LATEST NEWS
“ಸುರತ್ಕಲ್ ಟೋಲ್ಗೇಟ್ ವಿಚಾರದಲ್ಲಿ ಕೆಲವರು ದುಡ್ಡು ತೆಗೆದುಕೊಂಡು ನಕಲಿ ಹೋರಾಟ ಮಾಡ್ತಿದ್ದಾರೆ”
ಮಂಗಳೂರು: ಸುರತ್ಕಲ್ ಟೋಲ್ಗೇಟ್ ವಿಚಾರದಲ್ಲಿ ಕೆಲವರು ದುಡ್ಡು ತೆಗೆದುಕೊಂಡು ಹೋರಾಟ ಮಾಡಿದ ನಾಟಕ ಮಾಡುತ್ತಿದ್ದಾರೆ. ಸೂಕ್ತ ಸಮಯದಲ್ಲಿ ಅವರ ಹೆಸರು ಬಹಿರಂಗಪಡಿಸುತ್ತೇನೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ವೈ.ಭರತ್ ಶೆಟ್ಟಿ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮೂರು ಏಕಮುಖ ಫ್ಲೈಓವರ್ನಿಂದಾಗಿ ಆಗುತ್ತಿರುವ ಅಡಚಣೆ ಬಗ್ಗೆ ಸಂಸದರ ಮೂಲಕ ಸಚಿವ ನಿತಿನ್ ಗಡ್ಕರಿಗೆ ಪತ್ರ ಬರೆದಿದ್ದೇನೆ ಎಂದರು.
ಟೋಲ್ಗೇಟ್ ತೆರವು ಬಗ್ಗೆ ಮಾತನಾಡಿ, ಅಂದು ಸುರತ್ಕಲ್ನಲ್ಲಿ ಟೋಲ್ಗೇಟ್ ಆಗಿ ಗೆಜೆಟ್ ಆದ ನಂತರ ಹೋರಾಟ ಮಾಡಿದ ಹಾಗೇ ನಾಟಕ ಮಾಡಿ ಯಾರತ್ರನೋ ದುಡ್ಡು ತೆಗೆದುಕೊಂಡು ಬಿಟ್ಟವರು ಯಾರಿದ್ದಾರೋ ಮತ್ತೆ ಅದೇ ನಾಟಕ ಮಾಡುತ್ತಿದ್ದಾರೆ. ಈ ಸಮಯದಲ್ಲಿ ಅವರ ಹೆಸರು ಹೇಳಲು ಇಚ್ಛಿಸುವುದಿಲ್ಲ.
ಈ ಬಗ್ಗೆ ಕೋರ್ಟ್ನಲ್ಲಿ ಕೇಸ್ ದಾಖಲಿಸಿ ಮತ್ತೆ ಹಿಂಪಡೆದು ಬಂದವರಲ್ಲಿ ಎರಡ್ಮೂರು ವ್ಯಕ್ತಿಗಳಿದ್ದಾರೆ. ಇದರಲ್ಲೂ ಕಮೀಷನ್ ತೆಗೆದುಕೊಂಡವರು ಮೂರ್ನಾಲ್ಕು ಜನ ಇದ್ದಾರೆ. ಸರಿಯಾದ ಸಮಯ ಸಿಕ್ಕಾಗ ಆ ಬಗ್ಗೆ ಮಾತನಾಡುತ್ತೇನೆ.
ಇಂತಹ ವಿಚಾರಗಳಿಗೆ ನಾನು ಹೆಚ್ಚಾಗಿ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ. ಇಂದು ನಕಲಿ ಹೋರಾಟಗಾರರು ಸೃಷ್ಟಿಯಾಗಿದ್ದಾರೆ ಎಂದ ಅವರು, ಟೋಲ್ಗೇಟ್ ರದ್ದುಗೊಳ್ಳಬೇಕು ಎನ್ನುವುದು ನನ್ನ ಆಸೆ ಕೂಡ ಆಗಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಆಡಳಿತಾವಧಿಯಲ್ಲಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಲಾಗಿದೆ. ಮೋದಿ ಆಡಳಿತ 8 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ತನ್ನ ಕ್ಷೇತ್ರದಲ್ಲಿ ವಿವಿಧ ಜನಪರ ಯೋಜನೆ, ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
LATEST NEWS
ಇಂದಿನಿಂದ 5 ದಿನ ರಾಜ್ಯದಲ್ಲಿ ಬಿಸಿಗಾಳಿ; ಕರ್ನಾಟಕಕ್ಕೆ ಆರೆಂಜ್ ಅಲರ್ಟ್
ಬೆಂಗಳೂರು: ಅಬ್ಬಾ.. ಸಾಕಪ್ಪಾ ಸಾಕು ಅನ್ನೋ ಬೇಸಿಗೆಯ ಬಿಸಿ ಮತ್ತೆ ಏರಿಕೆಯಾಗುತ್ತಿದೆ. ಗರಿಷ್ಠ ತಾಪಮಾನ ಸಹಿಸಿಕೊಳ್ಳಲಾಗದೇ ಪರದಾಡುತ್ತಿರುವ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಬಂದಿದೆ. ಇಂದಿನಿಂದ ಅಂದ್ರೆ ಏಪ್ರಿಲ್ 25ರಿಂದ ಮುಂದಿನ 5 ದಿನಗಳವರೆಗೆ ಬಿಸಿಗಾಳಿ ಮತ್ತು ತಾಪಮಾನ ಹೆಚ್ಚಾಗುವ ಸಾಧ್ಯತೆಯಿದೆ.
ನಾಳೆ ದೇಶದ 13 ರಾಜ್ಯಗಳ 89 ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ. ನಾಳೆ ಮತದಾನ ನಡೆಯುವ ಕ್ಷೇತ್ರಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಬಿಸಿಗಾಳಿಯ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಪಶ್ಚಿಮ ಬಂಗಾಳ ರಾಜ್ಯಕ್ಕೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕ ರಾಜ್ಯಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ.
ನಾಳೆ ಕೇರಳ, ಕರ್ನಾಟಕದಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಿನ ಉಷ್ಣಾಂಶ ಇರುವ ಮುನ್ಸೂಚನೆ ನೀಡಲಾಗಿದೆ. ಕೇರಳ ರಾಜ್ಯದಲ್ಲಿ 36-40 ಡಿಗ್ರಿ ಉಷ್ಣಾಂಶ ದಾಖಲಾಗುವ ಮುನ್ಸೂಚನೆ ಇದೆ. ಚುನಾವಣಾ ಆಯೋಗವು ಬಿಸಿ ಗಾಳಿ ಸಮಸ್ಯೆ ಎದುರಿಸಲು ಟಾಸ್ಕ್ ಪೋರ್ಸ್ ರಚಿಸಿದೆ. ಪೋಲಿಂಗ್ ಬೂತ್ಗಳಲ್ಲಿ ಕುಡಿಯುವ ನೀರು, ಫ್ಯಾನ್ಗಳ ವ್ಯವಸ್ಥೆಯನ್ನು ಚುನಾವಣಾ ಆಯೋಗ ಮಾಡಿದೆ.
ಏಪ್ರಿಲ್ 25ರಿಂದ ಏಪ್ರಿಲ್ 29ರವರೆಗೆ ಬಿಸಿಗಾಳಿ, ತೀವ್ರ ಬಿಸಿಗಾಳಿ ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಾಗಿರುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದಲ್ಲಿ ಬಿಸಿ ಮತ್ತು ಶುಷ್ಕ ವಾತಾವರಣವು ಹೆಚ್ಚಾಗಿರುವ ಸಾಧ್ಯತೆಯಿದೆ ಎಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
BANTWAL
ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ
ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.
ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.
ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.
ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.
LATEST NEWS
ನಟಿ ಅಮೂಲ್ಯ ಮಾವನ ಮನೆಗೆ ಚುನಾವಣಾ ಅಧಿಕಾರಿಗಳ ದಾಳಿ.. 31 ಲೀಟರ್ ಮದ್ಯ ವಶ..!!
ಬೆಂಗಳೂರು: ನಟಿ ಅಮೂಲ್ಯ ಅವರ ಮಾವ ರಾಜರಾಜೇಶ್ವರಿ ನಗರ ಮಾಜಿ ಕಾರ್ಪೋರೇಟರ್ ರಾಮಚಂದ್ರಪ್ಪರವರ ಮನೆ ಮೇಲೆ ಎ.24ರಂದು ರಾತ್ರಿ ಚುನಾವಣಾ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಆರ್.ಆರ್ ನಗರದಲ್ಲಿರುವ ಮನೆ ಮೇಲೆ ದಾಳಿ ಮಾಡಿದ ಅಧಿಕಾರಿಗಳು ಮನೆಯಲ್ಲಿ ಶೋಧ ಮಾಡಿದ್ದಾರೆ. ರಾತ್ರಿ 10 ಗಂಟೆ ಸುಮಾರಿಗೆ 10 ವಾಹನಗಳಲ್ಲಿ ಬಂದಿದ್ದ 30ಕ್ಕೂ ಹೆಚ್ಚು ಚುನಾವಣಾ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದು, ಈ ವೇಳೆ ರಾಮಚಂದ್ರ, ನಟಿ ಅಮೂಲ್ಯ ಮತ್ತು ಪತಿ ಜಗದೀಶ್ ಮನೆಯಲ್ಲೇ ಇದ್ದರು. ಚುನಾವಣಾ ಅಧಿಕಾರಿ, ಅಬಕಾರಿ ಪೊಲೀಸ್, ವಾಣಿಜ್ಯ ತೆರಿಗೆ ಅಧಿಕಾರಿಗಳಿಂದ ನಡೆದ ಜಂಟಿ ದಾಳಿಯಲ್ಲಿ ಸತತ 4 ಗಂಟೆಗಳ ಕಾಲ ಶೋಧ ನಡೆಸಿದ್ದಾರೆ.
31 ಲೀಟರ್ ಮದ್ಯ ವಶ:
ಇನ್ನು ಚುನಾವಣಾ ಅಧಿಕಾರಿಗಳ ದಾಳಿ ವೇಳೆ ರಾಮಚಂದ್ರಪ್ಪ ಅವರ ನಿವಾಸದಲ್ಲಿ ಬೆಲೆ ಬಾಳುವ ವಸ್ತುಗಳು ಪತ್ತೆಯಾಗಿಲ್ಲ ಬದಲಾಗಿ 31 ಲೀಟರ್ ಮದ್ಯವನ್ನು ವಶ ಪಡಿಸಿಕೊಳ್ಳಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ರಾಮಚಂದ್ರಪ್ಪ ಮೊಮ್ಮಕ್ಕಳ ಹುಟ್ಟುಹಬ್ಬಕ್ಕಾಗಿ ಮದ್ಯ ತರಿಸಿದ್ದೆವು. ಆದರೆ ಚುನಾವಣೆ ಹಿನ್ನೆಲೆ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಮಾಡಲು ಆಗುವುದಿಲ್ಲ. ಇದೀಗ ಮದ್ಯವನ್ನು ವಶಕ್ಕೆ ಪಡೆದಿದದ್ದಾರೆ. ಇನ್ನು ವಶಕ್ಕೆ ಪಡೆದಿದ್ದಾರೆ ಎನ್ನುವುದಕ್ಕೆ ನನ್ನ ಸಹಿಯನ್ನು ಪಡೆದುಕೊಂಡು ಹೋಗಿದ್ದಾರೆ. ಈ ಭಾಗದಲ್ಲಿ ಬಿಜೆಪಿ ಲೀಡ್ ಬರುತ್ತೆ. ಇದನ್ನು ಸಹಿಸಲಾಗದ ಕೆಲವರು ಅಧಿಕಾರವನ್ನು ದುರುಪಯೋಗ ಮಾಡುತ್ತಿದ್ದಾರೆ. ಈ ಭಾಗದಲ್ಲಿ ಕಾಂಗ್ರೆಸ್ ಹಣವನ್ನು ಹಂಚಿಕೆ ಮಾಡುತ್ತಿತ್ತು. ಅದಕ್ಕೆ ನಾವು ಅಡ್ಡಿ ಪಡಿಸುತ್ತೇವೆ ಎಂದು ನಮ್ಮ ಮನೆ ಮೇಲೆ ದಾಳಿ ಮಾಡಿದ್ದಾರೆ ಎಂದು ದೂರಿದರು.
ಮುಂದೆ ಓದಿ..; ಬಡಗುತಿಟ್ಟು ಯಕ್ಷಗಾನದ ಗಾನ ಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ..
ಅಧಿಕಾರಿಗಳಿಗೆ ಪದೇ ಪದೇ ಬರುತ್ತಿದ್ದ ಫೋನ್ ಕಾಲ್:
ದಾಳಿ ವೇಳೆ ಆರ್ಓಗೆ ಪದೇ ಪದೇ ಫೋನ್ ಬರುತಿತ್ತು. ಅವರನ್ನು ಎರಡು ದಿನ ಒಳಗಡೆ ಹಾಕಿಸಿ ಎಂದು ಫೋನಿನಲ್ಲಿ ಇದ್ದ ವ್ಯಕ್ತಿ ಹೇಳುತ್ತಿದ್ದರು. ಮೊಮ್ಮಕ್ಕಳ ಹುಟ್ಟುಹಬ್ಬಕ್ಕೆ ಮದ್ಯ ತರಿಸಿದ್ದೆ. ಚುನಾವಣೆ ಸಮಯದಲ್ಲಿ ದೊಡ್ಡ ಮಟ್ಟದಲ್ಲಿ ಹುಟ್ಟುಹಬ್ಬ ಆಚರಿಸಬಾರದು ಎಂದು ಸುಮ್ಮನೆ ಆಗಿದ್ದೆವು. ಏನೋ ದೊಡ್ಡದಾಗಿ ಸಿಗುತ್ತೆ ಎಂದು ಕೂಲ್ ಆಗಿ ಬಂದ ಅಧಿಕಾರಿಗಳು ಹಾಟ್ ಆಗಿ ಹೊರ ನಡೆದರು ಎಂದು ರಾಮಚಂದ್ರಪ್ಪ ಹೇಳಿದ್ದಾರೆ.
- DAKSHINA KANNADA7 days ago
“ಸೆಕ್ಸ್” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್..!
- FILM3 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- LATEST NEWS6 days ago
ಆಲದ ಮರದ ಪೊಟರೆಯಲ್ಲಿ ಪತ್ತೆಯಾಯ್ತು 64 ಲಕ್ಷ ರೂ.!
- FILM3 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು