Connect with us

LATEST NEWS

ಪಂಪ್ ವೆಲ್ ಸಮೀಪದ ಮಸೀದಿಗೆ ಸೋಡಾ ಬಾಟಲ್ ಎಸೆದ ದುಷ್ಕರ್ಮಿಗಳು

Published

on

ಮಂಗಳೂರು : ಅಲ್ಪಸಂಖ್ಯಾತರ ಭವನಕ್ಕೆ ಕಲ್ಲು ತೂರಾಟದ ಘಟನೆ ಮಾಸುವ ಮುನ್ನವೇ ಮಂಗಳೂರಿನಲ್ಲಿ ಪಂಪ್‌ವೆಲ್‌‌ ಮಸೀದಿಗೆ ದುಷ್ಕರ್ಮಿಗಳು ಸೋಡಾ ಬಾಟಲ್‌‌ ಎಸೆದಿರುವ ಘಟನೆ ಇಂದು ಮುಂಜಾನೆ ಬೆಳಕಿಗೆ ಬಂದಿದೆ.

ಇಂದು ಬೆಳಿಗ್ಗೆ ನಗರದ ಪಂಪ್‌ವೆಲ್‌‌‌ನಲ್ಲಿರುವ ಮಸ್ಜಿದುತ್ತಖ್ವಾ ಮಸೀದಿ ಮೇಲೆ ಬಾಟಲ್ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಮಸೀದಿಯ ಕಾವಲುಗಾರನ ಕಣ್ಣ ತಪ್ಪಿಸಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಮಂಗಳೂರು ದಕ್ಷಿಣ ಉಪ ವಿಭಾಗ ಎಸಿಪಿ ಕೋದಂಡರಾಮ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

FILM

ಮತ್ತೆ ಡೀಪ್ ಫೇಕ್ ಗೆ ಬಲಿಯಾದ ಆಲಿಯಾ ಭಟ್; ನಟಿಯ ವೀಡಿಯೋ ನೋಡಿ ಫ್ಯಾನ್ಸ್ ಶಾಕ್!

Published

on

ಮಂಗಳೂರು/ ಮುಂಬೈ : ಸದ್ಯ ಡೀಪ್ ಫೇಕ್ ಹಾವಳಿ ಮುಗಿಯುವಂತೆ ಕಾಣುತ್ತಿಲ್ಲ. ಅನೇಕ ನಟ – ನಟಿಯರು ಡೀಪ್ ಫೇಕ್ ನಿಂದ ತೊಂದರೆ ಅನುಭವಿಸಿದ್ದಾರೆ. ಕತ್ರೀನಾ ಕೈಫ್, ರಶ್ಮಿಕಾ ಮಂದಣ್ಣ, ಕಾಜಲ್, ಅಲಿಯಾ ಭಟ್ ರ ಡೀಪ್ ಫೆಕ್ ವೀಡಿಯೋ ವೈರಲ್ ಆಗಿತ್ತು. ಕೇವಲ ನಟಿಯರದ್ದು ಮಾತ್ರವಲ್ಲ, ನಟರಾದ ಅಮೀರ್ ಖಾನ್, ಅಲ್ಲು ಅರ್ಜುನ್ ಚುನಾವಣಾ ಪ್ರಚಾರದ ಫೇಕ್ ವೀಡಿಯೋಗಳು ಸೃಷ್ಟಿಯಾಗಿದ್ದವು. ಈ ಬಗ್ಗೆ ಚಿತ್ರರಂಗದ ಅನೇಕರು ಧ್ವನಿ ಎತ್ತಿದ್ದರೂ ಕೂಡ. ಆದ್ರೆ, ಇಲ್ಲಿಗೆ ಮುಕ್ತಾಯವಾಗಿಲ್ಲ. ಇದೀಗ ಮತ್ತೆ ಡೀಪ್ ಫೇಕ್ ಹಾವಳಿ ಮುಂದುವರೆದಿದೆ.

 

ಮತ್ತೆ ಅಲಿಯಾ ಭಟ್ ಡೀಪ್ ಫೇಕ್ :

ಡೀಪ್ ಫೆಕ್ ಗೆ ಮತ್ತೆ ಅಲಿಯಾ ಭಟ್ ಬಲಿಯಾಗಿದ್ದಾರೆ. ಅಲಿಯಾ ಭಟ್ ಹೊಸ ಲುಕ್ ಕಂಡು ಅಭಿಮಾನಿಗಳು ಬೆರಗಾಗಿದ್ದಾರೆ. ಇದುವರೆಗೆ ಬೇರೆ ಯಾರು ಯಾರದೋ ವೀಡಿಯೋ ಗಳಿಗೆ ನಟಿಯರ ಮುಖವನ್ನು ಕೂರಿಸಿ ವೀಡಿಯೋ ಮಾಡಲಾಗುತ್ತಿತ್ತು. ಇದೀಗ ನಟಿಯೊಬ್ಬಳ ವೀಡಿಯೋಗೆ ನಟಿ ಮುಖವನ್ನು ಬಳಸಲಾಗಿದೆ. ಹೌದು, ನಟಿಯೊಬ್ಬಳ ಮುಖ ಎಡಿಟ್ ಮಾಡಿ ಅಲ್ಲಿ ಅಲಿಯಾ ಭಟ್ ಮುಖವನ್ನು ಬಳಸಲಾಗಿದೆ.

ಆ ನಟಿಯರು ಯಾರು?


ಇಷ್ಟರ ವರೆಗೆ ಡೀಪ್ ಫೇಕ್ ತಂತ್ರಜ್ಞಾನದಲ್ಲಿ ಬೇರೆಯವರ ದೇಹಕ್ಕೆ ಸೆಲೆಬ್ರಿಟಿಗಳ ಮುಖ ಜೋಡಿಸುವ ಕೆಲಸವನ್ನು ಮಾಡಲಾಗುತ್ತಿತ್ತು. ಈಗ ಬೇರೊಬ್ಬ ನಟಿಯ ವೀಡಿಯೋ ಬಳಸಿಕೊಂಡಿದ್ದಾರೆ. ಈ ಡೀಪ್ ಫೇಕ್ ವೀಡಿಯೋದ ಅಸಲಿ ವೀಡಿಯೋ ನಟಿ ವಾಮಿಕಾ ಅವರದ್ದು. ವಾಮಿಕ ಬಾಲಿವುಡ್ ನಟಿ. 2007 ರಿಂದ ಅವರು ಬಾಲಿವುಡ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಹಲವಾರು ಚಿತ್ರಗಳಲ್ಲಿ ನಟಿಸಿದ್ದರೂ, ಯಾವುದೂ ಆಕೆಗೆ ಹೆಸರು ಕೊಟ್ಟಿಲ್ಲ. ಈಗ ಡೀಪ್ ಫೇಕ್ ಪ್ರಕರಣದಿಂದ ಅವರು ಮುನ್ನೆಲೆಗೆ ಬಂದಿದ್ದಾರೆ.

ಇದನ್ನೂ ಓದಿ : ಮಲಯಾಳಂ ನಟಿ ‘ಕನಕಲತಾ’ ಇನ್ನಿಲ್ಲ

ನಟಿ ವಾಮಿಕಾ ವೀಡಿಯೋಗೆ ಅಲಿಯಾ ಭಟ್ ಫೇಸ್ :

ನಟಿ ವಾಮಿಕ ಕೆಲವು ದಿನಗಳ ಹಿಂದೆಯಷ್ಟೇ ವೀಡಿಯೋವೊಂದನ್ನು ಹಂಚಿಕೊಂಡಿದ್ದರು. ಈ ವೀಡಿಯೋದಲ್ಲಿ ಅವರು, ಕೆಂಪು ಸೀರೆಯುಟ್ಟು ಮಿಂಚಿದ್ದರು. ನೆಟ್ ಫ್ಲಿಕ್ಸ್ ಸರಣಿ ‘ಹೀರಾಮಂಡಿ’ ಸ್ಕ್ರೀನಿಂಗ್ ಗಾಗಿ ವಾಮಿಕಾ ಕೆಂಪು ಸೀರೆಯುಟ್ಟಿದ್ದರು.
ಇದೀಗ ಈ ವೀಡಿಯೋಗೆ ಅಲಿಯಾ ಭಟ್ ಮುಖ ಬಳಸಿ ವೈರಲ್ ಮಾಡಲಾಗಿದೆ.

ಆಲಿಯಾ ಅಭಿಮಾನಿಗಳು ಕಿಡಿ ಕಾರಿದ್ದಾರೆ. ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಹೇಗೆ ಸಾಧ್ಯ? ಆಲಿಯಾ ಮುಖ ನೀವು ಬಳಸಿರುವುದು ಕಾನೂನುಬದ್ಧವೇ? ಎಂದು ಪ್ರಶ್ನಿಸಿದ್ದಾರೆ. ಕೆಲವರು ಕಮೆಂಟ್ಸ್ ಬಾಕ್ಸ್ ನಲ್ಲಿ ಆಲಿಯಾ ಭಟ್ ಅವರನ್ನು ಟ್ಯಾಗ್ ಮಾಡಿದ್ದಾರೆ.

 

Continue Reading

DAKSHINA KANNADA

ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..! ರಕ್ತಸಿಕ್ತ ಸ್ಥಿತಿಯಲ್ಲಿದ್ದ ಶವ.!!

Published

on

ಮಂಗಳೂರು: ಹೆಸರಾಂತ ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ. ತಲಪಾಡಿಯಲ್ಲಿರುವ ಬಂಟವಾಳದ ಭಂಟರ ಭವನದ ಆವರಣದ ಕಂಪೌಂಡ್‌ ಒಳಗಡೆ ವ್ಯಕ್ತಿಯೋರ್ವನ ಮೃತದೇಹ ರಕ್ತಸಿಕ್ತವಾಗಿ ಇದ್ದ ರೀತಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಉಪ್ಪಿನಂಗಡಿ ವಳಾಲು ಮೂಲದ ನಿವಾಸಿ ಸಂತೋಷ್ ಅವರ ಮೃತದೇಹ ಎಂದು ಗುರುತಿಸಲಾಗಿದೆ.

bantwala death

ಬಂಟರ ಭವನದ ಹೊರಗಡೆ ಸಂತೋಷ್ ಗೆ ಸೇರಿದ್ದ ಬೈಕ್‌ ಪತ್ತೆಯಾಗಿದೆ. ಬೈಕ್ ನಿಲ್ಲಿಸಿ ಕಂಪೌಂಡ್ ಮೇಲೆ ಕುಳಿತು ಕೊಂಡಿದ್ದು ಈ ವೇಳೆ ಕುಸಿದು ಕೆಳಗೆ ಬಿದ್ದು ಈ ಘಟನೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಮುಂದೆ ಓದಿ.. ಧರ್ಮಸ್ಥಳ: ಸರಣಿ ಅಪ*ಘಾತ, 5 ವಾಹನಗಳಿಗೆ ಹಾನಿ

ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Continue Reading

BELTHANGADY

ಧರ್ಮಸ್ಥಳ: ಸರಣಿ ಅಪ*ಘಾತ, 5 ವಾಹನಗಳಿಗೆ ಹಾನಿ

Published

on

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಸರಣಿ ಅಪ*ಘಾತ ಸಂಭವಿಸಿದ್ದು ಹಲವು ವಾಹನಗಳು ಜಖಂಗೊಂಡಿವೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಸೋಮವಾರ 4ರ ಸುಮಾರಿಗೆ ನೇತ್ರಾವತಿಯಿಂದ ಧರ್ಮಸ್ಥಳಕ್ಕೆ ಬರುವ ರಸ್ತೆಯಲ್ಲಿ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿತು. ಅದರ ಹಿಂದೆ ಇದ್ದ ರಿಕ್ಷಾವೊಂದು ಅಪ*ಘಾತ ಸಂಭವಿಸಿದ ರಿಕ್ಷಾಕ್ಕೆ ತಾಗಿ ಜಖಂಗೊಂಡಿತು.

ವೇಗವಾಗಿ ಬರುತ್ತಿದ್ದ ಕಾರು ಮಗುಚಿ ಬಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆಯಿತು. ಅದರ ಹಿಂದಿನಿಂದ ಬರುತ್ತಿದ್ದ ಎರಡು ಕಾರುಗಳು ಒಂದರ ಹಿಂದೆ ಒಂದರಂತೆ ಡಿಕ್ಕಿ ಹೊಡೆದಿವೆ. ಹೀಗೆ ಒಟ್ಟು 2 ರಿಕ್ಷಾಗಳು ಹಾಗೂ 3 ಕಾರುಗಳು ಜಖಂಗೊಂಡಿವೆ. ರಿಕ್ಷಾ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಎಲ್ಲ ಕಾರುಗಳು ಜಖಂಗೊಂಡಿವೆ.

Continue Reading

LATEST NEWS

Trending