LATEST NEWS
ಬಿಜೆಪಿ ರಾಜ್ಯಾಧ್ಯಕ್ಷರ ರಾಜೀನಾಮೆ ಕೇಳಲು ನೀವು ಕೊಟ್ಟ ಭಿಕ್ಷೆ ಅಲ್ಲ: ಜಿಲ್ಲಾಧ್ಯಕ್ಷರ ಖಡಕ್ ಉತ್ತರ
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ರಾಜೀನಾಮೆ ಕೇಳಿದರೆ ಅದು ನೀವು ಕೊಟ್ಟಿರುವ ಭಿಕ್ಷೆ ಅಲ್ಲ. ಸೋಷಿಯಲ್ ಮೀಡಿಯಾದಲ್ಲಿ ಬರೆದ ಮಾತ್ರಕ್ಕೆ ಸಂಘಟನೆ ಒಡೆಯುವುದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಗರಂ ಆಗಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೆಲದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಅವಹೇಳನ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು ಸೋಷಿಯಲ್ ಮೀಡಿಯಾದಲ್ಲಿ ದುರ್ಬಲ ರಾಜಾಧ್ಯಕ್ಷ ಎಂದು ಹೇಳಿಕೆ ಕೊಟ್ಟ ಕೂಡಲೇ ಅವರು ದುರ್ಬಲವಾಗುವುದಿಲ್ಲ.
ರಾಜಾಧ್ಯಕ್ಷ ಹುದ್ದೆ ಸಂಘಟನೆ ಅವರಿಗೆ ಕೊಟ್ಟಿರುವ ಜವಾಬ್ದಾರಿ. ಇದೆಲ್ಲ ಯಾರು ಪೇಮೆಂಟ್ ಕೊಡುತ್ತಾರೆ ಅವರಿಗೆ ಬರೆಯುವ ಸಂಸ್ಥೆಗಳು.
ನೈಜ ಕಾರ್ಯಕರ್ತರು ಇದನ್ನು ಮಾಡಿಲ್ಲ ಎಂದರು.
ಕೆಲವರು ಸಂಘಟನೆಯಲ್ಲಿ ಪದವಿ ಅಥವ ಹುದ್ದೆ ಕೇಳಿ ಬರುತ್ತಾರೆ ಸಿಗದಿದ್ದಾಗ ಈ ರೀತಿ ಬರೆಯುತ್ತಾರೆ ಎಂದು ವಾಗ್ದಾಳಿ ನಡೆಸಿದ ಅವರು ಕೆಲವರು ಸೋಷಿಯಲ್ ಮೀಡಿಯಾದ ಮೂಲಕ ಎಂಪಿ, ಎಂಎಲ್ ಎ ಆಗಬಹುದು ಎಂದು ತಿಳಿದುಕೊಂಡಿದ್ದಾರೆ.
ಇದು ಮೂರ್ಖತನದ ಪರಮಾವಧಿ. ನಮ್ಮ ಸಂಸದರಿಂದ ಸಹಾಯ ಪಡೆದವರೇ ಸಂಸದರ ವಿರುದ್ಧ ಬರೆದಿದ್ದಾರೆ ಎಂದರು.
ರಾಜ್ಯಾಧ್ಯಕ್ಷರ ಬಗ್ಗೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸಹ ಶಹಬ್ಬಾಸ್ ಗಿರಿ ವ್ಯಕ್ತಪಡಿಸಿದ್ದಾರೆ. ಅವರು ಚುನಾವಣೆ ಎದುರಿಸಿ ಪಕ್ಷವನ್ನು ಗೆಲ್ಲಿಸಿ ಬಲಪಡಿಸಿದ್ದಾರೆ.
ಇದರ ಹಿಂದೆ ಅತೃಪ್ತ ಆತ್ಮ ಹಾಗೂ ಕಾಣದ ಕೈಗಳು ಕೆಲಸ ಮಾಡುತ್ತಿವೆ. ಬಿಜೆಪಿ ಹಾಗೂ ಸಂಘಟನೆ ನಡುವೆ ಬಿರುಕು ಮೂಡಿಸಿ ಬಿಜೆಪಿಯ ಭದ್ರಕೋಟೆ ದ.ಕ ಜಿಲ್ಲೆಯನ್ನು ಒಡೆಯಬೇಕು ಎನ್ನುವ ಹುನ್ನಾರ ನಡೆಯುತ್ತಿದೆ.
ಸೋಷಿಯಲ್ ಮೀಡಿಯಾ ಮೂಲಕ ಹಿಂದೂ ಸಂಘಟನೆ ಕಟ್ಟಲು ಸಾಧ್ಯವಿಲ್ಲ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದ ಮಾತ್ರಕ್ಕೆ ಸಂಘಟನೆ ಒಡೆಯುವುದಿಲ್ಲ ಎಂದರು.
ರಾಜ್ಯಾಧ್ಯಕ್ಷ ಮೂಲತಃ ಹಿಂದೂ ಸಂಘಟನೆಯಿಂದ ಬಂದವರು, ಈಗ ತೆಗಳಿದವರು ಯಾಕೆ ಈ ಹಿಂದೆ ಹೊಗಳಿದರು ಎಂದು ಪ್ರಶ್ನಿಸಿದ ಅವರು ಇವತ್ತು ರಾಜಕಾರಣದ ವ್ಯವಸ್ಥೆಯಲ್ಲಿ ಹಲವರು ರಾಜಕೀಯ ಪಕ್ಷಗಳಿಗೆ ಸಲಹೆಗಾರರಾಗಿದ್ದಾರೆ ಇಂದು ಬಿಜೆಪಿಗೆ, ನಾಳೆ ಕಾಂಗ್ರೆಸ್ಗೆ ನಾಡಿದ್ದು ಮತ್ತೊಂದು ಪಕ್ಷಕ್ಕೆ ಸಲಹೆಗಾರರಾಗ್ತಾರೆ. ಚುನಾವಣಾ ಸಮಯದಲ್ಲಿ ಕೆಲವು ಸಂಸ್ಥೆಗಳಿದ್ದವು, ಅವರು ಯಾರು ಪೇಮೆಂಟ್ ಕೊಡುತ್ತಾರೆ ಅವರಿಗೆ ಬರೆಯುತ್ತಾರೆ ಅಂತವರೇ ಬರೆದಿದ್ದಾರೆ ಎಂದ ಅವರು ನೈಜ ಕಾರ್ಯಕರ್ತರು ಈ ರೀತಿ ಬರೆಯುವುದಿಲ್ಲ ಎಂದರು.
ಈ ವೇಳೆ ಕಸ್ತೂರಿ ಪಂಜ, ರಾಧಾಕೃಷ್ಣ, ಸುಧೀರ್ ಕುಮಾರ್, ರವಿಶಂಕರ್ ಮಿಜಾರು, ಸುಧೀರ್ ಕುಮಾರ್ ಶೆಟ್ಟಿ ಇದ್ದರು.
DAKSHINA KANNADA
ಹೊತ್ತಿ ಉರಿದು ಭಸ್ಮ*ವಾದ ಸ್ವೀಟ್ ಕಾರ್ನ್ ಸ್ಟಾಲ್..!! ಓಡಿ ಜೀವ ಉಳಿಸಿಕೊಂಡ ಸ್ಟಾಲ್ ಮಾಲೀಕ, ಗ್ರಾಹಕರು
ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿ*ಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ.
ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ. ತಕ್ಷಣ ಅಂಗಡಿ ಮಾಲೀಕ ಹಾಗೂ ಸ್ವೀಟ್ ಕಾರ್ನ ತಿನ್ನಲು ಬಂದಿದ್ದ ಗ್ರಾಹಕರು ಓಡಿ ತಪ್ಪಿಸಿಕೊಂಡಿದ್ದಾರೆ. ಸ್ಥಳೀಯರು ತಕ್ಷಣ ಮರಳು ಹಾಗೂ ನೀರನ್ನ ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಸ್ಟಾಲ್ ಉರಿದು ಭಸ್ಮವಾಗಿ ಹೋಗಿದೆ.
Read More..; ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ
LATEST NEWS
ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ
ಬೆಳಗಾವಿ: 25 ರಿಂದ 30 ವರ್ಷದ ಯುವತಿಯೊಬ್ಬಳನ್ನು ಬರ್ಬರವಾಗಿ ಹ*ತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ನಡೆದಿದೆ. ಇಲ್ಲಿನ ಗ್ರಾಮೀಣ ಪೊಲೀಸ್ ಠಾಣ ವ್ಯಾಪ್ತಿಯ ಮಮದಾಪುರ ಗ್ರಾಮದಲ್ಲಿ ಈ ಕೃತ್ಯ ನಡೆದಿದ್ದು ಕೊ*ಲೆ ಮಾಡಿದವರಾರು? ಹ*ತ್ಯೆ ಆದವಳು ಯಾರು? ಎಂಬುದಾಗಲಿ ಗೊತ್ತಾಗಿಲ್ಲ. ನಿನ್ನೆ(ಎ.18) ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಾಲುವೆ ಪಕ್ಕದಲ್ಲಿ ಹೊಗೆಯಾಡುತ್ತಿರುವುದನ್ನು ಜನರು ಗಮನಿಸಿದ್ದಾರೆ. ಬಿಸಿಲಿನ ತಾಪಕ್ಕೆ ಹುಲ್ಲು ಇರುವ ಜಾಗಕ್ಕೆ ಬೆಂಕಿ ಬಿದ್ದಿರಬಹುದು ಎಂದು ಕೆಲವರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಯುವತಿಯ ಮೃತದೇಹ ಕಂಡು ಬಂದಿದೆ.
ಯುವತಿಯ ಕತ್ತು ಕೊಯ್ದು ಬಳಿಕ ಆಕೆಯ ಗುರುತು ಪತ್ತೆಯಾಗದಂತೆ ಸುಟ್ಟು ಹಾಕಿರಬೇಕು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ವಿಧಿ ವಿಜ್ಞಾನ ತಂಡ ಹಾಗೂ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಯುವತಿಯನ್ನು ಬೇರೆಡೆ ಕೊಲೆ ಮಾಡಿ ಇಲ್ಲಿ ತಂದು ಸುಟ್ಟು ಹಾಕುವ ಪ್ರಯತ್ನ ನಡೆದಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಆದರೆ ಈ ಯುವತಿ ಯಾರು ಹಾಗೂ ಯಾರು ಕೊಲೆ ಮಾಡಿದ್ದಾರೆ ಅನ್ನೋದು ತನಿಖೆಯಿಂದ ಗೊತ್ತಾಗಬೇಕಾಗಿದೆ.
Read More..: ಉಡುಪಿಯಲ್ಲಿ ಭೀಕರ ಅಪಘಾ*ತ; ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವು
LATEST NEWS
ಉಡುಪಿಯಲ್ಲಿ ಭೀಕರ ಅಪಘಾ*ತ; ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವು
ಉಡುಪಿ : ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವನ್ನಪ್ಪಿರುವ ಘಟನೆ ಉಡುಪಿಯ ಹೇರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಕೃಷ್ಣ ಗಾಣಿಗ ಮೃ*ತ ದುರ್ದೈವಿ. ಉಡುಪಿ ನಗರ ಸಭೆಯಲ್ಲಿ ಎಲೆಕ್ಟ್ರಿಷನ್ ಆಗಿ ಕೃಷ್ಣ ಕೆಲಸ ಮಾಡುತ್ತಿದ್ದರು. ಸಂತೆಕಟ್ಟೆ ಮಾರ್ಗವಾಗಿ ಬ್ರಹ್ಮಾವರದ ಕಡೆಗೆ ಸಾಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಲಾರಿ ಅಡಿಗೆ ಸಿಲುಕಿ ಸ್ಥಳದಲ್ಲೇ ಸಾ*ವನ್ನಪ್ಪಿದ್ದಾರೆ.
ಲಾರಿ ಕೃಷ್ಣ ಅವನ್ನು ಕೆಲ ದೂರ ಎಳೆದೊಯ್ದಿದೆ ಎಂದು ತಿಳಿದು ಬಂದಿದೆ. ಘಟನೆ ಬಳಿಕ ರಸ್ತೆಯಲ್ಲಿ ಕೆಲ ಕಾಲ ಸಂಚಾರ ದಟ್ಟನೆ ಉಂಟಾಗಿತ್ತು.
ಬ್ರಹ್ಮಾವರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.