Connect with us

    LATEST NEWS

    ಪ್ರಜ್ವಲ್ ರೇವಣ್ಣ ಬಂಧಿಸಿದ ಎಸ್‌ಐಟಿ ಅಧಿಕಾರಿ..!”ನಂಗೇನು ಗೊತ್ತಿಲ್ಲ.. ನಾನೇನು ಮಾಡಿಲ್ಲ..” ತನಿಖೆ ವೇಳೆ ಪ್ರಜ್ವಲ್ ಪ್ರತಿಕ್ರಿಯೆ

    Published

    on

    ಬೆಂಗಳೂರು: ದೇಶ ಬಿಟ್ಟು ಪರಾರಿಯಾಗಿದ್ದ ಲೈಂಗಿಕ ದೌರ್ಜನ್ಯದ ಆರೋಪಿ ಪ್ರಜ್ವಲ್ ರೇವಣ್ಣ ಬಂಧನವಾಗಿದೆ. ಎಪ್ರಿಲ್ 27 ರಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ನಿನ್ನೆ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಎಂಟ್ರಿ ಕೊಡ್ತಾ ಇದ್ದಂತೆ SIT ವಶಕ್ಕೆ ಪಡೆದುಕೊಂಡಿದೆ.

    ಸ್ಥಳದಲ್ಲಿದ್ದ ಭದ್ರತಾ ಸಿಬಂದಿ ಹಾಗೂ ವಲಸೆ ಅಧಿಕಾರಿಗಳು ವಿಶೇಷ ಕೊಠಡಿಗೆ ಕರೆ ತಂದು ಪರಿಶೀಲನೆ ನಡೆಸಿದ್ದಾರೆ. ಅವರ ಬೆರಳಚ್ಚು ಹಾಗೂ ಫೊಟೋವನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಹಿರಿಯ ಎಸ್‌ಐಟಿ ಅಧಿಕಾರಿ ಪ್ರಜ್ವಲ್‌ನನ್ನು ವಿಮಾನ ನಿಲ್ದಾಣದಿಂದ ಎಸ್‌ಐಟಿ ಕಛೇರಿಗೆ ವಿಮಾನ ನಿಲ್ದಾಣದ ಹಿಂದಿನ ಗೇಟ್ ಮೂಲಕ ಪ್ರಜ್ವಲ್‌ನನ್ನು ಹೊರಗೆ ಕರೆದೊಯ್ದಿದ್ದಾರೆ.  ವಿಮಾನ ನಿಲ್ದಾಣ, ಬಳ್ಳಾರಿ ರಸ್ತೆಯುದ್ದಕ್ಕೂ ಹಾಗೂ ಎಸ್‌ಐಟಿ ಕಛೇರಿ ಸುತ್ತಮುತ್ತ ಪೊಲೀಸ್ ಬಿಗಿ ಭದ್ರತೆ ಕೈಗೊಂಡಿದ್ದಾರೆ.

    ಮುಂದೆ ಓದಿ..; ಅಂತೂ ಟೇಕಾಫ್ ಆದ ಪ್ರಜ್ವಲ್‌ ಫ್ಲೈಟ್‌..! ಲ್ಯಾಂಡ್ ಆಗ್ತಾ ಇದ್ದಂತೆ SIT ಲಾಕ್‌..!

    ಅತ್ಯಾಚಾರ ಆರೋಪಿ ಜೊತೆ ಜೀಪ್‌ನಲ್ಲಿ ಎಸ್‌ಐಟಿ ಮಹಿಳಾ ಸಿಬಂದಿ..!!

    ಪ್ರಜ್ವಲ್ ರೇವಣ್ಣನನ್ನು ಮಹಿಳಾ ಅಧಿಕಾರಿಗಳು SIT ಕಚೇರಿಗೆ ಜೀಪ್​ನಲ್ಲಿ ಕರೆತಂದಿದ್ದಾರೆ. ಪ್ರಜ್ವಲ್ ರೇವಣ್ಣ  ಇದ್ದ ಜೀಪ್​ನಲ್ಲಿ ಚಾಲಕ ಹೊರತು ಪಡಿಸಿದರೆ ಉಳಿದ ಐವರು ಮಹಿಳಾ ಅಧಿಕಾರಿಗಳೆ ಇದ್ದರು. ಇನ್ನು ಅತ್ಯಾಚಾರ ಆರೋಪವನ್ನು ಹೊತ್ತಿರುವ ಪ್ರಜ್ವಲ್‌ ನನ್ನು ಮಹಿಳಾ ಅಧಿಕಾರಿಗಳೊಂದಿಗೆ ಎಸ್‌ಐಟಿ ಕಚೇರಿಗೆ ಕರೆತಂದಿದ್ದು,  ದೊಡ್ಡ ಪ್ರಶ್ನೆಗೆ ಕಾರಣವಾಗಿದೆ.  ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಮಹಿಳೆಯರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ ಹೀಗಾಗಿ ದೌರ್ಜನ್ಯಕ್ಕೆ ಒಳಗಾದವರು ಹೆದರದೆ ಬಂದು ದೂರು ಕೊಡಿ ಎಂದು ಸಂದೇಶ ರವಾನಿಸಲು ಮಹಿಳಾ ಸಿಬ್ಬಂದಿ ಎಸ್​ಐಟಿ ಕಚೇರಿಗೆ ಕರೆತಂದ್ರಾ ಎಂಬ ಪ್ರಶ್ನೆ ಮೂಡಿದೆ.

    ತನಿಖೆಗೆ ಸಹಕರಿಸದ ಪ್ರಜ್ವಲ್:

    ಇನ್ನು ಎಸ್‌ಐಟಿ ತನಿಖೆ ಪ್ರಜ್ವಲ್ ಸಹಕಾರ ನೀಡುತ್ತಿಲ್ಲ ಎಂದು ತಿಳಿದು ಬಂದಿದೆ. ನನ್ನ ಮೇಲೆ ಮಾಡಿರುವ ಆರೋಪಗಳೆಲ್ಲ ಸುಳ್ಳು. ಯಾವ ಪ್ರಕರಣಗಳಿಗೂ ನನಗೂ ಸಂಬಂಧವಿಲ್ಲ. ನಾನೇನು ಮಾಡಿಲ್ಲ.. ನಂಗೇನು ಗೊತ್ತಿಲ್ಲ ಎಂದು ತನಿಖೆ ವೇಳೆ ಪ್ರತಿಕ್ರಿಯೆ ನೀಡಿದ್ದಾರೆ. ಇನ್ನು ಪ್ರಜ್ವಲ್ ಮೊಬೈಲ್ ವಶಪಡಿಸಿಕೊಂಡಿದ್ದು ಮೊಬೈಲ್‌ನಲ್ಲಿ ಡೇಟಾ ರಿಟ್ರೀವ್‌ ಮಾಡಲು ಎಫ್ಎಸ್ಎಲ್‌ ಗೆ ಕಳುಹಿಸಿಕೊಡಲಾಗಿದೆ.

    Click to comment

    Leave a Reply

    Your email address will not be published. Required fields are marked *

    FILM

    ಒಂದೇ ಹಾಡಿನಲ್ಲಿ 700 ಮಂದಿ ಬ್ಯಾಕ್ ಡ್ಯಾನ್ಸರ್ಸ್; ಯಾವ ಚಿತ್ರದಲ್ಲಿ ಗೊತ್ತಾ!?

    Published

    on

    ಮಂಗಳೂರು/ಮುಂಬೈ : ಲಕ್ಷ್ಮಣ್ ಉಟೇಕರ್ ನಿರ್ದೇಶನದ ‘ಛವ್ವಾ’ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಚಿತ್ರದಲ್ಲಿ ವಿಕ್ಕಿ ಕೌಶಲ್, ರಶ್ಮಿಕಾ ಮಂದಣ್ಣ ಮೊದಲಾದವರು ನಟಿಸಿದ್ದು, ಛತ್ರಪತಿ ಸಾಂಬಾಜಿ ಪಾತ್ರದಲ್ಲಿ ವಿಕ್ಕಿ ನಟಿಸಿದರೆ, ಅವರ ಪತ್ನಿ ಯೇಸುಬಾಯಿ ಪಾತ್ರದಲ್ಲಿ ರಶ್ಮಿಕಾ ಕಾಣಿಸಿಕೊಂಡಿದ್ದಾರೆ.


    ಡ್ಯಾನ್ಸ್ ಮಾಡುವಾಗ ಸಾಮಾನ್ಯವಾಗಿ 50 – 100 ಮಂದಿ ಕಾಣಿಸಿಕೊಳ್ಳೋದು ಸಾಮಾನ್ಯ. ಆದರೆ, ಬರೋಬ್ಬರಿ 700 ಮಂದಿ ಕಾಣಿಸಿಕೊಂಡರೆ? ಹೀಗೊಂದು ಅಪರೂಪದ ದೃಶ್ಯ ‘ಛವ್ವಾ’ಸಿನಿಮಾದಲ್ಲಿ ಮೂಡಿ ಬಂದಿದೆ. ಎ.ಆರ್. ರೆಹಮಾನ್ ಕಂಪೋಸ್ನಲ್ಲಿ ಈ ಹಾಡು ಮೂಡಿದ್ದು, ಇದರ ಶೂಟ್ಗೆ ಸಿದ್ಧತೆ ನಡೆದಿದೆ.
    ಮರಾಠಿ ಜಾನಪದ ಮ್ಯೂಸಿಕ್ನಲ್ಲಿ ಈ ಹಾಡು ಮೂಡಿ ಬರುತ್ತಿದೆ. ರಾಜರ ಕಾಲವನ್ನು ರೀ ಕ್ರಿಯೇಟ್ ಮಾಡಬೇಕಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬ್ಯಾಕ್ ಡ್ಯಾನ್ಸರ್ಗಳು ಇರಲಿದ್ದಾರೆ. ವಿಜಯ್ ಗಂಗೂಲಿ ಅವರು ಈ ಹಾಡಿಗೆ ಕೊರಿಯೋಗ್ರಾಫಿ ಮಾಡುತ್ತಿದ್ದಾರೆ.
    ಈ ಸಿನಿಮಾದ ಕಥೆ 1681ರ ಕಾಲಘಟ್ಟದ್ದಾಗಿದೆ. ಇದಕ್ಕಾಗಿಯೇ ಬೃಹತ್ ಸೆಟ್ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ಚಿತ್ರ ಡಿಸೆಂಬರ್ 6 ರಂದು ರಿಲೀಸ್ ಆಗಲಿದ್ದು, ಅದೇ ದಿನ ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ 2’ ಕೂಡ ರಿಲೀಸ್ ಆಗುತ್ತಿರೋದು ವಿಶೇಷ.

    Continue Reading

    LATEST NEWS

    ಹ್ಯಾರಿಪಾಟರ್‌ ಖ್ಯಾತಿಯ ಹಾಲಿವುಡ್‌ ನಟಿ ಮ್ಯಾಗಿ ಸ್ಮಿತ್‌ ವಿಧಿವಶ

    Published

    on

    ಹಾಲಿವುಡ್‌ನ ಜನಪ್ರಿಯ ನಟಿ ಹ್ಯಾರಿಪಾಟರ್‌ ಖ್ಯಾತಿಯ ನಟಿ ಮ್ಯಾಗಿ ಸ್ಮಿತ್ ಅವರು ಇಹಲೋಕ ತ್ಯಜಿಸಿದ್ದಾರೆ.

    ಆಸ್ಕರ್ ಪ್ರಶಸ್ತಿ ವಿಜೇತ ನಟಿ ಮ್ಯಾಗಿ ಸ್ಮಿತ್ ಅವರು ಇಬ್ಬರೂ ಮಕ್ಕಳು ಮತ್ತು ಐದು ಜನ ಮೊಮ್ಮಕ್ಕಳನ್ನು ಅಗಲಿದ್ದಾರೆ. ಮ್ಯಾಗಿ ಸ್ಮಿತ್ ಅವರು ಸೆ.27ರಂದು ನಿಧನರಾಗಿದ್ದು, ಕುಟುಂಬ ಮೂಲಗಳು ಅಧಿಕೃತ ಪಡಿಸಿದೆ.

    ಶಾಸಕ ಮುನಿರತ್ನ ಮನೆಗೆ ಐಟಿ ಅಧಿಕಾರಿಗಳ ದಾಳಿ

    ಮ್ಯಾಗಿ ಸ್ಮಿತ್ ಸುಮಾರು 50ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. 60ರ ದಶಕದಿಂದ ಸಿನಿಮಾಗಳಲ್ಲಿ ನಟಿಸುವುದ್ದಕ್ಕೆ ಆರಂಭಿಸಿದ್ದ ಮ್ಯಾಗಿ ಸ್ಮಿತ್ ಹಲವು ಜನಪ್ರಿಯ ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದಾರೆ. ಇವರ ವೃತ್ತಿ ಬದುಕಿನಲ್ಲಿ ಎರಡು ಆಸ್ಕರ್ ಪ್ರಶಸ್ತಿಗಳು ಲಭಿಸಿವೆ.

    Continue Reading

    LATEST NEWS

    ಶೀಘ್ರವೇ ಗೃಹಲಕ್ಷ್ಮಿ ಹಣ, ಯೋಜನೆ ನಿಲ್ಲುವ ಮಾತೇ ಇಲ್ಲ: ಲಕ್ಷ್ಮಿ ಹೆಬ್ಬಾಳ್ಕರ್‌

    Published

    on

    ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆ ನಿರಂತರ ಪ್ರಕ್ರಿಯೆ ಸರ್ಕಾರ ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

    ಪಂಚಮಸಾಲಿ ಸಮುದಾಯಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ ಅವರ ಕೊಡುಗೆ ಏನು ಎಂದು ಸಚಿವರು ಪ್ರಶ್ನಿಸಿದ ಹೆಬ್ಬಾಳ್ಕರ್‌ ನಾನು ಎಂದಿಗೂ ಪಂಚಮಸಾಲಿ ಮೀಸಲಾತಿ ಪರವಾಗಿದ್ದೇನೆ. 2ಎ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಸದಾ ನನ್ನ ಬೆಂಬಲ ಇರುತ್ತದೆ ಎಂದರು.

    ಮುರುಗೇಶ್ ನಿರಾಣಿ ಅವರು ಅಧಿಕಾರದಲ್ಲಿದ್ದಾಗ ಸಮುದಾಯದ ಬಗ್ಗೆ ಯೋಚಿಸಲಿಲ್ಲ. ಈಗ ಸುಖಾಸುಮ್ಮನೆ ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಬೇರೆ ಸಮಾಜಕ್ಕೆ ಯಾವುದೇ ತೊಂದರೆಯಾಗದಂತೆ ಮೀಸಲಾತಿ ನೀಡಲಿ ಎಂಬುದೇ ನಮ್ಮ ಆಗ್ರಹವಾಗಿದೆ ಎಂದು ತಿಳಿಸಿದರು.

    Continue Reading

    LATEST NEWS

    Trending