International news
SKSSF ಅಬುಧಾಬಿ ಕರ್ನಾಟಕ ಮತ್ತು ಬ್ಲಡ್ ಹೆಲ್ಪ್ಲೈನ್ ಕರ್ನಾಟಕ : ಅಬುಧಾಬಿಯಲ್ಲಿ 3 ನೇ ಯಶಸ್ವಿ ರಕ್ತದಾನ ಶಿಬಿರ
ಅಬುಧಾಬಿ (ಯು.ಎ.ಇ) : SKSSF ಕರ್ನಾಟಕ ಅಬುಧಾಬಿ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಜಂಟಿ ಆಶ್ರಯದಲ್ಲಿ ಬೃಹತ್ ಮೀಲಾದ್ ಕಾನ್ಫೆರೆನ್ಸ್ ಪ್ರಚಾರಾರ್ಥ ಸಾರ್ವಜನಿಕ ರಕ್ತದಾನ ಶಿಬಿರ ಶುಕ್ರವಾರ(ಜು.26) ಯುನೈಟೆಡ್ ಅರಬ್ ಎಮಿರೇಟ್ಸ್ನ ಅಬುಧಾಬಿ ಬ್ಲಡ್ ಬ್ಯಾಂಕ್ನಲ್ಲಿ ಯಶಸ್ವಿಯಾಗಿ ನಡೆಯಿತು.
ರಕ್ತದಾನ ಶಿಬಿರದಲ್ಲಿ ಒಟ್ಟು 74 ಮಂದಿ ರಕ್ತದಾನ ಮಾಡಿದರು. ಇದರಲ್ಲಿ 7 ಮಂದಿ ಸಿಂಗಲ್ ಡೋನರ್ ಪ್ಲೇಟ್ಲೆಟ್ಸ್ ದಾನ ಮಾಡಿದರು. ದಾನಿಗಳಿಂದ ರಕ್ತ ಸಂಗ್ರಹಿಸುವಲ್ಲಿ ಅಬುಧಾಬಿ ಬ್ಲಡ್ ಬ್ಯಾಂಕ್ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.
ಸಭಾ ಕಾರ್ಯಕ್ರಮ :
ಸಂಜೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಉಸ್ತಾದ್ ಶಹೀರ್ ಹುದವಿ, ಪ್ರಸಿದ್ದ ಉರ್ದು ಕವಿ ಅಲ್ಲಾಮ ಇಕ್ಬಾಲರ “ಮೌಜ್ ಹೆ ನಾಮ್ ಮೇರಾ, ಬೆಹರ್ ಹೆ ಪಾಯಬ್ ಮುಜೆ, ಹೋ ನಾ ಝಂಜೀರ್ ಕಭಿ ಹಲ್ಕಾ ಯೆ ಗರ್ದಬ್ ಮುಜೆ, ಮೌಜ್ ಹೆ ದರ್ಯಾಮೆ ಬೆದ್ರೂನೆ ದರಿಯಾ ಕುಚ್ ನಹೀ” ಎಂಬ ಶಾಯರಿ ಮೂಲಕ ಕಾರುಣ್ಯ ಸೇವೆಯನ್ನು ಬಣ್ಣಿಸಿದರು. ಬ್ಲಡ್ ಹೆಲ್ಪ್ಲೈನ್ ಕರ್ನಾಟಕದ “ನಾವು ರಕ್ತ ಸಂಬಂಧಿಗಳಾಗೋಣ” ಎಂಬ ಧ್ಯೇಯ ವಾಕ್ಯದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬ್ಯಾರೀಸ್ ವೆಲ್ಫೇರ್ ಅಸೋಷಿಯೇಶನ್ ಅಬುಧಾಬಿ ಇದರ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ, “ಕರ್ಮ ಭೂಮಿಯಲ್ಲಿ ಸೇವೆಗೈಯ್ಯಲು ಅವಕಾಶ ಮಾಡಿ ಕೊಟ್ಟಂತಹ ಆಡಳಿತಾಧಿಕಾರಿ ಶೇಕ್ ಮುಹಮ್ಮದ್ ಬಿನ್ ಝಾಯೆದ್ ಅವರಿಗೆ ಕೃತಜ್ಞತೆ ಹೇಳುತ್ತಾ ಸಂಸ್ಥೆಯು ಹಮ್ಮಿಕೊಂಡತಹ ರಕ್ತದಾನವನ್ನು ಪ್ರಶಂಸಿಸಿ, ದಾನಗಳಲ್ಲೇ ಶ್ರೇಷ್ಠವಾದ ರಕ್ತದಾನ ಮಾಡುವುದು ಮತ್ತು ಅದಕ್ಕಾಗಿ ಪರಿಶ್ರಮಿಸುವ ಕಾರ್ಯಕರ್ತರ ಸೇವೆಯನ್ನು ಅಭಿನಂದಿಸಿದರು.
ಅಬುಧಾಬಿ ಸುನ್ನಿ ಸೆಂಟರ್ ಅಧ್ಯಕ್ಷ ಅಸ್ಸಯ್ಯದ್ ಅಬ್ದಲ್ ರಹ್ಮಾನ್ ತಂಙಳ್ ಪ್ರಾಸ್ತವಿಕ ಮಾತುಗಳನ್ನಾಡಿ, ‘ತನ್ನ ಸ್ವ ಶರೀರದಿಂದ ನೀಡುವ ದಾನವಾದ ರಕ್ತದಾನವನ್ನು ಮಾಡುತ್ತಿರುವ ನಿಮ್ಮ ಈ ಉತ್ತಮವಾದ ಕಾರುಣ್ಯ ಸೇವೆಯನ್ನು ಸೃಷ್ಟಿಕರ್ತನು ಸ್ವೀಕರಿಸಲಿ’ ಎಂದರು.
ಬ್ಲಡ್ ಹೆಲ್ಪ್ಲೈನ್ ಕರ್ನಾಟಕದ ವ್ಯವಸ್ಥಾಪಕರಾದ ಸಿರಾಜುದ್ದೀನ್ ಪರ್ಲಡ್ಕ ಹಾಗೂ ಎಸ್.ಕೆ.ಎಸ್.ಎಸ್.ಎಫ್ ಅಬುಧಾಬಿ ಕರ್ನಾಟಕದ ಗೌರವಾಧ್ಯಕ್ಷರಾದ ಹನೀಫ್ ಅರಿಯಮೂಲೆ ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಹಿರಿಯ ನೇತಾರ ಮೊಯ್ದೀನ್ ಕುಟ್ಟಿ ಹಾಜಿ ದಿಬ್ಬ, ಅನಿವಾಸಿ ಉದ್ಯಮಿ ಒಮೇಗಾ ಗ್ರೂಪ್ ಆಫ್ ಕಂಪನೀಸ್ ಮಾಲಕ ಮುಹಮ್ಮದ್ ಹಾಜಿ, ಅಯಾನ್ ರಿಯಲ್ ಎಸ್ಟೇಟ್ MD ಅನ್ಸಾರ್ ಬೆಳ್ಳಾರೆ ಭಾಗವಹಿಸಿ ಶುಭಹಾರೈಸಿದರು.
ಶಿಬಿರದಲ್ಲಿ ಬ್ಲಡ್ ಹೆಲ್ಪ್ಲೈನ್ ಕರ್ನಾಟಕದ ಕಾರ್ಯ ನಿರ್ವಾಹಕ ಮೆಹತಾಬ್ ಕೈಕಂಬ, ಯಾಕೂಬ್ ಫೈರೋಝ್, ಎಸ್.ಕೆ.ಎಸ್.ಎಸ್.ಎಫ್ ಅಬುಧಾಬಿ ಕರ್ನಾಟಕದ ಪ್ರಮುಖರಾದ ಶಾಫಿ ಹಾಜಿ ಪೆರುವಾಯಿ, ಅಬೂಬಕ್ಕರ್ ಸಕಲೇಶಪುರ ಮತ್ತು ದಾರುಲ್ ಹಸನಿಯ್ಯ ಅಬುಧಾಬಿ ಸಮಿತಿ ಅಧ್ಯಕ್ಷ ಶಾಕಿರ್ ಕೂರ್ನಡ್ಕ, ರಕ್ತದಾನ ಶಿಬಿರದ ಉಸ್ತುವಾರಿಗಳಾದ ಹಮೀದ್ ಸವಣೂರು, ಹಂಝ ನಾಳ, ತಸ್ಲೀಮ್, SKSSF ಕಾರ್ಯಕರ್ತರಾದ ಹಿದಾಯತ್ ರಹ್ಮಾನ್ ಮರ್ವೆಲ್, ತ್ವಾಹ ಉಪ್ಪಿನಂಗಡಿ, ಜೌಹರ್ ಕನ್ನಡಿಕಟ್ಟೆ, ಹಫೀಝ್, ಶಾಫಿ ಕಿನ್ಯಾ, ಸಫ್ವಾನ್ ಮತ್ತು ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.
ಇದನ್ನೂ ಓದಿ : ಅರ್ಜುನ್ ಮನೆಯವರಿಗೆ ವಿಶ್ವಾಸ ಮೂಡಿಸಿದ ಈಶ್ವರ್ ಮಲ್ಪೆ..!
ಯಹ್ಯಾ ಕೊಡ್ಲಿಪೇಟೆ ಸ್ವಾಗತಿಸಿದರು. SKSSF ಅಬುಧಾಬಿ ಕರ್ನಾಟಕ ಸಮಿತಿಯ ಉಪಾಧ್ಯಕ್ಷ ಹಾಫಿಳ್ ಝೈನ್ ಸಖಾಫಿ ಕಾರ್ಯಕ್ರಮ ನಿರೂಪಿಸಿದರು. ಹಸನ್ ದಾರಿಮಿ ಉಸ್ತಾದ್ ವಂದಿಸಿದರು.
International news
ಖಾಸಗಿ ಬಾಹ್ಯಾಕಾಶ ನಡಿಗೆ ಯಶಸ್ವಿ; ಸುರಕ್ಷಿತವಾಗಿ ಭೂಮಿಗೆ ಮರಳಿದ ಗಗನಯಾತ್ರಿಗಳು
ಮಂಗಳೂರು / ಕೇಪ್ ಕ್ಯಾನವೆರೆಲ್ : ಇತ್ತೀಚೆಗೆ ಬಾಹ್ಯಕಾಯಕ್ಕೆ ತೆರಳಿದ್ದ ಗಗನಯಾತ್ರಿಗಳು ಸುರಕ್ಷಿತವಾಗಿ ಭಾನುವಾರ(ಸೆ.15) ಸಂಜೆ ಭೂಮಿಗೆ ಬಂದಿಳಿದಿದ್ದಾರೆ. ಸ್ಪೇಸ್ ಎಕ್ಸ್ ಸಹಯೋಗದೊಂದಿಗೆ ಈ ಬಾಹ್ಯಾಕಾಶ ಯಾತ್ರೆ ಕೈಗೊಳ್ಳಲಾಗಿತ್ತು.
ಇದು ಪ್ರಪಂಚದ ಮೊದಲ ಖಾಸಗಿ ಬಾಹ್ಯಾಕಾಶ ನಡಿಗೆ ಕಾರ್ಯಕ್ರಮವಾಗಿತ್ತು. ಇದರಲ್ಲಿ ಇಬ್ಬರು ನಾಸಾ ಪೈಲಟ್ ಗಳು ಸೇರಿ ಒಬ್ಬ ಸ್ಪೇಸ್ ಎಕ್ಸ್ ಉದ್ಯೋಗಿ ಹಾಗೂ ಬಿಲಿಯನೇರ್ ಜೇರೆಡ್ ಐಸಾಕ್ ಮನ್ ಇದ್ದರು.
ಇವರನ್ನುಹೊತ್ತಿದ್ದ ನೌಕೆ ಭಾನುವಾರ ಸಂಜೆ ಮೆಕ್ಸಿಕೊ ಕೊಲ್ಲಿಯಲ್ಲಿ ಯಶಸ್ವಿಯಾಗಿ ಇಳಿಯಿತು. ಬಿಲಿಯನೇರ್ ಜೇರೆಡ್ ಐಸಾಕ್ ಮನ್ ಬಾಹ್ಯಾಕಾಶ ನಡೆಸಿದ ಮೊದಲ ಖಾಸಗಿ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಖಾಸಗಿಯಾಗಿ ಆಯೋಜಿಸಲಾಗಿದ್ದ ‘ವಿಶ್ವದ ಮೊದಲ ಬಾಹ್ಯಾಕಾಶ ನಡಿಗೆ’ಯು ಯಶಸ್ವಿಯಾಗಿದೆ.
ಸಾಮಾನ್ಯವಾಗಿ ತರಬೇತಿ ಹೊಂದಿದ ಗಗನಯಾತ್ರಿಗಳನ್ನು ಮಾತ್ರವೇ ಬಾಹ್ಯಾಕಾಶಕ್ಕೆ ಕಳುಹಿಸಲಾಗುತ್ತದೆ. ಆದರೆ, ಅವರ ಹೊರತಾಗಿ ಸಾಮಾನ್ಯರೂ ಬಾಹ್ಯಾಕಾಶಕ್ಕೆ ಹೋಗಿರುವುದು ಅಪರೂಪದ ಘಟನೆ.
ಇದನ್ನೂ ಓದಿ : ವಾರ ಕಳೆದ್ರೂ ವೈರಲ್ ಫೀವರ್ ಗುಣ ಆಗ್ತಿಲ್ವಾ? ಈ ಮನೆಮದ್ದು ಪ್ರಯತ್ನಿಸಿ, ಜ್ವರದೊಂದಿಗೆ ಮೈಕೈನೋವು ಮಾಯವಾಗುತ್ತೆ
ಐಸಾಕ್ ಮನ್ ಕುರಿತು :
ಭೂಮಿಯಿಂದ 740 ಕಿ.ಮೀ ದೂರದ ಕಕ್ಷೆಯಲ್ಲಿ ‘ಬಾಹ್ಯಾಕಾಶ ನಡಿಗೆ’ ಯಶಸ್ವಿಯಾಗಿ ನಡೆಯಿತು. ಬಾಹ್ಯಾಕಾಶ ನಡಿಗೆ ಗುರುತಿಸಲಾಗಿದ್ದ ಅನುಕೂಲಕರ ಸ್ಥಳದಲ್ಲಿ ನೌಕೆಯು ನಿಂತಿತು. ಇದರಿಂದ ಹೊರಬಂದ ಐಸಾಕ್ ಮನ್ ಬಾಹ್ಯಾಕಾಶ ನಡಿಗೆಯನ್ನು ಸಂಭ್ರಮಿಸಿದ್ದರು. 41 ವರ್ಷದ ಐಸಾಕ್ ಮನ್ ಅವರು ‘ಶಿಫ್ಟ್ 4’ ಎಂಬ ಕ್ರೆಡಿಟ್ ಕಾರ್ಡ್ ಪ್ರೊಸೆಸಿಂಗ್ ಸಂಸ್ಥೆಯ ಸಂಸ್ಥಾಪಕ ಹಾಗೂ ಸಿಇಒ. ಇದುವರೆಗೆ 12 ದೇಶಗಳ ಸುಮಾರು 263 ಜನರು ಬಾಹ್ಯಾಕಾಶ ನಡಿಗೆಯಲ್ಲಿ ಭಾಗವಹಿಸಿದ್ದಾರೆ. 1965ರಲ್ಲಿ ರಷ್ಯಾದ ಅಲೆಕ್ಸಿ ಲಿಯೋನೊವ್ ಮೊದಲ ಬಾರಿಗೆ ಬಾಹ್ಯಾಕಾಶ ನಡಿಗೆ ಕೈಗೊಂಡಿದ್ದರು
International news
ಚಿಟ್ಟೆಗಳ ಕಳ್ಳಸಾಗಣಿಕೆಗೆ ಯತ್ನಿಸಿದ ತಂದೆ-ಮಗನ ಬಂಧನ
ಮಂಗಳೂರು/: ಸಾಮಾನ್ಯವಾಗಿ ಬೆಲೆ ಬಾಳುವ ವಸ್ತುಗಳನ್ನು ಕಳ್ಳ ಸಾಗಣೆ ಮಾಡಲಾಗುತ್ತದೆ. ಪ್ರಾಣಿಗಳ ವಿಚಾರ ನೋಡೋದಾದರೆ ಕೆಲವರು ಸಾಕು ಪ್ರಾಣಿಗಳಿಗೂ ಕನ್ನ ಹಾಕುವವರಿದ್ದಾರೆ. ಅದರ ಹೊರತಾಗಿ ಗಂಭೀರ ಪ್ರಕರಣವಾದ ಇರ್ತಲೆ ಹಾವು ಸಾಗಾಟ, ನಕ್ಷತ್ರ ಆಮೆ ಸಾಗಾಟ, ಅಂಬರ್ ಗ್ರೀಸ್ ಸಾಗಾಟ ಮಾಡಿ ತಗಲಾಕ್ಕೊಂಡವರಿದ್ದಾರೆ. ಆದರೆ, ಇಲ್ಲಿ ಮಾತ್ರ ವಿಚಿತ್ರ ಘಟನೆ ನಡೆದಿದೆ.
ತಂದೆ, ಮಗ ಸೇರಿಕೊಂಡು ಹಲವಾರು ಚಿಟ್ಟೆ ಮತ್ತು ಕೀಟಗಳನ್ನು ಹಿಡಿದು ಕಳ್ಳ ಸಾಗಾಣಿಕೆಗೆ ಯತ್ನಿಸಿದ್ದಾರೆ. ಚಿಟ್ಟೆಗಳನ್ನು ಕಳವು ಮಾಡುವಾಗ ಈ ಇಬ್ಬರೂ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಅಂದಹಾಗೆ ಈ ಘಟನೆ ನಡೆದಿರೋದು ಶ್ರೀಲಂಕಾದಲ್ಲಿ. ಇಟಲಿಯಲ್ಲಿ ವೃತ್ತಿಯಲ್ಲಿ ವೈದ್ಯ ಹಾಗೂ ಮೊಡೆನಾ ಸಿಟಿಯ ಕೀಟಶಾಸ್ತ್ರ ಸಂಘದ ಸದಸ್ಯ ಲುಯಿಗಿ ಫೆರಾರಿ (68) ಮತ್ತು ಆತನ ಮಗ ಮಟ್ಟಿಯಾ ಫೆರಾರಿ (28) ಬಂಧಿತ ಆರೋಪಿಗಳು.
ಇವರ ಈ ಕೃ*ತ್ಯಕ್ಕೆ ನ್ಯಾಯಾಲಯ ಬರೋಬ್ಬರಿ $200000 ಡಾಲರ್ ಅಂದ್ರೆ ಸುಮಾರು 1.62 ಕೋಟಿ ರೂ. ದಂಡ ವಿಧಿಸಿದೆ. ನಿಗದಿತ ಸಮಯದೊಳಗೆ ದಂಡ ಪಾವತಿಸದಿದ್ದರೆ, 2 ವರ್ಷಗಳ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಆದೇಶಿಸಿದೆ.
ರಾಸಾಯನಿಕ ಬಳಸಿ ಚಿಟ್ಟೆ ಹಿಡಿಯುತ್ತಿದ್ದ ಆರೋಪಿಗಳು :
ಇಟಲಿಯಿಂದ ಶ್ರೀಲಂಕಾಗೆ ಪ್ರವಾಸ ಬಂದಿದ್ದ ತಂದೆ – ಮಗ ಅಲ್ಲಿಂದ ಚಿಟ್ಟೆಗಳನ್ನು ಕಳ್ಳಸಾಗಣಿಕೆ ಮಾಡಲು ಯತ್ನಿಸಿದ್ದಾರೆ. ಮೇಣ ಮತ್ತು ಮತ್ತಿತರ ರಾಸಾಯನಿಕಗಳನ್ನು ಬಳಸಿ ಶ್ರೀಲಂಕಾದ ರಾಷ್ಟ್ರೀಯ ಉದ್ಯಾನವನದಲ್ಲಿ ಅಕ್ರಮವಾಗಿ ಚಿಟ್ಟೆಗಳನ್ನು ಹಿಡಿಯುತ್ತಿದ್ದರು. ಈ ಸಂದರ್ಭದಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಇವರನ್ನು ಪೊಲೀಸರು ತಕ್ಷಣ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಮಗುವಿನ ಚಿಕಿತ್ಸೆಗೆ ಆಸ್ಪತ್ರೆಗೆ ಬಂದಿದ್ದ ಮಹಿಳೆಯ ಮೇಲೆ ದೌರ್ಜನ್ಯ; ಬಟ್ಟೆ ಬಿಚ್ಚಿಸಿ ವೀಡಿಯೋ ಮಾಡಿದ ಕಿರಾತಕ
ಇವರ ಬಳಿ ಪತ್ತೆಯಾದ ಸಾವಿರಾರು ಅಪರೂಪದ ಕೀಟಗಳು ಮತ್ತು 92 ಬಗೆಯ ಅಪರೂಪದ ಜಾತಿಯ ಚಿಟ್ಟೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರಲ್ಲಿ ಹಲವು ಅಪರೂಪದ ಜಾತಿಯ ಕೀಟಗಳು ಸಾ*ವನ್ನಪ್ಪಿವೆ. ವನ್ಯಜೀವಿ ಕಾಯ್ದೆಯಡಿ ಗಂಭೀರ ಸೆಕ್ಷನ್ಗಳ ಅಡಿಯಲ್ಲಿ ತಂದೆ ಮಗನ ವಿರುದ್ಧ ಎಫ್.ಐ.ಆರ್ ದಾಖಲಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
dehali
Paralympics 2024: 29 ಪದಕಗಳೊಂದಿಗೆ ದಾಖಲೆ ಬರೆದ ಭಾರತ
Paralympics 2024: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತ ಅದ್ಭುತ ಸಾಧನೆಯೊಂದಿಗೆ ಪಯಣ ಮುಗಿಸಿದೆ. ಕ್ರೀಡಾಕೂಟದ ಕೊನೆಯ ದಿನವಾದ ಇಂದು ಭಾರತ ದಾಖಲೆಯ 29 ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇವುಗಳಲ್ಲಿ ಏಳು ಚಿನ್ನ, ಒಂಬತ್ತು ಬೆಳ್ಳಿ ಮತ್ತು 13 ಕಂಚು ಸೇರಿವೆ.
ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲಿ ಭಾರತ ಇಷ್ಟು ಸಂಖ್ಯೆಯ ಪದಕಗಳನ್ನು ಗೆದ್ದಿದ್ದು, ಇದೇ ಮೊದಲು. ಇದಕ್ಕೂ ಮೊದಲು ಟೊಕಿಯೋ ಪ್ಯಾರಾಲಿಂಪಿಕ್ನಲ್ಲಿ 19 ಪದಕಗಳನ್ನು ಗೆದ್ದಿದ್ದು, ಭಾರತದ ಅತ್ಯುತ್ತಮ ಪ್ರದರ್ಶನವಾಗಿತ್ತು. ಇದರೊಂದಿಗೆ ಭಾರತ ಪದಕ ಪಟ್ಟಿಯಲ್ಲಿ 18ನೇ ಸ್ಥಾನದಲ್ಲಿದೆ.
- DAKSHINA KANNADA7 days ago
ಫುಟ್ ಬೋರ್ಡ್ನಲ್ಲಿ ನೇತಾಡಿ ಪ್ರಯಾಣಿಸಿದ ವಿದ್ಯಾರ್ಥಿಗಳು; ಬಸ್ ಸೀಝ್
- LATEST NEWS4 days ago
ಆಪಲ್ ಮೊಬೈಲ್ ವಿರುದ್ಧ ಗ್ರಾಹಕರ ಪ್ರತಿಭಟನೆ
- International news3 days ago
ಖಾಸಗಿ ಬಾಹ್ಯಾಕಾಶ ನಡಿಗೆ ಯಶಸ್ವಿ; ಸುರಕ್ಷಿತವಾಗಿ ಭೂಮಿಗೆ ಮರಳಿದ ಗಗನಯಾತ್ರಿಗಳು
- BELTHANGADY6 days ago
ಬೆಳ್ತಂಗಡಿ: ತಂದೆ ತೀರ್ಪುಗಾರ… ಮಗಳಿಗೆ ಪ್ರಥಮ ಸ್ಥಾನ