Tuesday, March 28, 2023

ಬಂಟ್ವಾಳ: ನಿಷೇಧಿತ PFI ಕಚೇರಿ ಮೇಲೆ ಏಕಕಾಲದಲ್ಲಿ ಪೊಲೀಸರ ಅಟ್ಯಾಕ್-4 ಆಫೀಸ್‌ ಲಾಕ್…

ಬಂಟ್ವಾಳ: ನಿಷೇಧಿತ ಸಂಘಟನೆಯಾದ ಪಿ.ಎಫ್.ಐ.ಹಾಗೂ ಎಸ್.ಡಿ‌‌‌.ಪಿ.ಐ ಕಚೇರಿಗೆ ಎ.ಸಿ.ಮದನ್ ಮೋಹನ್ ನೇತೃತ್ವದಲ್ಲಿ ಬಂಟ್ವಾಳ ತಾಲೂಕಿನ ನಾಲ್ಕು ಕಚೇರಿಗೆ ಇಂದು ಮುಂಜಾನೆ ವೇಳೆ ಬೀಗ ಹಾಕಿದ್ದಾರೆ.


ಸರಕಾರ ನಿಷೇಧ ಮಾಡಿದ ಬಳಿಕವೂ ಎಸ್.ಡಿ.ಪಿ. ಕಚೇರಿಯಲ್ಲಿ ಪಿ.ಎಫ್.ಐ.ಸಂಘಟನೆಯ ಕಾರ್ಯಕರ್ತರು ಜಮಾಯಿಸಿ ಕೆಲಸ ಕಾರ್ಯಗಳನ್ನು ನಡೆಸುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಕಚೇರಿಗಳಿಗೆ ಬೀಗ ಹಾಕಿ, ಸಂಘಟನೆಯ ಬೋರ್ಡ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಟ್ವಾಳ ತಾಲೂಕಿನ ಫರಂಗಿಪೇಟೆ, ಕೆಳಗಿನಪೇಟೆ ಮಂಚಿಯಲ್ಲಿರುವ ಕಚೇರಿ ಹಾಗೂ ಪರ್ಲಿಯಾದಲ್ಲಿ ಹಂಝ ಎಂಬವರ ಮನೆಯನ್ನು ಕಚೇರಿ ಮಾಡಿದ ಈ ನಾಲ್ಕು ಕಡೆಗಳಿಗೆ ಏಕಕಾಲದಲ್ಲಿ ಪೊಲೀಸರ ತಂಡ ಬೀಗ ಹಾಕಿದೆ.


ತಾಲೂಕಿನಲ್ಲಿರುವ ಎಸ್.ಡಿ.ಪಿ.ಐ ಕಚೇರಿಯಲ್ಲಿ ಪಿ‌.ಎಫ್.ಐ.ಸಂಘಟನೆಗೆ ಸೇರಿದ ವ್ಯಕ್ತಿಗಳ ಚಲನ ವಲನಗಳ ಹಿನ್ನೆಲೆಯಲ್ಲಿ ಬೀಗ ಜಡಿಯಲು ಎ.ಸಿ.ಮದನ್ ಮೋಹನ್ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ಮಾಡಲಾಗಿತ್ತು.

ಗ್ರಾಮಾಂತರ ಎಸ್.ಐ.ಹರೀಶ್ ನೇತೃತ್ವದಲ್ಲಿ ದಾಳಿ ನಡೆಸಿ ಕಚೇರಿ ಒಳಗೆ ಸಂಪೂರ್ಣ ಶೊದ ಕಾರ್ಯ ನಡೆಸಿದ ಬಳಿಕ ಬೀಗ ಹಾಕಲಾಯಿತು.


ತಹಶಿಲ್ದಾರ್ ಸ್ಮಿತಾರಾಮು, ಪೋಲೀಸ್ ಇನ್ಸ್ ಪೆಕ್ಟರ್ ಗಳಾದ ಟಿ.ಡಿ.ನಾಗರಾಜ್ , ವಿವೇಕಾನಂದ, ಬಂಟ್ವಾಳ ನಗರ ಠಾಣಾ ಎಸ್.ಐ.ಅವಿನಾಶ್, ಕಂದಾಯ ನಿರೀಕ್ಷಕ ರಾಜೇಶ್ ಹಾಗೂ ನಗರ ಪೋಲೀಸ್ ಠಾಣಾ ಅಪರಾಧ ವಿಭಾಗದ ಎಸ್.ಐ.ಕಲೈಮಾರ್, ತಾಪಂ.ಇ.ಓ ರಾಜಣ್ಣ ನೇತೃತ್ವದ ನಾಲ್ಕು ತಂಡಗಳು ದಾಳಿ ನಡೆಸಿ ಕಾರ್ಯಚರಣೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಕಾರ್ಕಳ : ಅನಾರೋಗ್ಯದಿಂದ ಸಾವನ್ನಪ್ಪಿದ ಮನೆ ಮಗನ ಆಘಾತದಿಂದ ತಾಯಿ ಜೀವಾಂತ್ಯ..!

ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ಸೋಮವಾರ ನಡೆದಿದೆ.ಕಾರ್ಕಳ : ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೊಬ್ಬರು...

ಪತ್ನಿ ಆತ್ಮಹತ್ಯೆ ಬಗ್ಗೆ ಸಂಶಯ- ತನಿಖೆ ನಡೆಸಿ ನ್ಯಾಯ ಕೊಡಿಸುವಂತೆ ಠಾಣೆ ಮೆಟ್ಟಲೇರಿದ ಪತಿ..!

ತನ್ನ ಪತ್ನಿ ಆತ್ಮಹತ್ಯೆ ಮಾಡಿದ ಬಗ್ಗೆ ಸಂಶಯವಿದ್ದು, ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಪತಿ ಜಿಲ್ಲಾ ಪೋಲೀಸ್ ವರಿಷ್ಢಾಧಿಕಾರಿಗೆ ಮನವಿ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ...

puttur : ಉಪ್ಪಿನಂಗಡಿಯಲ್ಲಿ ಬೈಕುಗಳ ಮುಖಾಮುಖಿ ಢಿಕ್ಕಿ – ಓರ್ವ ಸ್ಥಳದಲ್ಲೇ ಮೃತ್ಯು..!

ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಕಕ್ಕೆಪದವಿನಲ್ಲಿ ನಿನ್ನೆ ಸೋಮವಾರ ಸಂಜೆ ನಡೆದಿದೆ. ಪುತ್ತೂರು: ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ...