DAKSHINA KANNADA
ಸ್ನೇಕ್ ಪ್ಲಾಂಟ್.. ಇದು ನಿಮ್ಮ ಮನೆಯಲ್ಲಿದೆಯಾ..? ಇದ್ರೆ ಏನಾಗೊತ್ತೆ ಗೊತ್ತಾ…?
ಸ್ನೇಕ್ ಪ್ಲಾಂಟ್… ಇಂತಹ ಒಂದು ಗಿಡದ ಬಗ್ಗೆ ಬಹುತೇಕ ಜನರಿಗೆ ಗೊತ್ತಿಲ್ಲದೇ ಇದ್ರೂ ಹೆಚ್ಚಿನ ಮನೆಯಲ್ಲಿ ಇದನ್ನ ಅಲಂಕಾರಿಕ ಗಿಡವಾಗಿ ಬೆಳೆಸ್ತಾ ಇದ್ದಾರೆ. ಹಾಗಂತ ಇದು ಹಾವುಗಳಿಂದ ರಕ್ಷಣೆ ಪಡೆಯಲಾಗಲಿ, ಹಾವುಗಳಿಗೆ ರಕ್ಷಣೆ ನೀಡುವುದಕ್ಕಾಗಿ ಈ ಗಿಡ ಉಪಯೋಗಕ್ಕೆ ಬರೋದಿಲ್ಲ. ಆದ್ರೆ ಇತ್ತೀಚಿನ ದಿನಗಳಲ್ಲಿ ಜನರು ಹೆಚ್ಚಾಗಿ ತಮ್ಮ ಮನೆಯಲ್ಲಿ ಈ ಸ್ನೇಕ್ ಪ್ಲಾಂಟ್ ಬೆಳೆಸಲು ಆರಂಭಿಸಿದ್ದಾರೆ.
ಮನೆಯಲ್ಲಿ ತೋಟಗಾರಿಕೆ ಟಿಪ್ಸ್ಗಳನ್ನು ಹೆಚ್ಚಿನ ಜನರು ಇಷ್ಟಪಡುತ್ತಾರೆ. ಕೆಲವರು ಮನೆಯ ಅಲಂಕಾರಕ್ಕಾಗಿ ಮಾತ್ರ ಒಳಾಂಗಣ ಸಸ್ಯಗಳನ್ನು ನೆಡುತ್ತಾರೆ. ಇನ್ನು ಕೆಲವರು ವಾಸ್ತು ಸಲಹೆಗಳು ಮತ್ತು ಅವರ ಆರೋಗ್ಯದ ದೃಷ್ಟಿಯಿಂದ ಕೆಲವೊಂದು ಗಿಡಗಳನ್ನು ನೆಡುತ್ತಾರೆ. ಸ್ನೇಕ್ ಪ್ಲಾಂಟ್ ಕೂಡ ಅಂತಹ ಒಂದು ಆರೋಗ್ಯಕರ ವಾತಾವರಣ ನೀಡಬಲ್ಲ ಒಂದು ಗಿಡ.
ಮನೆ ಮುಂದೆ ತುಳಸಿ ಗಿಡ ನೆಟ್ಟರೆ ಅದು ಶುದ್ಧ ಆಮ್ಲಜನಕ ನೀಡುತ್ತದೆ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಆದ್ರೆ ಅದರಷ್ಟೇ ಶುದ್ದ ಆಮ್ಲಜನಕವನ್ನು ಪಡೆಯಲು ಜನ ಈ ಸ್ನೇಕ್ ಪ್ಲಾಂಟ್ ಬೆಳೆಯುತ್ತಿದ್ದಾರೆ. ಇದರ ಎಲೆಗಳು ಹಸಿರು ಬಣ್ಣದಲ್ಲಿ ಮತ್ತು ಕತ್ತಿ ಆಕಾರದಲ್ಲಿರುತ್ತವೆ. ನೋಡಲು ಇದು ಕೃತಕ ಸಸ್ಯದಂತೆ ಕಾಣುತ್ತದೆ. ಸದ್ಯ ಉತ್ತರ ಪ್ರದೇಶದ ಮೊರಾದಾಬಾದ್ನಲ್ಲಿ ಈ ಸ್ನೇಕ್ ಪ್ಲಾಂಟ್ ಹೆಚ್ಚಾಗಿ ಮಾರಾಟವಾಗುತ್ತಿದೆ. ಬೇಸಿಗೆ ಕಾಲದಲ್ಲಿ ಜನರು ಈ ಗಿಡಗಳನ್ನು ಹೆಚ್ಚಾಗಿ ಖರೀದಿ ಮಾಡುತ್ತಿದ್ದಾರೆ. ಯಾಕೆಂದರೆ ಸುತ್ತಮುತ್ತಲಿನ ಪರಿಸರವನ್ನು ಉತ್ತಮವಾಗಿಡಲು ಹಾಗೂ ಒಳ್ಳೆಯ ಆಮ್ಲಜನಕವನ್ನು ಪಡೆಯಲು ಇದು ಬಹಳಷ್ಟು ಸಹಕಾರಿಯಾಗಿದೆ.
ಸ್ನೇಕ್ ಪ್ಲಾಂಟ್ನಿಂದ ಪರಿಸರದ ಮೇಲಾಗುವ ಪರಿಣಾಮ
ಒಳಾಂಗಣ ಗಾಳಿಯನ್ನು ಅಂದರೆ ಮನೆಯ ಒಳಗಿನ ಗಾಳಿಯನ್ನು ಫಿಲ್ಟರ್ ಮಾಡಲು ಸ್ನೇಕ್ ಪ್ಲಾಂಟ್ ಸಹಾಯ ಮಾಡುತ್ತದೆ. ರಾತ್ರಿಯಲ್ಲಿ ಇಂಗಾಲದ ಡೈಆಕ್ಸೈಡ್ ಅನ್ನು ಆಮ್ಲಜನಕವನ್ನಾಗಿ ಪರಿವರ್ತಿಸುವ ಕೆಲವೇ ಸಸ್ಯಗಳಲ್ಲಿ ಇದೂ ಕೂಡ ಒಂದು. ಮಲಗುವ ಕೋಣೆ ಅಲಂಕಾರಕ್ಕೆ ಇದು ಸೂಕ್ತವಾದ ಸಸ್ಯವೆಂದು ಪರಿಗಣಿಸಲಾಗಿದೆ. ಇದು ಅಶುದ್ಧ ಗಾಳಿಯನ್ನು ತೆಗೆದು ಹಾಕಿ ಶುದ್ದ ಗಾಳಿಯನ್ನು ನೀಡುತ್ತದೆ.
ವಾಸ್ತು ಗಿಡವಾಗಿಯೂ ಈ ಸ್ನೇಕ್ ಪ್ಲಾಂಟ್ ಬಳಕೆ
ಈ ಗಿಡಕ್ಕೆ ವಾಸ್ತು ಶಾಸ್ತ್ರದಲ್ಲಿ ವಿಶೇಷವಾದ ಮಹತ್ವ ನೀಡಲಾಗಿದ್ದು, ಇದನ್ನು ಮನೆಯ ನಿರ್ಧಿಷ್ಟ ಸ್ಥಳದಲ್ಲಿ ಇಟ್ಟರೆ ಅದೃಷ್ಟವೂ ಖುಲಾಯಿಸುತ್ತದೆ ಅನ್ನೋ ನಂಬಿಕೆ ಉತ್ತರ ಭಾರತೀಯರಲ್ಲಿ ಇದೆ. ಮನೆಯಲ್ಲಿನ ನೆಗಟಿವ್ ಎನರ್ಜಿಯನ್ನು ಹೊರ ಹಾಕಿ ಪಾಸಿಟಿವ್ ಎನರ್ಜಿ ನೀಡುತ್ತದೆ ಅನ್ನೋ ನಂಬಿಕೆ ಕೂಡಾ ಇದೆ. ನಮ್ಮ ಸುತ್ತಮುತ್ತ ಈ ಗಿಡ ಸಾಕಷ್ಟು ಕಡೆಯಲ್ಲಿ ಕಂಡು ಬರುತ್ತದೆಯಾದ್ರೂ ಇದರ ವಿಶೇಷ ಗುಣ ಗೊತ್ತಿಲ್ಲದ ಕಾರಣ ಸದ್ಯ ಬೇಲಿ ಬದಿಯಲ್ಲಿ ಹೆಚ್ಚಾಗಿ ಕಂಡು ಬರುತ್ತದೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
DAKSHINA KANNADA
ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು
ಮಂಗಳೂರು: ಗುಜರಾತ್ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.
ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್ ಗಾರ್ಡ್ ತಂಡ ಹೆಲಿಕಾಪ್ಟರ್ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.
ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್ ಗಾರ್ಡ್ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್ ಗಾರ್ಡ್ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
DAKSHINA KANNADA
ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!
ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.
ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.
ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.
ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.
ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ