Connect with us

BELTHANGADY

ಮನೆಯಲ್ಲೇ ಕೂತು ಲಕ್ಷ ಲಕ್ಷ ಸಂಪಾದಿಸಿ..!! ಮನೆಯಲ್ಲೇ ಕೂತು ಲಕ್ಷ ಲಕ್ಷ ಕಳಕೊಂಡ ಬೆಳ್ತಂಗಡಿ ಮಹಿಳೆ..!

Published

on

ಬೆಳ್ತಂಗಡಿ : ಮನೆಯಲ್ಲೇ ಕೂತು ಲಕ್ಷ ಲಕ್ಷ ಸಂಪಾದಿಸಿ, ಹೆಣ್ಮಕ್ಕಳು ಮನೆಯಲ್ಲೇ ಕುಳಿತು ಸುಲಭವಾಗಿ ಹಣಗಳಿಸಬಹುದು ಇಂತಹ ಜಾಹೀರಾತುಗಳು ಇದೀಗ ವಾಟ್ಸಾಪ್- ಸಾಮಾಜಿಕ ಜಾಲತಾಣಗಳಲ್ಲಿ ಧಾರಳವಾಗಿ ಕಂಡು ಬರುತ್ತಿವೆ. ಆದರೆ ದಯವಿಟ್ಟು ಇಂತಹ ಜಾಹೀರಾತುಗಳಿಗೆ ಮರುಳಾಗಿ ಬಲಿಯಾಗದಿರಿ.

ಇಂತಹುದೇ ಜಾಹೀರಾತಿಗೆ ಮರುಳಾಗಿ ಬೆಳ್ತಂಗಡಿಯ ಮಹಿಳೆಯೊಬ್ಬರು ಐದು ಲಕ್ಷಕ್ಕೂ ಹೆಚ್ಚು ಹಣ ಕಳಕೊಂಡಿರುವ ಘಟನೆ ಸಂಭವಿಸಿದೆ. ಹಣ ಕಳಕೊಂಡ ಮಹಿಳೆ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಚರ್ಚ್ ರೋಡ್ ನಿವಾಸಿ ಪೂರ್ಣಿಮಾ ಎಂಬವರು ಹಣ ಕಳೆದುಕೊಂಡ ಮಹಿಳೆಯಾಗಿದ್ದಾರೆ.

ಈಕೆಗೆ ಅಪರಿಚಿತ ಸಂಖ್ಯೆಯಿಂದ ತಿಂಗಳಿಗೆ ಮೂರು ಸಾವಿರದಿಂದ ಎಂಟು ಸಾವಿರದವರೆಗೆ ಗಳಿಸಬಹುದು ಎಂಬ ಸಂದೇಶ ಬಂದಿತ್ತು, ಅದಕ್ಕೆ ಪೂರ್ಣಿಮಾ ಅವರು ಮೆಸೇಜ್ ಮಾಡಿ ಸಂಪರ್ಕಿಸಿದ್ದಾರೆ.

ಬಳಿಕ ಆ ವ್ಯಕ್ತಿ ನಿರಂತರವಾಗಿ ಟಾಸ್ಕ್ ಹೇಳಿ ಆಕೆಯಿಂದ ಹಂತ ಹಂತವಾಗಿ ಹಣ ಪಡೆದು ಕೊಂಡಿದ್ದಾರೆ.

ಕ್ರೆಡಿಟ್‌ ಕರ್ಡ್ ಮೂಲಕ ಪೂರ್ಣಿಮಾ ಅವರು ಜೂನ್ ತಿಂಗಳಿನಿಂದ ಹಣ ಸಂದಾಯ ಮಾಡುತ್ತಾ ಬಂದಿದ್ದಾರೆ.

ಜುಲೈ 5ರಂದು ಆಕೆ ಸುಮಾರು ಮೂರು ಲಕ್ಷ ಕ್ಕೂ ಹೆಚ್ಚು ಹಣ ಸಂದಾಯ ಮಾಡಿರುವುದಾಗಿ ಹಾಗು ಒಟ್ಟು ಐದು ಲಕ್ಷ ಕ್ಕೂ ಹೆಚ್ಚು ಹಣ ಕಳೆದುಕೊಂಡಿರುವುದಾಗಿ ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಜಿಲ್ಲಾ ಸೈಬರ್ ಕ್ರೈಂ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

https://youtu.be/H9xAS99UFvk

BELTHANGADY

ರಸ್ತೆ ದಾಟುವ ವೇಳೆ ದ್ವಿಚಕ್ರ ವಾಹನ ಡಿ*ಕ್ಕಿ..!! ಪಾದಾಚಾರಿ ಮೃ*ತ್ಯು

Published

on

ಬೆಳ್ತಂಗಡಿ: ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ನಗರದ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ ಮಾವ ಶೇಖರ್ ಬಂಗೇರ ಹೇರಾಜೆ(65 ವ) ಮೃ*ತಪಟ್ಟವರು.

ಗುರುವಾರ (ಮಾ.28) ರಾತ್ರಿ ಶೇಖರ್ ಬಂಗೇರ ರವರು ಹೋಟೆಲ್ ನಿಂದ ಪಾರ್ಸಲ್ ತೆಗೆದುಕೊಂಡು ರಸ್ತೆ ದಾಟುತ್ತಿದ್ದ ವೇಳೆ ದ್ವಿಚಕ್ರ ವಾಹನ ಡಿ*ಕ್ಕಿ ಹೊಡೆದಿದೆ. ಪರಿಣಾಮ ಗಂಭೀ*ರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಬಂಟ್ವಾಳದಲ್ಲಿ ಅವರು ಸಾವನ್ನಪ್ಪಿದ್ದಾರೆ.  ಸ್ಕೂಟರ್ ನಲ್ಲಿದ್ದ ಬೆಳ್ತಂಗಡಿಯ ಗೇರುಕಟ್ಟೆ ನಿವಾಸಿ ಅನುಷಾ(19ವ) ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಮೃತಪಟ್ಟ ಶೇಖರ್ ಬಂಗೇರ ಹೇರಾಜೆ ವಿಜಯ ಬ್ಯಾಂಕ್  ಮಾಜಿ ಉದ್ಯೋಗಿ, ಮುಗ್ಗ ಗುತ್ತು ಮನೆತನದ ಟ್ರಸ್ಟ್ ಕೋಶಾಧಿಕಾರಿ, ರಾಘವೇಂದ್ರ ಮಠದ ಕೋಶಾಧಿಕಾರಿ, ಗುರುನಾರಾಯಣ ಸಂಘದ ಮಾಜಿ ಉಪಾಧ್ಯಕ್ಷರಾಗಿದ್ದರು.

ಈ ಕುರಿತು ಬೆಳ್ತಂಗಡಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

 

Continue Reading

BELTHANGADY

ದ್ವಿಚಕ್ರ ವಾಹನಕ್ಕೆ ಪಿಕ್‌ಅಪ್ ಡಿ*ಕ್ಕಿ ಹೊಡೆದು ಪರಾರಿ..! ಸವಾರ ಸ್ಪಾಟ್ ಡೆ*ತ್..!

Published

on

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಪಿಕಪ್ ಡಿ*ಕ್ಕಿ ಹೊಡೆದು ದ್ವಿಚಕ್ರ ಸವಾರ ಮೃತಪಟ್ಟ ಘಟನೆ  ಬೆಳ್ತಂಗಡಿಯ ವಾಣಿ ಕಾಲೇಜು ಬಳಿ ಮಾ.25ರಂದು ಮಧ್ಯಾಹ್ನ ನಡೆದಿದೆ.

ಗುರುವಾಯನಕೆರೆಯಿಂದ ಬೆಳ್ತಂಗಡಿಗೆ ದ್ವಿಚಕ್ರವಾಹದಲ್ಲಿ ಬರುತ್ತಿದ್ದ ವೇಳೆ ಬೆಳ್ತಂಗಡಿಯಿಂದ ಹೋಗುತ್ತಿದ್ದ ಪಿಡ್‌ಅಪ್ ಡಿಕ್ಕಿ ಹೊಡೆದಿದೆ.  ಘಟನೆಯಿಂದ ದ್ವಿಚಕ್ರ ವಾಹನ ಸವಾರ ಪುರುಷೋತ್ತಮ(19 ವ)ರವರು ಸ್ಥಳದಲ್ಲೇ ಮೃ*ತಪಟ್ಟಿದ್ದಾರೆ. ದ್ವಿಚಕ ವಾಹನದಲ್ಲಿದ್ದ ಇನ್ನೋರ್ವ ಸಹಸವಾರ ತೌಫಿಕ್(18 ವ) ಗಂಭೀರ ಗಾಯಗೊಂಡಿದ್ದು ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿಕ್ಕಿ ಹೊಡೆದ ಪಿಕ್‌ ಅಪ್ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದೆ. ಪಿಕ್‌ಅಪ್ ಡಿ*ಕ್ಕಿ ಹೊಡೆದ ರಭಸಕ್ಕೆ ಯುವಕರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಈ ವೇಳೆ ಲಾಯಿಲ ರಾಘವೇಂದ್ರ ನಗರದ ನಿವಾಸಿ ದಿ.ಜಯರಾಮ ಎಂಬವರ ಪುತ್ರ ಪುರುಷೋತ್ತಮ ಸ್ಥಳದಲ್ಲೇ ಅಸುನೀಗಿದ್ದಾರೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

 

Continue Reading

BELTHANGADY

ಬೆಳ್ತಂಗಡಿ: ಬೊಳ್ಮಿನಾರು ಅರಣ್ಯ ಪರಿಸರದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ವ್ಯಕ್ತಿಯ ಶ*ವ ಪತ್ತೆ..!

Published

on

ಬೆಳ್ತಂಗಡಿ: ಇಲ್ಲಿನ ಪುದುವೆಟ್ಟು ಗ್ರಾಮದ ಬೊಳ್ಮಿನಾರು, ಅರಣ್ಯ ಪರಿಸರದಲ್ಲಿ ಬುಧವಾರ(ಮಾ.20) ಅಸ್ತಿಪಂಜರ ಸ್ಥಿತಿಯಲ್ಲಿ ಓರ್ವ ವ್ಯಕ್ತಿಯ ಶ*ವ ಪತ್ತೆಯಾಗಿದೆ. ಸ್ಥಳದಲ್ಲಿ ದೊರೆತ ಆಧಾರ್ ಕಾರ್ಡ್ ಹಾಗೂ ಇತರ ಸ್ವತ್ತುಗಳ ಪ್ರಕಾರ ಮೃತ ವ್ಯಕ್ತಿಯನ್ನು ಕಳೆಂಜಗ್ರಾಮದ ಕಾಯರ್ತಡ್ಕದ ರಾಜು ಜೋಸೆಫ್ ಎಂದು ಗುರುತಿಸಲಾಗಿದೆ.

ಬುಧವಾರ ಮಧ್ಯಾಹ್ನದ ವೇಳೆ ಅರಣ್ಯ ಪ್ರದೇಶದಿಂದ ಸೊಪ್ಪು ತರಲು ತೆರಳಿದ್ದ ಸ್ಥಳೀಯರು ರಸ್ತೆಯಿಂದ ಸುಮಾರು 100 ಮೀಟರ್ ದೂರ ಪ್ರದೇಶದಲ್ಲಿ ಮಲಗಿರುವ ಸ್ಥಿತಿಯಲ್ಲಿದ್ದ ಶವವನ್ನು ಗುರುತಿಸಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳದಲ್ಲಿ ಮದ್ಯದ ಬಾಟಲ್ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಸಿಕ್ಕಿದ ದಾಖಲೆಗಳ ಪ್ರಕಾರ ರಾಜು ಅವರ ಮನೆಯವರನ್ನು ಸ್ಥಳಕ್ಕೆ ಕರೆಯಿಸಿದ್ದು ಅಲ್ಲಿದ್ದ ಬ್ಯಾಗ್‌ ಹಾಗೂ ಆಧಾರ್ ಕಾರ್ಡ್ ಆಧಾರದಲ್ಲಿ ಮೃತಪಟ್ಟ ವ್ಯಕ್ತಿ ರಾಜು ಎಂದು ಮನೆಯವರು ಸ್ಪಷ್ಟಪಡಿಸಿದ್ದಾರೆ.

ರಾಜು ಅವರು ಕೆಲವು ವರ್ಷಗಳ ಹಿಂದೆಯೇ ಮನೆ ಬಿಟ್ಟಿದ್ದರು ಎಂದು ಮನೆಯವರು ತಿಳಿಸಿದ್ದಾರೆ. ಪೊಲೀಸರು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ. ತಜ್ಞರ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಲಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

LATEST NEWS

Trending