ಕೇರಳ
ತಂದೆಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಬಾಲಕ!
ಕಾಸರಗೋಡು : ತಂದೆಯ ವಿರುದ್ಧ 7 ವರ್ಷದ ಬಾಲಕನೊಬ್ಬ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾನೆ. ಕಾಸರಗೋಡು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ.
ತನ್ನ ತಂದೆ ಕೈಕಾಲುಗಳಿಗೆ ಹಲವು ಬಾರಿ ಹೊಡೆದಿದ್ದಾನೆ ಎಂಬುದು ಬಾಲಕನ ಆರೋಪ. ಈ ಬಗ್ಗೆ ಆತ ತನ್ನ ತಾಯಿಯ ಜೊತೆ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾನೆ.
ದ ಜುವೈನಲ್ ಜಸ್ಟೀಸ್ ಕಾಯ್ದೆ ಪ್ರಕಾರ ತಂದೆ ವಿರುದ್ಧ ಕೇಸು ದಾಖಲಿಸಿದ್ದಾನೆ ಎಂದು ವರದಿಯಾಗಿದೆ.
DAKSHINA KANNADA
ಚಿಕಿತ್ಸೆಗೆಂದು ಬಂದ ಯುವತಿ ಮೇಲೆ ಅತ್ಯಾ*ಚಾರ..! ಕಾಸರಗೋಡು ಮೂಲದ ಯುವಕನ ಬಂಧನ
ಮಂಗಳೂರು: ಅನಾರೋಗ್ಯ ಹಿನ್ನಲೆ ಚಿಕಿತ್ಸೆಗೆ ಬಂದ ಮಹಿಳೆಗೆ ಸಹಾಯ ಮಾಡುವ ನಾಟಕವಾಡಿ ಆಕೆಯನ್ನು ಅತ್ಯಾ*ಚಾರ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕೇರಳ ಮೂಲದ ಮಹಿಳೆ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಬಂದಿದ್ದು, ಅಲ್ಲಿ ಪರಿಚಿತ ಹಾಗೂ ಸಹಾಯ ಮಾಡಲು ನಿಂತಿದ್ದ ಯುವಕನೊಬ್ಬ ಅತ್ಯಾಚಾರ ಮಾಡಿದ್ದಾಗಿ ಮಹಿಳೆ ದೂರು ನೀಡಿದ್ದಾರೆ. ಅತ್ಯಾಚಾರ ಮಾಡಿದ್ದು ಅಲ್ಲದೆ ಅದನ್ನ ತನ್ನ ಮೊಬೈಲ್ ನಲ್ಲಿ ಚಿತ್ರಿಸಿಕೊಂಡಿದ್ದು ಬಳಿಕ ಆರೋಪಿ ಆ ವಿಡಿಯೋವನ್ನು ತೋರಿಸಿ ಬ್ಲ್ಯಾಕ್ಮೇಲ್ ಮಾಡಿ ನಿರಂತರ ಅತ್ಯಾಚಾರ ನಡೆಸಿರುವುದಾಗಿ ದೂರು ದಾಖಲಾಗಿದೆ.
ಇದನ್ನೂ ಓದಿ..; ಲ್ಯಾಪ್ ಟಾಪ್ ಚಾರ್ಜ್ ಮಾಡುವಾಗ ದುರಂ*ತ; ವಿದ್ಯುತ್ ಸ್ಪರ್ಶಿಸಿ ವೈದ್ಯೆ ಸಾ*ವು
ಕಾಸರಗೋಡು ಮೂಲದ ನೊಂದ ಮಹಿಳೆ ಪರಿಚಿತ ಸುಜಿತ್ ಈ ಕೃತ್ಯ ಎಸಗಿರುವುದಾಗಿ ಆರೋಪಿಸಿದ್ದಾರೆ. ಮಾರ್ಚ್ ತಿಂಗಳಿನಲ್ಲಿ ಮೊದಲ ಬಾರಿಗೆ ತನ್ನ ಮೇಲೆ ಅತ್ಯಾಚಾರ ನಡೆಸಿದ ಸುಜಿತ್, ವಿಡಿಯೋ ಬಹಿರಂಗ ಪಡಿಸುವ ಬೆದರಿಕೆ ಹಾಕಿ ನಿರಂತರ ಕಿರುಕುಳ ನೀಡಿದ್ದಾಗಿ ಮಂಗಳೂರು ಪೊಲೀಸರಿಗೆ ದೂರು ನೀಡಿದ್ದಾರೆ. ಇತ್ತೀಚೆಗೆ ನೊಂದ ಮಹಿಳೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಸಮಯದಲ್ಲಿ ಅಲ್ಲಿಯೂ ತನ್ನ ಮೇಲೆ ಸುಜೀತ್ ಅತ್ಯಾಚಾರ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಘಟನೆಯ ಬಳಿಕ ನೊಂದ ಸಂತ್ರಸ್ತ ಮಹಿಳೆ ಪೊಲೀಸರಿಗೆ ದೂರು ನೀಡಿ ರಕ್ಷಣೆ ಕೋರಿದ್ದಾರೆ. ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿಯನ್ನು ಕಾಸರಗೋಡಿನ ಹೊಸದುರ್ಗದಿಂದ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
DAKSHINA KANNADA
ಆಂಬುಲೆನ್ಸ್ – ಕಾರು ನಡುವೆ ಭೀಕರ ಅ*ಪಘಾತ..! ಮೂವರ ದುರ್ಮ*ರಣ.!
ಕಾಸರಗೋಡು: ಆ್ಯಂಬುಲೆನ್ಸ್ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಇಂದು ನಡೆದಿದೆ.
ಕಾರಿನಲ್ಲಿದ್ದ ತ್ರಿಶೂರು ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನೋನ್ ಎಂಬವರು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಆ್ಯಂಬುಲೆನ್ಸ್ ನಲ್ಲಿದ್ದ ರೋಗಿಯೂ ಗಾಯಗೊಂಡಿದ್ದಾರೆ. ಕಾಸರಗೋಡಿನಿಂದ ಮಂಗಳೂರು ಕಡೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಮತ್ತು ಮಂಗಳೂರು ಕಡೆಯಿಂದ ಮಂಜೇಶ್ವರದತ್ತ ಬರುತ್ತಿದ್ದ ಕಾರು ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಆ್ಯಂಬುಲೆನ್ಸ್ ರಸ್ತೆಯಲ್ಲಿ ಮಗುಚಿ ಬಿದ್ದಿದೆ.
ಮುಂದೆ ಓದಿ..; ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!
DAKSHINA KANNADA
ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!
ಮಂಗಳೂರು: ಮಂಗಳೂರು ಸಬ್ ಜೈಲಿನಲ್ಲಿದ್ದ ಕೇರಳ ಮೂಲದ ಖೈದಿಯೊಬ್ಬ ಆಸ್ಪತ್ರೆಯಲ್ಲೇ ಕುಣಿಕೆಗೆ ಕೊರಳೊಡ್ಡಿ ಜೀವಾಂತ್ಯಗೊಳಿಸಿದ್ದಾನೆ. ಕೊಣಾಜೆಯ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2022 ರಲ್ಲಿ ಈತ ಬಂಧಿತನಾಗಿದ್ದ . ಕೇರಳ ಮೂಲದವನಾಗಿದ್ದ ಮಹಮ್ಮದ್ ನೌಫಲ್ ಜೀವಾಂತ್ಯಗೊಳಿಸಿದ ಖೈದಿಯಾಗಿದ್ದಾನೆ. ಕೆಲ ಸಮಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಈತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಏಪ್ರಿಲ್ 25 ರಂದು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಯ ಸೆಲ್ ವಾರ್ಡ್ ಗೆ ದಾಖಲಿಸಲಾಗಿತ್ತು. ಸೆಲ್ ವಾರ್ಡನಲ್ಲಿ ಇರುವಾಗಲೇ ಈತ ಜೀವಾಂತ್ಯಗೊಳಿಸಿದ್ದಾನೆ. ಈತನನ್ನು ಉಳಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಗಳ ನಡೆಸಿದರಾದ್ರೂ ಸಾದ್ಯವಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ