುವೆ ವಾಗ್ವಾದ..! ಪ್ರತಿಭಟನಾಕಾರರ ಬಂಧನ..!

    Published

    on

    ಮಂಗಳೂರು: ವಿವಾದಾತ್ಮಕ ಸುರತ್ಕಲ್‌ ಟೋಲ್‌ಗೇಟ್ ತೆರವುಗೊಳಿಸಿಯೇ ಸಿದ್ಧ ಎಂದು ಅಖಾಡಕ್ಕೆ ಇಳಿದ ಟೋಲ್‌ಗೇಟ್‌ ಹೋರಾಟಗಾರರನ್ನು ಪೊಲೀಸರು ಇಂದು ವಶಕ್ಕೆ ತೆಗೆದುಕೊಳ್ಳುವ ಮೂಲಕ ವಿವಾದಾತ್ಮಕ ಟೋಲ್‌ಗೇಟ್‌ ವಿರುದ್ಧದ ಹೋರಾಟ ಇನ್ನಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ.

    ಕಳೆದ 7 ವರ್ಷಗಳಿಂದ ವಿವಾದಾತ್ಮಕ ಟೋಲ್‌ಗೇಟ್ ಆಗಿ ರೂಪುಗೊಂಡಿರುವ ಟೋಲ್‌ಗೇಟನ್ನು ತೆರವುಗೊಳಿಸಲು ಹಲವು ಹೋರಾಟದ ಬಳಿಕ ಇಂದು ಬೆಳಿಗ್ಗೆ ದೊಡ್ಡ ಮಟ್ಟದ ಹೋರಾಟ ಆಯೋಜಿಸಿತ್ತು.

    ಸಂಸದ ನಳಿನ್‌ ಕುಮಾರ್ ಮತ್ತೆ 20 ದಿನಗಳ ಕಾಲಾವಕಾಶ ಕೇಳಿದ್ದರೂ ಪಟ್ಟು ಬಿಡದ ಪ್ರತಿಭಟನಾಕಾರರು ಟೋಲ್‌ಗೇಟ್ ತೆರವು ಮಾಡದೇ ಮಾಡ್ತೀವಿ, ಇವತ್ತಿನಿಂದಲೇ ಶುಲ್ಕ ವಸೂಲಾತಿ ಕೈಬಿಡಿ ಎಂದು ಆಗ್ರಹಿಸಿದ್ದರು.

    ಈ ನಡುವೆ ಪೊಲೀಸರು ರಾತೋರಾತ್ರಿ ಪ್ರತಿಭಟನಾಕಾರರ ಮನೆಗೆ ನುಗ್ಗಿ ನೊಟೀಸ್ ನೀಡಿ ಹೋರಾಟ ಹತ್ತಿಕ್ಕಲು ಯತ್ನಿಸಿದ್ದರು. ಇದರಿಂದ ಪ್ರತಿಭಟನಾಕಾರರ ಆಕ್ರೋಶ ಇನ್ನುಷ್ಟ ಹೆಚ್ಚಾಗಿತ್ತು.

    ಇಂದು ಬೆಳಿಗ್ಗೆಯಿಂದಲೇ ಟೋಲ್‌ಗೇಟ್‌ ಬಳಿ ಪೊಲೀಸರು ಬಿಗು ಬಂದೋಬಸ್ತ್‌ ಏರ್ಪಡಿಸಿದ್ದರೂ ಕ್ಯಾರೇ ಅನ್ನದೇ ಪ್ರತಿಭಟನಾಕಾರರು ಜಮಾಯಿಸಿ ಶಾಂತಿಯುತವಾಗಿಯೇ ಪ್ರತಿಭಟನೆ ನಡೆಸತೊಡಗಿದ್ದರು. ಸರಕಾರ ಹಾಗೂ ಸಂಸದ ನಳಿನ್‌ ಕುಮಾರ್ ಕಟೀಲು ಅವರಿಗೆ ಧಿಕ್ಕಾರ ಕೂಗುತ್ತಾ ಶಾಂತಯುತವಾಗಿಯೇ ಪ್ರತಿಭಟನೆ ನಡೆಸುತ್ತಿದ್ದರು.

    ಈ ನಡುವೆ ಏಕಾಏಕಿ ಟೋಲ್‌ಗೇಟ್‌ ಬಳಿಗೆ ಹೊರಟ ಪ್ರತಿಭಟನಾಕಾರರಿಗೆ ಪೊಲೀಸರು ತಡೆಯೊಡ್ಡಿ ಅವರನ್ನು ದರದರನೇ ಎಳೆದೊಯ್ದು ವಶಕ್ಕೆ ಪಡೆದಿದ್ದಾರೆ.

    ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿ, ಐವನ್ ಡಿ ಸೋಜಾ, ಮಿಥುನ್ ರೈ, ವಿನಯಕುಮಾರ್ ಸೊರಕೆ, ಜೆ ಆರ್ ಲೋಬೋ, ಯಶವಂತ ಮರೋಳಿ, ಅಕ್ಷಿತ್ ಸುವರ್ಣ, ದಿನೇಶ್ ಹೆಗ್ಡೆ ಉಳೇಪಾಡಿ, ಆರ್ ಪದ್ಮರಾಜ್‌ ಸಹಿತ ಹಲವು ಮಂದಿ ನಾಯಕರನ್ನು ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಷ್ಟೇ ಅಲ್ಲದೇ, ಉಡುಪಿ ಭಾಗದಿಂದಲೂ ಆಗಮಿಸಿದ್ದ ಹೋರಾಟಗಾರರು ಟೋಲ್‌ಹೆಸರಿನಲ್ಲಿ ವಸೂಲಿ ಮಾಡುತ್ತಿರುವ ಸರಕಾರದ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿನಿಯರು ಕೂಡಾ ತಮ್ಮ ಅಸಮಧಾನವನ್ನು ವ್ಯಕ್ತಪಡಿಸಿ ಸಂಸದ ನಳಿನ್‌ ಕುಮಾರ್ ಕಟೀಲು ವಿರುದ್ಧ ವಾಗ್ದಾಳಿ ನಡೆಸಿದರು.

    ಪೊಲೀಸರು ಬಿಗು ಬಂದೋಬಸ್ತ್ ಕ್ರಮ ಕೈಗೊಂಡಿದ್ದು, ಬಳಿಕ ಹೆದ್ದಾರಿಯನ್ನು ತೆರವುಗೊಳಿಸಿದರು.

    ಸುರತ್ಕಲ್ ಟೋಲ್‌ಗೇಟ್‌ನ್ನು ತೆರವುಗೊಳಿಸಲು ಇಂದು ಮುಂಜಾನೆಯಿಂದಲೇ ಹೋರಾಟಗಾರರು ಸ್ಥಳಕ್ಕೆ ಆಗಮಿಸಿದ್ದು ಆಕ್ರೋಶಭರಿತರಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

    ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿಯನ್ನು ನಿಯಂತ್ರಿಸಲಾಗದೆ ಪೊಲೀಸರು ಎತ್ತಿಕೊಂಡು ಹೋಗುವ ದೃಶ್ಯ ಕೂಡಾ ಕಂಡುಬಂದಿತ್ತು.


    ಇನ್ನು ಕಾಂಗ್ರೆಸ್ ಮುಖಂಡ ಮಿಥುನ್‌ ರೈ ಅವರು ಟೋಲ್‌ಗೇಟ್ ಮೇಲೇರಿ ಘೋಷಣೆ ಕೂಗಿದರು, ಏಕಾಏಕಿ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಹೋರಾಟಗಾರರನ್ನು ಎಳೆದುಕೊಂಡು ಹೋಗುವ ಪರಿಸ್ಥಿತಿಯೂ ನಿರ್ಮಾಣವಾಯಿತು.


    ಈ ಸಂದರ್ಭ ಓರ್ವ ಮಹಿಳೆಯೂ ಸೇರಿದಂತೆ ಅನೇಕರು ಬಿಜೆಪಿ ಸರ್ಕಾರಕ್ಕೆ ಛೀಮಾರಿ ಹಾಕಿದರು. ‘ಇದೇನಾ ಹೆಣ್ಣು ಮಕ್ಕಳಿಗೆ ಬಿಜೆಪಿ ಸರ್ಕಾರ ಕೊಡುವ ಗೌರವ’ ಎಂದು ಆಕ್ರೋಶವನ್ನು ವ್ಯಕ್ತಪಡಿಸಿದರು.

    ಪೊಲೀಸರು ಪ್ರತಿಭಟನಾಕಾರರಿಗೆ ಲಾಠಿಯಿಂದ ಹೊಡೆದಿದ್ದು, ಅಬ್ದುಲ್ ಖಾದರ್ ಎಂಬವರು ಗಾಯಗೊಂಡಿದ್ದು ಸುರತ್ಕಲ್ ಪದ್ಮಾವತಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.


    ಸುರತ್ಕಲ್‌ ಟೋಲ್‌ಗೇಟ್ ಹೋರಾಟಗಾರರನ್ನು ಹತ್ತಿಕ್ಕಲು ಪೊಲೀಸರು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು , ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.

    ಕಾರ್ಯಾಚರಣೆ ತಡೆಯಲು ಮಂಗಳೂರು ಪೊಲೀಸ್ ಕಮಿಷನರೇಟ್‌ ವ್ಯಾಪ್ತಿಯ ಹಾಗೂ ಜಿಲ್ಲೆಯ ಹೆಚ್ಚುವರಿ ಪೊಲೀಸರನ್ನು ಸೋಮವಾರದ ಸಂಜೆಯಿಂದಲೇ ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಸುಮಾರು 400ಕ್ಕೂ ಅಧಿಕ ಹೆಚ್ಚು ಪೊಲೀಸರನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending