NATIONAL
ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿರ : ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ..
ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿರ : ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ..
ಬೆಂಗಳೂರು : ಕೋವಿಡ್ 19 ಸೋಂಕಿನಿಂದ ಚೆನೈ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಪಂಚಭಾಷಾ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ವೈದ್ಯಕೀಯ ಮಂಡಳಿ ಹೇಳಿದೆ.
ಕೊರೋನಾ ಸೋಂಕಿನ ಕಾರಣ ಆಗಸ್ಟ್ 5 ರಂದು ಎಸ್ಪಿಬಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ದಿನದಿಂದ ದಿನಕ್ಕೆ ಅವರ ಆರೋಗ್ಯ ಹದೆಗೆಟ್ಟಿದ್ದರಿಂದ ಆಗಸ್ಟ್ 13 ರ ಬಳಿಕ ಐಸಿಯುನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ವೆಂಟಿಲೇಟರ್ ಅಳವಡಿಸಿ ನುರಿತ ತಜ್ಞರ ತಂಡ ಚಿಕಿತ್ಸೆ ನಡೆಯುತ್ತಿದೆ.ಕೊರೋನಾ ಸೋಂಕಿಗೆ ತುತ್ತಾಗಿ ಕಳೆದ ಎರಡು ವಾರಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಪಂಚಭಾಷಾ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಎಂಜಿಎಂ ಆಸ್ಪತ್ರೆ ಎಸ್ಪಿಬಿ ಅವರ ಹೆಲ್ತ್ ಬುಲೆಟಿನ್ ಅನ್ನು ಬಿಡುಗಡೆ ಮಾಡಿದೆ.
ಎಸ್ಪಿಬಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಎಕ್ಮೋ ಮಷಿನ್, ವೆಂಟಿಲೇಟರ್ನಲ್ಲೇ ಇದ್ದಾರೆ, ಜೊತೆಗೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ವೈದ್ಯರಿಂದ ಚಿಕಿತ್ಸೆ ಮುಂದುವರೆದಿದೆ ಎಂದು ಹೆಲ್ತ್ ಬುಲೆಟಿನ್ನಲ್ಲಿ ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.
ಕೊರೋನಾ ವೈರಸ್ ಕಾರಣ ಆಗಸ್ಟ್ 5 ರಂದು ಎಸ್ಪಿಬಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ದಿನದಿಂದ ದಿನಕ್ಕೆ ಅವರ ಆರೋಗ್ಯ ಹದೆಗೆಟ್ಟಿದ್ದರಿಂದ ಆಗಸ್ಟ್ 13 ರ ಬಳಿಕ ಐಸಿಯುನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ವೆಂಟಿಲೇಟರ್ ಅಳವಡಿಸಿ ನುರಿತ ತಜ್ಞರ ತಂಡದಿಂದ ಚಿಕಿತ್ಸೆ ನಡೆಯುತ್ತಿದೆ.
LATEST NEWS
ಪ್ರಿಯಕರನ ಮೇಲೆ ಆ್ಯ*ಸಿಡ್ ಎರಚಿದ ಯುವತಿ!
ಮಂಗಳೂರು/ ಉತ್ತರ ಪ್ರದೇಶ : ಪ್ರೀತಿಸಿ ಮೋಸ ಮಾಡಿದರೆ ಯುವಕರು ಪ್ರೇಯಸಿಯನ್ನು ಹ*ತ್ಯೆ ಮಾಡುವುದನ್ನು, ಆ್ಯಸಿ*ಡ್ ಎರಚುವ ಸುದ್ದಿಗಳನ್ನು ಕೇಳುತ್ತೇವೆ. ಆದರೆ, ಉತ್ತರ ಪ್ರದೇಶದಲ್ಲಿ ವಿಭಿನ್ನವಾದ ಘಟನೆ ನಡೆದಿದೆ. ಇಲ್ಲಿ ಪ್ರೇಯಸಿಯೊಬ್ಬಳು ತನ್ನ ಪ್ರಿಯಕರನ ಮೇಲೆ ಆ್ಯ*ಸಿಡ್ ದಾಳಿ ನಡೆಸಿದ್ದಾರೆ. ಮಂಗಳವಾರ(ಏ.23) ಬಲಿಯಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಕೃತ್ಯ ಎಸಗಿದ್ದು ಯಾಕೆ?
ಯುವತಿ ಈ ರೀತಿ ದುಷ್ಕೃತ್ಯ ಮೆರೆಯಲು ಕಾರಣ ‘ಪ್ರೀತಿ’. ಆಕೆಯ ಪ್ರಿಯತಮ ಪ್ರೀತಿಸಿ ಮೋಸ ಮಾಡಿ ಮತ್ತೊಬ್ಬಳನ್ನು ಮದುವೆಯಾಗಲು ಮುಂದಾಗಿದ್ದ ಎನ್ನಲಾಗಿದೆ. ಹೀಗಾಗಿ ಯುವತಿ ಆತನ ಮುಖದ ಮೇಲೆ ಆ್ಯ*ಸಿಡ್ ಎರಚಿದ್ದಾಳೆ. ಮದುವೆಯ ಮೆರವಣಿಗೆಯ ವೇಳೆ ಯುವತಿ ವೇಷ ಮರೆಸಿಕೊಂಡು ಬಂದು ವರನ ಮುಖಕ್ಕೆ ಆ್ಯಸಿಡ್ ಎರಚಿದ್ದಾಳೆ ಎನ್ನಲಾಗಿದೆ.
ಆ್ಯ*ಸಿಡ್ ಬಿದ್ದ ಪರಿಣಾಮ ಗಾಯಗೊಂಡ ಯುವಕನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನಿಗೆ ಆ್ಯ*ಸಿಡ್ ಎರಚಿದ ಯುವತಿಯನ್ನು ಹಿಡಿದ ಮಹಿಳೆಯರು ಸರಿಯಾಗಿ ಥಳಿಸಿದ್ದು, ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವಕನ ತಾಯಿಯ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 326 ಬಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಬಲಿಯಾದ ಪೊಲೀಸ್ ಅಧಿಕಾರಿ ಮುನ್ನಾ ಲಾಲ್ ಯಾದವ್ ತಿಳಿಸಿದ್ದಾರೆ.
ಇದನ್ನೂ ಓದಿ : ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಖಾದರ್ ಭಾಷಾನನ್ನು ಭೀಕರವಾಗಿ ಹ*ತ್ಯೆಗೈದ ಆಂಜನೇಯ ಗುಡಿಯ ಪೂಜಾರಿ..!
ಯುವಕ – ಯುವತಿ ಪರಸ್ಪರ ಪ್ರೀತಿಸಿದ್ದರು. ದೈಹಿಕ ಸಂಪರ್ಕ ಹೊಂದಿದ್ದರು. ಆದರೆ, ಇವರ ಸಂಬಂಧವನ್ನು ಎರಡೂ ಕುಟುಂಬ ವಿರೋಧಿಸಿತ್ತು ಎನ್ನಲಾಗಿದೆ. ಏಪ್ರಿಲ್ 22 ರಂದು ಯುವಕನ ಮನೆಯವರು ಬೇರೆ ಯುವತಿಯೊಂದಿಗೆ ಮದುವೆ ಮಾಡಲು ಸಿದ್ಧತೆ ಮಾಡಿದ್ದರು. ಇದರಿಂದ ಕೋಪಗೊಂಡ ಯುವತಿ ಮದುವೆ ಮೆರವಣಿಗೆಯಲ್ಲಿ ಈ ಕೃತ್ಯ ಎಸಗಿದ್ದಾಳೆ ಎಂದು ವರದಿಯಾಗಿದೆ.
LATEST NEWS
ಕೇರಳದಲ್ಲಿ ಬಹಿರಂಗವಾಗಿ ಕಾಣಿಸಿದ ನಕ್ಸಲರ ತಂಡ; ಚುನಾವಣೆ ಬಹಿಷ್ಕಾರಕ್ಕೆ ಕರೆ
ಕೇರಳ : ವಯನಾಡು ಜಿಲ್ಲೆಯ ಕಂಬಮಲೆ ಅರಣ್ಯ ಹಾಗೂ ಮಕ್ಕಿಮಲೆ ಅರಣ್ಯದಲ್ಲಿ ನಕ್ಸಲರು ಇದ್ದಾರೆ ಅನ್ನೋ ಅನುಮಾನ ಬಲವಾಗಿತ್ತು. ಹೀಗಾಗಿ ಕೇರಳದ ನಕ್ಸಲ್ ನಿಗ್ರಹ ತಂಡ ನಿರಂತರ ಕೂಂಬಿಂಗ್ ನಡೆಸಿತ್ತು. ಆದ್ರೆ, ನಕ್ಸಲರ ಸುಳಿವು ಪತ್ತೆಯಾಗದ ಕಾರಣ ಕೂಂಬಿಂಗ್ ನಿಲ್ಲಿಸಲಾಗಿತ್ತು. ಆದ್ರೆ, ಇದೀಗ ಲೋಕಸಭಾ ಚುನಾವಣೆ ವೇಳೆ ಮತ್ತೆ ನಕ್ಸಲರು ಗ್ರಾಮದಲ್ಲಿ ಕಾಣಿಸಿಕೊಂಡಿದ್ದಾರೆ.
ಚುನಾವಣೆ ಬಹಿಷ್ಕರಿಸಲು ಸೂಚನೆ :
ಮಾವೋವಿಸ್ಟ್ ಜಿಂದಾಬಾದ್ ಎಂಬ ಘೋಷಣೆ ಕೂಗಿ ಗ್ರಾಮಕ್ಕೆ ಎಂಟ್ರಿ ಕೊಟ್ಟು ನಾಲ್ವರ ತಂಡ ಚುನಾವಣೆಗೆ ಬಹಿಷ್ಕಾರ ಮಾಡುವಂತೆ ಕರೆ ನೀಡಿದ್ದಾರೆ. ಗ್ರಾಮಸ್ಥರ ಜೊತೆ ಮಾತನಾಡಿ ಕಳೆದ ನಲುವತ್ತು ವರ್ಷದಿಂದ ಕಂಬಮಲೆ ಅರಣ್ಯ ತಪ್ಪಲಿನ ಜನರ ಸಮಸ್ಯೆಯನ್ನು ಸರ್ಕಾರ ಗಮನಿಸಿಲ್ಲ. ಇಲ್ಲಿ ವಾಸವಾಗಿರುವ ಕೂಲಿ ಕಾರ್ಮಿಕರ ಕಷ್ಟ ಸರ್ಕಾರ ಅರ್ಥ ಮಾಡಿಕೊಂಡಿಲ್ಲ. ಹೀಗಾಗಿ ಎಲ್ಲರೂ ಚುನಾವಣೆ ಬಹಿಷ್ಕಾರ ಮಾಡಿ ಎಂದು ಕರೆ ನೀಡಿದ್ದಾರೆ.
ಈ ತಂಡದಲ್ಲಿ ಕೇರಳ ರಾಜ್ಯಕ್ಕೆ ಬಹಳಷ್ಟು ವರ್ಷಗಳಿಂದ ತಲೆ ಮರೆಸಿಕೊಂಡಿರುವ ನಕ್ಸಲರು ಇದ್ದರು ಅನ್ನೋ ಮಾಹಿತಿಯನ್ನು ಸ್ಥಳೀಯರು ನೀಡಿದ್ದಾರೆ. ಕಂಬಮಲೆ ಎಂಬ ಪ್ರದೇಶದಲ್ಲಿ ಟೀ ಎಸ್ಟೇಟ್ ಇದ್ದು, ಇಲ್ಲಿನ ಕೂಲಿ ಕಾರ್ಮಿಕರ ಜೊತೆ ನಕ್ಸಲರು ಮಾತುಕತೆ ನಡಿಸಿದ ವಿಡಿಯೋ ಈಗ ಪೊಲೀಸರಿಗೆ ಲಭ್ಯವಾಗಿದೆ.
ಇದನ್ನೂ ಓದಿ : ಖತರ್ನಾಕ್ ಕಳ್ಳನನ್ನು ಬಂಧಿಸಿದ ಕೋಟ ಪೊಲೀಸರು; ‘ನನ್ನ ಬಗ್ಗೆ ಮಾಹಿತಿ ಬೇಕಾದ್ರೆ ಯೂಟ್ಯೂಬ್ ನೋಡಿ’ ಎಂದ ಖದೀಮ!
ವಿಡಿಯೋ ಮಾಡುತ್ತಿರುವುದು ಗಮನಕ್ಕೆ ಬಂದರೂ ಏನೂ ಮಾತನಾಡದೆ ಶಸಸ್ತ್ರರಾಗಿದ್ದ ನಕ್ಸಲರು ಮಕ್ಕಿಮಲೆ ಕಾಡಿನೊಳಗೆ ಹೋಗಿ ಕಣ್ಮರೆ ಆಗಿದ್ದಾರೆ.
LATEST NEWS
ಅಂಬಾನಿ ಪುತ್ರನ ಮದುವೆ ಎಲ್ಲಿ ನಡೆಯುತ್ತೆ ಗೊತ್ತಾ…!! ಹೇಗಿದೆ ಅದ್ಧೂರಿ ತಯಾರಿ?
ಭಾರತದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಪ್ರೀ ವೆಡ್ಡಿಂಗ್ ಶೂಟ್ ಈಗಾಗಲೇ ಎಲ್ಲರ ನಿಬ್ಬೆರಗಾಗುವಂತೆ ಮಾಡಿತ್ತು. ಮಾರ್ಚ್ 1 ರಿಂದ 3 ದಿನಗಳ ಕಾಲ ಗುಜರಾತ್ನ ಜಾಮ್ನಗರದಲ್ಲಿ ಅದ್ಧೂರಿಯಾಗಿ ಪ್ರಿ-ವೆಡ್ಡಿಂಗ್ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಎಲ್ಲರ ಬಾಯಲ್ಲೂ ಅಂಬಾನಿ ಮದುವೆ ಮುಂಚಿತವಾಗಿ ನಡೆದ ಕಾರ್ಯಕ್ರಮದ ಗುಣಗಾನ. ಈ ಸಂಭ್ರಮದಲ್ಲಿ ದೇಶ-ವಿದೇಶಗಳಿಂದ ಹಲವಾರು ಬಾಲಿವುಡ್ ಸೆಲೆಬ್ರಿಟಿಗಳು ಜಾಮ್ನಗರಕ್ಕೆ ಬಂದಿದ್ದರು. ಮೂರು ದಿನಗಳ ಕಾಲ ನಡೆದ ಕಾರ್ಯಕ್ರಮಕ್ಕೆ ಅಂದಾಜು 1200 ಕೋಟಿಯಷ್ಟು ಖರ್ಚಾಗಿದೆ ಎಂದು ಮೂಲಗಳು ತಿಳಿಸಿದೆ. ಕಾರ್ಯಕ್ರಮದ ಫೊಟೋ ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಕೂಡಾ ಆಗಿತ್ತು.
ಲಂಡನ್ನಲ್ಲಿ 592 ಕೋಟಿ ಸ್ಟೋಕ್ ಪಾರ್ಕ್ ಖರೀದಿಸಿದ ಅನಂತ್ ಅಂಬಾನಿ
ಮುಂದೆ ಓದಿ..; ಗಂಡ-ಹೆಂಡತಿ ಬೇರೆ ಬೇರೆ ಮಲಗಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?
ಇತ್ತೀಚೆಗಷ್ಟೇ ಮುಖೇಶ್ ಅಂಬಾನಿ ಮಗನ ಮದುವೆಗೂ ಮುನ್ನ ಲಂಡನ್ನಲ್ಲಿ 592 ಕೋಟಿ ಮೌಲ್ಯದ ಸ್ಟೋಕ್ ಪಾರ್ಕ್ ಎಸ್ಟೇಟ್ ಖರೀದಿಸಿದ್ದರು. ಜುಲೈ 12ರಂದು ಉದ್ಯಮಿ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ ನಡೆಯಲಿದ್ದು, ಇದೀಗ ಅದೇ ಲಂಡನ್ ಸ್ಟೋಕ್ ಪಾರ್ಕ್ ಎಸ್ಟೇಟ್ನಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆ ಸಮಾರಂಭ ಜರುಗಲಿದೆ ಎಂದು ತಿಳಿದು ಬಂದಿದೆ. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಗೂ ಕೂಡ ಅನೇಕರು ಭಾಗಿ ಆಗುವ ಸಾಧ್ಯತೆ ಇದೆ. ಈಗಾಗಲೇ ಮದುವೆಗೆ ಎಲ್ಲಾ ರೀತಿಯಲ್ಲೂ ಸಿದ್ಧತೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.